Homeಮುಖಪುಟಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

- Advertisement -
- Advertisement -

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು ಬುಧವಾರ (ಡಿ.17) ನಿರ್ಧರಿಸಿದ್ದಾರೆ.

ವರದಿಗಳ ಪ್ರಕಾರ, ವಿರೋಧ ಪಕ್ಷಗಳ ಸಂಸದರು ಮಸೂದೆಯ ಚರ್ಚೆಗೆ ಹಾಜರಾಗಲಿದ್ದಾರೆ. ಆದರೆ, ಅಂಗೀಕಾರದ ಸಮಯದಲ್ಲಿ ಸಭಾತ್ಯಾಗ ಮಾಡಲಿದ್ದಾರೆ. ಬುಧವಾರ ನಡೆದ ಇಂಡಿಯಾದ ಒಕ್ಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹೊರತುಪಡಿಸಿ, ಇಂಡಿಯಾದ ಮೈತ್ರಿಕೂಟದ ಎಲ್ಲಾ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಿಗಿಯಾಗಿ ನಿಯಂತ್ರಿಸಲ್ಪಡುವ ನಾಗರಿಕ ಪರಮಾಣು ವಲಯವನ್ನು ಖಾಸಗಿ ಭಾಗವಹಿಸುವಿಕೆಗೆ ಮುಕ್ತಗೊಳಿಸಲು ಅವಕಾಶ ನೀಡುವ ಸಸ್ಟೈನೇಬಲ್ ಹಾರ್ನೆಸ್ಸಿಂಗ್ ಅಂಡ್ ಅಡ್ವಾನ್ಸ್‌ಮೆಂಟ್ ಆಫ್ ನ್ಯೂಕ್ಲಿಯರ್ ಎನರ್ಜಿ ಫಾರ್ ಟ್ರಾನ್ಸ್‌ಫಾರ್ಮಿಂಗ್ ಇಂಡಿಯಾ (ಎಸ್‌ಹೆಚ್‌ಎಎನ್‌ಟಿಐ-ಶಾಂತಿ) ಮಸೂದೆಯ ಚರ್ಚೆಯಲ್ಲೂ ಭಾಗವಹಿಸಿ, ತಮ್ಮ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ವಿರೋಧ ಪಕ್ಷಗಳು ತೀರ್ಮಾನಿಸಿವೆ.

ಈ ಮಸೂದೆಗಳು ದೂರಗಾಮಿ ಪರಿಣಾಮಗಳನ್ನು ಬೀರಬಹುದು, ಗ್ರಾಮೀಣ ಜೀವನೋಪಾಯವನ್ನು ದುರ್ಬಲಗೊಳಿಸುವ ಮತ್ತು ಕಾರ್ಯತಂತ್ರದ ವಲಯಗಳನ್ನು ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ವಿರೋಧ ಪಕ್ಷಗಳ ನಾಯಕರು ಎಚ್ಚರಿಸಿದ್ದಾರೆ.

ಮಂಗಳವಾರ ಸರ್ಕಾರ ವಿಬಿ–ಜಿ ರಾಮ್ ಜಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದು, ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ವ್ಯಕ್ತಪಡಿಸಿವೆ.

ಕೇಂದ್ರವು ಹಕ್ಕು ಆಧಾರಿತ ಕಲ್ಯಾಣ ಯೋಜನೆಯನ್ನು ರದ್ದುಗೊಳಿಸುತ್ತಿದೆ ಮತ್ತು ಮಹಾತ್ಮ ಗಾಂಧಿಯವರ ಪರಂಪರೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಹಲವಾರು ಸಂಸದರು ಆರೋಪಿಸಿದ್ದಾರೆ. ಎರಡು ದಶಕಗಳಷ್ಟು ಹಳೆಯದಾದ ನರೇಗಾ (ಎಂಜಿಎನ್‌ಆರ್‌ಇಜಿಎ) ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಮಸೂದೆಯನ್ನು ಸ್ಥಾಯಿ ಸಮಿತಿಗೆ ಕಳಿಸಬೇಕೆಂದು ವಿಪಕ್ಷ ಸಂಸದರು ಒತ್ತಾಯಿಸಿದ್ದಾರೆ.

ವಿಪಕ್ಷಗಳ ತಂಡದ ನೇತೃತ್ವದ ವಹಿಸಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಮಾತನಾಡಿ, ಪ್ರಸ್ತಾವಿತ ಕಾನೂನು ಉದ್ಯೋಗದ ಕಾನೂನು ಖಾತರಿಯನ್ನು ದುರ್ಬಲಗೊಳಿಸುತ್ತದೆ ಮತ್ತು ರಾಜ್ಯಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಹೇರುತ್ತದೆ ಎಂದು ಹೇಳಿದ್ದಾರೆ.

ಈ ಮಸೂದೆಯು ಕೇಂದ್ರಕ್ಕೆ ನಿಧಿ ಹಂಚಿಕೆಯನ್ನು ಮೊದಲೇ ನಿರ್ಧರಿಸುವ ಅಧಿಕಾರವನ್ನು ನೀಡುತ್ತದೆ. ಇದು ಯೋಜನೆಯ ಬೇಡಿಕೆ ಆಧಾರಿತ ಸ್ವರೂಪವನ್ನು ಪರಿಣಾಮಕಾರಿಯಾಗಿ ಕೊನೆಗೊಳಿಸುತ್ತದೆ ಮತ್ತು 73ನೇ ಸಾಂವಿಧಾನಿಕ ತಿದ್ದುಪಡಿಯ ಉದ್ದೇಶವನ್ನು ಉಲ್ಲಂಘಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಟಿಎಂಸಿ ಮತ್ತು ಡಿಎಂಕೆ ಸಂಸದರೂ ಕೂಡ ಪ್ರಿಯಾಂಕಾ ಗಾಂಧಿಯ ಹೇಳಿಕೆಗೆ ಧನಿಗೂಡಿಸಿದ್ದಾರೆ. ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ಕೈಬಿಟ್ಟಿರುವುದಕ್ಕೆ ಮತ್ತು ಮತ್ತು ಬೇಡಿಕೆ-ಚಾಲಿತ ವ್ಯವಸ್ಥೆಯಿಂದ ಪೂರೈಕೆ-ಚಾಲಿತ ವ್ಯವಸ್ಥೆಗೆ ಬದಲಾಯಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಭಾತ್ಯಾಗ ಮಾಡಿದ ನಂತರ, ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಡಿಎಂಕೆ ಸಂಸದ ಟಿ.ಆರ್. ಬಾಲು ಸೇರಿದಂತೆ ವಿರೋಧ ಪಕ್ಷದ ನಾಯಕರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದರು. “ಮಹಾತ್ಮ ಗಾಂಧಿಯವರಿಗೆ ಮಾಡುವ ಈ ಅವಮಾನವನ್ನು ದೇಶ ಸಹಿಸುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...