Homeಮುಖಪುಟಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸ್ತ್ರೀವಿರೋಧಿ ಧೋರಣೆಯ ಫ್ಯಾಸಿಸ್ಟ್‌ ಸಂಸದನನ್ನು ಆಸ್ಟ್ರೇಲಿಯಾಕ್ಕೆ ಆಹ್ವಾನಿಸಬಾರದು ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ವಿವಾದಗಳ ಮೂಲಕ ಹೆಸರಾಗಿರುವ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಆಸ್ಟ್ರೇಲಿಯಾದಲ್ಲಿ ಕಹಿ ಅನುಭವವಾಗಿದೆ. ಅಲ್ಲಿ ಆಯೋಜಿಸಲಾಗಿದ್ದ ಭಾಷಣವನ್ನು ರದ್ದುಗೊಳಿಸಲಾಗಿದೆ.

ತೇಜಸ್ವಿ ಸೂರ್ಯ ಅವರು ಸೋಮವಾರ ಸಿಡ್ನಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಪ್ರತಿಭಟನೆಯ ಸೂಚನೆಗಳ ನಂತರ ಸಂಘಟಕರು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

ಆಸ್ಟ್ರೇಲಿಯಾ-ಭಾರತ ಯುವ ಸಂವಾದ (ಎಐವೈಡಿ) ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ತೇಜಸ್ವಿ ಸೂರ್ಯ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಭಾರತ ಮತ್ತು ಆಸ್ಟ್ರೇಲಿಯಾದ ಯುವಕರ ನಡುವಿನ ಸಂವಾದದ ವೇದಿಕೆಯಾಗಿದೆ. ಪ್ರತಿ ವರ್ಷ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಎರಡೂ ದೇಶಗಳಿಂದ ಆಯ್ದ 15 ಯುವಕರು ಪಾಲ್ಗೊಳ್ಳುತ್ತಾರೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಯುವಕರು ಪರಸ್ಪರ ಸಂವಾದ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ” ಎಂದು ಎಐವೈಡಿ ವೆಬ್‌ಸೈಟ್ ಹೇಳುತ್ತದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

ಈ ವರ್ಷ ಮೇ 31ರಿಂದ ಜೂನ್ 3 ರವರೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಭಾರತದಿಂದ ಆಯ್ಕೆಯಾದ 15 ಜನರಲ್ಲಿ ತೇಜಸ್ವಿ ಸೂರ್ಯ ಕೂಡ ಇದ್ದರು. ಅವರು ಸೋಮವಾರ ಸಿಡ್ನಿಯ ಸ್ವಿನ್‌ಬರ್ನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದರು ಎಂದು ‘The Newz India’ ವೆಬ್‌ಸೈಟ್‌ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯರ ಕಾರ್ಯಕ್ರಮ ರದ್ದು

ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮಕ್ಕೆ ಬರಬಾರದೆಂದು ಆಗ್ರಹಿಸಿ ಹಲವು ಸಂಘಟನೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ತಜ್ಞರು  ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು ಪ್ರತಿಭಟನೆ ನಡೆಸಿದ್ದರು. ಕೆಲವು ಸಂಘಟನೆಗಳು ವಿಶ್ವವಿದ್ಯಾನಿಲಯಕ್ಕೆ ಪ್ರತಿಭಟನೆಯ ನೋಟಿಸ್ ಸಹ ಕಳುಹಿಸಿದ್ದವು. ಈ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರತಿಭಟನಾಕಾರರಿಗೆ ಇಮೇಲ್ ಮೂಲಕ ತಿಳಿಸಿದೆ.

ತನ್ನ ಪ್ರತಿಕ್ರಿಯೆಯಲ್ಲಿ ವಿವಿಯು, “ಈ ಕಾರ್ಯಕ್ರಮವನ್ನು ಸ್ವಿನ್‌ಬರ್ನ್ ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿಲ್ಲ. ಆದರೆ ವಿಶ್ವವಿದ್ಯಾಲಯದ ಕ್ಯಾಂಪಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತೊಂದು ಖಾಸಗಿ ಸಂಸ್ಥೆಯಾದ ಎಜುಕೇಶನ್ ಸೆಂಟರ್ ಆಫ್ ಆಸ್ಟ್ರೇಲಿಯಾ (ECA) ಕಾರ್ಯಕ್ರಮ ಹಮ್ಮಿಕೊಂಡಿದೆ. ಇಸಿಎ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಫ್ಯಾಸಿಸ್ಟ್‌, ಹಿಂದುತ್ವವಾದಿ, ಸ್ತ್ರೀವಿರೋಧಿ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಆಸ್ಟ್ರೇಲಿಯಾಕ್ಕೆ ಆಗಮಿಸಬಾರದೆಂದು ಪ್ರತಿಭಟನೆಗಳು ಆರಂಭವಾಗಿದ್ದವು. ಆತ ಎಐವಿಡಿ ಸಮ್ಮೇಳನದಲ್ಲಿ ಭಾಗವಹಿಸುವ ಮಾಹಿತಿಯು ಬಹಿರಂಗವಾದಾಗ, ಅವರ ವೀಸಾವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಆನ್‌ಲೈನ್ ಮೂಲಕ ಸಹಿ ಸಂಗ್ರಹ ಅಭಿಯಾನ ಶುರುವಾಯಿತು. ಇದುವರೆಗೆ 4,000ಕ್ಕೂ ಹೆಚ್ಚು ಜನರು ಇದರಲ್ಲಿ ಸಹಿ ಮಾಡಿದ್ದು, “ಫ್ಯಾಸಿಸ್ಟ್ ಸಂಸದರನ್ನು ಆಸ್ಟ್ರೇಲಿಯಾಕ್ಕೆ ಸರ್ಕಾರಿ ಸಂಸ್ಥೆಗಳ ವೆಚ್ಚದಲ್ಲಿ, ಸರ್ಕಾರಿ ಸಂಸ್ಥೆಗಳ ಹೆಸರಲ್ಲಿ ಕರೆಸುವುದು ಸ್ವೀಕಾರಾರ್ಹವಲ್ಲ” ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ತೇಜಸ್ವಿ ಸೂರ್ಯ ಅವರಿಗೆ ವೇದಿಕೆ ನೀಡದಂತೆ ಎಐವೈಡಿ ಮತ್ತು ಅದರ ಅಂಗ ಸಂಸ್ಥೆಗಳಿಗೆ ಆಸ್ಟ್ರೇಲಿಯಾದ ಹಲವು ಸಂಘಟನೆಗಳು ಸಹ ಜಂಟಿ ಪತ್ರ ಬರೆದಿವೆ. ಆಸ್ಟ್ರೇಲಿಯನ್ ಸಂಸ್ಥೆಗಳಾದ ದಿ ಹ್ಯುಮಾನಿಸಂ ಪ್ರಾಜೆಕ್ಟ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್, ಆಸ್ಟ್ರೇಲಿಯನ್ ಫೆಡರೇಶನ್ ಆಫ್ ಇಸ್ಲಾಮಿಕ್ ಕೌನ್ಸಿಲ್ಸ್, ವಿ ಆರ್ ದಿ ಮೈನ್‌ಸ್ಟ್ರೀಮ್, ಸೌತ್ ಏಷ್ಯನ್ ಹ್ಯೂಮನಿಸ್ಟ್ ಅಸೋಸಿಯೇಷನ್, ನ್ಯೂಜಿಲೆಂಡ್, ಯುಎಸ್ ಮತ್ತು ಯುಕೆಯ ಮಾನವ ಹಕ್ಕುಗಳ ಸಂಘಟನೆಗಳು ಈ ಜಂಟಿ ಪತ್ರದಲ್ಲಿ ಸಹಿ ಮಾಡಿವೆ.

ದಿ ಹ್ಯುಮಾನಿಸಂ ಪ್ರಾಜೆಕ್ಟ್‌ನ ಡಾ. ಹರೂನ್ ಖಾಸಿಮ್ ಪ್ರತಿಕ್ರಿಯಿಸಿ, “ಎಐವೈಡಿ ವೆಬ್‌ಸೈಟ್‌ ಹೇಳುವಂತೆ ತೇಜಸ್ವಿ ಸೂರ್ಯ ತನ್ನನ್ನು ಆರ್‌‌ಎಸ್‌ಎಸ್‌ ಸ್ವಯಂಸೇವಕ ಎಂದು ಪರಿಚಯಿಸಿಕೊಳ್ಳುತ್ತಾರೆ. ಒಬ್ಬರನ್ನೊಬ್ಬರು ಶತ್ರುವನ್ನಾಗಿ ಮಾಡುತ್ತಾರೆ. ಅವರ ತತ್ತ್ವಚಿಂತನೆಗೆ ವೇದಿಕೆ ಕಲ್ಪಿಸುವುದು ಬುದ್ಧಿವಂತಿಕೆಯಲ್ಲ” ಎಂದಿದ್ದಾರೆ.

ಭಾರತೀಯ-ಆಸ್ಟ್ರೇಲಿಯನ್ ಲೇಖಕ ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾನಿಲಯದ ಉಪನ್ಯಾಸಕ ರೊನ್ನಾ ಗೊನ್ಸಾಲ್ವೆಸ್ ಪ್ರತಿಕ್ರಿಯಿಸಿ, “ವಿಶ್ವವಿದ್ಯಾನಿಲಯಗಳು ಮಹಿಳೆಯರನ್ನು ದ್ವೇಷಿಸುವ ಇಂತಹ ಹಿಂದುತ್ವ ಫ್ಯಾಸಿಸ್ಟ್‌ಗಳನ್ನು ಬೆಂಬಲಿಸಬಾರದು” ಎಂದು ಒತ್ತಾಯಿಸಿದ್ದಾರೆ.

“ಉನ್ನತ ಶಿಕ್ಷಣದೊಳಗೆ ಮಹಿಳಾ ವಿರೋಧಿ, ಮಿಲಿಟರಿ ಸಿದ್ಧಾಂತಕ್ಕೆ ವೇದಿಕೆಯನ್ನು ಒದಗಿಸುವುದು ಸರಿಯಲ್ಲ” ಎಂದು ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯದ ಡಾ.ಸುಖಮಣಿ ಖುರಾನಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ತೇಜಸ್ವಿಸೂರ್ಯ ಉಗ್ರ ಹಿಂದುತ್ವವಾದಿ ಮತ್ತು ಇಸ್ಲಾಂ ವಿರೋಧಿ ಎಂಬುದಕ್ಕೆ ಆತನ ಹಲವು ಹೇಳಿಕೆಗಳನ್ನು ಪ್ರತಿಭಟನಾಕಾರರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ ಅರಬ್ ಮಹಿಳೆಯರನ್ನು ಉಲ್ಲೇಖಿಸಿ ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್‌ ಒಂದನ್ನು ಆಧಾರವಾಗಿ ನೀಡಿದ್ದಾರೆ. “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಸೂರ್ಯ ಹೇಳಿದ್ದರು. ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. “ಯುಎಇ ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು” ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ಒದಗಿತು.

“ತೇಜಸ್ವಿ ಸೂರ್ಯರ ಧಾರ್ಮಿಕ ಮತಾಂಧತೆ ಎಲ್ಲರಿಗೂ ತಿಳಿದಿದೆ. ಆತನ ಧರ್ಮಾಂಧತೆ, ಮಹಿಳೆಯರ ಮೇಲಿನ ದ್ವೇಷ, ಅನಾಗರಿಕತೆಯ ವರ್ತನೆಗಳಿಗೆ ದಾಖಲೆಗಳಿವೆ. ಆದರೂ ಎಐವೈಡಿ ತನ್ನ ಕಾರ್ಯಕ್ರಮಕ್ಕೆ ಆತನನ್ನ ಆಹ್ವಾನಿಸಿದೆ. ಈ ಸಮ್ಮೇಳನವು ಆಸ್ಟ್ರೇಲಿಯಾದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳನ್ನು ತನ್ನ ಪಾಲುದಾರರನ್ನಾಗಿ ಹೆಸರಿಸಿದೆ. ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಈ ಸಂಸ್ಥೆಗಳಿಗೆ ಸೂರ್ಯರ ವಿವಾದಿತ ಇತಿಹಾಸದ ಅರಿವಿದೆಯೇ? ಆಸ್ಟ್ರೇಲಿಯಾದ ಬಹುಸಂಸ್ಕೃತಿ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳಿಗೆ ಎಐವೈಡಿ ಬದ್ಧವಾಗಿದೆಯೆ?” ಎಂದು ಡಾ.ಖಾಸಿಂ ಪ್ರಶ್ನಿಸಿದ್ದಾರೆ.

ಎಐವೈಡಿ ಈ ಬಗ್ಗೆ ಪ್ರತಿಕ್ರಿಯಿಸದಿದ್ದರೂ ವಿವಾದ ಭುಗಿಲೆದ್ದ ನಂತರ ಹಲವಾರು ಪಾಲುದಾರ ಸಂಸ್ಥೆಗಳು ತಮ್ಮ ಹೆಸರುಗಳನ್ನು ವಾಪಸ್ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೊಂದು ಒಳ್ಳೆಯ ಬೆಳವಣಿಗೆ. ಮನುವಾದಿಗಳಿಗೆ ವಿದೇಶಗಳಲ್ಲಿ ಈ ರೀತಿಯಲ್ಲಿ ಮಂಗಳಾರತಿ ಕಾರ್ಯಕ್ರಮ ಮುಂದುವರೆಯಲಿ.

  2. ಇಂತಾ ಸಾಮಾಜಿಕ ವಿಷಜಂತುಗಳ ಕಾರ್ಯಕ್ರಮ ರದ್ದುಗೊಳಿಸಿ ಒಳ್ಳೆ ಕೆಲಸಮಾಡಿದೆ ಆಸ್ಟ್ರೇಲಿಯ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...