Homeಮುಖಪುಟಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

- Advertisement -
- Advertisement -

ಫಿರೋಜ್‌ ಖಾನ್‌ ಅವರನ್ನು ಸಂಸ್ಕೃತ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಗುಂಪೊಂದು, 12 ದಿನಗಳಿಂದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದೆ.

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್ ಖಾನ್ ಅವರ ನೇಮಕವನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ನಡೆಸುತ್ತಿರುವ ಪ್ರತಿಭಟನೆಯನ್ನು ನಟ ಮತ್ತು ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್ ಖಂಡಿಸಿದ್ದಾರೆ. ಫಿರೋಜ್ ಖಾನ್ ವಿರುದ್ಧ ವಿದ್ಯಾರ್ಥಿಗಳ ಗುಂಪಿನ ವಿರೋಧದಿಂದ ದಿಗ್ಭ್ರಮೆಗೊಂಡಿದ್ದೇನೆ. ಧರ್ಮಕ್ಕೂ, ಭಾಷೆಗೆ ಏನು ಸಂಬಂಧ..? ಪ್ರಾಧ್ಯಾಪಕ ಫಿರೋಜ್ ಖಾನ್, ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿಯನ್ನು ಸಂಸ್ಕೃತದಲ್ಲೇ ಮಾಡಿದ್ದಾರೆ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪರೇಶ್‌ ರಾವಲ್‌, ಇದೇ ತರ್ಕವನ್ನು ಸಂಗೀತದಲ್ಲೂ ಅಳವಡಿಸಿದ್ದಿದ್ದರೆ, ಶ್ರೇಷ್ಠ ಗಾಯಕ ದಿ. ಮೊಹಮ್ಮದ್ ರಫಿ ಅವರು ಯಾವುದೇ ಭಜನೆಗಳನ್ನು ಹಾಡಬಾರದು ಮತ್ತು ನೌಶಾದ್ ಸಾಬ್ ಗೀತೆ ರಚಿಸಬಾರದು ಎಂದಾಗಿರುತ್ತಿದ್ದರೆ ಹೇಗಿರುತ್ತಿತ್ತು..? ಎಂದು ಬರೆದಿದ್ದಾರೆ.

ಇನ್ನು ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಬೆನ್ನಿಗೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವೇ ನಿಂತಿದೆ. ಸಂಸ್ಕೃತದಲ್ಲಿ ಫಿರೋಜ್‌ಗೆ ಒಳ್ಳೆಯ ಜ್ಞಾನವಿದೆ. ಪಾಂಡಿತ್ಯ ಪಡೆದಿದ್ದಾರೆ. ಈ ಕೆಲಸಕ್ಕೆ ಫಿರೋಜ್‌ ಸೂಕ್ತ ಅಭ್ಯರ್ಥಿ. ನೇಮಕಾತಿ ವೇಳೆ ಎಲ್ಲಾ ಕಾರ್ಯ ವಿಧಾನಗಳನ್ನು ಅಚ್ಚುಕಟ್ಟಾಗಿ ಅನುಸರಿಸಿದ್ದಾರೆ ಎಂದು ಆಡಳಿತ ವರ್ಗ ಹೇಳಿದೆ.

ಆದರೆ ಇದ್ಯಾವುದನ್ನೂ ಗಮನಿಸದೇ, ಕೇವಲ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರನ್ನು ವಿರೋಧಿಸುತ್ತಿದೆ. ಅಲ್ಲದೇ ವಿಶ್ವವಿದ್ಯಾನಿಲಯವು ಕಳೆದ ವಾರದಲ್ಲಿ ಎರಡು ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ಶೈಕ್ಷಣಿಕ ವಿಚಾರದಲ್ಲಿ ಧರ್ಮವನ್ನು ಬದಿಗಿಟ್ಟು ನೋಡಬೇಕು. ಶಿಕ್ಷಣ ಮತ್ತು ಸಮಾನ ಶಿಕ್ಷಣದಲ್ಲಿ ಎಲ್ಲರಿಗೂ ಹಕ್ಕಿದೆ. ಸಮಾನ ಬೋಧನಾ ಅವಕಾಶಗಳಿವೆ ಎಂದು ಹೇಳಿದೆ. ಇನ್ನು ಫಿರೋಜ್‌ ನೇಮಕಾತಿ ನಂತರ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅವರ ಮೊಬೈಲ್‌ಗೆ ಅನೇಕ ಬಾರಿ ಕರೆ ಮಾಡಿದ್ರೂ, ಸಂದೇಶ ಕಳುಹಿಸಿದ್ರೂ ಉತ್ತರಿಸಿಲ್ಲ.

ಇತ್ತ ಫಿರೋಜ್ ಖಾನ್ ವಿರುದ್ಧ ಸಂಸ್ಕೃತ ವಿಷಯದ 30 ವಿದ್ಯಾರ್ಥಿಗಳ ಗುಂಪು 12 ದಿನಗಳಿಂದ ಉಪಕುಲಪತಿ ರಾಕೇಶ್ ಭಟ್ನಾಗರ್ ಅವರ ಕಚೇರಿಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕರು ಪ್ರಚೋದನೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಎಬಿವಿಪಿ, ಹಿಂದೂ ಮಹಾಸಭಾ, ಹಿಂದೂ ಮುಖ್ಯವಾಹಿನಿಯೊಂದಿಗೆ ಸಂಬಂಧಪಟ್ಟವರು. ಇವರಿಗೆ ಪ್ರಚೋದನೆ ನೀಡಲಾಗ್ತಿದೆ ಅಂತಾ ಪ್ರೊಫೆಸರ್‌ ಅಹಿರ್ವಾರ್‌ ಹೇಳಿದ್ದಾರೆ.

ಅಂದಹಾಗೆ, ಪ್ರೊಫೆಸರ್ ಖಾನ್ ಮೂಲತಃ ರಾಜಸ್ಥಾನ ಮೂಲದವರು. ಅವರ ತಂದೆ ಸಂಸ್ಕೃತ ಅಧ್ಯಯನ ಮಾಡಿದವರು. ಅವರ ಮನೆಗೆ ಹತ್ತಿರವಿರುವ ದೇವಾಲಯದಲ್ಲಿ ಭಜನೆಯನ್ನು ಹಾಡಿದ್ದಾರೆ ಎಂದಯ ಟೈಮ್ಸ್ ಆಫ್ ಇಂಡಿಯಾದ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...