Homeಮುಖಪುಟಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

- Advertisement -
- Advertisement -

ಫಿರೋಜ್‌ ಖಾನ್‌ ಅವರನ್ನು ಸಂಸ್ಕೃತ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಗುಂಪೊಂದು, 12 ದಿನಗಳಿಂದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದೆ.

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್ ಖಾನ್ ಅವರ ನೇಮಕವನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ನಡೆಸುತ್ತಿರುವ ಪ್ರತಿಭಟನೆಯನ್ನು ನಟ ಮತ್ತು ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್ ಖಂಡಿಸಿದ್ದಾರೆ. ಫಿರೋಜ್ ಖಾನ್ ವಿರುದ್ಧ ವಿದ್ಯಾರ್ಥಿಗಳ ಗುಂಪಿನ ವಿರೋಧದಿಂದ ದಿಗ್ಭ್ರಮೆಗೊಂಡಿದ್ದೇನೆ. ಧರ್ಮಕ್ಕೂ, ಭಾಷೆಗೆ ಏನು ಸಂಬಂಧ..? ಪ್ರಾಧ್ಯಾಪಕ ಫಿರೋಜ್ ಖಾನ್, ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿಯನ್ನು ಸಂಸ್ಕೃತದಲ್ಲೇ ಮಾಡಿದ್ದಾರೆ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪರೇಶ್‌ ರಾವಲ್‌, ಇದೇ ತರ್ಕವನ್ನು ಸಂಗೀತದಲ್ಲೂ ಅಳವಡಿಸಿದ್ದಿದ್ದರೆ, ಶ್ರೇಷ್ಠ ಗಾಯಕ ದಿ. ಮೊಹಮ್ಮದ್ ರಫಿ ಅವರು ಯಾವುದೇ ಭಜನೆಗಳನ್ನು ಹಾಡಬಾರದು ಮತ್ತು ನೌಶಾದ್ ಸಾಬ್ ಗೀತೆ ರಚಿಸಬಾರದು ಎಂದಾಗಿರುತ್ತಿದ್ದರೆ ಹೇಗಿರುತ್ತಿತ್ತು..? ಎಂದು ಬರೆದಿದ್ದಾರೆ.

ಇನ್ನು ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಬೆನ್ನಿಗೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವೇ ನಿಂತಿದೆ. ಸಂಸ್ಕೃತದಲ್ಲಿ ಫಿರೋಜ್‌ಗೆ ಒಳ್ಳೆಯ ಜ್ಞಾನವಿದೆ. ಪಾಂಡಿತ್ಯ ಪಡೆದಿದ್ದಾರೆ. ಈ ಕೆಲಸಕ್ಕೆ ಫಿರೋಜ್‌ ಸೂಕ್ತ ಅಭ್ಯರ್ಥಿ. ನೇಮಕಾತಿ ವೇಳೆ ಎಲ್ಲಾ ಕಾರ್ಯ ವಿಧಾನಗಳನ್ನು ಅಚ್ಚುಕಟ್ಟಾಗಿ ಅನುಸರಿಸಿದ್ದಾರೆ ಎಂದು ಆಡಳಿತ ವರ್ಗ ಹೇಳಿದೆ.

ಆದರೆ ಇದ್ಯಾವುದನ್ನೂ ಗಮನಿಸದೇ, ಕೇವಲ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರನ್ನು ವಿರೋಧಿಸುತ್ತಿದೆ. ಅಲ್ಲದೇ ವಿಶ್ವವಿದ್ಯಾನಿಲಯವು ಕಳೆದ ವಾರದಲ್ಲಿ ಎರಡು ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ಶೈಕ್ಷಣಿಕ ವಿಚಾರದಲ್ಲಿ ಧರ್ಮವನ್ನು ಬದಿಗಿಟ್ಟು ನೋಡಬೇಕು. ಶಿಕ್ಷಣ ಮತ್ತು ಸಮಾನ ಶಿಕ್ಷಣದಲ್ಲಿ ಎಲ್ಲರಿಗೂ ಹಕ್ಕಿದೆ. ಸಮಾನ ಬೋಧನಾ ಅವಕಾಶಗಳಿವೆ ಎಂದು ಹೇಳಿದೆ. ಇನ್ನು ಫಿರೋಜ್‌ ನೇಮಕಾತಿ ನಂತರ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅವರ ಮೊಬೈಲ್‌ಗೆ ಅನೇಕ ಬಾರಿ ಕರೆ ಮಾಡಿದ್ರೂ, ಸಂದೇಶ ಕಳುಹಿಸಿದ್ರೂ ಉತ್ತರಿಸಿಲ್ಲ.

ಇತ್ತ ಫಿರೋಜ್ ಖಾನ್ ವಿರುದ್ಧ ಸಂಸ್ಕೃತ ವಿಷಯದ 30 ವಿದ್ಯಾರ್ಥಿಗಳ ಗುಂಪು 12 ದಿನಗಳಿಂದ ಉಪಕುಲಪತಿ ರಾಕೇಶ್ ಭಟ್ನಾಗರ್ ಅವರ ಕಚೇರಿಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕರು ಪ್ರಚೋದನೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಎಬಿವಿಪಿ, ಹಿಂದೂ ಮಹಾಸಭಾ, ಹಿಂದೂ ಮುಖ್ಯವಾಹಿನಿಯೊಂದಿಗೆ ಸಂಬಂಧಪಟ್ಟವರು. ಇವರಿಗೆ ಪ್ರಚೋದನೆ ನೀಡಲಾಗ್ತಿದೆ ಅಂತಾ ಪ್ರೊಫೆಸರ್‌ ಅಹಿರ್ವಾರ್‌ ಹೇಳಿದ್ದಾರೆ.

ಅಂದಹಾಗೆ, ಪ್ರೊಫೆಸರ್ ಖಾನ್ ಮೂಲತಃ ರಾಜಸ್ಥಾನ ಮೂಲದವರು. ಅವರ ತಂದೆ ಸಂಸ್ಕೃತ ಅಧ್ಯಯನ ಮಾಡಿದವರು. ಅವರ ಮನೆಗೆ ಹತ್ತಿರವಿರುವ ದೇವಾಲಯದಲ್ಲಿ ಭಜನೆಯನ್ನು ಹಾಡಿದ್ದಾರೆ ಎಂದಯ ಟೈಮ್ಸ್ ಆಫ್ ಇಂಡಿಯಾದ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...