Homeಮುಖಪುಟಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸ್ತ್ರೀವಿರೋಧಿ ಧೋರಣೆಯ ಫ್ಯಾಸಿಸ್ಟ್‌ ಸಂಸದನನ್ನು ಆಸ್ಟ್ರೇಲಿಯಾಕ್ಕೆ ಆಹ್ವಾನಿಸಬಾರದು ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ವಿವಾದಗಳ ಮೂಲಕ ಹೆಸರಾಗಿರುವ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಆಸ್ಟ್ರೇಲಿಯಾದಲ್ಲಿ ಕಹಿ ಅನುಭವವಾಗಿದೆ. ಅಲ್ಲಿ ಆಯೋಜಿಸಲಾಗಿದ್ದ ಭಾಷಣವನ್ನು ರದ್ದುಗೊಳಿಸಲಾಗಿದೆ.

ತೇಜಸ್ವಿ ಸೂರ್ಯ ಅವರು ಸೋಮವಾರ ಸಿಡ್ನಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಪ್ರತಿಭಟನೆಯ ಸೂಚನೆಗಳ ನಂತರ ಸಂಘಟಕರು ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

ಆಸ್ಟ್ರೇಲಿಯಾ-ಭಾರತ ಯುವ ಸಂವಾದ (ಎಐವೈಡಿ) ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ತೇಜಸ್ವಿ ಸೂರ್ಯ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇದು ಭಾರತ ಮತ್ತು ಆಸ್ಟ್ರೇಲಿಯಾದ ಯುವಕರ ನಡುವಿನ ಸಂವಾದದ ವೇದಿಕೆಯಾಗಿದೆ. ಪ್ರತಿ ವರ್ಷ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಎರಡೂ ದೇಶಗಳಿಂದ ಆಯ್ದ 15 ಯುವಕರು ಪಾಲ್ಗೊಳ್ಳುತ್ತಾರೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಯುವಕರು ಪರಸ್ಪರ ಸಂವಾದ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ” ಎಂದು ಎಐವೈಡಿ ವೆಬ್‌ಸೈಟ್ ಹೇಳುತ್ತದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

ಈ ವರ್ಷ ಮೇ 31ರಿಂದ ಜೂನ್ 3 ರವರೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಭಾರತದಿಂದ ಆಯ್ಕೆಯಾದ 15 ಜನರಲ್ಲಿ ತೇಜಸ್ವಿ ಸೂರ್ಯ ಕೂಡ ಇದ್ದರು. ಅವರು ಸೋಮವಾರ ಸಿಡ್ನಿಯ ಸ್ವಿನ್‌ಬರ್ನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದರು ಎಂದು ‘The Newz India’ ವೆಬ್‌ಸೈಟ್‌ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯರ ಕಾರ್ಯಕ್ರಮ ರದ್ದು

ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮಕ್ಕೆ ಬರಬಾರದೆಂದು ಆಗ್ರಹಿಸಿ ಹಲವು ಸಂಘಟನೆಗಳು ಮತ್ತು ಶೈಕ್ಷಣಿಕ ಕ್ಷೇತ್ರದ ತಜ್ಞರು  ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು ಪ್ರತಿಭಟನೆ ನಡೆಸಿದ್ದರು. ಕೆಲವು ಸಂಘಟನೆಗಳು ವಿಶ್ವವಿದ್ಯಾನಿಲಯಕ್ಕೆ ಪ್ರತಿಭಟನೆಯ ನೋಟಿಸ್ ಸಹ ಕಳುಹಿಸಿದ್ದವು. ಈ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರತಿಭಟನಾಕಾರರಿಗೆ ಇಮೇಲ್ ಮೂಲಕ ತಿಳಿಸಿದೆ.

ತನ್ನ ಪ್ರತಿಕ್ರಿಯೆಯಲ್ಲಿ ವಿವಿಯು, “ಈ ಕಾರ್ಯಕ್ರಮವನ್ನು ಸ್ವಿನ್‌ಬರ್ನ್ ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿಲ್ಲ. ಆದರೆ ವಿಶ್ವವಿದ್ಯಾಲಯದ ಕ್ಯಾಂಪಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತೊಂದು ಖಾಸಗಿ ಸಂಸ್ಥೆಯಾದ ಎಜುಕೇಶನ್ ಸೆಂಟರ್ ಆಫ್ ಆಸ್ಟ್ರೇಲಿಯಾ (ECA) ಕಾರ್ಯಕ್ರಮ ಹಮ್ಮಿಕೊಂಡಿದೆ. ಇಸಿಎ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಫ್ಯಾಸಿಸ್ಟ್‌, ಹಿಂದುತ್ವವಾದಿ, ಸ್ತ್ರೀವಿರೋಧಿ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಆಸ್ಟ್ರೇಲಿಯಾಕ್ಕೆ ಆಗಮಿಸಬಾರದೆಂದು ಪ್ರತಿಭಟನೆಗಳು ಆರಂಭವಾಗಿದ್ದವು. ಆತ ಎಐವಿಡಿ ಸಮ್ಮೇಳನದಲ್ಲಿ ಭಾಗವಹಿಸುವ ಮಾಹಿತಿಯು ಬಹಿರಂಗವಾದಾಗ, ಅವರ ವೀಸಾವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಆನ್‌ಲೈನ್ ಮೂಲಕ ಸಹಿ ಸಂಗ್ರಹ ಅಭಿಯಾನ ಶುರುವಾಯಿತು. ಇದುವರೆಗೆ 4,000ಕ್ಕೂ ಹೆಚ್ಚು ಜನರು ಇದರಲ್ಲಿ ಸಹಿ ಮಾಡಿದ್ದು, “ಫ್ಯಾಸಿಸ್ಟ್ ಸಂಸದರನ್ನು ಆಸ್ಟ್ರೇಲಿಯಾಕ್ಕೆ ಸರ್ಕಾರಿ ಸಂಸ್ಥೆಗಳ ವೆಚ್ಚದಲ್ಲಿ, ಸರ್ಕಾರಿ ಸಂಸ್ಥೆಗಳ ಹೆಸರಲ್ಲಿ ಕರೆಸುವುದು ಸ್ವೀಕಾರಾರ್ಹವಲ್ಲ” ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ತೇಜಸ್ವಿ ಸೂರ್ಯ ಅವರಿಗೆ ವೇದಿಕೆ ನೀಡದಂತೆ ಎಐವೈಡಿ ಮತ್ತು ಅದರ ಅಂಗ ಸಂಸ್ಥೆಗಳಿಗೆ ಆಸ್ಟ್ರೇಲಿಯಾದ ಹಲವು ಸಂಘಟನೆಗಳು ಸಹ ಜಂಟಿ ಪತ್ರ ಬರೆದಿವೆ. ಆಸ್ಟ್ರೇಲಿಯನ್ ಸಂಸ್ಥೆಗಳಾದ ದಿ ಹ್ಯುಮಾನಿಸಂ ಪ್ರಾಜೆಕ್ಟ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್, ಆಸ್ಟ್ರೇಲಿಯನ್ ಫೆಡರೇಶನ್ ಆಫ್ ಇಸ್ಲಾಮಿಕ್ ಕೌನ್ಸಿಲ್ಸ್, ವಿ ಆರ್ ದಿ ಮೈನ್‌ಸ್ಟ್ರೀಮ್, ಸೌತ್ ಏಷ್ಯನ್ ಹ್ಯೂಮನಿಸ್ಟ್ ಅಸೋಸಿಯೇಷನ್, ನ್ಯೂಜಿಲೆಂಡ್, ಯುಎಸ್ ಮತ್ತು ಯುಕೆಯ ಮಾನವ ಹಕ್ಕುಗಳ ಸಂಘಟನೆಗಳು ಈ ಜಂಟಿ ಪತ್ರದಲ್ಲಿ ಸಹಿ ಮಾಡಿವೆ.

ದಿ ಹ್ಯುಮಾನಿಸಂ ಪ್ರಾಜೆಕ್ಟ್‌ನ ಡಾ. ಹರೂನ್ ಖಾಸಿಮ್ ಪ್ರತಿಕ್ರಿಯಿಸಿ, “ಎಐವೈಡಿ ವೆಬ್‌ಸೈಟ್‌ ಹೇಳುವಂತೆ ತೇಜಸ್ವಿ ಸೂರ್ಯ ತನ್ನನ್ನು ಆರ್‌‌ಎಸ್‌ಎಸ್‌ ಸ್ವಯಂಸೇವಕ ಎಂದು ಪರಿಚಯಿಸಿಕೊಳ್ಳುತ್ತಾರೆ. ಒಬ್ಬರನ್ನೊಬ್ಬರು ಶತ್ರುವನ್ನಾಗಿ ಮಾಡುತ್ತಾರೆ. ಅವರ ತತ್ತ್ವಚಿಂತನೆಗೆ ವೇದಿಕೆ ಕಲ್ಪಿಸುವುದು ಬುದ್ಧಿವಂತಿಕೆಯಲ್ಲ” ಎಂದಿದ್ದಾರೆ.

ಭಾರತೀಯ-ಆಸ್ಟ್ರೇಲಿಯನ್ ಲೇಖಕ ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾನಿಲಯದ ಉಪನ್ಯಾಸಕ ರೊನ್ನಾ ಗೊನ್ಸಾಲ್ವೆಸ್ ಪ್ರತಿಕ್ರಿಯಿಸಿ, “ವಿಶ್ವವಿದ್ಯಾನಿಲಯಗಳು ಮಹಿಳೆಯರನ್ನು ದ್ವೇಷಿಸುವ ಇಂತಹ ಹಿಂದುತ್ವ ಫ್ಯಾಸಿಸ್ಟ್‌ಗಳನ್ನು ಬೆಂಬಲಿಸಬಾರದು” ಎಂದು ಒತ್ತಾಯಿಸಿದ್ದಾರೆ.

“ಉನ್ನತ ಶಿಕ್ಷಣದೊಳಗೆ ಮಹಿಳಾ ವಿರೋಧಿ, ಮಿಲಿಟರಿ ಸಿದ್ಧಾಂತಕ್ಕೆ ವೇದಿಕೆಯನ್ನು ಒದಗಿಸುವುದು ಸರಿಯಲ್ಲ” ಎಂದು ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯದ ಡಾ.ಸುಖಮಣಿ ಖುರಾನಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ತೇಜಸ್ವಿಸೂರ್ಯ ಉಗ್ರ ಹಿಂದುತ್ವವಾದಿ ಮತ್ತು ಇಸ್ಲಾಂ ವಿರೋಧಿ ಎಂಬುದಕ್ಕೆ ಆತನ ಹಲವು ಹೇಳಿಕೆಗಳನ್ನು ಪ್ರತಿಭಟನಾಕಾರರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ ಅರಬ್ ಮಹಿಳೆಯರನ್ನು ಉಲ್ಲೇಖಿಸಿ ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್‌ ಒಂದನ್ನು ಆಧಾರವಾಗಿ ನೀಡಿದ್ದಾರೆ. “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಸೂರ್ಯ ಹೇಳಿದ್ದರು. ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. “ಯುಎಇ ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು” ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ಒದಗಿತು.

“ತೇಜಸ್ವಿ ಸೂರ್ಯರ ಧಾರ್ಮಿಕ ಮತಾಂಧತೆ ಎಲ್ಲರಿಗೂ ತಿಳಿದಿದೆ. ಆತನ ಧರ್ಮಾಂಧತೆ, ಮಹಿಳೆಯರ ಮೇಲಿನ ದ್ವೇಷ, ಅನಾಗರಿಕತೆಯ ವರ್ತನೆಗಳಿಗೆ ದಾಖಲೆಗಳಿವೆ. ಆದರೂ ಎಐವೈಡಿ ತನ್ನ ಕಾರ್ಯಕ್ರಮಕ್ಕೆ ಆತನನ್ನ ಆಹ್ವಾನಿಸಿದೆ. ಈ ಸಮ್ಮೇಳನವು ಆಸ್ಟ್ರೇಲಿಯಾದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳನ್ನು ತನ್ನ ಪಾಲುದಾರರನ್ನಾಗಿ ಹೆಸರಿಸಿದೆ. ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಈ ಸಂಸ್ಥೆಗಳಿಗೆ ಸೂರ್ಯರ ವಿವಾದಿತ ಇತಿಹಾಸದ ಅರಿವಿದೆಯೇ? ಆಸ್ಟ್ರೇಲಿಯಾದ ಬಹುಸಂಸ್ಕೃತಿ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಮೌಲ್ಯಗಳಿಗೆ ಎಐವೈಡಿ ಬದ್ಧವಾಗಿದೆಯೆ?” ಎಂದು ಡಾ.ಖಾಸಿಂ ಪ್ರಶ್ನಿಸಿದ್ದಾರೆ.

ಎಐವೈಡಿ ಈ ಬಗ್ಗೆ ಪ್ರತಿಕ್ರಿಯಿಸದಿದ್ದರೂ ವಿವಾದ ಭುಗಿಲೆದ್ದ ನಂತರ ಹಲವಾರು ಪಾಲುದಾರ ಸಂಸ್ಥೆಗಳು ತಮ್ಮ ಹೆಸರುಗಳನ್ನು ವಾಪಸ್ ಪಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೊಂದು ಒಳ್ಳೆಯ ಬೆಳವಣಿಗೆ. ಮನುವಾದಿಗಳಿಗೆ ವಿದೇಶಗಳಲ್ಲಿ ಈ ರೀತಿಯಲ್ಲಿ ಮಂಗಳಾರತಿ ಕಾರ್ಯಕ್ರಮ ಮುಂದುವರೆಯಲಿ.

  2. ಇಂತಾ ಸಾಮಾಜಿಕ ವಿಷಜಂತುಗಳ ಕಾರ್ಯಕ್ರಮ ರದ್ದುಗೊಳಿಸಿ ಒಳ್ಳೆ ಕೆಲಸಮಾಡಿದೆ ಆಸ್ಟ್ರೇಲಿಯ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...