Homeಮುಖಪುಟಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

- Advertisement -
- Advertisement -

ಫಿರೋಜ್‌ ಖಾನ್‌ ಅವರನ್ನು ಸಂಸ್ಕೃತ ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಗುಂಪೊಂದು, 12 ದಿನಗಳಿಂದ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಉಪಕುಲಪತಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದೆ.

ಸಂಸ್ಕೃತ ಪ್ರಾಧ್ಯಾಪಕ ಫಿರೋಜ್ ಖಾನ್ ಅವರ ನೇಮಕವನ್ನು ವಿರೋಧಿಸಿ, ವಿದ್ಯಾರ್ಥಿಗಳ ಗುಂಪು ನಡೆಸುತ್ತಿರುವ ಪ್ರತಿಭಟನೆಯನ್ನು ನಟ ಮತ್ತು ಬಿಜೆಪಿಯ ಮಾಜಿ ಸಂಸದ ಪರೇಶ್ ರಾವಲ್ ಖಂಡಿಸಿದ್ದಾರೆ. ಫಿರೋಜ್ ಖಾನ್ ವಿರುದ್ಧ ವಿದ್ಯಾರ್ಥಿಗಳ ಗುಂಪಿನ ವಿರೋಧದಿಂದ ದಿಗ್ಭ್ರಮೆಗೊಂಡಿದ್ದೇನೆ. ಧರ್ಮಕ್ಕೂ, ಭಾಷೆಗೆ ಏನು ಸಂಬಂಧ..? ಪ್ರಾಧ್ಯಾಪಕ ಫಿರೋಜ್ ಖಾನ್, ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿಯನ್ನು ಸಂಸ್ಕೃತದಲ್ಲೇ ಮಾಡಿದ್ದಾರೆ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪರೇಶ್‌ ರಾವಲ್‌, ಇದೇ ತರ್ಕವನ್ನು ಸಂಗೀತದಲ್ಲೂ ಅಳವಡಿಸಿದ್ದಿದ್ದರೆ, ಶ್ರೇಷ್ಠ ಗಾಯಕ ದಿ. ಮೊಹಮ್ಮದ್ ರಫಿ ಅವರು ಯಾವುದೇ ಭಜನೆಗಳನ್ನು ಹಾಡಬಾರದು ಮತ್ತು ನೌಶಾದ್ ಸಾಬ್ ಗೀತೆ ರಚಿಸಬಾರದು ಎಂದಾಗಿರುತ್ತಿದ್ದರೆ ಹೇಗಿರುತ್ತಿತ್ತು..? ಎಂದು ಬರೆದಿದ್ದಾರೆ.

ಇನ್ನು ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಬೆನ್ನಿಗೆ ವಿಶ್ವವಿದ್ಯಾನಿಲಯದ ಆಡಳಿತ ವರ್ಗವೇ ನಿಂತಿದೆ. ಸಂಸ್ಕೃತದಲ್ಲಿ ಫಿರೋಜ್‌ಗೆ ಒಳ್ಳೆಯ ಜ್ಞಾನವಿದೆ. ಪಾಂಡಿತ್ಯ ಪಡೆದಿದ್ದಾರೆ. ಈ ಕೆಲಸಕ್ಕೆ ಫಿರೋಜ್‌ ಸೂಕ್ತ ಅಭ್ಯರ್ಥಿ. ನೇಮಕಾತಿ ವೇಳೆ ಎಲ್ಲಾ ಕಾರ್ಯ ವಿಧಾನಗಳನ್ನು ಅಚ್ಚುಕಟ್ಟಾಗಿ ಅನುಸರಿಸಿದ್ದಾರೆ ಎಂದು ಆಡಳಿತ ವರ್ಗ ಹೇಳಿದೆ.

ಆದರೆ ಇದ್ಯಾವುದನ್ನೂ ಗಮನಿಸದೇ, ಕೇವಲ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರನ್ನು ವಿರೋಧಿಸುತ್ತಿದೆ. ಅಲ್ಲದೇ ವಿಶ್ವವಿದ್ಯಾನಿಲಯವು ಕಳೆದ ವಾರದಲ್ಲಿ ಎರಡು ಹೇಳಿಕೆಗಳನ್ನು ಬಿಡುಗಡೆ ಮಾಡಿದೆ. ಶೈಕ್ಷಣಿಕ ವಿಚಾರದಲ್ಲಿ ಧರ್ಮವನ್ನು ಬದಿಗಿಟ್ಟು ನೋಡಬೇಕು. ಶಿಕ್ಷಣ ಮತ್ತು ಸಮಾನ ಶಿಕ್ಷಣದಲ್ಲಿ ಎಲ್ಲರಿಗೂ ಹಕ್ಕಿದೆ. ಸಮಾನ ಬೋಧನಾ ಅವಕಾಶಗಳಿವೆ ಎಂದು ಹೇಳಿದೆ. ಇನ್ನು ಫಿರೋಜ್‌ ನೇಮಕಾತಿ ನಂತರ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅವರ ಮೊಬೈಲ್‌ಗೆ ಅನೇಕ ಬಾರಿ ಕರೆ ಮಾಡಿದ್ರೂ, ಸಂದೇಶ ಕಳುಹಿಸಿದ್ರೂ ಉತ್ತರಿಸಿಲ್ಲ.

ಇತ್ತ ಫಿರೋಜ್ ಖಾನ್ ವಿರುದ್ಧ ಸಂಸ್ಕೃತ ವಿಷಯದ 30 ವಿದ್ಯಾರ್ಥಿಗಳ ಗುಂಪು 12 ದಿನಗಳಿಂದ ಉಪಕುಲಪತಿ ರಾಕೇಶ್ ಭಟ್ನಾಗರ್ ಅವರ ಕಚೇರಿಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕರು ಪ್ರಚೋದನೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಎಬಿವಿಪಿ, ಹಿಂದೂ ಮಹಾಸಭಾ, ಹಿಂದೂ ಮುಖ್ಯವಾಹಿನಿಯೊಂದಿಗೆ ಸಂಬಂಧಪಟ್ಟವರು. ಇವರಿಗೆ ಪ್ರಚೋದನೆ ನೀಡಲಾಗ್ತಿದೆ ಅಂತಾ ಪ್ರೊಫೆಸರ್‌ ಅಹಿರ್ವಾರ್‌ ಹೇಳಿದ್ದಾರೆ.

ಅಂದಹಾಗೆ, ಪ್ರೊಫೆಸರ್ ಖಾನ್ ಮೂಲತಃ ರಾಜಸ್ಥಾನ ಮೂಲದವರು. ಅವರ ತಂದೆ ಸಂಸ್ಕೃತ ಅಧ್ಯಯನ ಮಾಡಿದವರು. ಅವರ ಮನೆಗೆ ಹತ್ತಿರವಿರುವ ದೇವಾಲಯದಲ್ಲಿ ಭಜನೆಯನ್ನು ಹಾಡಿದ್ದಾರೆ ಎಂದಯ ಟೈಮ್ಸ್ ಆಫ್ ಇಂಡಿಯಾದ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...