Homeಕರ್ನಾಟಕಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ 'ಹೋರಾಟದ ಹಕ್ಕಿಗಾಗಿ ಜನಾಂದೋಲನ' ಆಗ್ರಹ

ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

- Advertisement -
- Advertisement -

‘ಹೈಕೋರ್ಟ್‌ ಆದೇಶ’ ಎಂಬ ಸುಳ್ಳು ಕಾರಣ ಮುಂದಿಟ್ಟುಕೊಂಡು ಪ್ರಭುತ್ವದ ವಿರುದ್ಧ ನಡೆಸುವ ಪ್ರತಿರೋಧದ ಹೋರಾಟಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತಗೊಳಿಸಿದ್ದು, ರಾಜ್ಯದ ಜನಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಶಾಸಕರ ಭವನದಲ್ಲಿ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಆದೇಶ ವಾಪಸ್ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಪ್ರಸ್ತಾವಿಕವಾಗಿ ಮಾತನಾಡಿದ ಕಾರ್ಮಿಕ ಹಕ್ಕುಗಳ ಹೋರಾಟಗಾರ್ತಿ ಮೈತ್ರೇಯಿ, “ಫ್ರೀಡಂ ಪಾರ್ಕಿನಲ್ಲಿ ಮಾತ್ರ ಹೋರಾಟ ಮಾಡಬೇಕು ಎಂದು ಕೋರ್ಟ್ ಹೇಳಿಲ್ಲ; ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದ ಆದೇಶ ಮಾಡಿಸಿದ್ದಾರೆ. ಈವರೆಗೆ ಪ್ರತಿಭಟನೆ ಮಾಡಬಾರದು ಎಂದು ಕೋರ್ಟಿನಿಂದ ಯಾವುದೇ ಆದೇಶ ಬಂದಿಲ್ಲ. ಈ ಆದೇಶವನ್ನು ವಾಪಸ್ ಪಡೆಯಬೇಕು, ಅದಕ್ಕಾಗಿ ನಾವು ಯಾವುದೇ ಕೋರ್ಟಿಗೆ ಹೋಗುವ ಅವಷ್ಯಕತೆ ಇಲ್ಲ” ಎಂದರು.

“ಪ್ರತಿಭಟನೆಯನ್ನು ಫ್ರೀಡಂ ಪಾರ್ಕಿಗೆ ಸೀಮಿತಗೊಳಿಸಿರುವುದು ಪ್ರಜಾಭುತ್ವದ ಮೇಲಿನ ದಾಳಿ, ಸರ್ಕಾರ ಈ ಆದೇಶವನ್ನು ವಾಪಸ್ ಪಡೆಯಬೇಕು. 250 ಕ್ಕಿಂತ ಹೆಚ್ಚಿನ ಜನರು ಪ್ರತಿಭಟನೆ ಮಾಡಿದರೆ ಮಾತ್ರ ಲೈಸೆನ್ಸ್ ತೆಗೆದುಕೊಳ್ಳಬೇಕು ಎಂದು ಹಿಂದೆ ಆದೇಶ ಇತ್ತು. ಆದರೆ, ಈಗ ಇಬ್ಬರು ಹೋರಾಟ ಮಾಡಿದರೂ ಲೈಸೆನ್ಸ್ ಪಡೆದುಕೊಳ್ಳಬೇಕು. ಪ್ರತಿಭಟನೆಗಳಿಗೆ ಅನುಮತಿ ನೀಡುವ ಅಥವಾ ನಿರಾಕರಿಸುವ ಹಕ್ಕನ್ನು ಸಂಪೂರ್ಣವಾಗಿ ಪೊಲೀಸರಿಗೆ ನೀಡಿದ್ದಾರೆ; ಇದು ಬದಲಾಗಬೇಕು. ಪ್ರತಿಭಟನಾ ಸ್ಥಳದಲ್ಲಿ ಪಾರ್ಕಿಂಗ್ ಇದೆಯಾ ಎಂದು ಪರಿಶೀಲಿಸಿ ಅನುಮತಿ ನೀಡುತ್ತಾರೆ. ಇದು ಪೊಲೀಸ್ ರಾಜ್ಯ ಆಗಿದೆ” ಎಂದು ಅಸಮಾಧಾನ ಹೊರಹಾಕಿದರು.

“ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟಕ್ಕೆ ಹೋಗಬೇಕಾದರೆ ಮೆಟಲ್ ಡಿಟೆಕ್ಟರ್ ಪರಿಶೀಲನೆಗೆ ಒಳಗಾಗಬೇಕು. ಬೆಂಗಳೂರಿನಲ್ಲಿಯೂ ಹಾಗಾಗದಂತೆ ನಾವು ತಡೆಯಬೇಕು. ಬೇರೆಡೆ ಪ್ರತಿಭಟನೆ ಮಾಡದಂತೆ ಹೊರಡಿಸಿರುವ ಆದೇಶ ವಾಪಸ್ ಪಡೆಯಬೇಕು. ಈ ಆದೇಶದ ಆಧಾರದಲ್ಲಿ ಪ್ರತಿಭಟಿಸಿದ ಹಲವರ ಮೇಲೆ ಕೇಸ್ ದಾಖಲಾಗಿದೆ. ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ವಿರುದ್ದ ಪ್ರತಿಭಟಿಸಿದವರ ವಿರುದ್ಧವೂ ಕೇಸ್ ದಾಖಲಾಗಿದೆ. ಪ್ಯಾಲೆಸ್ತೀನ್ ಪರ ಹೋರಾಟ ಆಗಬಾರದು ಎಂದು ಆದೇಶ ನೀಡಿದ್ದಾರೆ. ಫ್ರೀಡಂ ಪಾರ್ಕಿನಲ್ಲೂ ಹೋರಾಟ ಮಾಡಲು ಬಿಡುತ್ತಿಲ್ಲ. ಈವರೆಗೆ ಹೋರಾಟಗಾರರ ಮೇಲೆ ದಾಖಲಾಗಿರುವ ಎಫ್ಐಆರ್ ವಾಪಸ್ ಪಡೆಯಬೇಕು. ಪೊಲೀಸ್ ದೌರ್ಜನ್ಯದ ಬಗ್ಗೆ ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಜೆಸಿಟಿಯು ಸಂಘಟನೆಯ ಕೆವಿ ಭಟ್ ಮಾತನಾಡಿ, “ಹಿಂದೆಲ್ಲಾ ನಾವು ವಿಧಾನಸೌಧದ ಮುಂದೆಯೇ ಸಾಕಷ್ಟು ಹೋರಾಟ ಮಾಡಿದ್ದೇವೆ. ಅಲ್ಲಿನ ಪಾರ್ಕ್‌, ಗಿಡ-ಮರಕ್ಕೆ ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕೆ ನಮ್ಮನ್ನು ಕೆಆರ್ ಸರ್ಕಲ್‌ಗೆ ಸ್ಥಳಾಂತರಿಸಿದರು. ನಂತರ, ಮೈಸೂರ್ ಬ್ಯಾಂಕ್, ಟೌನ್ ಹಾಲ್ ಸೇರಿದಂತೆ ಹಲವೆಡೆ ಕಳಿಸಿದರು. ಈಗ ಎಷ್ಟೇ ಜನ ಇದ್ದರೂ ಅದನ್ನು ಫ್ರೀಡಂ ಪಾರ್ಕಿಗೆ ಸೀಮಿತಗೊಳಿಸಿದ್ದಾರೆ. ಹಿಂದಿನ ಸರ್ಕಾರದ ಈ ಆದೇಶವನ್ನು ಈಗಿನ ಸರ್ಕಾರ ವಾಪಸ್ ಪಡೆಯಬೇಕು. ಆದೇಶ ವಾಪಸ್ ಪಡೆಯುವಂತೆ ನಮ್ಮ ಸಂಘಟನೆಯಿಂದ ಪೊಲೀಸ್ ಆಯುಕ್ತರು ಸೇರಿದಂತೆ ಸಂಬಂಧಿಸಿದವರನ್ನು ಭೇಟಿ ಮಾಡಿ, ಸಭೆ ಕರೆಯುವಂತೆ ಮನವಿ ಮಾಡಿದ್ದೇವೆ. ಆದರೆ, ಅವರೆಲ್ಲರೂ ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸುವ ನಿಟ್ಟಿನಲ್ಲಿ ನಡೆದುಕೊಳ್ಳುತ್ತಿದ್ದಾರೆ. ಇಂದು ನಡೆಯುವ ದುಂಡು ಮೇಜಿನ ಸಭೆಯ ವಿಚಾರಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತೇವೆ” ಎಂದರು.

ಪೌರಕಾರ್ಮಿಕರ ಹಕ್ಕುಗಳ ಹೋರಾಟಗಾರ್ತಿ, ಹಿರಿಯ ಲೇಖಕಿ ದು. ಸರಸ್ವತಿ ಮಾತನಾಡಿ, “ದೇಹ ರಾಜಕಾರಣ, ಅತ್ಯಾಚಾರ, ಮಾರ್ಯಾದೆಗೇಡು ಹತ್ಯೆ ವಿರುದ್ಧ, ಪೌರ ಕಾರ್ಮಿಕರ ಪರ ಹೋರಾಟಗಳನ್ನು ಮಾಡುತ್ತಾ ಬಂದಿದ್ದೇವೆ. ಇಂದು ಪ್ರಜಾಪ್ರಭುತ್ವ ಉಳಿದಿದ್ದರೆ ಅದು ಜನಪರ ಹೋರಾಟಗಳಿಂದ ಮಾತ್ರ ಎಂಬುದನ್ನು ಸರ್ಕಾರ ಮರೆಯಬಾರದು. ನಾವು ಮಾಡುತ್ತಿರುವ ಹೋರಾಟಗಳ ವಿಷಯ ನ್ಯಾಯೋಚಿತವಾಗಿತ್ತು. ಅದೇ ಕಾರಣಕ್ಕೆ ನಾವು ಧೈರ್ಯವಾಗಿ ಬೀದಿಗಿಳಿದು ಹೋರಾಟ ಮಾಡಿದ್ದೇವೆ” ಎಂದರು.

“ಯಾವುದು ಸರಿ ಇಲ್ಲವೋ ಅದನ್ನು ಪ್ರಶ್ನಿಸಲು, ನಮ್ಮ ಪ್ರತಿರೋಧ ದಾಖಲಿಸಿಲು ನಾವು ಪ್ರತಿಭಟನಾ ದಾರಿ ಬಳಸಿಕೊಂಡಿದ್ದೇವೆ. ನಮ್ಮ ಭಿನ್ನಮತ ದಾಖಲಿಸಲು ಪ್ರತಿಭಟನೆ ಮುಖ್ಯವಾಗುತ್ತದೆ, ಭಾರತೀಯತೆ ನಮ್ಮ ಧರ್ಮವಾದರೆ, ಸಂವಿಧಾನ ಧರ್ಮ ಗ್ರಂಥ. ‘ಸರ್ಕಾರ ನಮ್ಮ ಪ್ರತಿನಿಧಿಗಳು, ಅವರು ನಮ್ಮನ್ನು ಆಳುವವರು ಅಲ್ಲ’ ಎಂಬ ಗಾಂಧಿ ಹೇಳಿಕೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನೆನೆಪಿಸಿಕೊಳ್ಳಬೇಕು” ಎಂದು ಹೇಳಿದರು.

“ಮರೆತು ಹೋಗಿರುವುದನ್ನು ನೆನಪಿಸುವುದು ಪ್ರಜಾಪ್ರಭುತ್ವದ ಕರ್ತವ್ಯ, ಅಧಿಕಾರಕ್ಕೆ ಏರಿದಾಗ ಮರೆಯುವ ಸಾಧ್ಯತೆ ಇರುವುದರಿಂದ, ಅದನ್ನು ನೆನೆಪಿಸಲು ಪ್ರತಿಭಟನೆ ಅನಿವಾರ್ಯ” ಎಂದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಇತ್ತೀಚಿನ ವರ್ಷಗಳಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಬೇಕು ಎಂಬ ಬಹು ದೊಡ್ಡ ಕೂಗು ಆರಂಭವಾಗಿದೆ. ಏಕೆಂದರೆ, ದೇಶದ ಕೇಂದ್ರ ಸರ್ಕಾರ ಹೇಗೆ ವರ್ತಿಸುತ್ತಿದೆ ಎಂಬುದನ್ನು ನೋಡಿದ್ದೇವೆ. ಕಾಂಗ್ರೆಸ್ ಪಕ್ಷ ತನ್ನ ನೀತಿಗಳಲ್ಲಿ ಎಷ್ಟೇ ಜನವಿರೋಧಿ ಆಗಿದ್ದರೂ, ಬಿಜೆಪಿ ಸೋಲಿಸಲು ಕಾಂಗ್ರೆಸ್ಸಿಗೆ ಅವಕಾಶ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರತದ ಜನ ಒಂದು ಮಹತ್ತರ ತೀರ್ಪು ನೀಡುವ ಮೂಲಕ ‘ಚಾರ್‌ಸೌ ಫಾರ್’ ಎಂದು ಅರಚುತ್ತಿದ್ದವರ ಬಾಯಿ ಮುಚ್ಚಿಸಿದ್ದಾರೆ” ಎಂದು ಹೇಳಿದರು.

“ಆನೆಯನ್ನು ಕೆಡ್ಡದಲ್ಲಿ ಹಾಕಿ ಪಳಗಿಸಿದಂತೆ ಪ್ರಭುತ್ವ ಕೂಡ ಜನಸಾಮಾನ್ಯರು ಹಾಗೂ ಹೋರಾಟಗಳನ್ನು ಪಳಗಿಸುತ್ತಾರೆ. ಅದಕ್ಕೆ ಪೂರಕವಾಗಿ ಪೊಲೀಸ್ ಪವರ್ ಬಳಸುತ್ತೆ. ಅದಕ್ಕಾಗಿಯೇ ನಾವು ಅವರು ಹೇಳಿದ ಕಡೆ ಹೋಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಮಾನಸಿಕವಾಗಿ ನಾವು ಅದಕ್ಕೆ ಹೋಗ್ಗಿಕೊಂಡಿದ್ದೇವೆ” ಎಂದರು.

“ಕಳೆದ ನಾಲ್ಕು ದಶಕದಲ್ಲಿ ನಾವು ಹಲವಾರು ಹೋರಾಟಗಳನ್ನು ನೋಡಿದ್ದೇವೆ, ವಿಧಾನ ಸೌಧದ ಮೆಟ್ಟಿಲ ಮೇಲೆ ಪ್ರೊ. ನಂಜುಂಡಸ್ವಾಮಿ ಕ್ಯಾಕರಿಸಿ ಉಗಿಯುವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸರ್ಕಾರವನ್ನು ನೋಡಿ ನಗುವ ಕಾರ್ಯಕ್ರಮವನ್ನೂ ಆಯೋಜಿಸಿದ್ದಾರೆ. ಹೈಕೋರ್ಟ್ ಜಡ್ಜ್ ಆದೇಶ ವಿರೋಧಿಸಿ ಕೋರ್ಟ್‌ ಆವರಣದಲ್ಲಿ ಪ್ರತಿಭಟನೆ ಮಾಡಿದ್ದೇವೆ. ನಂತರ ನಮ್ಮನ್ನು ಕೆ ಆರ್ ಸರ್ಕಲ್, ಬನ್ನಪ್ಪ ಪಾರ್ಕ್‌ಗೆ ಸ್ಥಾಳಾಂತರಿಸಿದರು. ಈಗ ಫ್ರೀಡಂ ಪಾರ್ಕಿಗೆ ಹಾಕಿದ್ದಾರೆ. ಈ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕು” ಎಂದು ಸಭೆಯ ಗಮನಕ್ಕೆ ತಂದರು.

“ಈ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೂ ಬಂದಿದೆ. ಆದರೆ, ಅವರು ಕಡೆಗಣಿಸುತ್ತಿರುವುದು ಯಾಕೆ ಗೊತ್ತಿಲ್ಲ. ಪ್ರತಿರೋಧ ಮನುಷ್ಯರಿಗಷ್ಟೇ ಸಂಬಂಧಿಸಿದ್ದಲ್ಲ, ಬೀಜ ಕೂಡ ಭೂತಾಯಿಯ ಹೊಟ್ಟೆ ಸೀಳಿ ಬರುತ್ತೆ. ಹೋರಾಟ ಕೂಡ ಹೊಸತನ್ನು ಬಯಸುತ್ತೆ; ಪ್ರಭುತ್ವದ ಕಿವಿ ಯಾವಾಗ ಮಂದವಾಗುತ್ತದೆಯೋ, ಆಗ ನಾವು ಅವರನ್ನು ಎಚ್ಚರಿಸುತ್ತಾ ಇರಬೇಕು. ಫ್ರೀಡಂ ಪಾರ್ಕ್ ಈಗ ಯಾತನಾ ಶಿಬಿರ ಆಗಿದೆ.. ಅಲ್ಲಿ ಎಲ್ಲೆಡೆ ಬರೀ ಧಿಕ್ಕಾರ ಮಾತ್ರ ಕೇಳಿಸುತ್ತೆ. ಪ್ರಭುತ್ವ ನಮ್ಮನ್ನು ನಿರ್ವೀರ್ಯರನ್ನಾಗಿ ಮಾಡುತ್ತೆ.. ನಾವು ಎಚ್ಚರದಿಂದ ನಮ್ಮ ಹೋರಾಟಗಳನ್ನು ಮಾಡಿಕೊಂಡು ಹೋಗಬೇಕು” ಎಂದು ಹೇಳಿದರು.

ದುಂಡು ಮೇಜಿನ ಸಭೆಯಲ್ಲಿ ಖ್ಯಾತ ಅಂಕಣಕಾರ ಆಕಾರ್ ಪಟೇಲ್, ಸಾಮಾಜಿಕ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ, ದಲಿತ ಮುಖಂಡ ಕಾರಳ್ಳಿ ಶ್ರೀನಿವಾಸ್, ಎಎಲ್‌ಎಫ್ ಸಂಸ್ಥೆಯ ವಿನಯ್ ಶ್ರೀನಿವಾಸ್ ಹಾಗೂ ಕಾರ್ಮಿಕ, ದಲಿತ, ಮಹಿಳಾ ಮತ್ತು ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಇದ್ದರು.

ಇದನ್ನೂ ಓದಿ; ಬೇರೆ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್ ಮಾಧ್ಯಮ ಸತ್ಯ ತಿಳಿಸುತ್ತದೆ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...