Homeಕರ್ನಾಟಕಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸಂಸ್ಕೃತ ವಿವಿ ಸ್ಥಾಪನೆಗೆ ಕರವೇ ವಿರೋಧ: ಭಾನುವಾರ ಟ್ವಿಟರ್‌ ಅಭಿಯಾನ

ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿ ಜನವರಿ 16ರ ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವುದಾಗಿ ಹೇಳಿದೆ. ಈ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಕರವೇ ತಿಳಿಸಿದೆ.

ಟ್ವಿಟರ್‌ ಅಭಿಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

“ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ಇಡೀ ರಾಜ್ಯದ ಎಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸರ್ಕಾರ ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

“ಮಾಗಡಿ ಸಮೀಪ ನೂರು ಎಕರೆ ಜಾಗವನ್ನು ಸಂಸ್ಕೃತ ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಸರ್ಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

“ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

“ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ.

ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾರಾಯಣ ಗೌಡರ ಕ್ರಮ ಸ್ವಾಗತಾರ್ಹ ಮತ್ತು ಪ್ರಸ್ತುತ ದಿನಗಳಲ್ಲಿ ನಮ್ಮ ಕನ್ನಡ ನಾಡಿನ ಇತಿಹಾಸ ಸಂಸ್ಕೃತಿ ಪರಂಪರೆ ರಾಜಕೀಯ ಜ್ಞಾನ ವಿಜ್ಞಾನ ತಂತ್ರಜ್ಞಾನ ಕೃಷಿ ವಿಶ್ವವಿದ್ಯಾಲಯಗಳ ಮೇಲೆ, ರೈತರ ಬದುಕು ಕಥೆಗಳ ಮೇಲೆ, ಸರಕಾರಿ ನೌಕರರ ಮೇಲೆ, ಸರಕಾರಿ ಸಂಸ್ಥೆಗಳ ಮೇಲೆ ಎಲ್ಲಿಲ್ಲದ ಇಲ್ಲ ಸಲ್ಲದ ಕಾರಣಗಳನ್ನು ಹೇಳಿ ಕನ್ನಡ ನಾಡಿನ ಬಹುಪಾಲು ವಿವಿಧ ಸಮುದಾಯಗಳ ಸಂಸ್ಕೃತಿ ಮೇಲೆ ಬಹುದೊಡ್ಡ ಪೆಟ್ಟು ಬೀಳುತ್ತಿದೆ. ಇದನ್ನು ತಡೆಯಬೇಕು ಎಂದರೆ ಇದೆ ಸರಿಯಾದ ಮಾರ್ಗ.

  2. ನಾರಯಣಗೌಡರೇ ಇದು ಅಗತ್ಯವಿರದ ನಿಮ್ಮ‌ವಿರೋಧ ಇಡಿ ಜಗತ್ತೆ ಸಂಸ್ಕ್ರತ ಭಾಷೆಯ ಶ್ರೀಮಂತತೆ ಮೆಚ್ಚಿದೆ.ಅ ಭಾಷೆಯನ್ನು ಸುಮ್ಮಸುಮ್ನೆ ಬ್ರಿಟಿಷ್‌ ರ ,ಮುಸಲ್ಮಾನ ರ ತಾಳಕ್ಕೆ ಕುಣಿದು ಅಮುಲ್ಯ ಸಂಪತ್ತು ಕಳೆದುಕೊಂಡ್ಡಿದೇವೆ ಈ ವಿಶ್ಬವಿದ್ಯಾಲಯಕ್ಕೆ ನಮ್ಮ ರಾಜ್ಯದಲ್ಲಿ ಅಗುವದಕ್ಕೆ ಸಂತೋಷಪಡಿ,ಅರೆಬರೆ ತಿಳಿದು ವಿರೋಧಿಸಬೇಡಿ.ಇದು ಇತ್ತಿಚೇಗೆ ಅ ಭಾಷೆಯ ಅಪಾರತೆ ಅರಿವಿಗೆ ಬಂದ ಹುಟ್ಡು ಕನ್ನಾಡಾಭಿಮಾನಿಯ ಅಗ್ರಜ

  3. ಕಪಿಲ, ಪತಂಜಲ, ಗೌತಮ ಜಿನನುತ
    ಭಾರತ ಜನನಿಯ ತನುಜಾತೆ
    ಜಯ ಹೇ ಕರ್ನಾಟಕ ಮಾತೆ.

  4. ಗಲ್ಲಿ ಗಲ್ಲಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವ ಇಂಗ್ಲಿಷ್ ಮೀಡಿಯಂ ಶಾಲೆಗಳ ವಿರುದ್ಧ ಹೋರಾಡೋಣ. ತಮಿಳು, ತೆಲುಗು, ಮರಾಠಿ, ಮಲೆಯಾಳಂ ಗಳೂ ಕನ್ನಡಕ್ಕೆ ದೊಡ್ಡ ಬೆದರಿಕೆಯಾಗಿದೆ.
    ಅವುಗಳ ವಿರುದ್ಧ ಹೋರಾಡೋಣ ನಾರಾಯಣ ಗೌಡರೇ…

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...