Homeಕರ್ನಾಟಕಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿ ಜನವರಿ 16ರ ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವುದಾಗಿ ಹೇಳಿದೆ. ಈ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಕರವೇ ತಿಳಿಸಿದೆ.

ಟ್ವಿಟರ್‌ ಅಭಿಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

“ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ಇಡೀ ರಾಜ್ಯದ ಎಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸರ್ಕಾರ ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

“ಮಾಗಡಿ ಸಮೀಪ ನೂರು ಎಕರೆ ಜಾಗವನ್ನು ಸಂಸ್ಕೃತ ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಸರ್ಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

“ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

“ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ.

ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾರಾಯಣ ಗೌಡರ ಕ್ರಮ ಸ್ವಾಗತಾರ್ಹ ಮತ್ತು ಪ್ರಸ್ತುತ ದಿನಗಳಲ್ಲಿ ನಮ್ಮ ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ರಾಜಕೀಯ ಜ್ಞಾನ ವಿಜ್ಞಾನ ತಂತ್ರಜ್ಞಾನ ಕೃಷಿ ವಿಶ್ವವಿದ್ಯಾಲಯಗಳ ಮೇಲೆ, ರೈತರ ಬದುಕು ಕಥೆಗಳ ಮೇಲೆ, ಸರಕಾರಿ ನೌಕರರ ಮೇಲೆ, ಸರಕಾರಿ ಸಂಸ್ಥೆಗಳ ಮೇಲೆ ಎಲ್ಲಿಲ್ಲದ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಕನ್ನಡ ನಾಡಿನ ಬಹುಪಾಲು ವಿವಿಧ ಸಮುದಾಯಗಳ ಸಂಸ್ಕೃತಿ ಮೇಲೆ ಬಹುದೊಡ್ಡ ಪೆಟ್ಟು ಬೀಳುತ್ತಿದೆ. ಇದನ್ನು ತಡೆಯಬೇಕು ಎಂದರೆ ಇದೆ ಸರಿಯಾದ ಮಾರ್ಗ.

  2. ನಾರಯಣಗೌಡರೇ ಇದು ಅಗತ್ಯವಿರದ ನಿಮ್ಮ‌ವಿರೋಧ ಇಡಿ ಜಗತ್ತೆ ಸಂಸ್ಕ್ರತ ಭಾಷೆಯ ಶ್ರೀಮಂತತೆ ಮೆಚ್ಚಿದೆ.ಅ ಭಾಷೆಯನ್ನು ಸುಮ್ಮಸುಮ್ನೆ ಬ್ರಿಟಿಷ್‌ ರ ,ಮುಸಲ್ಮಾನ ರ ತಾಳಕ್ಕೆ ಕುಣಿದು ಅಮುಲ್ಯ ಸಂಪತ್ತು ಕಳೆದುಕೊಂಡ್ಡಿದೇವೆ ಈ ವಿಶ್ಬವಿದ್ಯಾಲಯಕ್ಕೆ ನಮ್ಮ ರಾಜ್ಯದಲ್ಲಿ ಅಗುವದಕ್ಕೆ ಸಂತೋಷಪಡಿ,ಅರೆಬರೆ ತಿಳಿದು ವಿರೋಧಿಸಬೇಡಿ.ಇದು ಇತ್ತಿಚೇಗೆ ಅ ಭಾಷೆಯ ಅಪಾರತೆ ಅರಿವಿಗೆ ಬಂದ ಹುಟ್ಡು ಕನ್ನಾಡಾಭಿಮಾನಿಯ ಅಗ್ರಜ

  3. ಕಪಿಲ, ಪತಂಜಲ, ಗೌತಮ ಜಿನನುತ
    ಭಾರತ ಜನನಿಯ ತನುಜಾತೆ
    ಜಯ ಹೇ ಕರ್ನಾಟಕ ಮಾತೆ.

  4. ಗಲ್ಲಿ ಗಲ್ಲಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವ ಇಂಗ್ಲಿಷ್ ಮೀಡಿಯಂ ಶಾಲೆಗಳ ವಿರುದ್ಧ ಹೋರಾಡೋಣ. ತಮಿಳು, ತೆಲುಗು, ಮರಾಠಿ, ಮಲೆಯಾಳಂ ಗಳೂ ಕನ್ನಡಕ್ಕೆ ದೊಡ್ಡ ಬೆದರಿಕೆಯಾಗಿದೆ.
    ಅವುಗಳ ವಿರುದ್ಧ ಹೋರಾಡೋಣ ನಾರಾಯಣ ಗೌಡರೇ…

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...