Homeಕರ್ನಾಟಕಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿ ಜನವರಿ 16ರ ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವುದಾಗಿ ಹೇಳಿದೆ. ಈ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಕರವೇ ತಿಳಿಸಿದೆ.

ಟ್ವಿಟರ್‌ ಅಭಿಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

“ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ಇಡೀ ರಾಜ್ಯದ ಎಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸರ್ಕಾರ ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

“ಮಾಗಡಿ ಸಮೀಪ ನೂರು ಎಕರೆ ಜಾಗವನ್ನು ಸಂಸ್ಕೃತ ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಸರ್ಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

“ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

“ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ.

ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾರಾಯಣ ಗೌಡರ ಕ್ರಮ ಸ್ವಾಗತಾರ್ಹ ಮತ್ತು ಪ್ರಸ್ತುತ ದಿನಗಳಲ್ಲಿ ನಮ್ಮ ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ರಾಜಕೀಯ ಜ್ಞಾನ ವಿಜ್ಞಾನ ತಂತ್ರಜ್ಞಾನ ಕೃಷಿ ವಿಶ್ವವಿದ್ಯಾಲಯಗಳ ಮೇಲೆ, ರೈತರ ಬದುಕು ಕಥೆಗಳ ಮೇಲೆ, ಸರಕಾರಿ ನೌಕರರ ಮೇಲೆ, ಸರಕಾರಿ ಸಂಸ್ಥೆಗಳ ಮೇಲೆ ಎಲ್ಲಿಲ್ಲದ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಕನ್ನಡ ನಾಡಿನ ಬಹುಪಾಲು ವಿವಿಧ ಸಮುದಾಯಗಳ ಸಂಸ್ಕೃತಿ ಮೇಲೆ ಬಹುದೊಡ್ಡ ಪೆಟ್ಟು ಬೀಳುತ್ತಿದೆ. ಇದನ್ನು ತಡೆಯಬೇಕು ಎಂದರೆ ಇದೆ ಸರಿಯಾದ ಮಾರ್ಗ.

  2. ನಾರಯಣಗೌಡರೇ ಇದು ಅಗತ್ಯವಿರದ ನಿಮ್ಮ‌ವಿರೋಧ ಇಡಿ ಜಗತ್ತೆ ಸಂಸ್ಕ್ರತ ಭಾಷೆಯ ಶ್ರೀಮಂತತೆ ಮೆಚ್ಚಿದೆ.ಅ ಭಾಷೆಯನ್ನು ಸುಮ್ಮಸುಮ್ನೆ ಬ್ರಿಟಿಷ್‌ ರ ,ಮುಸಲ್ಮಾನ ರ ತಾಳಕ್ಕೆ ಕುಣಿದು ಅಮುಲ್ಯ ಸಂಪತ್ತು ಕಳೆದುಕೊಂಡ್ಡಿದೇವೆ ಈ ವಿಶ್ಬವಿದ್ಯಾಲಯಕ್ಕೆ ನಮ್ಮ ರಾಜ್ಯದಲ್ಲಿ ಅಗುವದಕ್ಕೆ ಸಂತೋಷಪಡಿ,ಅರೆಬರೆ ತಿಳಿದು ವಿರೋಧಿಸಬೇಡಿ.ಇದು ಇತ್ತಿಚೇಗೆ ಅ ಭಾಷೆಯ ಅಪಾರತೆ ಅರಿವಿಗೆ ಬಂದ ಹುಟ್ಡು ಕನ್ನಾಡಾಭಿಮಾನಿಯ ಅಗ್ರಜ

  3. ಕಪಿಲ, ಪತಂಜಲ, ಗೌತಮ ಜಿನನುತ
    ಭಾರತ ಜನನಿಯ ತನುಜಾತೆ
    ಜಯ ಹೇ ಕರ್ನಾಟಕ ಮಾತೆ.

  4. ಗಲ್ಲಿ ಗಲ್ಲಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವ ಇಂಗ್ಲಿಷ್ ಮೀಡಿಯಂ ಶಾಲೆಗಳ ವಿರುದ್ಧ ಹೋರಾಡೋಣ. ತಮಿಳು, ತೆಲುಗು, ಮರಾಠಿ, ಮಲೆಯಾಳಂ ಗಳೂ ಕನ್ನಡಕ್ಕೆ ದೊಡ್ಡ ಬೆದರಿಕೆಯಾಗಿದೆ.
    ಅವುಗಳ ವಿರುದ್ಧ ಹೋರಾಡೋಣ ನಾರಾಯಣ ಗೌಡರೇ…

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...