Homeಕರ್ನಾಟಕಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿ ಜನವರಿ 16ರ ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವುದಾಗಿ ಹೇಳಿದೆ. ಈ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಕರವೇ ತಿಳಿಸಿದೆ.

ಟ್ವಿಟರ್‌ ಅಭಿಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

“ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ಇಡೀ ರಾಜ್ಯದ ಎಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸರ್ಕಾರ ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

“ಮಾಗಡಿ ಸಮೀಪ ನೂರು ಎಕರೆ ಜಾಗವನ್ನು ಸಂಸ್ಕೃತ ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಸರ್ಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

“ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

“ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ.

ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾರಾಯಣ ಗೌಡರ ಕ್ರಮ ಸ್ವಾಗತಾರ್ಹ ಮತ್ತು ಪ್ರಸ್ತುತ ದಿನಗಳಲ್ಲಿ ನಮ್ಮ ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ರಾಜಕೀಯ ಜ್ಞಾನ ವಿಜ್ಞಾನ ತಂತ್ರಜ್ಞಾನ ಕೃಷಿ ವಿಶ್ವವಿದ್ಯಾಲಯಗಳ ಮೇಲೆ, ರೈತರ ಬದುಕು ಕಥೆಗಳ ಮೇಲೆ, ಸರಕಾರಿ ನೌಕರರ ಮೇಲೆ, ಸರಕಾರಿ ಸಂಸ್ಥೆಗಳ ಮೇಲೆ ಎಲ್ಲಿಲ್ಲದ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಕನ್ನಡ ನಾಡಿನ ಬಹುಪಾಲು ವಿವಿಧ ಸಮುದಾಯಗಳ ಸಂಸ್ಕೃತಿ ಮೇಲೆ ಬಹುದೊಡ್ಡ ಪೆಟ್ಟು ಬೀಳುತ್ತಿದೆ. ಇದನ್ನು ತಡೆಯಬೇಕು ಎಂದರೆ ಇದೆ ಸರಿಯಾದ ಮಾರ್ಗ.

  2. ನಾರಯಣಗೌಡರೇ ಇದು ಅಗತ್ಯವಿರದ ನಿಮ್ಮ‌ವಿರೋಧ ಇಡಿ ಜಗತ್ತೆ ಸಂಸ್ಕ್ರತ ಭಾಷೆಯ ಶ್ರೀಮಂತತೆ ಮೆಚ್ಚಿದೆ.ಅ ಭಾಷೆಯನ್ನು ಸುಮ್ಮಸುಮ್ನೆ ಬ್ರಿಟಿಷ್‌ ರ ,ಮುಸಲ್ಮಾನ ರ ತಾಳಕ್ಕೆ ಕುಣಿದು ಅಮುಲ್ಯ ಸಂಪತ್ತು ಕಳೆದುಕೊಂಡ್ಡಿದೇವೆ ಈ ವಿಶ್ಬವಿದ್ಯಾಲಯಕ್ಕೆ ನಮ್ಮ ರಾಜ್ಯದಲ್ಲಿ ಅಗುವದಕ್ಕೆ ಸಂತೋಷಪಡಿ,ಅರೆಬರೆ ತಿಳಿದು ವಿರೋಧಿಸಬೇಡಿ.ಇದು ಇತ್ತಿಚೇಗೆ ಅ ಭಾಷೆಯ ಅಪಾರತೆ ಅರಿವಿಗೆ ಬಂದ ಹುಟ್ಡು ಕನ್ನಾಡಾಭಿಮಾನಿಯ ಅಗ್ರಜ

  3. ಕಪಿಲ, ಪತಂಜಲ, ಗೌತಮ ಜಿನನುತ
    ಭಾರತ ಜನನಿಯ ತನುಜಾತೆ
    ಜಯ ಹೇ ಕರ್ನಾಟಕ ಮಾತೆ.

  4. ಗಲ್ಲಿ ಗಲ್ಲಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವ ಇಂಗ್ಲಿಷ್ ಮೀಡಿಯಂ ಶಾಲೆಗಳ ವಿರುದ್ಧ ಹೋರಾಡೋಣ. ತಮಿಳು, ತೆಲುಗು, ಮರಾಠಿ, ಮಲೆಯಾಳಂ ಗಳೂ ಕನ್ನಡಕ್ಕೆ ದೊಡ್ಡ ಬೆದರಿಕೆಯಾಗಿದೆ.
    ಅವುಗಳ ವಿರುದ್ಧ ಹೋರಾಡೋಣ ನಾರಾಯಣ ಗೌಡರೇ…

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...