Homeಮುಖಪುಟಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

- Advertisement -
- Advertisement -

ಫಿರೋಜ್‌ ಖಾನ್‌ ಅವರನ್ನು ಸಂಸ್ಕೃತ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಗುಂಪೊಂದು, 12 ದಿನಗಳಿಂದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದೆ.

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್ ಖಾನ್ ಅವರ ನೇಮಕವನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ನಡೆಸುತ್ತಿರುವ ಪ್ರತಿಭಟನೆಯನ್ನು ನಟ ಮತ್ತು ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್ ಖಂಡಿಸಿದ್ದಾರೆ. ಫಿರೋಜ್ ಖಾನ್ ವಿರುದ್ಧ ವಿದ್ಯಾರ್ಥಿಗಳ ಗುಂಪಿನ ವಿರೋಧದಿಂದ ದಿಗ್ಭ್ರಮೆಗೊಂಡಿದ್ದೇನೆ. ಧರ್ಮಕ್ಕೂ, ಭಾಷೆಗೆ ಏನು ಸಂಬಂಧ..? ಪ್ರಾಧ್ಯಾಪಕ ಫಿರೋಜ್ ಖಾನ್, ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿಯನ್ನು ಸಂಸ್ಕೃತದಲ್ಲೇ ಮಾಡಿದ್ದಾರೆ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪರೇಶ್‌ ರಾವಲ್‌, ಇದೇ ತರ್ಕವನ್ನು ಸಂಗೀತದಲ್ಲೂ ಅಳವಡಿಸಿದ್ದಿದ್ದರೆ, ಶ್ರೇಷ್ಠ ಗಾಯಕ ದಿ. ಮೊಹಮ್ಮದ್ ರಫಿ ಅವರು ಯಾವುದೇ ಭಜನೆಗಳನ್ನು ಹಾಡಬಾರದು ಮತ್ತು ನೌಶಾದ್ ಸಾಬ್ ಗೀತೆ ರಚಿಸಬಾರದು ಎಂದಾಗಿರುತ್ತಿದ್ದರೆ ಹೇಗಿರುತ್ತಿತ್ತು..? ಎಂದು ಬರೆದಿದ್ದಾರೆ.

ಇನ್ನು ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಬೆನ್ನಿಗೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವೇ ನಿಂತಿದೆ. ಸಂಸ್ಕೃತದಲ್ಲಿ ಫಿರೋಜ್‌ಗೆ ಒಳ್ಳೆಯ ಜ್ಞಾನವಿದೆ. ಪಾಂಡಿತ್ಯ ಪಡೆದಿದ್ದಾರೆ. ಈ ಕೆಲಸಕ್ಕೆ ಫಿರೋಜ್‌ ಸೂಕ್ತ ಅಭ್ಯರ್ಥಿ. ನೇಮಕಾತಿ ವೇಳೆ ಎಲ್ಲಾ ಕಾರ್ಯ ವಿಧಾನಗಳನ್ನು ಅಚ್ಚುಕಟ್ಟಾಗಿ ಅನುಸರಿಸಿದ್ದಾರೆ ಎಂದು ಆಡಳಿತ ವರ್ಗ ಹೇಳಿದೆ.

ಆದರೆ ಇದ್ಯಾವುದನ್ನೂ ಗಮನಿಸದೇ, ಕೇವಲ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರನ್ನು ವಿರೋಧಿಸುತ್ತಿದೆ. ಅಲ್ಲದೇ ವಿಶ್ವವಿದ್ಯಾನಿಲಯವು ಕಳೆದ ವಾರದಲ್ಲಿ ಎರಡು ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ಶೈಕ್ಷಣಿಕ ವಿಚಾರದಲ್ಲಿ ಧರ್ಮವನ್ನು ಬದಿಗಿಟ್ಟು ನೋಡಬೇಕು. ಶಿಕ್ಷಣ ಮತ್ತು ಸಮಾನ ಶಿಕ್ಷಣದಲ್ಲಿ ಎಲ್ಲರಿಗೂ ಹಕ್ಕಿದೆ. ಸಮಾನ ಬೋಧನಾ ಅವಕಾಶಗಳಿವೆ ಎಂದು ಹೇಳಿದೆ. ಇನ್ನು ಫಿರೋಜ್‌ ನೇಮಕಾತಿ ನಂತರ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅವರ ಮೊಬೈಲ್‌ಗೆ ಅನೇಕ ಬಾರಿ ಕರೆ ಮಾಡಿದ್ರೂ, ಸಂದೇಶ ಕಳುಹಿಸಿದ್ರೂ ಉತ್ತರಿಸಿಲ್ಲ.

ಇತ್ತ ಫಿರೋಜ್ ಖಾನ್ ವಿರುದ್ಧ ಸಂಸ್ಕೃತ ವಿಷಯದ 30 ವಿದ್ಯಾರ್ಥಿಗಳ ಗುಂಪು 12 ದಿನಗಳಿಂದ ಉಪಕುಲಪತಿ ರಾಕೇಶ್ ಭಟ್ನಾಗರ್ ಅವರ ಕಚೇರಿಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕರು ಪ್ರಚೋದನೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಎಬಿವಿಪಿ, ಹಿಂದೂ ಮಹಾಸಭಾ, ಹಿಂದೂ ಮುಖ್ಯವಾಹಿನಿಯೊಂದಿಗೆ ಸಂಬಂಧಪಟ್ಟವರು. ಇವರಿಗೆ ಪ್ರಚೋದನೆ ನೀಡಲಾಗ್ತಿದೆ ಅಂತಾ ಪ್ರೊಫೆಸರ್‌ ಅಹಿರ್ವಾರ್‌ ಹೇಳಿದ್ದಾರೆ.

ಅಂದಹಾಗೆ, ಪ್ರೊಫೆಸರ್ ಖಾನ್ ಮೂಲತಃ ರಾಜಸ್ಥಾನ ಮೂಲದವರು. ಅವರ ತಂದೆ ಸಂಸ್ಕೃತ ಅಧ್ಯಯನ ಮಾಡಿದವರು. ಅವರ ಮನೆಗೆ ಹತ್ತಿರವಿರುವ ದೇವಾಲಯದಲ್ಲಿ ಭಜನೆಯನ್ನು ಹಾಡಿದ್ದಾರೆ ಎಂದಯ ಟೈಮ್ಸ್ ಆಫ್ ಇಂಡಿಯಾದ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...