Homeಮುಖಪುಟಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

ಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

- Advertisement -
- Advertisement -

ಹರಿಯಾಣದ ಗುರ್‌ಗಾಂವ್‌ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌ ಮಾಡುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇಂದು (ನ.12) ಕೂಡ ಸೆಕ್ಟರ್ 12A ರಲ್ಲಿ ಮುಸ್ಲಿಂ ಸಮುದಾಯದವರು ನಮಾಜ್ ಮಾಡುವುದಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ನಮಾಜ್ ಸ್ಥಳವನ್ನು ಬೆಳಗ್ಗೆಯಿಂದಲೇ ಆಕ್ರಮಿಸಿಕೊಂಡಿರುವ ಹಿಂದೂ ಪರ ಸಂಘಟನೆಯ ಸದಸ್ಯರು ಇದನ್ನು ವಾಲಿಬಾಲ್ ಅಂಕಣ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಅಲ್ಲಿಯೇ ಕುಳಿತು ಪ್ರಾರ್ಥನೆ ನಡೆಯದಂತೆ ತಡೆದಿದ್ದಾರೆ.

ಕಳೆದ ವಾರ ನಮಾಜ್ ಮುಗಿಸಿದ ಮೇಲೆ ಆ ಸ್ಥಳದಲ್ಲಿ ಹಸುವಿನ ಬೆರಣಿಯನ್ನು ಸಾಲು ಸಾಲಾಗಿ ಹರಡಲಾಗಿತ್ತು. ಬಲಪಂಥೀಯ ಗುಂಪುಗಳು ನಮಾಜ್ ಸ್ಥಳದ ಮೇಲೆ ಸಗಣಿ ಹರಡಿ ಪೂಜೆ ನಡೆಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ಹಲವಾರು ವಾರಗಳಿಂದ ಈ ಸ್ಥಳಗಳಲ್ಲಿ ಪ್ರತಿಭಟನೆ ಮತ್ತು ಬೆದರಿಕೆ ನೀಡುವ ಘಟನೆಗಳು ನಡೆದ ನಂತರ ಮುಸ್ಲಿಂ ಸಂಘಟನೆಗಳು ಇಂದು ಈ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ..ಕೆಚ್ಚೆದೆಯಿಂದ ಹೋರಾಡಿದವರಿಗೆ ಸ್ವಾತಂತ್ರ್ಯ ಸಿಕ್ಕಿದೆ: ಕಂಗನಾಗೆ ಕಾಂಗ್ರೆಸ್ ತಿರುಗೇಟು

2018 ರಲ್ಲಿ ಇದೇ ರೀತಿಯ ಘರ್ಷಣೆಗಳ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದದ ನಂತರ ನಮಾಜ್ ಮಾಡಲು ನಿಯೋಜಿಸಲಾಗಿದ್ದ 29 ಸ್ಥಳಗಳಲ್ಲಿ ಸೆಕ್ಟರ್ 12A  ಕೂಡ ಒಂದು ನಮಾಜ್ ಸ್ಥಳವಾಗಿದೆ.

ಇನ್ನು ನವೆಂಬರ್‌ 3 ರಂದು ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿತ್ತು. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿತ್ತು.

ಸೆಕ್ಟರ್ 49 ರಲ್ಲಿ ಬೆಂಗಾಲಿ ಬಸ್ತಿ, ಡಿಎಲ್‌ಎಫ್ ಹಂತ -3 ರ ವಿ ಬ್ಲಾಕ್, ಸೂರತ್ ನಗರ ಹಂತ -1, ಖೇರ್ಕಿ ಮಜ್ರಾ ಗ್ರಾಮದ ಹೊರವಲಯ, ದ್ವಾರಕಾ ಎಕ್ಸ್‌ಪ್ರೆಸ್‌ವೇ ಬಳಿಯ ದೌಲತಾಬಾದ್ ಗ್ರಾಮದ ಹೊರವಲಯ, ಸೆಕ್ಟರ್ 68 ರ ರಾಮಗಢ ಗ್ರಾಮದ ಬಳಿ, ಡಿಎಲ್‌ಎಫ್ ಸ್ಕ್ವೇರ್ ಟವರ್ ಬಳಿ ಮತ್ತು ರಾಂಪುರ ಗ್ರಾಮದಿಂದ ನಖ್ರೋಲಾ ರಸ್ತೆ. ಈ ಎಂಟು ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಆದೇಶಿಸಿತ್ತು.

ನಮಾಜ್ ನಡೆಸುವು ಸ್ಥಳಗಳು ಮತ್ತು ಭವಿಷ್ಯದಲ್ಲಿ ನಮಾಜ್ ಮಾಡಲು ಸ್ಥಳಗಳನ್ನು ಗುರುತಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಪೊಲೀಸ್ ಆಯುಕ್ತರು, ಧಾರ್ಮಿಕ ಸಂಘಟನೆಗಳು ಮತ್ತು ಸಿವಿಲ್ ಸೊಸೈಟಿ ಗುಂಪುಗಳ ಸದಸ್ಯರನ್ನೊಳಗೊಂಡ ಸಮಿತಿಯನ್ನು ಗುರುಗ್ರಾಮ್ ಡೆಪ್ಯುಟಿ ಕಮಿಷನರ್ ಯಶ್ ಗರ್ಗ್ ಅವರು ರಚಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.


ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...