Homeಅಂತರಾಷ್ಟ್ರೀಯವಿಡಿ ಸಾವರ್ಕರ್ ಕುರಿತ ಹೇಳಿಕೆಗೆ ವಿರೋಧ; ಬಿಜೆಪಿ ಟೀಕೆಗೆ ಸೊಪ್ಪುಹಾಕದ ದಿನೇಶ್ ಗುಂಡೂರಾವ್

ವಿಡಿ ಸಾವರ್ಕರ್ ಕುರಿತ ಹೇಳಿಕೆಗೆ ವಿರೋಧ; ಬಿಜೆಪಿ ಟೀಕೆಗೆ ಸೊಪ್ಪುಹಾಕದ ದಿನೇಶ್ ಗುಂಡೂರಾವ್

- Advertisement -
- Advertisement -

ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರೋಧಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ಗುರುವಾರ ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, “ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವುದು ಕಾಂಗ್ರೆಸ್‌ನ ಅಭ್ಯಾಸವಾಗಿದೆ” ಎಂದು ಬಿಜೆಪಿ ಹೇಳಿದೆ.

ಬಿಜೆಪಿ ವಿರೋಧದ ಹೊರತಾಗಿಯೂ ಕಾಂಗ್ರೆಸ್ ಪಕ್ಷವು ದಿನೇಶ್‌ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. “ಅವರು ದೇಶದ ಜಾತ್ಯತೀತ ಸಿದ್ಧಾಂತವನ್ನು ನಂಬುತ್ತಾರೆ ಮತ್ತು ಬಿಜೆಪಿ ಈ ವಿಷಯವನ್ನು ರಾಜಕೀಯಗೊಳಿಸುತ್ತಿದೆ” ಎಂದು ಆರೋಪಿಸಿದರು.

ಗಾಂಧಿ ಜಯಂತಿಯಂದು ಬೆಂಗಳೂರಿನಲ್ಲಿ ನಡೆದ ಗೋಡ್ಸೆ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ದಿನೇಶ್‌ ಗುಂಡೂರಾವ್ ರಾವ್, “ಚಿತ್ಪಾವನ ಬ್ರಾಹ್ಮಣ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಒಂದು ರೀತಿಯಲ್ಲಿ ಆಧುನಿಕರಾಗಿದ್ದರು” ಎಂದು ಹೇಳಿದ್ದರು.

“ಮಹಾತ್ಮ ಗಾಂಧಿಯವರು ಸಸ್ಯಾಹಾರಿ ಮತ್ತು ಹಿಂದೂ ಧರ್ಮದಲ್ಲಿ ದೃಢವಾದ ನಂಬಿಕೆಯನ್ನು ಹೊಂದಿದ್ದರು. ಜಿನ್ನಾ ಮತ್ತೊಂದು ತೀವ್ರ, ಅವರು ಕಠಿಣ ಇಸ್ಲಾಮಿಸ್ಟ್ ನಂಬಿಕೆಯುಳ್ಳವರಾಗಿದ್ದರು. ಅವರು ವೈನ್ ಕುಡಿಯುತ್ತಿದ್ದರು ಮತ್ತು ಅವರು ಹಂದಿಮಾಂಸವನ್ನು ತಿನ್ನುತ್ತಿದ್ದರು ಎಂದು ಹೇಳಲಾಗುತ್ತದೆ. ಆದರೆ, ಅವರು ಎರಡು ರಾಷ್ಟ್ರಗಳ ಸಿದ್ಧಾಂತ ಮತ್ತು ರಾಜಕೀಯದ ನಂತರ ಮುಸ್ಲಿಂ ಐಕಾನ್ ಆದರು. ಆದರೆ, ಜಿನ್ನಾ ಮೂಲಭೂತವಾದಿಯಾಗಿರಲಿಲ್ಲ. ಸಾವರ್ಕರ್ ಮೂಲಭೂತವಾದಿಯಾಗಿದ್ದರು” ಎಂದು ಅವರು ಹೇಳಿದ್ದರು.

ಆರೋಗ್ಯ ಸಚಿವರ ಹೇಳಿಕೆಗೆ ಬಿಜೆಪಿ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. “ರಾವ್ ಅವರ ಹೇಳಿಕೆ ದುರದೃಷ್ಟಕರ, ಅವಮಾನಕರ ಮತ್ತು ಅತ್ಯಂತ ಖಂಡನೀಯ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹೇಳಿದ್ದಾರೆ. ದೇಶದ ಕ್ರಾಂತಿಕಾರಿಗಳಿಗೆ ಸ್ಪೂರ್ತಿಯಾಗಿದ್ದ ವೀರ ಸಾವರ್ಕರ್ ಅವರನ್ನು ಅವಮಾನಿಸುವುದು ಚಂದ್ರನ ಮೇಲೆ ಉಗುಳಿದಂತಿದೆ ಎಂದ ಅವರು, ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ದೇಶದ ಸೈನಿಕರನ್ನು ಯಾವಾಗಲೂ ಅವಮಾನಿಸುವುದು ಕಾಂಗ್ರೆಸ್‌ನ ಅಭ್ಯಾಸವಾಗಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ನಾಯಕ ನಾಗರಾಜ್ ಯಾದವ್ ಅವರು, “ಬಿಜೆಪಿ ವಿಷಯಗಳನ್ನು ಜೀವಂತವಾಗಿರಿಸಲು ರಾಜಕೀಯ ಹೇಳಿಕೆ ನೀಡುತ್ತಿದೆ” ಎಂದು ಹೇಳಿದರು. ಬಿಜೆಪಿ ಕೇವಲ ದಿನೇಶ್ ಗುಂಡೂರಾವ್ ಅವರ ತಪ್ಪು ಹುಡುಕಲು ಬಯಸಿದೆ. ಅವರು ಹೇಳಲು ಪ್ರಯತ್ನಿಸುತ್ತಿರುವುದು ಈ ದೇಶ ಎಲ್ಲರಿಗೂ ಸೇರಿದ್ದು.. ಜಾತಿ ಮತ್ತು ಧರ್ಮವನ್ನು ಮೀರಿ, ನಮ್ಮ ವೈಯಕ್ತಿಕ ಅಭ್ಯಾಸಗಳನ್ನು ಲೆಕ್ಕಿಸದೆ ನಾವು ಭಾರತೀಯರು” ಎಂದು ಅವರು ಹೇಳಿದರು.

ವಿವಾದದ ನಡುವೆ, ದಿನೇಶ್‌ ಗುಂಡೂರಾವ್ ಅವರು ತಾವು ಹೇಳಿಕೆ ನೀಡಿದ ಸಂದರ್ಭವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಹಾತ್ಮ ಗಾಂಧೀಜಿಯವರ ಹತ್ಯೆ ಕುರಿತು ಚರ್ಚೆ ನಡೆದಿದೆ ಎಂದರು.

“ಇದು ಮೂಲತಃ ಮಹಾತ್ಮ ಗಾಂಧಿ ಮತ್ತು ಸಾವರ್ಕರ್ ನಡುವಿನ ವೈರುಧ್ಯದ ಮೇಲೆ ಅವಲೋಕನವಾಗಿತ್ತು. ಮಹಾತ್ಮಾ ಗಾಂಧಿ ಹೇಗೆ ಧಾರ್ಮಿಕ ವ್ಯಕ್ತಿ ಮತ್ತು ಸಾವರ್ಕರ್ ಹೇಗೆ ನಾಸ್ತಿಕರಾಗಿದ್ದರು, ಮಹಾತ್ಮ ಗಾಂಧಿ ಅವರು ಸಸ್ಯಾಹಾರಿ ಮತ್ತು ಧರ್ಮದಲ್ಲಿ ಬಹಳಷ್ಟು ನಂಬಿಕೆಗಳನ್ನು ಹೊಂದಿದ್ದ ವ್ಯಕ್ತಿ. ಸಾವರ್ಕರ್ ಅವರು ಮಾಂಸಾಹಾರಿಯಾಗಿದ್ದರು ಮತ್ತು ಅವರು ಆಧುನಿಕತಾವಾದಿಯಾಗಿದ್ದರು… ನಾನು ಸಾವರ್ಕರ್ ಮತ್ತು ಗಾಂಧಿಯ ನಡುವಿನ ವೈರುಧ್ಯದ ಬಗ್ಗೆ ಮಾತನಾಡುತ್ತಿದ್ದೆ, ಅವರಿಬ್ಬರ ಸಿದ್ಧಾಂತ ಮತ್ತು ಅವರು ಹೇಗೆ ವಿಭಿನ್ನ ವ್ಯಕ್ತಿತ್ವಗಳು” ಎಂದು ಅವರು ಹೇಳಿದರು.

“ಸನ್ಮಾನ್ಯ ದಿನೇಶ್‌ ಗುಂಡೂರಾವ್ ಅವರೆ, ಬ್ರಾಹ್ಮಣ ಸಮಾಜದ ಸಾವರ್ಕರ್‌ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್‌ ಹೇಳಿದ್ದರೊ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್‌ ಅವರು ಹೇಳಿದ್ದರೊ” ಎಂದು ಕರ್ನಾಟಕ ಬಿಜೆಪಿ ಎಕ್ಸ್‌ನಲ್ಲಿ ಪ್ರಶ್ನಿಸಿದೆ.

ಬಿಜೆಪಿ ಲೇವಡಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವರು, “ಸಾವರ್ಕರ್ ಒಬ್ಬ ನಾಸ್ತಿಕ, ಮಾಂಸಾಹಾರಿ’ “ಕ್ಷಮಿಸಿ”…ಇದು ನಾನು ಹೇಳಿದ್ದಲ್ಲ. ನನ್ನ ತಂದೆಯಾಗಲಿ, ನನ್ನ ಪತ್ನಿಯಾಗಲಿ ಹೇಳಿದ್ದಲ್ಲ. ಇದನ್ನು ಹೇಳಿದ್ದು ಸ್ವತಃ ಸಾವರ್ಕರ್ ಅವರೇ” ಎಂದು ತಿರುಗೇಟು ನೀಡಿದ್ದಾರೆ.

‘ಸಾರಿ’ ನನ್ನ ಹೇಳಿಕೆಗಳಲ್ಲ, ಆದರೆ ಸಾವರ್ಕರ್ ಬ್ರಿಟಿಷರಿಗೆ ಹೇಳಿದ್ದು ಇದನ್ನೇ.. ಎಂದು ಮತ್ತೊಂದು ಪೋಸ್ಟ್‌ನಲ್ಲಿ ದಿನೇಶ್‌ ಗುಂಡೂರಾವ್ ಬಿಜೆಪಿ ಟೀಕೆಗಳಿಗೆ ಪ್ರತಿಕ್ರಿಯಿಸಿದ್ದಾರೆ.

“ಎಂದಿನಂತೆ ಈ ಮಾಧ್ಯಮದ ಭರಾಟೆಯ ಜಗತ್ತಿನಲ್ಲಿ ತಿಳುವಳಿಕೆಯುಳ್ಳ ಅಭಿಪ್ರಾಯಗಳಿಗೆ ಜಾಗವಿಲ್ಲ. ನಾನು ಹೇಳಿದ್ದು ಇಷ್ಟೇ.. ಗಾಂಧಿ ಭಕ್ತ ಹಿಂದೂ ಮತ್ತು ಸಾವರ್ಕರ್ ನಾಸ್ತಿಕ. ಗಾಂಧಿಯವರು ತುಂಬಾ ಧಾರ್ಮಿಕರಾಗಿದ್ದರು ಮತ್ತು ಅನೇಕ ಅಭಾಗಲಬ್ಧ ದೃಷ್ಟಿಕೋನಗಳನ್ನು ಹೊಂದಿದ್ದರು. ಆದರೆ, ಸಾವರ್ಕರ್ ಅವರು ವಿಚಾರವಾದಿ ಮತ್ತು ಅನೇಕ ವೈಜ್ಞಾನಿಕ ದೃಷ್ಟಿಕೋನಗಳನ್ನು ಹೊಂದಿದ್ದರು. ಗಾಂಧಿ ಸಸ್ಯಾಹಾರಿ ಮತ್ತು ಸಾವರ್ಕರ್ ಮಾಂಸಾಹಾರಿ. ಗಾಂಧೀಜಿ ಗೋವಿನ ಆರಾಧಕರಾಗಿದ್ದರು ಮತ್ತು ಸಾವರ್ಕರ್ ಅವರು ಗೋಪೂಜೆಯನ್ನು ನಂಬಲಿಲ್ಲ. ಗಾಂಧಿ ಪ್ರಜಾಪ್ರಭುತ್ವವಾದಿ ಮತ್ತು ಸಾವರ್ಕರ್ ಮೂಲಭೂತವಾದಿ” ಎಂದು ದಿನೇಶ್ ಎಕ್ಸ್‌ನಲ್ಲಿ ಮತ್ತುಷ್ಟು ವಿವರಣೆ ನೀಡಿದ್ದಾರೆ.

“ದೇಶವು ಎಲ್ಲ ಧರ್ಮಗಳಿಗೆ ಸೇರಿದ್ದು ಮತ್ತು ಸಾವರ್ಕರ್ ಅವರು ಹಿಂದೂ ರಾಷ್ಟ್ರವನ್ನು ಮಾತ್ರ ನಂಬಿದ್ದರು ಎಂದು ಗಾಂಧಿಯವರು ನಂಬಿದ್ದರು. ಸಾವರ್ಕರ್‌ವಾಡ್‌ರನ್ನು ಸೋಲಿಸಲು ನಮಗೆ ಗಾಂಧಿವಾದ ಬೇಕು ಎಂದು ನಾನು ಹೇಳಿದೆ. ಅಂತಿಮವಾಗಿ ಗೋಮಾಂಸದ ಬಗ್ಗೆ ನಾನು ಹೇಳಿದ್ದೇನೆಂದರೆ, ಸಾವರ್ಕರ್ ಕೂಡ ಗೋಮಾಂಸ ಸೇವಿಸಿದ್ದಾರೆ ಎಂದು ಕೆಲವರು ಹೇಳಿಕೊಂಡಿದ್ದಾರೆ, ಅವರು ಗೋಮಾಂಸ ಸೇವಿಸಿದ್ದಾರೆ ಎಂದು ನಾನು ಎಂದಿಗೂ ಹೇಳಲಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ನಾನು ತಪ್ಪು ಮಾಡಿದ್ದಿದ್ರೆ ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...