Homeಮುಖಪುಟಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

ಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಗೆ ಸರ್ಕಾರದ ಹೊಸ ಶಿಕ್ಷಣ ನೀತಿಯಲ್ಲಿ ತ್ರಿಭಾಷೆ ಕಡ್ಡಾಯಗೊಳಿಸಿರುವುದು ವಿವಿಧ ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ನೀತಿಯ ವಿರುದ್ದ ತೊಡೆ ತಟ್ಟಿ ಹೋರಾಟಕ್ಕೆ ಇಳಿದಿರುವ ತಮಿಳುನಾಡಿನ ಜೊತೆ ತೆಲಂಗಾಣ ಮತ್ತು ಪಂಜಾಬ್ ರಾಜ್ಯಗಳು ಕೈ ಜೋಡಿಸಿವೆ.

ಪಂಜಾಬ್ ಸರ್ಕಾರ ಫೆಬ್ರವರಿ 26ರ ಬುಧವಾರದಂದು, ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಪಂಜಾಬಿ ಭಾಷೆಯನ್ನು ಕಡ್ಡಾಯ ಮುಖ್ಯ ವಿಷಯವನ್ನಾಗಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಶಾಲೆಗಳ ಶೈಕ್ಷಣಿಕ ಮಂಡಳಿಯ ಸಂಯೋಜನೆಯನ್ನು ಲೆಕ್ಕಿಸದೆ, ಪಂಜಾಬಿಯನ್ನು ಮುಖ್ಯ ವಿಷಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಶಿಕ್ಷಣ ಪ್ರಮಾಣಪತ್ರಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ, ತೆಲಂಗಾಣ ಸರ್ಕಾರ ಕೂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಘೋಷಿಸಿದೆ. ಶೈಕ್ಷಣಿಕ ಮಂಡಳಿಗಳು ಯಾವುದೇ ಇರಲಿ ತೆಲುಗು ಭಾಷೆ ಮುಖ್ಯ ವಿಷಯವಾಗಬೇಕು ಎಂದಿದೆ.

ಮಕ್ಕಳ ಮೇಲೆ ಹಿಂದಿ ಹೇರಲು ಮೂರು ಭಾಷೆಗಳು ಕೇವಲ ಒಂದು ನೆಪ ಎಂದು ಆರೋಪಿಸಿ ತಮಿಳುನಾಡು ಈ ನೀತಿಯನ್ನು ವಿರೋಧಿಸಿದೆ.

ಪಂಜಾಬ್ ರಾಜ್ಯ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ , ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಸಿಬಿಎಸ್‌ಇಯ ಹೊಸ ಪರೀಕ್ಷಾ ಮಾದರಿಯನ್ನು ಟೀಕಿಸಿದ್ದಾರೆ. ಪಂಜಾಬಿ ಭಾಷೆಯನ್ನು ಅನೇಕ ರಾಜ್ಯಗಳಲ್ಲಿ ಮಾತನಾಡುತ್ತಾರೆ ಮತ್ತು ಓದುತ್ತಾರೆ. ಇದು ಪಂಜಾಬ್‌ನ ಗಡಿಗಳನ್ನು ಮೀರಿ ಅದರ ಮಹತ್ವವನ್ನು ವಿಸ್ತರಿಸಿಕೊಂಡಿದೆ ಎಂದು ಬೈನ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪಂಜಾಬಿ ಕೇವಲ ಒಂದು ಭಾಷೆಯಲ್ಲ; ಇದು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ, ಇದನ್ನು ದೇಶದಾದ್ಯಂತ ಲಕ್ಷಾಂತರ ಜನರು ಮಾತನಾಡುತ್ತಾರೆ ಮತ್ತು ಪಾಲಿಸುತ್ತಾರೆ” ಎಂದು ಬೈನ್ಸ್ ಹೇಳಿದ್ದಾರೆ. ಕೇಂದ್ರದ ನೀತಿಯು ಪಂಜಾಬಿಯನ್ನು ಶಿಕ್ಷಣ ಕ್ಷೇತ್ರದಿಂದ ಅಳಿಸಿ ಹಾಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಕರಡು ಶಿಕ್ಷಣ ನೀತಿಯಲ್ಲಿ ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಸಚಿವ ಬೈನ್ಸ್, ರಾಜ್ಯಕ್ಕೆ ಅನ್ಯಾಯ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಪಡಿಸುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಇದು ಆಯ್ಕೆಯ ವಿಷಯವಲ್ಲ, ಬದಲಾಗಿ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯ ಎಂಬುವುದನ್ನು ಸಿಬಿಎಸ್‌ಇ ಅರ್ಥಮಾಡಿಕೊಳ್ಳಬೇಕು. ಕೇಂದ್ರದ ನೀತಿಯು ರಾಜ್ಯಗಳು, ಒಕ್ಕೂಟ ವ್ಯವಸ್ಥೆ ಮತ್ತು ರಾಷ್ಟ್ರದ ಭಾಷಾ ವೈವಿಧ್ಯತೆಯ ಮೇಲಿನ ನೇರ ದಾಳಿಯಾಗಿದೆ” ಎಂದಿದ್ದಾರೆ.

“ನಮ್ಮ ರಾಷ್ಟ್ರದ ಮೇಲೆ ಏಕ ಸಿದ್ದಾಂತವನ್ನು ಹೇರುವ ಪ್ರಯತ್ನವನ್ನು ನಾವು ಸಹಿಸಲು ಸಾಧ್ಯವಿಲ್ಲ. ಸಿಬಿಎಸ್‌ಇ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು. ಪಂಜಾಬಿ ಸೇರಿದಂತೆ ಎಲ್ಲಾ ಭಾಷೆಗಳಿಗೆ ಅವುಗಳಿಗೆ ಅರ್ಹವಾದ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಪಂಜಾಬಿ ಭಾಷೆಯನ್ನು ರಾಜ್ಯದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿ ಉಳಿಸಿಕೊಳ್ಳುವ ಸರ್ಕಾರದ ದೃಢ ನಿಲುವನ್ನು ಒತ್ತಿ ಹೇಳಿದ ಬೈನ್ಸ್, 2008ರ ಪಂಜಾಬಿ ಕಲಿಕೆ ಮತ್ತು ಇತರ ಭಾಷೆಗಳ ಕಾಯ್ದೆಯನ್ನು ಪಾಲಿಸಲು ವಿಫಲವಾದ ಕಾರಣ ಮೊಹಾಲಿಯ ಖಾಸಗಿ ಶಾಲೆ ಅಮಿಟಿ ಇಂಟರ್ನ್ಯಾಷನಲ್‌ಗೆ ರಾಜ್ಯ ಸರ್ಕಾರ 50,000 ರೂ. ದಂಡ ವಿಧಿಸಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಶಿಕ್ಷಣ ಅಧಿಕಾರಿ (ಮಾಧ್ಯಮಿಕ) ಅವರ ವರದಿಯ ಪ್ರಕಾರ, ಶಾಲೆಯು ಪಂಜಾಬಿಯನ್ನು ಕಡ್ಡಾಯ ವಿಷಯವಾಗಿ ಕಲಿಸುವುದನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಜಲಂಧರ್ ಮೂಲದ ಎರಡು ಶಾಲೆಗಳಿಗೂ ದಂಡ ವಿಧಿಸಲಾಗಿದೆ. ಪಂಜಾಬ್ ತನ್ನದೇ ಆದ ಶಿಕ್ಷಣ ನೀತಿಯನ್ನು ತರಲಿದೆ. ಇದಕ್ಕಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚಿಸಲಾಗುವುದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

‘ಹೇರಿಕೆ ಸಹಬಾಳ್ವೆಯಲ್ಲ, ಸಮಸ್ಯೆ..’; ಭಾಷಾ ವಿವಾದದ ಕುರಿತು ಡಿಎಂಕೆ ಸಂಸದೆ ಕನಿಮೋಳಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...