Homeಮುಖಪುಟಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

ಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

- Advertisement -
- Advertisement -

ಹರಿಯಾಣದ ಗುರ್‌ಗಾಂವ್‌ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌ ಮಾಡುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇಂದು (ನ.12) ಕೂಡ ಸೆಕ್ಟರ್ 12A ರಲ್ಲಿ ಮುಸ್ಲಿಂ ಸಮುದಾಯದವರು ನಮಾಜ್ ಮಾಡುವುದಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ನಮಾಜ್ ಸ್ಥಳವನ್ನು ಬೆಳಗ್ಗೆಯಿಂದಲೇ ಆಕ್ರಮಿಸಿಕೊಂಡಿರುವ ಹಿಂದೂ ಪರ ಸಂಘಟನೆಯ ಸದಸ್ಯರು ಇದನ್ನು ವಾಲಿಬಾಲ್ ಅಂಕಣ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಅಲ್ಲಿಯೇ ಕುಳಿತು ಪ್ರಾರ್ಥನೆ ನಡೆಯದಂತೆ ತಡೆದಿದ್ದಾರೆ.

ಕಳೆದ ವಾರ ನಮಾಜ್ ಮುಗಿಸಿದ ಮೇಲೆ ಆ ಸ್ಥಳದಲ್ಲಿ ಹಸುವಿನ ಬೆರಣಿಯನ್ನು ಸಾಲು ಸಾಲಾಗಿ ಹರಡಲಾಗಿತ್ತು. ಬಲಪಂಥೀಯ ಗುಂಪುಗಳು ನಮಾಜ್ ಸ್ಥಳದ ಮೇಲೆ ಸಗಣಿ ಹರಡಿ ಪೂಜೆ ನಡೆಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ಹಲವಾರು ವಾರಗಳಿಂದ ಈ ಸ್ಥಳಗಳಲ್ಲಿ ಪ್ರತಿಭಟನೆ ಮತ್ತು ಬೆದರಿಕೆ ನೀಡುವ ಘಟನೆಗಳು ನಡೆದ ನಂತರ ಮುಸ್ಲಿಂ ಸಂಘಟನೆಗಳು ಇಂದು ಈ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ..ಕೆಚ್ಚೆದೆಯಿಂದ ಹೋರಾಡಿದವರಿಗೆ ಸ್ವಾತಂತ್ರ್ಯ ಸಿಕ್ಕಿದೆ: ಕಂಗನಾಗೆ ಕಾಂಗ್ರೆಸ್ ತಿರುಗೇಟು

2018 ರಲ್ಲಿ ಇದೇ ರೀತಿಯ ಘರ್ಷಣೆಗಳ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದದ ನಂತರ ನಮಾಜ್ ಮಾಡಲು ನಿಯೋಜಿಸಲಾಗಿದ್ದ 29 ಸ್ಥಳಗಳಲ್ಲಿ ಸೆಕ್ಟರ್ 12A  ಕೂಡ ಒಂದು ನಮಾಜ್ ಸ್ಥಳವಾಗಿದೆ.

ಇನ್ನು ನವೆಂಬರ್‌ 3 ರಂದು ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಅನುಮತಿ ವಾಪಸ್ ಪಡೆದಿತ್ತು. ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿತ್ತು.

ಸೆಕ್ಟರ್ 49 ರಲ್ಲಿ ಬೆಂಗಾಲಿ ಬಸ್ತಿ, ಡಿಎಲ್‌ಎಫ್ ಹಂತ -3 ರ ವಿ ಬ್ಲಾಕ್, ಸೂರತ್ ನಗರ ಹಂತ -1, ಖೇರ್ಕಿ ಮಜ್ರಾ ಗ್ರಾಮದ ಹೊರವಲಯ, ದ್ವಾರಕಾ ಎಕ್ಸ್‌ಪ್ರೆಸ್‌ವೇ ಬಳಿಯ ದೌಲತಾಬಾದ್ ಗ್ರಾಮದ ಹೊರವಲಯ, ಸೆಕ್ಟರ್ 68 ರ ರಾಮಗಢ ಗ್ರಾಮದ ಬಳಿ, ಡಿಎಲ್‌ಎಫ್ ಸ್ಕ್ವೇರ್ ಟವರ್ ಬಳಿ ಮತ್ತು ರಾಂಪುರ ಗ್ರಾಮದಿಂದ ನಖ್ರೋಲಾ ರಸ್ತೆ. ಈ ಎಂಟು ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಆದೇಶಿಸಿತ್ತು.

ನಮಾಜ್ ನಡೆಸುವು ಸ್ಥಳಗಳು ಮತ್ತು ಭವಿಷ್ಯದಲ್ಲಿ ನಮಾಜ್ ಮಾಡಲು ಸ್ಥಳಗಳನ್ನು ಗುರುತಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಪೊಲೀಸ್ ಆಯುಕ್ತರು, ಧಾರ್ಮಿಕ ಸಂಘಟನೆಗಳು ಮತ್ತು ಸಿವಿಲ್ ಸೊಸೈಟಿ ಗುಂಪುಗಳ ಸದಸ್ಯರನ್ನೊಳಗೊಂಡ ಸಮಿತಿಯನ್ನು ಗುರುಗ್ರಾಮ್ ಡೆಪ್ಯುಟಿ ಕಮಿಷನರ್ ಯಶ್ ಗರ್ಗ್ ಅವರು ರಚಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.


ಇದನ್ನೂ ಓದಿ: ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...