Homeಅಂತರಾಷ್ಟ್ರೀಯವಿಡಿ ಸಾವರ್ಕರ್ ಕುರಿತ ಹೇಳಿಕೆಗೆ ವಿರೋಧ; ಬಿಜೆಪಿ ಟೀಕೆಗೆ ಸೊಪ್ಪುಹಾಕದ ದಿನೇಶ್ ಗುಂಡೂರಾವ್

ವಿಡಿ ಸಾವರ್ಕರ್ ಕುರಿತ ಹೇಳಿಕೆಗೆ ವಿರೋಧ; ಬಿಜೆಪಿ ಟೀಕೆಗೆ ಸೊಪ್ಪುಹಾಕದ ದಿನೇಶ್ ಗುಂಡೂರಾವ್

- Advertisement -
- Advertisement -

ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರೋಧಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ಗುರುವಾರ ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, “ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವುದು ಕಾಂಗ್ರೆಸ್‌ನ ಅಭ್ಯಾಸವಾಗಿದೆ” ಎಂದು ಬಿಜೆಪಿ ಹೇಳಿದೆ.

ಬಿಜೆಪಿ ವಿರೋಧದ ಹೊರತಾಗಿಯೂ ಕಾಂಗ್ರೆಸ್ ಪಕ್ಷವು ದಿನೇಶ್‌ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. “ಅವರು ದೇಶದ ಜಾತ್ಯತೀತ ಸಿದ್ಧಾಂತವನ್ನು ನಂಬುತ್ತಾರೆ ಮತ್ತು ಬಿಜೆಪಿ ಈ ವಿಷಯವನ್ನು ರಾಜಕೀಯಗೊಳಿಸುತ್ತಿದೆ” ಎಂದು ಆರೋಪಿಸಿದರು.

ಗಾಂಧಿ ಜಯಂತಿಯಂದು ಬೆಂಗಳೂರಿನಲ್ಲಿ ನಡೆದ ಗೋಡ್ಸೆ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ದಿನೇಶ್‌ ಗುಂಡೂರಾವ್ ರಾವ್, “ಚಿತ್ಪಾವನ ಬ್ರಾಹ್ಮಣ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಒಂದು ರೀತಿಯಲ್ಲಿ ಆಧುನಿಕರಾಗಿದ್ದರು” ಎಂದು ಹೇಳಿದ್ದರು.

“ಮಹಾತ್ಮ ಗಾಂಧಿಯವರು ಸಸ್ಯಾಹಾರಿ ಮತ್ತು ಹಿಂದೂ ಧರ್ಮದಲ್ಲಿ ದೃಢವಾದ ನಂಬಿಕೆಯನ್ನು ಹೊಂದಿದ್ದರು. ಜಿನ್ನಾ ಮತ್ತೊಂದು ತೀವ್ರ, ಅವರು ಕಠಿಣ ಇಸ್ಲಾಮಿಸ್ಟ್ ನಂಬಿಕೆಯುಳ್ಳವರಾಗಿದ್ದರು. ಅವರು ವೈನ್ ಕುಡಿಯುತ್ತಿದ್ದರು ಮತ್ತು ಅವರು ಹಂದಿಮಾಂಸವನ್ನು ತಿನ್ನುತ್ತಿದ್ದರು ಎಂದು ಹೇಳಲಾಗುತ್ತದೆ. ಆದರೆ, ಅವರು ಎರಡು ರಾಷ್ಟ್ರಗಳ ಸಿದ್ಧಾಂತ ಮತ್ತು ರಾಜಕೀಯದ ನಂತರ ಮುಸ್ಲಿಂ ಐಕಾನ್ ಆದರು. ಆದರೆ, ಜಿನ್ನಾ ಮೂಲಭೂತವಾದಿಯಾಗಿರಲಿಲ್ಲ. ಸಾವರ್ಕರ್ ಮೂಲಭೂತವಾದಿಯಾಗಿದ್ದರು” ಎಂದು ಅವರು ಹೇಳಿದ್ದರು.

ಆರೋಗ್ಯ ಸಚಿವರ ಹೇಳಿಕೆಗೆ ಬಿಜೆಪಿ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. “ರಾವ್ ಅವರ ಹೇಳಿಕೆ ದುರದೃಷ್ಟಕರ, ಅವಮಾನಕರ ಮತ್ತು ಅತ್ಯಂತ ಖಂಡನೀಯ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹೇಳಿದ್ದಾರೆ. ದೇಶದ ಕ್ರಾಂತಿಕಾರಿಗಳಿಗೆ ಸ್ಪೂರ್ತಿಯಾಗಿದ್ದ ವೀರ ಸಾವರ್ಕರ್ ಅವರನ್ನು ಅವಮಾನಿಸುವುದು ಚಂದ್ರನ ಮೇಲೆ ಉಗುಳಿದಂತಿದೆ ಎಂದ ಅವರು, ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ದೇಶದ ಸೈನಿಕರನ್ನು ಯಾವಾಗಲೂ ಅವಮಾನಿಸುವುದು ಕಾಂಗ್ರೆಸ್‌ನ ಅಭ್ಯಾಸವಾಗಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ನಾಯಕ ನಾಗರಾಜ್ ಯಾದವ್ ಅವರು, “ಬಿಜೆಪಿ ವಿಷಯಗಳನ್ನು ಜೀವಂತವಾಗಿರಿಸಲು ರಾಜಕೀಯ ಹೇಳಿಕೆ ನೀಡುತ್ತಿದೆ” ಎಂದು ಹೇಳಿದರು. ಬಿಜೆಪಿ ಕೇವಲ ದಿನೇಶ್ ಗುಂಡೂರಾವ್ ಅವರ ತಪ್ಪು ಹುಡುಕಲು ಬಯಸಿದೆ. ಅವರು ಹೇಳಲು ಪ್ರಯತ್ನಿಸುತ್ತಿರುವುದು ಈ ದೇಶ ಎಲ್ಲರಿಗೂ ಸೇರಿದ್ದು.. ಜಾತಿ ಮತ್ತು ಧರ್ಮವನ್ನು ಮೀರಿ, ನಮ್ಮ ವೈಯಕ್ತಿಕ ಅಭ್ಯಾಸಗಳನ್ನು ಲೆಕ್ಕಿಸದೆ ನಾವು ಭಾರತೀಯರು” ಎಂದು ಅವರು ಹೇಳಿದರು.

ವಿವಾದದ ನಡುವೆ, ದಿನೇಶ್‌ ಗುಂಡೂರಾವ್ ಅವರು ತಾವು ಹೇಳಿಕೆ ನೀಡಿದ ಸಂದರ್ಭವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಹಾತ್ಮ ಗಾಂಧೀಜಿಯವರ ಹತ್ಯೆ ಕುರಿತು ಚರ್ಚೆ ನಡೆದಿದೆ ಎಂದರು.

“ಇದು ಮೂಲತಃ ಮಹಾತ್ಮ ಗಾಂಧಿ ಮತ್ತು ಸಾವರ್ಕರ್ ನಡುವಿನ ವೈರುಧ್ಯದ ಮೇಲೆ ಅವಲೋಕನವಾಗಿತ್ತು. ಮಹಾತ್ಮಾ ಗಾಂಧಿ ಹೇಗೆ ಧಾರ್ಮಿಕ ವ್ಯಕ್ತಿ ಮತ್ತು ಸಾವರ್ಕರ್ ಹೇಗೆ ನಾಸ್ತಿಕರಾಗಿದ್ದರು, ಮಹಾತ್ಮ ಗಾಂಧಿ ಅವರು ಸಸ್ಯಾಹಾರಿ ಮತ್ತು ಧರ್ಮದಲ್ಲಿ ಬಹಳಷ್ಟು ನಂಬಿಕೆಗಳನ್ನು ಹೊಂದಿದ್ದ ವ್ಯಕ್ತಿ. ಸಾವರ್ಕರ್ ಅವರು ಮಾಂಸಾಹಾರಿಯಾಗಿದ್ದರು ಮತ್ತು ಅವರು ಆಧುನಿಕತಾವಾದಿಯಾಗಿದ್ದರು… ನಾನು ಸಾವರ್ಕರ್ ಮತ್ತು ಗಾಂಧಿಯ ನಡುವಿನ ವೈರುಧ್ಯದ ಬಗ್ಗೆ ಮಾತನಾಡುತ್ತಿದ್ದೆ, ಅವರಿಬ್ಬರ ಸಿದ್ಧಾಂತ ಮತ್ತು ಅವರು ಹೇಗೆ ವಿಭಿನ್ನ ವ್ಯಕ್ತಿತ್ವಗಳು” ಎಂದು ಅವರು ಹೇಳಿದರು.

“ಸನ್ಮಾನ್ಯ ದಿನೇಶ್‌ ಗುಂಡೂರಾವ್ ಅವರೆ, ಬ್ರಾಹ್ಮಣ ಸಮಾಜದ ಸಾವರ್ಕರ್‌ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್‌ ಹೇಳಿದ್ದರೊ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್‌ ಅವರು ಹೇಳಿದ್ದರೊ” ಎಂದು ಕರ್ನಾಟಕ ಬಿಜೆಪಿ ಎಕ್ಸ್‌ನಲ್ಲಿ ಪ್ರಶ್ನಿಸಿದೆ.

ಬಿಜೆಪಿ ಲೇವಡಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವರು, “ಸಾವರ್ಕರ್ ಒಬ್ಬ ನಾಸ್ತಿಕ, ಮಾಂಸಾಹಾರಿ’ “ಕ್ಷಮಿಸಿ”…ಇದು ನಾನು ಹೇಳಿದ್ದಲ್ಲ. ನನ್ನ ತಂದೆಯಾಗಲಿ, ನನ್ನ ಪತ್ನಿಯಾಗಲಿ ಹೇಳಿದ್ದಲ್ಲ. ಇದನ್ನು ಹೇಳಿದ್ದು ಸ್ವತಃ ಸಾವರ್ಕರ್ ಅವರೇ” ಎಂದು ತಿರುಗೇಟು ನೀಡಿದ್ದಾರೆ.

‘ಸಾರಿ’ ನನ್ನ ಹೇಳಿಕೆಗಳಲ್ಲ, ಆದರೆ ಸಾವರ್ಕರ್ ಬ್ರಿಟಿಷರಿಗೆ ಹೇಳಿದ್ದು ಇದನ್ನೇ.. ಎಂದು ಮತ್ತೊಂದು ಪೋಸ್ಟ್‌ನಲ್ಲಿ ದಿನೇಶ್‌ ಗುಂಡೂರಾವ್ ಬಿಜೆಪಿ ಟೀಕೆಗಳಿಗೆ ಪ್ರತಿಕ್ರಿಯಿಸಿದ್ದಾರೆ.

“ಎಂದಿನಂತೆ ಈ ಮಾಧ್ಯಮದ ಭರಾಟೆಯ ಜಗತ್ತಿನಲ್ಲಿ ತಿಳುವಳಿಕೆಯುಳ್ಳ ಅಭಿಪ್ರಾಯಗಳಿಗೆ ಜಾಗವಿಲ್ಲ. ನಾನು ಹೇಳಿದ್ದು ಇಷ್ಟೇ.. ಗಾಂಧಿ ಭಕ್ತ ಹಿಂದೂ ಮತ್ತು ಸಾವರ್ಕರ್ ನಾಸ್ತಿಕ. ಗಾಂಧಿಯವರು ತುಂಬಾ ಧಾರ್ಮಿಕರಾಗಿದ್ದರು ಮತ್ತು ಅನೇಕ ಅಭಾಗಲಬ್ಧ ದೃಷ್ಟಿಕೋನಗಳನ್ನು ಹೊಂದಿದ್ದರು. ಆದರೆ, ಸಾವರ್ಕರ್ ಅವರು ವಿಚಾರವಾದಿ ಮತ್ತು ಅನೇಕ ವೈಜ್ಞಾನಿಕ ದೃಷ್ಟಿಕೋನಗಳನ್ನು ಹೊಂದಿದ್ದರು. ಗಾಂಧಿ ಸಸ್ಯಾಹಾರಿ ಮತ್ತು ಸಾವರ್ಕರ್ ಮಾಂಸಾಹಾರಿ. ಗಾಂಧೀಜಿ ಗೋವಿನ ಆರಾಧಕರಾಗಿದ್ದರು ಮತ್ತು ಸಾವರ್ಕರ್ ಅವರು ಗೋಪೂಜೆಯನ್ನು ನಂಬಲಿಲ್ಲ. ಗಾಂಧಿ ಪ್ರಜಾಪ್ರಭುತ್ವವಾದಿ ಮತ್ತು ಸಾವರ್ಕರ್ ಮೂಲಭೂತವಾದಿ” ಎಂದು ದಿನೇಶ್ ಎಕ್ಸ್‌ನಲ್ಲಿ ಮತ್ತುಷ್ಟು ವಿವರಣೆ ನೀಡಿದ್ದಾರೆ.

“ದೇಶವು ಎಲ್ಲ ಧರ್ಮಗಳಿಗೆ ಸೇರಿದ್ದು ಮತ್ತು ಸಾವರ್ಕರ್ ಅವರು ಹಿಂದೂ ರಾಷ್ಟ್ರವನ್ನು ಮಾತ್ರ ನಂಬಿದ್ದರು ಎಂದು ಗಾಂಧಿಯವರು ನಂಬಿದ್ದರು. ಸಾವರ್ಕರ್‌ವಾಡ್‌ರನ್ನು ಸೋಲಿಸಲು ನಮಗೆ ಗಾಂಧಿವಾದ ಬೇಕು ಎಂದು ನಾನು ಹೇಳಿದೆ. ಅಂತಿಮವಾಗಿ ಗೋಮಾಂಸದ ಬಗ್ಗೆ ನಾನು ಹೇಳಿದ್ದೇನೆಂದರೆ, ಸಾವರ್ಕರ್ ಕೂಡ ಗೋಮಾಂಸ ಸೇವಿಸಿದ್ದಾರೆ ಎಂದು ಕೆಲವರು ಹೇಳಿಕೊಂಡಿದ್ದಾರೆ, ಅವರು ಗೋಮಾಂಸ ಸೇವಿಸಿದ್ದಾರೆ ಎಂದು ನಾನು ಎಂದಿಗೂ ಹೇಳಲಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...