Homeಮುಖಪುಟಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸ್ತ್ರೀವಿರೋಧಿ ಧೋರಣೆಯ ಫ್ಯಾಸಿಸ್ಟ್‌ ಸಂಸದನನ್ನು ಆಸ್ಟ್ರೇಲಿಯಾಕ್ಕೆ ಆಹ್ವಾನಿಸಬಾರದು ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ವಿವಾದಗಳ ಮೂಲಕ ಹೆಸರಾಗಿರುವ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಆಸ್ಟ್ರೇಲಿಯಾದಲ್ಲಿ ಕಹಿ ಅನುಭವವಾಗಿದೆ. ಅಲ್ಲಿ ಆಯೋಜಿಸಲಾಗಿದ್ದ ಭಾಷಣವನ್ನು ರದ್ದುಗೊಳಿಸಲಾಗಿದೆ.

ತೇಜಸ್ವಿ ಸೂರ್ಯ ಅವರು ಸೋಮವಾರ ಸಿಡ್ನಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಪ್ರತಿಭಟನೆಯ ಸೂಚನೆಗಳ ನಂತರ ಸಂಘಟಕರು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

ಆಸ್ಟ್ರೇಲಿಯಾ-ಭಾರತ ಯುವ ಸಂವಾದ (ಎಐವೈಡಿ) ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ತೇಜಸ್ವಿ ಸೂರ್ಯ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಭಾರತ ಮತ್ತು ಆಸ್ಟ್ರೇಲಿಯಾದ ಯುವಕರ ನಡುವಿನ ಸಂವಾದದ ವೇದಿಕೆಯಾಗಿದೆ. ಪ್ರತಿ ವರ್ಷ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಎರಡೂ ದೇಶಗಳಿಂದ ಆಯ್ದ 15 ಯುವಕರು ಪಾಲ್ಗೊಳ್ಳುತ್ತಾರೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಯುವಕರು ಪರಸ್ಪರ ಸಂವಾದ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ” ಎಂದು ಎಐವೈಡಿ ವೆಬ್‌ಸೈಟ್ ಹೇಳುತ್ತದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

ಈ ವರ್ಷ ಮೇ 31ರಿಂದ ಜೂನ್ 3 ರವರೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಭಾರತದಿಂದ ಆಯ್ಕೆಯಾದ 15 ಜನರಲ್ಲಿ ತೇಜಸ್ವಿ ಸೂರ್ಯ ಕೂಡ ಇದ್ದರು. ಅವರು ಸೋಮವಾರ ಸಿಡ್ನಿಯ ಸ್ವಿನ್‌ಬರ್ನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದರು ಎಂದು ‘The Newz India’ ವೆಬ್‌ಸೈಟ್‌ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯರ ಕಾರ್ಯಕ್ರಮ ರದ್ದು

ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮಕ್ಕೆ ಬರಬಾರದೆಂದು ಆಗ್ರಹಿಸಿ ಹಲವು ಸಂಘಟನೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ತಜ್ಞರು  ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು ಪ್ರತಿಭಟನೆ ನಡೆಸಿದ್ದರು. ಕೆಲವು ಸಂಘಟನೆಗಳು ವಿಶ್ವವಿದ್ಯಾನಿಲಯಕ್ಕೆ ಪ್ರತಿಭಟನೆಯ ನೋಟಿಸ್ ಸಹ ಕಳುಹಿಸಿದ್ದವು. ಈ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರತಿಭಟನಾಕಾರರಿಗೆ ಇಮೇಲ್ ಮೂಲಕ ತಿಳಿಸಿದೆ.

ತನ್ನ ಪ್ರತಿಕ್ರಿಯೆಯಲ್ಲಿ ವಿವಿಯು, “ಈ ಕಾರ್ಯಕ್ರಮವನ್ನು ಸ್ವಿನ್‌ಬರ್ನ್ ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿಲ್ಲ. ಆದರೆ ವಿಶ್ವವಿದ್ಯಾಲಯದ ಕ್ಯಾಂಪಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತೊಂದು ಖಾಸಗಿ ಸಂಸ್ಥೆಯಾದ ಎಜುಕೇಶನ್ ಸೆಂಟರ್ ಆಫ್ ಆಸ್ಟ್ರೇಲಿಯಾ (ECA) ಕಾರ್ಯಕ್ರಮ ಹಮ್ಮಿಕೊಂಡಿದೆ. ಇಸಿಎ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಫ್ಯಾಸಿಸ್ಟ್‌, ಹಿಂದುತ್ವವಾದಿ, ಸ್ತ್ರೀವಿರೋಧಿ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಆಸ್ಟ್ರೇಲಿಯಾಕ್ಕೆ ಆಗಮಿಸಬಾರದೆಂದು ಪ್ರತಿಭಟನೆಗಳು ಆರಂಭವಾಗಿದ್ದವು. ಆತ ಎಐವಿಡಿ ಸಮ್ಮೇಳನದಲ್ಲಿ ಭಾಗವಹಿಸುವ ಮಾಹಿತಿಯು ಬಹಿರಂಗವಾದಾಗ, ಅವರ ವೀಸಾವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಆನ್‌ಲೈನ್ ಮೂಲಕ ಸಹಿ ಸಂಗ್ರಹ ಅಭಿಯಾನ ಶುರುವಾಯಿತು. ಇದುವರೆಗೆ 4,000ಕ್ಕೂ ಹೆಚ್ಚು ಜನರು ಇದರಲ್ಲಿ ಸಹಿ ಮಾಡಿದ್ದು, “ಫ್ಯಾಸಿಸ್ಟ್ ಸಂಸದರನ್ನು ಆಸ್ಟ್ರೇಲಿಯಾಕ್ಕೆ ಸರ್ಕಾರಿ ಸಂಸ್ಥೆಗಳ ವೆಚ್ಚದಲ್ಲಿ, ಸರ್ಕಾರಿ ಸಂಸ್ಥೆಗಳ ಹೆಸರಲ್ಲಿ ಕರೆಸುವುದು ಸ್ವೀಕಾರಾರ್ಹವಲ್ಲ” ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ತೇಜಸ್ವಿ ಸೂರ್ಯ ಅವರಿಗೆ ವೇದಿಕೆ ನೀಡದಂತೆ ಎಐವೈಡಿ ಮತ್ತು ಅದರ ಅಂಗ ಸಂಸ್ಥೆಗಳಿಗೆ ಆಸ್ಟ್ರೇಲಿಯಾದ ಹಲವು ಸಂಘಟನೆಗಳು ಸಹ ಜಂಟಿ ಪತ್ರ ಬರೆದಿವೆ. ಆಸ್ಟ್ರೇಲಿಯನ್ ಸಂಸ್ಥೆಗಳಾದ ದಿ ಹ್ಯುಮಾನಿಸಂ ಪ್ರಾಜೆಕ್ಟ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್, ಆಸ್ಟ್ರೇಲಿಯನ್ ಫೆಡರೇಶನ್ ಆಫ್ ಇಸ್ಲಾಮಿಕ್ ಕೌನ್ಸಿಲ್ಸ್, ವಿ ಆರ್ ದಿ ಮೈನ್‌ಸ್ಟ್ರೀಮ್, ಸೌತ್ ಏಷ್ಯನ್ ಹ್ಯೂಮನಿಸ್ಟ್ ಅಸೋಸಿಯೇಷನ್, ನ್ಯೂಜಿಲೆಂಡ್, ಯುಎಸ್ ಮತ್ತು ಯುಕೆಯ ಮಾನವ ಹಕ್ಕುಗಳ ಸಂಘಟನೆಗಳು ಈ ಜಂಟಿ ಪತ್ರದಲ್ಲಿ ಸಹಿ ಮಾಡಿವೆ.

ದಿ ಹ್ಯುಮಾನಿಸಂ ಪ್ರಾಜೆಕ್ಟ್‌ನ ಡಾ. ಹರೂನ್ ಖಾಸಿಮ್ ಪ್ರತಿಕ್ರಿಯಿಸಿ, “ಎಐವೈಡಿ ವೆಬ್‌ಸೈಟ್‌ ಹೇಳುವಂತೆ ತೇಜಸ್ವಿ ಸೂರ್ಯ ತನ್ನನ್ನು ಆರ್‌‌ಎಸ್‌ಎಸ್‌ ಸ್ವಯಂಸೇವಕ ಎಂದು ಪರಿಚಯಿಸಿಕೊಳ್ಳುತ್ತಾರೆ. ಒಬ್ಬರನ್ನೊಬ್ಬರು ಶತ್ರುವನ್ನಾಗಿ ಮಾಡುತ್ತಾರೆ. ಅವರ ತತ್ತ್ವಚಿಂತನೆಗೆ ವೇದಿಕೆ ಕಲ್ಪಿಸುವುದು ಬುದ್ಧಿವಂತಿಕೆಯಲ್ಲ” ಎಂದಿದ್ದಾರೆ.

ಭಾರತೀಯ-ಆಸ್ಟ್ರೇಲಿಯನ್ ಲೇಖಕ ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾನಿಲಯದ ಉಪನ್ಯಾಸಕ ರೊನ್ನಾ ಗೊನ್ಸಾಲ್ವೆಸ್ ಪ್ರತಿಕ್ರಿಯಿಸಿ, “ವಿಶ್ವವಿದ್ಯಾನಿಲಯಗಳು ಮಹಿಳೆಯರನ್ನು ದ್ವೇಷಿಸುವ ಇಂತಹ ಹಿಂದುತ್ವ ಫ್ಯಾಸಿಸ್ಟ್‌ಗಳನ್ನು ಬೆಂಬಲಿಸಬಾರದು” ಎಂದು ಒತ್ತಾಯಿಸಿದ್ದಾರೆ.

“ಉನ್ನತ ಶಿಕ್ಷಣದೊಳಗೆ ಮಹಿಳಾ ವಿರೋಧಿ, ಮಿಲಿಟರಿ ಸಿದ್ಧಾಂತಕ್ಕೆ ವೇದಿಕೆಯನ್ನು ಒದಗಿಸುವುದು ಸರಿಯಲ್ಲ” ಎಂದು ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯದ ಡಾ.ಸುಖಮಣಿ ಖುರಾನಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ತೇಜಸ್ವಿಸೂರ್ಯ ಉಗ್ರ ಹಿಂದುತ್ವವಾದಿ ಮತ್ತು ಇಸ್ಲಾಂ ವಿರೋಧಿ ಎಂಬುದಕ್ಕೆ ಆತನ ಹಲವು ಹೇಳಿಕೆಗಳನ್ನು ಪ್ರತಿಭಟನಾಕಾರರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ ಅರಬ್ ಮಹಿಳೆಯರನ್ನು ಉಲ್ಲೇಖಿಸಿ ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್‌ ಒಂದನ್ನು ಆಧಾರವಾಗಿ ನೀಡಿದ್ದಾರೆ. “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಸೂರ್ಯ ಹೇಳಿದ್ದರು. ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. “ಯುಎಇ ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು” ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ಒದಗಿತು.

“ತೇಜಸ್ವಿ ಸೂರ್ಯರ ಧಾರ್ಮಿಕ ಮತಾಂಧತೆ ಎಲ್ಲರಿಗೂ ತಿಳಿದಿದೆ. ಆತನ ಧರ್ಮಾಂಧತೆ, ಮಹಿಳೆಯರ ಮೇಲಿನ ದ್ವೇಷ, ಅನಾಗರಿಕತೆಯ ವರ್ತನೆಗಳಿಗೆ ದಾಖಲೆಗಳಿವೆ. ಆದರೂ ಎಐವೈಡಿ ತನ್ನ ಕಾರ್ಯಕ್ರಮಕ್ಕೆ ಆತನನ್ನ ಆಹ್ವಾನಿಸಿದೆ. ಈ ಸಮ್ಮೇಳನವು ಆಸ್ಟ್ರೇಲಿಯಾದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳನ್ನು ತನ್ನ ಪಾಲುದಾರರನ್ನಾಗಿ ಹೆಸರಿಸಿದೆ. ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಈ ಸಂಸ್ಥೆಗಳಿಗೆ ಸೂರ್ಯರ ವಿವಾದಿತ ಇತಿಹಾಸದ ಅರಿವಿದೆಯೇ? ಆಸ್ಟ್ರೇಲಿಯಾದ ಬಹುಸಂಸ್ಕೃತಿ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳಿಗೆ ಎಐವೈಡಿ ಬದ್ಧವಾಗಿದೆಯೆ?” ಎಂದು ಡಾ.ಖಾಸಿಂ ಪ್ರಶ್ನಿಸಿದ್ದಾರೆ.

ಎಐವೈಡಿ ಈ ಬಗ್ಗೆ ಪ್ರತಿಕ್ರಿಯಿಸದಿದ್ದರೂ ವಿವಾದ ಭುಗಿಲೆದ್ದ ನಂತರ ಹಲವಾರು ಪಾಲುದಾರ ಸಂಸ್ಥೆಗಳು ತಮ್ಮ ಹೆಸರುಗಳನ್ನು ವಾಪಸ್ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೊಂದು ಒಳ್ಳೆಯ ಬೆಳವಣಿಗೆ. ಮನುವಾದಿಗಳಿಗೆ ವಿದೇಶಗಳಲ್ಲಿ ಈ ರೀತಿಯಲ್ಲಿ ಮಂಗಳಾರತಿ ಕಾರ್ಯಕ್ರಮ ಮುಂದುವರೆಯಲಿ.

  2. ಇಂತಾ ಸಾಮಾಜಿಕ ವಿಷಜಂತುಗಳ ಕಾರ್ಯಕ್ರಮ ರದ್ದುಗೊಳಿಸಿ ಒಳ್ಳೆ ಕೆಲಸಮಾಡಿದೆ ಆಸ್ಟ್ರೇಲಿಯ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...