Homeಕರ್ನಾಟಕಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿ ಜನವರಿ 16ರ ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವುದಾಗಿ ಹೇಳಿದೆ. ಈ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಕರವೇ ತಿಳಿಸಿದೆ.

ಟ್ವಿಟರ್‌ ಅಭಿಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

“ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ಇಡೀ ರಾಜ್ಯದ ಎಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸರ್ಕಾರ ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

“ಮಾಗಡಿ ಸಮೀಪ ನೂರು ಎಕರೆ ಜಾಗವನ್ನು ಸಂಸ್ಕೃತ ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಸರ್ಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

“ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

“ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ.

ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾರಾಯಣ ಗೌಡರ ಕ್ರಮ ಸ್ವಾಗತಾರ್ಹ ಮತ್ತು ಪ್ರಸ್ತುತ ದಿನಗಳಲ್ಲಿ ನಮ್ಮ ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ರಾಜಕೀಯ ಜ್ಞಾನ ವಿಜ್ಞಾನ ತಂತ್ರಜ್ಞಾನ ಕೃಷಿ ವಿಶ್ವವಿದ್ಯಾಲಯಗಳ ಮೇಲೆ, ರೈತರ ಬದುಕು ಕಥೆಗಳ ಮೇಲೆ, ಸರಕಾರಿ ನೌಕರರ ಮೇಲೆ, ಸರಕಾರಿ ಸಂಸ್ಥೆಗಳ ಮೇಲೆ ಎಲ್ಲಿಲ್ಲದ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಕನ್ನಡ ನಾಡಿನ ಬಹುಪಾಲು ವಿವಿಧ ಸಮುದಾಯಗಳ ಸಂಸ್ಕೃತಿ ಮೇಲೆ ಬಹುದೊಡ್ಡ ಪೆಟ್ಟು ಬೀಳುತ್ತಿದೆ. ಇದನ್ನು ತಡೆಯಬೇಕು ಎಂದರೆ ಇದೆ ಸರಿಯಾದ ಮಾರ್ಗ.

  2. ನಾರಯಣಗೌಡರೇ ಇದು ಅಗತ್ಯವಿರದ ನಿಮ್ಮ‌ವಿರೋಧ ಇಡಿ ಜಗತ್ತೆ ಸಂಸ್ಕ್ರತ ಭಾಷೆಯ ಶ್ರೀಮಂತತೆ ಮೆಚ್ಚಿದೆ.ಅ ಭಾಷೆಯನ್ನು ಸುಮ್ಮಸುಮ್ನೆ ಬ್ರಿಟಿಷ್‌ ರ ,ಮುಸಲ್ಮಾನ ರ ತಾಳಕ್ಕೆ ಕುಣಿದು ಅಮುಲ್ಯ ಸಂಪತ್ತು ಕಳೆದುಕೊಂಡ್ಡಿದೇವೆ ಈ ವಿಶ್ಬವಿದ್ಯಾಲಯಕ್ಕೆ ನಮ್ಮ ರಾಜ್ಯದಲ್ಲಿ ಅಗುವದಕ್ಕೆ ಸಂತೋಷಪಡಿ,ಅರೆಬರೆ ತಿಳಿದು ವಿರೋಧಿಸಬೇಡಿ.ಇದು ಇತ್ತಿಚೇಗೆ ಅ ಭಾಷೆಯ ಅಪಾರತೆ ಅರಿವಿಗೆ ಬಂದ ಹುಟ್ಡು ಕನ್ನಾಡಾಭಿಮಾನಿಯ ಅಗ್ರಜ

  3. ಕಪಿಲ, ಪತಂಜಲ, ಗೌತಮ ಜಿನನುತ
    ಭಾರತ ಜನನಿಯ ತನುಜಾತೆ
    ಜಯ ಹೇ ಕರ್ನಾಟಕ ಮಾತೆ.

  4. ಗಲ್ಲಿ ಗಲ್ಲಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವ ಇಂಗ್ಲಿಷ್ ಮೀಡಿಯಂ ಶಾಲೆಗಳ ವಿರುದ್ಧ ಹೋರಾಡೋಣ. ತಮಿಳು, ತೆಲುಗು, ಮರಾಠಿ, ಮಲೆಯಾಳಂ ಗಳೂ ಕನ್ನಡಕ್ಕೆ ದೊಡ್ಡ ಬೆದರಿಕೆಯಾಗಿದೆ.
    ಅವುಗಳ ವಿರುದ್ಧ ಹೋರಾಡೋಣ ನಾರಾಯಣ ಗೌಡರೇ…

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...