Homeಕರ್ನಾಟಕಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿ ಜನವರಿ 16ರ ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವುದಾಗಿ ಹೇಳಿದೆ. ಈ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಕರವೇ ತಿಳಿಸಿದೆ.

ಟ್ವಿಟರ್‌ ಅಭಿಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

“ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ಇಡೀ ರಾಜ್ಯದ ಎಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸರ್ಕಾರ ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

“ಮಾಗಡಿ ಸಮೀಪ ನೂರು ಎಕರೆ ಜಾಗವನ್ನು ಸಂಸ್ಕೃತ ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಸರ್ಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

“ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

“ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ.

ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾರಾಯಣ ಗೌಡರ ಕ್ರಮ ಸ್ವಾಗತಾರ್ಹ ಮತ್ತು ಪ್ರಸ್ತುತ ದಿನಗಳಲ್ಲಿ ನಮ್ಮ ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ರಾಜಕೀಯ ಜ್ಞಾನ ವಿಜ್ಞಾನ ತಂತ್ರಜ್ಞಾನ ಕೃಷಿ ವಿಶ್ವವಿದ್ಯಾಲಯಗಳ ಮೇಲೆ, ರೈತರ ಬದುಕು ಕಥೆಗಳ ಮೇಲೆ, ಸರಕಾರಿ ನೌಕರರ ಮೇಲೆ, ಸರಕಾರಿ ಸಂಸ್ಥೆಗಳ ಮೇಲೆ ಎಲ್ಲಿಲ್ಲದ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಕನ್ನಡ ನಾಡಿನ ಬಹುಪಾಲು ವಿವಿಧ ಸಮುದಾಯಗಳ ಸಂಸ್ಕೃತಿ ಮೇಲೆ ಬಹುದೊಡ್ಡ ಪೆಟ್ಟು ಬೀಳುತ್ತಿದೆ. ಇದನ್ನು ತಡೆಯಬೇಕು ಎಂದರೆ ಇದೆ ಸರಿಯಾದ ಮಾರ್ಗ.

  2. ನಾರಯಣಗೌಡರೇ ಇದು ಅಗತ್ಯವಿರದ ನಿಮ್ಮ‌ವಿರೋಧ ಇಡಿ ಜಗತ್ತೆ ಸಂಸ್ಕ್ರತ ಭಾಷೆಯ ಶ್ರೀಮಂತತೆ ಮೆಚ್ಚಿದೆ.ಅ ಭಾಷೆಯನ್ನು ಸುಮ್ಮಸುಮ್ನೆ ಬ್ರಿಟಿಷ್‌ ರ ,ಮುಸಲ್ಮಾನ ರ ತಾಳಕ್ಕೆ ಕುಣಿದು ಅಮುಲ್ಯ ಸಂಪತ್ತು ಕಳೆದುಕೊಂಡ್ಡಿದೇವೆ ಈ ವಿಶ್ಬವಿದ್ಯಾಲಯಕ್ಕೆ ನಮ್ಮ ರಾಜ್ಯದಲ್ಲಿ ಅಗುವದಕ್ಕೆ ಸಂತೋಷಪಡಿ,ಅರೆಬರೆ ತಿಳಿದು ವಿರೋಧಿಸಬೇಡಿ.ಇದು ಇತ್ತಿಚೇಗೆ ಅ ಭಾಷೆಯ ಅಪಾರತೆ ಅರಿವಿಗೆ ಬಂದ ಹುಟ್ಡು ಕನ್ನಾಡಾಭಿಮಾನಿಯ ಅಗ್ರಜ

  3. ಕಪಿಲ, ಪತಂಜಲ, ಗೌತಮ ಜಿನನುತ
    ಭಾರತ ಜನನಿಯ ತನುಜಾತೆ
    ಜಯ ಹೇ ಕರ್ನಾಟಕ ಮಾತೆ.

  4. ಗಲ್ಲಿ ಗಲ್ಲಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವ ಇಂಗ್ಲಿಷ್ ಮೀಡಿಯಂ ಶಾಲೆಗಳ ವಿರುದ್ಧ ಹೋರಾಡೋಣ. ತಮಿಳು, ತೆಲುಗು, ಮರಾಠಿ, ಮಲೆಯಾಳಂ ಗಳೂ ಕನ್ನಡಕ್ಕೆ ದೊಡ್ಡ ಬೆದರಿಕೆಯಾಗಿದೆ.
    ಅವುಗಳ ವಿರುದ್ಧ ಹೋರಾಡೋಣ ನಾರಾಯಣ ಗೌಡರೇ…

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...