Homeಕರ್ನಾಟಕಸದಾಶಿವ ಆಯೋಗದ ವರದಿ ವಿರೋಧಕ್ಕೆ ಸಹಮತವಿಲ್ಲ, ಪರಿಶಿಷ್ಟರ ಒಮ್ಮತಕ್ಕಾಗಿ ಸಮುದಾಯಗಳ ಜೊತೆ ಚರ್ಚೆ: ದಸಂಸ ನಾಯಕರ...

ಸದಾಶಿವ ಆಯೋಗದ ವರದಿ ವಿರೋಧಕ್ಕೆ ಸಹಮತವಿಲ್ಲ, ಪರಿಶಿಷ್ಟರ ಒಮ್ಮತಕ್ಕಾಗಿ ಸಮುದಾಯಗಳ ಜೊತೆ ಚರ್ಚೆ: ದಸಂಸ ನಾಯಕರ ಸ್ಪಷ್ಟನೆ

ಮೀಸಲಾತಿ ಸಂರಕ್ಷಣಾ ಒಕ್ಕೂಟದ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿರುವ ದಸಂಸ ನಾಯಕರು, ಒಕ್ಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರ ಕುರಿತು ಸ್ಪಷ್ಟನೆ ನೀಡಿದ್ದಾರೆ

- Advertisement -
- Advertisement -

“‘ಜಸ್ಟೀಸ್‌ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಒಪ್ಪುವುದಿಲ್ಲ, ಸಚಿವ ಸಂಪುಟ ಉಪಸಮಿತಿಯೇ ಅಧ್ಯಯನ ಮಾಡಲಿ’ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಹೇಳಿರುವುದಕ್ಕೆ ನಮ್ಮ ಸಮ್ಮತಿ ಇಲ್ಲ. ಅದು ಒಕ್ಕೂಟದ ನಿರ್ಧಾರವೇ ಹೊರತು, ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಸಂಘರ್ಷ ಸಮಿತಿ (ದಸಂಸ) ಮುಖಂಡರಿಗೂ ಇದಕ್ಕೂ ಸಂಬಂಧವಿಲ್ಲ” ಎಂದು ದಸಂಸ ನಾಯಕರು ಸ್ಪಷ್ಟಪಡಿಸಿದ್ದಾರೆ.

“ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಚೆಗೂ ಪರಿಶಿಷ್ಟ ಜಾತಿಗಳು ಒಗ್ಗಟ್ಟು ಉಳಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ 101 ಪರಿಶಿಷ್ಟ ಜಾತಿಗಳೊಂದಿಗೂ ಚರ್ಚೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಅದರ ಭಾಗವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ” ಎಂದು ತಿಳಿಸಿದ್ದಾರೆ.

ಬೋವಿ, ಲಂಬಾಣಿ ನಾಯಕರು ಮುಂಚೂಣಿಯಲ್ಲಿರುವ ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯಿಂದ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ದಸಂಸ ನಾಯಕರು ಪಾಲ್ಗೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ‘ಸದಾಶಿವ ಆಯೋಗದ ವರದಿ ವಿರೋಧಿಸಿ ಜ.10ರಂದು ಬೃಹತ್‌ ಪ್ರತಿಭಟನೆ ನಡೆಸುವುದಾಗಿ ಒಕ್ಕೂಟ ತೀರ್ಮಾನಿಸಿದೆ’ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

“ಎ.ಜೆ.ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಪರಿಶಿಷ್ಟ ಜಾತಿಗಳನ್ನು ಒಳಮೀಸಲಾತಿ ಹೆಸರಲ್ಲಿ ವರ್ಗೀಕರಿಸಬಾರದು. ಸಾರ್ವಜನಿಕ ಚರ್ಚೆಗೆ ಒಳಪಡಿಸದೇ ಸಂಪುಟ ಉಪಸಮಿತಿ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಶಿಫಾರಸ್ಸು  ಮಾಡಬಾರದು” ಎಂದು ಒಕ್ಕೂಟ ಒತ್ತಾಯಿಸಿದೆ.

ಇದನ್ನೂ ಓದಿರಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ಮುಂದುವರಿದು, “ಗೊಂದಲ, ಅಸ್ಪಷ್ಟತೆ, ಅವೈಜ್ಞಾನಿಕ, ಅಸಂವಿಧಾನಿಕ ಅಂಶಗಳನ್ನು ಒಳಗೊಂಡ ವರದಿಯನ್ನು ಆಧಾರವಾಗಿ ಪರಿಗಣಿಸದೇ ಕಾನೂನು ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಪುಟ ಉಪಸಮಿತಿಯೇ ಸ್ವಯಂ ಆಗಿ ಪರಿಶಿಷ್ಟ ಜಾತಿಗಳ ವರ್ಗೀಕರಣ ಮಾಡಲು ಕಾರ್ಯಸಾಧು ಶಿಫಾರಸ್ಸು ಮಾಡಬೇಕು. ಈ ಬೇಡಿಕೆ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲು ಜ.10ರಂದು ಬೆಂಗಳೂರಿನಲ್ಲಿ 10 ಲಕ್ಷ ಜನರನ್ನು ಸೇರಿಸಿ ಪ್ರತಿಭಟನೆ ನಡೆಸಲು ಬೋವಿ ಸಮಾಜದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವದದಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಯಿತು” ಎಂದು ವರದಿ ತಿಳಿಸಿದೆ. ಈ ನಿರ್ಣಯ ಕೈಗೊಂಡಿರುವ ಕಾರ್ಯಕ್ರಮದಲ್ಲಿ “ದಸಂಸ ಮುಖಂಡರಾದ ಮಾವಳ್ಳಿ ಶಂಕರ್‌, ಎನ್‌.ವೆಂಕಟೇಶ್‌, ಬಿ.ಗೋಪಾಲ್‌, ಇಂಧೂದರ ಹೊನ್ನಾಪುರ, ನಾಗರಾಜ್‌ ಅವರು ಪಾಲ್ಗೊಂಡಿದ್ದರು” ಎಂಬುದು ವರದಿಯಲ್ಲಿ ಉಲ್ಲೇಖಗೊಂಡಿದೆ.

ಡಿಸೆಂಬರ್‌ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಸಮಾವೇಶದಲ್ಲಿ ಒಳಮೀಸಲಾತಿ ಪರವಾದ ನಿರ್ಣಯವನ್ನು ದಸಂಸ ಮುಖಂಡರು ಕೈಗೊಂಡಿದ್ದರು. “ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಟ್ಟು ಕಡ್ಡಾಯವಾಗಿ ಅನುಷ್ಟಾನಗೊಳಿಸಬೇಕು” ಎಂಬ ನಿರ್ಣಯ ಅಂಗೀಕರಿಸಲಾಗಿತ್ತು. ಆದರೆ ಇದನ್ನು ಪರೋಕ್ಷವಾಗಿ ಒಪ್ಪದಿರುವ ಒಕ್ಕೂಟದ ಕಾರ್ಯಕ್ರಮದಲ್ಲಿ ದಸಂಸ ನಾಯಕರು ಪಾಲ್ಗೊಂಡಿದ್ದೇಕೆ ಎಂಬ ಪ್ರಶ್ನೆ ಹುಟ್ಟಿದೆ.

ಈ ಕುರಿತು ದಸಂಸ ನಾಯಕರಾದ ಎನ್‌.ವೆಂಕಟೇಶ್‌, ಮಾವಳ್ಳಿ ಶಂಕರ್‌, ಇಂದೂಧರ ಹೊನ್ನಾಪುರ ಹಾಗೂ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್‌ ಅವರ ಪ್ರತಿಕ್ರಿಯೆಯನ್ನು ‘ನಾನುಗೌರಿ.ಕಾಂ’ ಪಡೆದುಕೊಂಡಿದೆ.

ಹೋರಾಟಗಾರರು, ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಮಾತನಾಡಿ, “ಒಕ್ಕೂಟದ ನಿರ್ಣಯಗಳಲ್ಲಿ ನಾವು ಭಾಗಿಯಲ್ಲ. ಸಮುದಾಯಗಳಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಸಭೆ ಕರೆದಿರುವುದಾಗಿ ನಮ್ಮನ್ನು ಆಹ್ವಾನಿಸಿದ್ದರು. ನಾವು ಭಾಗಿಯಾಗಿ ನಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದೇವೆ” ಎಂದು ತಿಳಿಸಿದರು.

“ಸದಾಶಿವ ಆಯೋಗದ ವರದಿಯನ್ನು ಚರ್ಚೆಗೆ ಬಿಡುಗಡೆ ಮಾಡಬೇಕು, ಗೌಪ್ಯವಾಗಿ ಇಡುವುದರಲ್ಲಿ ಅರ್ಥವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ಎಂದು ಎನ್‌.ವೆಂಕಟೇಶ್, ಮಾವಳ್ಳಿ ಶಂಕರ್‌, ಬಿ.ಗೋಪಾಲ್ ಹಾಗೂ ನಾನು ಅಭಿಪ್ರಾಯ ಮಂಡಿಸಿದೆವು. ಅವರು ತೆಗೆದುಕೊಂಡಿರುವ ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ” ಎಂದು ಪುನರುಚ್ಚರಿಸಿದರು.

“ಪರಿಶಿಷ್ಟ ಜಾತಿಗಳ ಸಹ ಸಮುದಾಯಗಳು ಹಾಗೂ ಸಂಘಟನೆಗಳೊಂದಿಗೆ ನಾವು ನಿರಂತರವಾಗಿ ಚರ್ಚೆಗಳನ್ನು ನಡೆಸಲು ಮುಂದಾಗಿದ್ದೇವೆ. ಪರಸ್ಪರ ಕೈಜೋಡಿಸಿ ಚಳವಳಿಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂಬ ಕಾರಣಕ್ಕೆ ಡಿಸೆಂಬರ್‌ 6ರ ಸಮಾವೇಶದ ನಂತರದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಈ ಆಶಯವನ್ನು ಇಟ್ಟುಕೊಂಡಿರುವ ನಮ್ಮನ್ನು ಆಹ್ವಾನಿಸಿದ್ದರಿಂದ ಅಲ್ಲಿಗೆ ಹೋಗಿದ್ದೆವು” ಎಂದು ವಿವರಿಸಿದರು.

“ಆವೇಶ, ಆಕ್ರೋಶ, ಪರಸ್ಪರ ದ್ವೇಷದಿಂದ ಸಮಸ್ಯೆಗಳ ಪರಿಹಾರ ಆಗುವುದಿಲ್ಲ. ನೂರೊಂದು ಜಾತಿಗಳು ಒಮ್ಮತದ ನಿರ್ಣಯಕ್ಕೆ ಬರಬೇಕು. ಜನಸಂಖ್ಯೆ ಆಧಾರದಲ್ಲಿ ಅವರವರ ಪಾಲು ಅವರವರಿಗೆ ಸಿಗಬೇಕು. ಒಳಮೀಸಲಾತಿ ಇಂದಿನ ಅನಿವಾರ್ಯ ಎಂದು ಸ್ಪಷ್ಟವಾಗಿ ಮಾತನಾಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿರಿ: ನ್ಯಾಯ ಕೇಳಿದ ಒಳಮೀಸಲಾತಿ ಹೋರಾಟಗಾರರ ಬಂಧನ

“ಒಬ್ಬೊಬ್ಬರ ನಡುವೆ ಬೆಸುಗೆ ಇರಬೇಕು, ವಿಚಾರ ವಿನಿಮಯ ಮಾಡಿಕೊಳ್ಳಬೇಕು, ಪ್ರೀತಿ ವಿಶ್ವಾಸ ಇರಬೇಕು ಎಂದು ನಾವು ಹೋಗಿದ್ದೆವು. ಅವರ ನಿರ್ಣಯಗಳಿಗೆ ಬೆಂಬಲ ನೀಡಲೆಂದು ತೆರಳಿರಲಿಲ್ಲ. ಒಳಮೀಸಲಾತಿ ಸೇರಿದಂತೆ ಯಾವುದೇ ಸಂಗತಿ ಪರ- ವಿರೋಧ ಎಂಬ ಬೈನರಿಯಾಗಿ ಚರ್ಚೆಯಾಗಬಾರದು ಎಂಬುದು ನಮ್ಮ ಆಶಯ. ವಿವೇಕಪೂರ್ವವಾಗಿ ಪ್ರತಿಯೊಂದನ್ನು ಚರ್ಚಿಸಬೇಕು. ನೂರೊಂದು ಜಾತಿಗಳೊಂದಿಗೂ ಇದೇ ಬಾಂಧವ್ಯ ಇರಬೇಕೆಂಬುದು ನಾವು ಕೆಲಸ ಮಾಡುತ್ತಿದ್ದೇವೆ. ಸದಾಶಿವ ಆಯೋಗದ ವರದಿ ಜಾರಿಯಾದ ನಂತರವೂ ಈ ಬಾಂಧವ್ಯ ಮುಂದುವರಿಯಬೇಕು. ನಾವು ಮಾಡುತ್ತಿರುವ ಕೆಲಸ ಸದಾಶಿವ ಆಯೋಗದ ವರದಿಗಷ್ಟೇ ಸೀಮಿತವಾದದ್ದಲ್ಲ. ಹೇಗೆ ದಲಿತ ಸಂಘರ್ಷ ಸಮಿತಿಯನ್ನು ಒಗ್ಗೂಡಿಸಲು ನಾವು ಪ್ರಯತ್ನ ಮಾಡಿದೆವೋ ಹಾಗೆಯೇ ಎಲ್ಲ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳನ್ನು ಜಾಗೃತಗೊಳಿಸುವ ಜವಾಬ್ದಾರಿ ನಮ್ಮ ಮುಂದಿದೆ” ಎಂದರು.

ದಸಂಸದ ಹಿರಿಯ ನಾಯಕರಾದ ಎನ್‌.ವೆಂಕಟೇಶ್‌ ಪ್ರತಿಕ್ರಿಯಿಸಿ, “ವರದಿಯನ್ನು ಬಹಿರಂಗಪಡಿಸಬೇಕೆಂದು ನಮ್ಮ ಅಭಿಪ್ರಾಯ ಹೇಳಿದ್ದೇನೆ. ಡಿಸೆಂಬರ್‌ 6ರಂದು ತೆಗೆದುಕೊಂಡ ನಿರ್ಣಯದ ಹಿನ್ನೆಲೆಯಲ್ಲಿ ಎಲ್ಲರನ್ನೂ ಒಮ್ಮತಕ್ಕೆ ತರಬೇಕಿದೆ. ಪರಿಶಿಷ್ಟ ಜಾತಿಗಳ ನಡುವೆ ಸಹಮತವಿಲ್ಲದೆ ಸಂವಿಧಾನ ವಿರೋಧಿಗಳಿಗೆ ಅನುಕೂಲವಾಗುವಂತಾಗಬಾರದು. ನಮ್ಮನ್ನು ಒಡೆದು ಆಳುವ ಸಂಘಪರಿವಾರದ ಕುರಿತು ಎಚ್ಚರ ವಹಿಸಬೇಕು. ಈ ಸರ್ಕಾರ ದಲಿತ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ ಕಡಿತ ಮಾಡಿದೆ. ಎಸ್‌ಟಿಪಿ, ಟಿಎಸ್‌ಪಿ ಅನುದಾನ ಕಡಿಮೆ ಮಾಡಿದೆ. ನಮ್ಮ ಅಸ್ತಿತ್ವಕ್ಕೆ ಧಕ್ಕೆ ತಂದಿದೆ. ಹೀಗಾಗಿ ಡಿಸೆಂಬರ್‌ 6ರಂದು ಸ್ಪಷ್ಟ ಆಲೋಚನೆಗಳೊಂದಿಗೆ ನಾವು ಹೊರ ಬಂದಿದ್ದೇವೆ. ಒಟ್ಟು ಸಮುದಾಯದಲ್ಲಿ ತಾತ್ವಿಕ ಚಿಂತನೆ ಮೂಡಬೇಕಿದೆ. ಸಮುದಾಯಗಳನ್ನು ಭೇಟಿಯಾಗಿ ರಾಜಕೀಯ ಚಳವಳಿಯನ್ನು ಬೆಳೆಸುವ ಪ್ರಯತ್ನಗಳಾಗುತ್ತಿವೆ. ಕೋಮುವಾದಿಗಳನ್ನು ಸೋಲಿಸಲು ಸಮುದಾಯಗಳಿಂದ ಎಳ್ಳಷ್ಟು ಸಹಾಯವಾದರೂ ಅದನ್ನು ಒಳಗೊಳ್ಳಬೇಕು ಎಂಬ ಮುಖ್ಯ ಉದ್ದೇಶದಿಂದ ಭಾಗಿಯಾಗಿದ್ದೇವೆ. ನಮ್ಮ ವಿಚಾರಗಳನ್ನು ಸ್ಪಷ್ಟಪಡಿಸಿದ್ದೇವೆ. ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ಒಮ್ಮತದಿಂದ ಮುಂದುವರಿದರೆ ಚಳವಳಿ ಬಲವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ರಾಜ್ಯ ಸರ್ಕಾರದ ಅಸಡ್ಡೆಗೆ ಆಕ್ರೋಶಗೊಂಡ ಒಳಮೀಸಲಾತಿ ಕೂಗು

ಹಿರಿಯ ಹೋರಾಟಗಾರರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಆಹ್ವಾನದ ಮೇರೆಗೆ ಕಾರ್ಯಕ್ರಮಕ್ಕೆ ಹೋಗಿದ್ದೆವು. ಬಿಜೆಪಿ ಮುಖಂಡರಾದ ರಾಜೀವ್‌ ಕಡೆಯವನೊಬ್ಬ ಅಲ್ಲಿ ಕೂಗಾಡುತ್ತಿದ್ದ. ತನ್ನನ್ನು ಆರ್‌ಎಸ್‌ಎಸ್‌ನವನೆಂದು ಬಿಂಬಿಸಿಕೊಂಡು ತಕರಾರು ತೆಗೆಯುತ್ತಿದ್ದ. ಆತನನ್ನು ಸಂಘಟಕರು ಹೊರ ಹಾಕಿದರು” ಎಂದ ಅವರು, “ವರದಿ ಚರ್ಚೆಯಾಗಬೇಕು. ವರದಿಯಲ್ಲಿನ ಆಶಯಗಳನ್ನು ಜಾರಿಗೊಳಿಸಬೇಕು. ಸಮುದಾಯಗಳನ್ನು ಒಡೆಯುವ ಕೆಲಸ ಆಗಬಾರದು. ಈ ಸರ್ಕಾರಗಳು ಇನ್ನು ಎಷ್ಟು ಉಪಸಮಿತಿಗಳನ್ನು ಮಾಡುತ್ತಾರೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎ.ಜೆ.ಸದಾಶಿವ ಆಯೋಗದ ವರದಿ ಅವೈಜ್ಞಾನಿಕ, ಅವಾಸ್ತವಿಕ ಎಂದು ವೇದಿಕೆಯ ಬ್ಯಾನರ್‌ನಲ್ಲಿ ಹಾಕಿಕೊಳ್ಳಲಾಗಿತ್ತು. ಅದಕ್ಕೂ ದಸಂಸ ಮುಖಂಡರಿಗೂ ಸಂಬಂಧವಿಲ್ಲ. ನಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು, ಇಲ್ಲವಾದರೆ ಕೋಮುವಾದಿಗಳಿಗೆ ಬಲಿಯಾಗುತ್ತೇವೆ ಎಂದು ವೇದಿಕೆಯಲ್ಲಿ ತಿಳಿಸಿದ್ದೇವೆ” ಎಂದು ಮಾಹಿತಿ ನೀಡಿದರು.

ದಸಂಸ ಮುಖಂಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಒಕ್ಕೂಟದ ಮುಖಂಡರಾದ ಅನಂತ್ ನಾಯ್ಕ್ ಪ್ರತಿಕ್ರಿಯಿಸಿ, “ಅಂಗೀಕಾರವಾಗಿರುವ ನಿರ್ಣಯಗಳು ಒಕ್ಕೂಟಕ್ಕೆ ಸಂಬಂಧಿಸಿವೆ. ಇದಕ್ಕೂ ದಸಂಸ ಮುಖಂಡರಿಗೂ ಯಾವುದೇ ಸಂಬಂಧವಿಲ್ಲ. ನಮ್ಮ ಆಹ್ವಾನದ ಮೇರೆಗೆ ಬಂದು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆತ್ಮೀಯರಾದ ಅಂಬಣ್ಣ ಅರೋಲಿಕರ್‌ ಅವರೊಂದಿಗೂ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...