Homeಮುಖಪುಟಸದಾಶಿವ ಆಯೋಗದ ವರದಿಗೆ ವಿರೋಧ: ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ನಡೆಗೆ ತೀವ್ರ ಖಂಡನೆ

ಸದಾಶಿವ ಆಯೋಗದ ವರದಿಗೆ ವಿರೋಧ: ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ನಡೆಗೆ ತೀವ್ರ ಖಂಡನೆ

ಕರ್ನಾಟಕದಲ್ಲಿ ದಸಂಸದಲ್ಲಿರುವ ಮುಂಚೂಣಿ ನಾಯಕರೂ ಕೂಡ ಹೊಲೆಯರೇ ಆಗಿದ್ದು, ಅವರೆಲ್ಲರೂ ಒಳ ಮೀಸಲಾತಿ ಮತ್ತು ಸದಾಶಿವ ಆಯೋಗದ ಪರವಾಗಿದ್ದಾರೆ - ಹುಲಿಕುಂಟೆ ಮೂರ್ತಿ

- Advertisement -
- Advertisement -

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳ ನಡುವೆ, ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿಯನ್ನು ರದ್ದುಪಡಿಸುವಂತೆ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿರುವ ಛಲವಾದಿ ಸಂಘವು, “ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ಸದಾಶಿವ ಆಯೋಗದ ವರದಿಯು ಅವೈಜ್ಞಾನಿಕವಾಗಿದ್ದು, ತಕ್ಷಣವೇ ರದ್ದುಪಡಿಸಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

“ನಮ್ಮ ಜನಾಂಗದವರನ್ನು ಆದಿ ಕರ್ನಾಟಕ, ಆದಿ ದ್ರಾವಿಡ, ಹೊಲೆಯ, ಬಲಗೈ, ಛಲವಾದಿ, ತಳವಾರ ಮತ್ತು ಮಾದರ ಎಂಬ ಹೆಸರುಗಳಿಂದ ಕರೆಯಲಾಗುತ್ತದೆ. ಆದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾದಿಗ ಜನಾಂಗದವರು ಸಹ ಆದಿ ಕರ್ನಾಟಕ, ಆದಿ ದ್ರಾವಿಡ, ಮಾದರ ಎಂಬ ಹೆಸರುಗಳಿಂದ ಕರೆಯಲ್ಪಡುತ್ತಿದ್ದು, ಜಾತಿ ಪ್ರಮಾಣಪತ್ರವನ್ನೂ ಪಡೆಯುತ್ತಿದ್ದಾರೆ. ಒಟ್ಟು 16 ಜಿಲ್ಲೆಗಳಲ್ಲಿ ಚಲವಾದಿ ಮತ್ತು ಮಾದಿಗ ಜನಾಂಗದವರನ್ನು ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಸದಾಶಿವ ಆಯೋಗವು ಎರಡೂ ಜಾತಿಗಳನ್ನು ಮಾದಿಗ ಸಮುದಾಯ ಎಂದು ನಮೂದಿಸಿದೆ. ವಾಸ್ತವದಲ್ಲಿ ಮೈಸೂರು ಪ್ರಾಂತ್ಯದಲ್ಲಿ ಸುಮಾರು 30 ಲಕ್ಷ ಮಂದಿ ಆದಿ ಕರ್ನಾಟಕದವರಿದ್ದಾರೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ 15 ಲಕ್ಷವಿದ್ದು, ರಾಜ್ಯದಲ್ಲಿ 45 ಲಕ್ಷ ಮಂದಿ ಛಲವಾದಿ ಜನಾಂಗದವರಿದ್ದಾರೆ. ಈ ಗೊಂದಲವನ್ನು ಆಯೋಗವು ಸರಿಪಡಿಸಿಲ್ಲ. ಹಾಗಾಗಿ ದ್ವಿಸದಸ್ಯ ಆಯೋಗವನ್ನು ನೇಮಕ ಮಾಡಿ, ಪರಿಶಿಷ್ಟ ಜಾತಿ ಛಲವಾದಿ(ಬಲಗೈ) ಜನಾಂಗದ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಒತ್ತಾಯಿಸಿದೆ.

ಇದರ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿದ ಒಳಮೀಸಲಾತಿಗಾಗಿ ಮೊದಲಿನಿಂದಲೂ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಡಾ.ಪೂರ್ಣಾನಂದ, “ಹಳೆ ಮೈಸೂರು ಪ್ರಾಂತದಲ್ಲಿ ಆದಿ ದ್ರಾವಿಡ ಎಂದರೆ, ಮಾದಿಗರು, ಆದಿ ಕರ್ನಾಟಕ ಎಂದರೆ, ಹೊಲೆಯರು ಎಂದು ಅರ್ಥ. ಇದು ಗೊಂದಲ ಇರುವುದು ನಿಜ. ಆದರೆ ಸದಾಶಿವ ಆಯೋಗದಲ್ಲಿ ಈ ಗೊಂದಲವಿಲ್ಲ. ವರದಿಯಲ್ಲಿ ನೇರವಾಗಿ ಹೊಲೆಯ, ಮಾದಿಗ ಎಂದು ನಮೂದಿಸಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

“ಸದಾಶಿವ ಆಯೊಗವನ್ನು ರದ್ದು ಮಾಡಿ ಎಂದು ಹೇಳುತ್ತಿರುವವರು ನಿಜವಾಗಿಯೂ ಆಘುಂತಕರು. ಪ್ರಬಲರಾಗಿರುವವರು ತಮಗೆ ಸಿಗುತ್ತಿರುವ ಸೌಲಭ್ಯಗಳನ್ನು ಹಂಚಿಕೊಳ್ಳಲು ಮನಸ್ಸು ಮಾಡುತ್ತಿಲ್ಲ. ಈ ಮೂಲಕವಾದರೂ ಇನ್ನೊಂದಷ್ಟು ವರ್ಷ ಈ ಒಳ ಮೀಸಲಾತಿ ಪ್ರಕ್ರಿಯೆ ಮುಂದೆ ಹೋಗಲಿ ಎಂಬುದು ಅವರ ಆಶಯವಾಗಿದೆ. ಈಗಾಗಲೇ ಮಾದಿಗರು ಕಳೆದ 25 ವರ್ಷಗಳಿಂದ ಯಾವುದೇ ಸೌಲಭ್ಯಗಳು ಸಿಗದೇ ವಂಚಿತರಾಗಿದ್ದಾರೆ. ಕಳೆದ 10-15 ವರ್ಷಗಳಲ್ಲಿ ಮೀಸಲಾತಿ ಅಡಿಯಲ್ಲಿ ಸರ್ಕಾರಿ ಕೆಲಸ ತೆಗೆದುಕೊಂಡಿರುವವರ ಪಟ್ಟಿಯನ್ನು ಗಮನಿಸಿದಾಗ ಮಾದಿಗರ ಸಂಖ್ಯೆ ತೀರಾ ಕಡಿಮೆಯಿದೆ. ಹಾಗಾಗಿ, ಇವರಿಗೆ ನ್ಯಾಯ ಸಿಗಬೇಕು ಎನ್ನುವುದಾದರೆ, ಸದಾಶಿವ ಆಯೋಗವನ್ನು ಜಾರಿಗೊಳಿಸಿ, ಒಳ ಮೀಸಲಾತಿಯನ್ನು ಜಾರಿಗೆ ತರಬೇಕು. ಇದು ನಡೆದರೆ ಎಡಗೈ ಮತ್ತು ಬಲಗೈ ಇಬ್ಬರಿಗೂ ಸಮಾನ ಅವಕಾಶಗಳು ಸಿಗುತ್ತದೆ. ಇದರ ಜೊತೆಗೆ ಈಗಾಗಲೆ ನಡೆದಿರುವ ಜಾತಿಗಣತಿಯ ವರದಿಯನ್ನು ಬಿಡುಗಡೆ ಮಾಡಿದರೆ ಈ ಗೊಂದಲಗಳೂ ಪರಿಹಾರವಾಗುತ್ತದೆ. ಆದರೆ ಈ ಸಮಾನ ಅವಕಾಶಗಳನ್ನು ಹಂಚಿಕೊಳ್ಳಲು ಪ್ರಬಲರು ಇಚ್ಚಿಸುತ್ತಿಲ್ಲ. ಹಾಗಾಗಿಯೇ ಹೀಗೆ ಆಯೋಗದ ವರದಿಯನ್ನು ರದ್ದುಗೊಳಿಸಿ ಎಂದು ಹೇಳುತ್ತಿದ್ದಾರೆ” ಎಂದು ಹೇಳಿದರು.

“ಪ್ರತಿಯೊಂದು ಮೀಸಲಾತಿ ವರ್ಗದಲ್ಲಿಯೂ (ಇತರೆ ಹಿಂದುಳಿದ ವರ್ಗಗಳು ಸೇರಿದಂತೆ) ಈ ಒಳ ಮೀಸಲಾತಿ ಜಾರಿಗೆ ಬರಬೇಕು. ಇಲ್ಲವಾದರೆ ಕೇವಲ ಮುಂಚೂಣಿಯಲ್ಲಿರುವ 2-3 ಜಾತಿಗಳು ಮಾತ್ರ ಸೌಲಭ್ಯ ಪಡೆದುಕೊಂಡು ಮುಂದುವರಿಯುತ್ತವೆ. ಉದಾ: 2ಎ ವರ್ಗದಲ್ಲಿ ಹತ್ತಾರು ಜಾತಿಗಳಿವೆ. ಆದರೆ ಕೇವಲ ಕುರುಬರು ಮಾತ್ರ ಬಹುತೇಕ ಮೀಸಲಾಗಿ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಉಳಿದ ಜಾತಿಗಳಿಗೆ ಅನ್ಯಾಯ ಆಗುತ್ತಿದೆ. ಈ ಕಾರಣದಿಂದಲೆ ಒಳ ಮೀಸಲಾತಿ ಎಲ್ಲಾ ವರ್ಗಗಳಲ್ಲಿಯೂ ಜಾರಿಯಾಗಬೇಕು ಎನ್ನುವುದು ನನ್ನ ಆಶಯ” ಎಂದು ವಿವರಿಸಿದರು.

ಇದನ್ನೂ ಓದಿ: ಒಳಮೀಸಲಾತಿಯು ಒಳಗೇ ಕುಯ್ಯದಂತಿರಲು…….

ಹುಲಿಕುಂಟೆ ಮೂರ್ತಿಯವರು ಮಾತನಾಡಿ, “ಇದು ಸಮುದಾಯಗಳ ಬಗ್ಗೆ ಅವರಿಗಿರುವ ಅಜ್ಞಾನವನ್ನು ಎತ್ತಿತೋರಿಸುತ್ತದೆ. ಜೊತೆಗೆ ಮೀಸಲಾತಿಯ ಪರಿಕಲ್ಪನೆ ಮತ್ತು ಒಳ ಮೀಸಲಾತಿಯ ಪರಿಕಲ್ಪನೆಯನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂಬುದು ತಿಳಿದುಬರುತ್ತದೆ. ಯಾವುದೇ ಒಂದು ಸಮುದಾಯ ತನಗಾಗುತ್ತಿರುವ ಅನ್ಯಾಯದ ವಿರುದ್ಧ ದನಿಯೆತ್ತುತ್ತಿದೆ ಎಂದಾಗ, ಅದಕ್ಕೆ ಸಹಕರಿಸುವ ಗುಣ ಇರಬೇಕು. ಇಲ್ಲವಾದರೆ ಇಂತಹ ಅಭಿಪ್ರಾಯಗಳು ಸಮುದಾಯಗಳ ಒಳಗೆ ಬಿರುಕನ್ನುಂಟುಮಾಡುತ್ತದೆ. ಇದರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ನಿಶ್ಚಿತ” ಎಂದು ಹೇಳಿದರು.

“ಬೇಕಿದ್ದರೆ ಸದಾಶಿವ ಆಯೋಗದ ವರದಿಯನ್ನು ಚರ್ಚೆಗೆ ಒಳಪಡಿಸಿ ಎಂದು ಕೇಳಲಿ. ಆದರೆ ಇವರು ಹೇಳುತ್ತಿರುವಂತೆ ಏಕಾಏಕಿ ಆಯೋಗದ ವರದಿಯನ್ನು ರದ್ದುಪಡಿಸಿ ಎಂದು ಹೇಳುವುದು ಸರಿಯಲ್ಲ. ನಿಜವಾಗಿ ಹೇಳಬೇಕೆಂದರೆ, ಈ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಹೊಲೆಯರ ಪ್ರತಿನಿಧಿಯ ಸಂಘವೇ ಅಲ್ಲ. ಏಕೆಂದರೆ ತುಂಬಾ ಜನ ಹೊಲೆಯರು ತಾವು ಛಲವಾದಿಗಳು ಎಂದು ಕರೆದುಕೊಳ್ಳುವುದಿಲ್ಲ. ಕರ್ನಾಟಕದಲ್ಲಿ ದಸಂಸದಲ್ಲಿರುವ ಮುಂಚೂಣಿ ನಾಯಕರೂ ಕೂಡ ಹೊಲೆಯರೇ ಆಗಿದ್ದು, ಅವರೆಲ್ಲರೂ ಒಳ ಮೀಸಲಾತಿ ಮತ್ತು ಸದಾಶಿವ ಆಯೋಗದ ಪರವಾಗಿದ್ದಾರೆ. ಹಾಗಾಗಿ ಖಂಡಿತ ಇದನ್ನು ನಾನು ವಿರೋಧಿಸುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ತಿಳಿಯುವ ಮೊದಲೇ, ಇವರು ಈ ವರದಿಯನ್ನು ವಿರೋಧಿಸುತ್ತಿರುವುದಕ್ಕೆ ಪ್ರಮುಖ ಕಾರಣ, ಇದರ ಕುರಿತು ಹಬ್ಬಿಸಿರುವ ‘ಹೊಲೆಯ ಮತ್ತು ಲಂಬಾಣಿಗಳಿಗೆ ಅನ್ಯಾಯವಾಗುತ್ತದೆ ಎನ್ನುವ ತಪ್ಪುಕಲ್ಪನೆ ಮತ್ತು ಪೂರ್ವಗ್ರಹವಾಗಿದೆ. ಜೊತೆಗೆ ಇದರ ಹಿಂದೆ ಕೋಮುವಾದಿಗಳ ಒಡೆದು ಆಳುವ ರಾಜಕೀಯ ದುರುದ್ದೇಶವಂತೂ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ” ಎಂದು ಹೇಳಿದರು.


ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...