Homeಮುಖಪುಟಸದಾಶಿವ ಆಯೋಗದ ವರದಿಗೆ ವಿರೋಧ: ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ನಡೆಗೆ ತೀವ್ರ ಖಂಡನೆ

ಸದಾಶಿವ ಆಯೋಗದ ವರದಿಗೆ ವಿರೋಧ: ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ನಡೆಗೆ ತೀವ್ರ ಖಂಡನೆ

ಕರ್ನಾಟಕದಲ್ಲಿ ದಸಂಸದಲ್ಲಿರುವ ಮುಂಚೂಣಿ ನಾಯಕರೂ ಕೂಡ ಹೊಲೆಯರೇ ಆಗಿದ್ದು, ಅವರೆಲ್ಲರೂ ಒಳ ಮೀಸಲಾತಿ ಮತ್ತು ಸದಾಶಿವ ಆಯೋಗದ ಪರವಾಗಿದ್ದಾರೆ - ಹುಲಿಕುಂಟೆ ಮೂರ್ತಿ

- Advertisement -
- Advertisement -

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳ ನಡುವೆ, ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿಯನ್ನು ರದ್ದುಪಡಿಸುವಂತೆ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿರುವ ಛಲವಾದಿ ಸಂಘವು, “ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ಸದಾಶಿವ ಆಯೋಗದ ವರದಿಯು ಅವೈಜ್ಞಾನಿಕವಾಗಿದ್ದು, ತಕ್ಷಣವೇ ರದ್ದುಪಡಿಸಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

“ನಮ್ಮ ಜನಾಂಗದವರನ್ನು ಆದಿ ಕರ್ನಾಟಕ, ಆದಿ ದ್ರಾವಿಡ, ಹೊಲೆಯ, ಬಲಗೈ, ಛಲವಾದಿ, ತಳವಾರ ಮತ್ತು ಮಾದರ ಎಂಬ ಹೆಸರುಗಳಿಂದ ಕರೆಯಲಾಗುತ್ತದೆ. ಆದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾದಿಗ ಜನಾಂಗದವರು ಸಹ ಆದಿ ಕರ್ನಾಟಕ, ಆದಿ ದ್ರಾವಿಡ, ಮಾದರ ಎಂಬ ಹೆಸರುಗಳಿಂದ ಕರೆಯಲ್ಪಡುತ್ತಿದ್ದು, ಜಾತಿ ಪ್ರಮಾಣಪತ್ರವನ್ನೂ ಪಡೆಯುತ್ತಿದ್ದಾರೆ. ಒಟ್ಟು 16 ಜಿಲ್ಲೆಗಳಲ್ಲಿ ಚಲವಾದಿ ಮತ್ತು ಮಾದಿಗ ಜನಾಂಗದವರನ್ನು ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಸದಾಶಿವ ಆಯೋಗವು ಎರಡೂ ಜಾತಿಗಳನ್ನು ಮಾದಿಗ ಸಮುದಾಯ ಎಂದು ನಮೂದಿಸಿದೆ. ವಾಸ್ತವದಲ್ಲಿ ಮೈಸೂರು ಪ್ರಾಂತ್ಯದಲ್ಲಿ ಸುಮಾರು 30 ಲಕ್ಷ ಮಂದಿ ಆದಿ ಕರ್ನಾಟಕದವರಿದ್ದಾರೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ 15 ಲಕ್ಷವಿದ್ದು, ರಾಜ್ಯದಲ್ಲಿ 45 ಲಕ್ಷ ಮಂದಿ ಛಲವಾದಿ ಜನಾಂಗದವರಿದ್ದಾರೆ. ಈ ಗೊಂದಲವನ್ನು ಆಯೋಗವು ಸರಿಪಡಿಸಿಲ್ಲ. ಹಾಗಾಗಿ ದ್ವಿಸದಸ್ಯ ಆಯೋಗವನ್ನು ನೇಮಕ ಮಾಡಿ, ಪರಿಶಿಷ್ಟ ಜಾತಿ ಛಲವಾದಿ(ಬಲಗೈ) ಜನಾಂಗದ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಒತ್ತಾಯಿಸಿದೆ.

ಇದರ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿದ ಒಳಮೀಸಲಾತಿಗಾಗಿ ಮೊದಲಿನಿಂದಲೂ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಡಾ.ಪೂರ್ಣಾನಂದ, “ಹಳೆ ಮೈಸೂರು ಪ್ರಾಂತದಲ್ಲಿ ಆದಿ ದ್ರಾವಿಡ ಎಂದರೆ, ಮಾದಿಗರು, ಆದಿ ಕರ್ನಾಟಕ ಎಂದರೆ, ಹೊಲೆಯರು ಎಂದು ಅರ್ಥ. ಇದು ಗೊಂದಲ ಇರುವುದು ನಿಜ. ಆದರೆ ಸದಾಶಿವ ಆಯೋಗದಲ್ಲಿ ಈ ಗೊಂದಲವಿಲ್ಲ. ವರದಿಯಲ್ಲಿ ನೇರವಾಗಿ ಹೊಲೆಯ, ಮಾದಿಗ ಎಂದು ನಮೂದಿಸಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

“ಸದಾಶಿವ ಆಯೊಗವನ್ನು ರದ್ದು ಮಾಡಿ ಎಂದು ಹೇಳುತ್ತಿರುವವರು ನಿಜವಾಗಿಯೂ ಆಘುಂತಕರು. ಪ್ರಬಲರಾಗಿರುವವರು ತಮಗೆ ಸಿಗುತ್ತಿರುವ ಸೌಲಭ್ಯಗಳನ್ನು ಹಂಚಿಕೊಳ್ಳಲು ಮನಸ್ಸು ಮಾಡುತ್ತಿಲ್ಲ. ಈ ಮೂಲಕವಾದರೂ ಇನ್ನೊಂದಷ್ಟು ವರ್ಷ ಈ ಒಳ ಮೀಸಲಾತಿ ಪ್ರಕ್ರಿಯೆ ಮುಂದೆ ಹೋಗಲಿ ಎಂಬುದು ಅವರ ಆಶಯವಾಗಿದೆ. ಈಗಾಗಲೇ ಮಾದಿಗರು ಕಳೆದ 25 ವರ್ಷಗಳಿಂದ ಯಾವುದೇ ಸೌಲಭ್ಯಗಳು ಸಿಗದೇ ವಂಚಿತರಾಗಿದ್ದಾರೆ. ಕಳೆದ 10-15 ವರ್ಷಗಳಲ್ಲಿ ಮೀಸಲಾತಿ ಅಡಿಯಲ್ಲಿ ಸರ್ಕಾರಿ ಕೆಲಸ ತೆಗೆದುಕೊಂಡಿರುವವರ ಪಟ್ಟಿಯನ್ನು ಗಮನಿಸಿದಾಗ ಮಾದಿಗರ ಸಂಖ್ಯೆ ತೀರಾ ಕಡಿಮೆಯಿದೆ. ಹಾಗಾಗಿ, ಇವರಿಗೆ ನ್ಯಾಯ ಸಿಗಬೇಕು ಎನ್ನುವುದಾದರೆ, ಸದಾಶಿವ ಆಯೋಗವನ್ನು ಜಾರಿಗೊಳಿಸಿ, ಒಳ ಮೀಸಲಾತಿಯನ್ನು ಜಾರಿಗೆ ತರಬೇಕು. ಇದು ನಡೆದರೆ ಎಡಗೈ ಮತ್ತು ಬಲಗೈ ಇಬ್ಬರಿಗೂ ಸಮಾನ ಅವಕಾಶಗಳು ಸಿಗುತ್ತದೆ. ಇದರ ಜೊತೆಗೆ ಈಗಾಗಲೆ ನಡೆದಿರುವ ಜಾತಿಗಣತಿಯ ವರದಿಯನ್ನು ಬಿಡುಗಡೆ ಮಾಡಿದರೆ ಈ ಗೊಂದಲಗಳೂ ಪರಿಹಾರವಾಗುತ್ತದೆ. ಆದರೆ ಈ ಸಮಾನ ಅವಕಾಶಗಳನ್ನು ಹಂಚಿಕೊಳ್ಳಲು ಪ್ರಬಲರು ಇಚ್ಚಿಸುತ್ತಿಲ್ಲ. ಹಾಗಾಗಿಯೇ ಹೀಗೆ ಆಯೋಗದ ವರದಿಯನ್ನು ರದ್ದುಗೊಳಿಸಿ ಎಂದು ಹೇಳುತ್ತಿದ್ದಾರೆ” ಎಂದು ಹೇಳಿದರು.

“ಪ್ರತಿಯೊಂದು ಮೀಸಲಾತಿ ವರ್ಗದಲ್ಲಿಯೂ (ಇತರೆ ಹಿಂದುಳಿದ ವರ್ಗಗಳು ಸೇರಿದಂತೆ) ಈ ಒಳ ಮೀಸಲಾತಿ ಜಾರಿಗೆ ಬರಬೇಕು. ಇಲ್ಲವಾದರೆ ಕೇವಲ ಮುಂಚೂಣಿಯಲ್ಲಿರುವ 2-3 ಜಾತಿಗಳು ಮಾತ್ರ ಸೌಲಭ್ಯ ಪಡೆದುಕೊಂಡು ಮುಂದುವರಿಯುತ್ತವೆ. ಉದಾ: 2ಎ ವರ್ಗದಲ್ಲಿ ಹತ್ತಾರು ಜಾತಿಗಳಿವೆ. ಆದರೆ ಕೇವಲ ಕುರುಬರು ಮಾತ್ರ ಬಹುತೇಕ ಮೀಸಲಾಗಿ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಉಳಿದ ಜಾತಿಗಳಿಗೆ ಅನ್ಯಾಯ ಆಗುತ್ತಿದೆ. ಈ ಕಾರಣದಿಂದಲೆ ಒಳ ಮೀಸಲಾತಿ ಎಲ್ಲಾ ವರ್ಗಗಳಲ್ಲಿಯೂ ಜಾರಿಯಾಗಬೇಕು ಎನ್ನುವುದು ನನ್ನ ಆಶಯ” ಎಂದು ವಿವರಿಸಿದರು.

ಇದನ್ನೂ ಓದಿ: ಒಳಮೀಸಲಾತಿಯು ಒಳಗೇ ಕುಯ್ಯದಂತಿರಲು…….

ಹುಲಿಕುಂಟೆ ಮೂರ್ತಿಯವರು ಮಾತನಾಡಿ, “ಇದು ಸಮುದಾಯಗಳ ಬಗ್ಗೆ ಅವರಿಗಿರುವ ಅಜ್ಞಾನವನ್ನು ಎತ್ತಿತೋರಿಸುತ್ತದೆ. ಜೊತೆಗೆ ಮೀಸಲಾತಿಯ ಪರಿಕಲ್ಪನೆ ಮತ್ತು ಒಳ ಮೀಸಲಾತಿಯ ಪರಿಕಲ್ಪನೆಯನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂಬುದು ತಿಳಿದುಬರುತ್ತದೆ. ಯಾವುದೇ ಒಂದು ಸಮುದಾಯ ತನಗಾಗುತ್ತಿರುವ ಅನ್ಯಾಯದ ವಿರುದ್ಧ ದನಿಯೆತ್ತುತ್ತಿದೆ ಎಂದಾಗ, ಅದಕ್ಕೆ ಸಹಕರಿಸುವ ಗುಣ ಇರಬೇಕು. ಇಲ್ಲವಾದರೆ ಇಂತಹ ಅಭಿಪ್ರಾಯಗಳು ಸಮುದಾಯಗಳ ಒಳಗೆ ಬಿರುಕನ್ನುಂಟುಮಾಡುತ್ತದೆ. ಇದರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ನಿಶ್ಚಿತ” ಎಂದು ಹೇಳಿದರು.

“ಬೇಕಿದ್ದರೆ ಸದಾಶಿವ ಆಯೋಗದ ವರದಿಯನ್ನು ಚರ್ಚೆಗೆ ಒಳಪಡಿಸಿ ಎಂದು ಕೇಳಲಿ. ಆದರೆ ಇವರು ಹೇಳುತ್ತಿರುವಂತೆ ಏಕಾಏಕಿ ಆಯೋಗದ ವರದಿಯನ್ನು ರದ್ದುಪಡಿಸಿ ಎಂದು ಹೇಳುವುದು ಸರಿಯಲ್ಲ. ನಿಜವಾಗಿ ಹೇಳಬೇಕೆಂದರೆ, ಈ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಹೊಲೆಯರ ಪ್ರತಿನಿಧಿಯ ಸಂಘವೇ ಅಲ್ಲ. ಏಕೆಂದರೆ ತುಂಬಾ ಜನ ಹೊಲೆಯರು ತಾವು ಛಲವಾದಿಗಳು ಎಂದು ಕರೆದುಕೊಳ್ಳುವುದಿಲ್ಲ. ಕರ್ನಾಟಕದಲ್ಲಿ ದಸಂಸದಲ್ಲಿರುವ ಮುಂಚೂಣಿ ನಾಯಕರೂ ಕೂಡ ಹೊಲೆಯರೇ ಆಗಿದ್ದು, ಅವರೆಲ್ಲರೂ ಒಳ ಮೀಸಲಾತಿ ಮತ್ತು ಸದಾಶಿವ ಆಯೋಗದ ಪರವಾಗಿದ್ದಾರೆ. ಹಾಗಾಗಿ ಖಂಡಿತ ಇದನ್ನು ನಾನು ವಿರೋಧಿಸುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ತಿಳಿಯುವ ಮೊದಲೇ, ಇವರು ಈ ವರದಿಯನ್ನು ವಿರೋಧಿಸುತ್ತಿರುವುದಕ್ಕೆ ಪ್ರಮುಖ ಕಾರಣ, ಇದರ ಕುರಿತು ಹಬ್ಬಿಸಿರುವ ‘ಹೊಲೆಯ ಮತ್ತು ಲಂಬಾಣಿಗಳಿಗೆ ಅನ್ಯಾಯವಾಗುತ್ತದೆ ಎನ್ನುವ ತಪ್ಪುಕಲ್ಪನೆ ಮತ್ತು ಪೂರ್ವಗ್ರಹವಾಗಿದೆ. ಜೊತೆಗೆ ಇದರ ಹಿಂದೆ ಕೋಮುವಾದಿಗಳ ಒಡೆದು ಆಳುವ ರಾಜಕೀಯ ದುರುದ್ದೇಶವಂತೂ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ” ಎಂದು ಹೇಳಿದರು.


ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...