Homeಮುಖಪುಟಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

ಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಗೆ ಸರ್ಕಾರದ ಹೊಸ ಶಿಕ್ಷಣ ನೀತಿಯಲ್ಲಿ ತ್ರಿಭಾಷೆ ಕಡ್ಡಾಯಗೊಳಿಸಿರುವುದು ವಿವಿಧ ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ನೀತಿಯ ವಿರುದ್ದ ತೊಡೆ ತಟ್ಟಿ ಹೋರಾಟಕ್ಕೆ ಇಳಿದಿರುವ ತಮಿಳುನಾಡಿನ ಜೊತೆ ತೆಲಂಗಾಣ ಮತ್ತು ಪಂಜಾಬ್ ರಾಜ್ಯಗಳು ಕೈ ಜೋಡಿಸಿವೆ.

ಪಂಜಾಬ್ ಸರ್ಕಾರ ಫೆಬ್ರವರಿ 26ರ ಬುಧವಾರದಂದು, ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಪಂಜಾಬಿ ಭಾಷೆಯನ್ನು ಕಡ್ಡಾಯ ಮುಖ್ಯ ವಿಷಯವನ್ನಾಗಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಶಾಲೆಗಳ ಶೈಕ್ಷಣಿಕ ಮಂಡಳಿಯ ಸಂಯೋಜನೆಯನ್ನು ಲೆಕ್ಕಿಸದೆ, ಪಂಜಾಬಿಯನ್ನು ಮುಖ್ಯ ವಿಷಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಶಿಕ್ಷಣ ಪ್ರಮಾಣಪತ್ರಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ, ತೆಲಂಗಾಣ ಸರ್ಕಾರ ಕೂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಘೋಷಿಸಿದೆ. ಶೈಕ್ಷಣಿಕ ಮಂಡಳಿಗಳು ಯಾವುದೇ ಇರಲಿ ತೆಲುಗು ಭಾಷೆ ಮುಖ್ಯ ವಿಷಯವಾಗಬೇಕು ಎಂದಿದೆ.

ಮಕ್ಕಳ ಮೇಲೆ ಹಿಂದಿ ಹೇರಲು ಮೂರು ಭಾಷೆಗಳು ಕೇವಲ ಒಂದು ನೆಪ ಎಂದು ಆರೋಪಿಸಿ ತಮಿಳುನಾಡು ಈ ನೀತಿಯನ್ನು ವಿರೋಧಿಸಿದೆ.

ಪಂಜಾಬ್ ರಾಜ್ಯ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ , ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಸಿಬಿಎಸ್‌ಇಯ ಹೊಸ ಪರೀಕ್ಷಾ ಮಾದರಿಯನ್ನು ಟೀಕಿಸಿದ್ದಾರೆ. ಪಂಜಾಬಿ ಭಾಷೆಯನ್ನು ಅನೇಕ ರಾಜ್ಯಗಳಲ್ಲಿ ಮಾತನಾಡುತ್ತಾರೆ ಮತ್ತು ಓದುತ್ತಾರೆ. ಇದು ಪಂಜಾಬ್‌ನ ಗಡಿಗಳನ್ನು ಮೀರಿ ಅದರ ಮಹತ್ವವನ್ನು ವಿಸ್ತರಿಸಿಕೊಂಡಿದೆ ಎಂದು ಬೈನ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪಂಜಾಬಿ ಕೇವಲ ಒಂದು ಭಾಷೆಯಲ್ಲ; ಇದು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ, ಇದನ್ನು ದೇಶದಾದ್ಯಂತ ಲಕ್ಷಾಂತರ ಜನರು ಮಾತನಾಡುತ್ತಾರೆ ಮತ್ತು ಪಾಲಿಸುತ್ತಾರೆ” ಎಂದು ಬೈನ್ಸ್ ಹೇಳಿದ್ದಾರೆ. ಕೇಂದ್ರದ ನೀತಿಯು ಪಂಜಾಬಿಯನ್ನು ಶಿಕ್ಷಣ ಕ್ಷೇತ್ರದಿಂದ ಅಳಿಸಿ ಹಾಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಕರಡು ಶಿಕ್ಷಣ ನೀತಿಯಲ್ಲಿ ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಸಚಿವ ಬೈನ್ಸ್, ರಾಜ್ಯಕ್ಕೆ ಅನ್ಯಾಯ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಪಡಿಸುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಇದು ಆಯ್ಕೆಯ ವಿಷಯವಲ್ಲ, ಬದಲಾಗಿ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯ ಎಂಬುವುದನ್ನು ಸಿಬಿಎಸ್‌ಇ ಅರ್ಥಮಾಡಿಕೊಳ್ಳಬೇಕು. ಕೇಂದ್ರದ ನೀತಿಯು ರಾಜ್ಯಗಳು, ಒಕ್ಕೂಟ ವ್ಯವಸ್ಥೆ ಮತ್ತು ರಾಷ್ಟ್ರದ ಭಾಷಾ ವೈವಿಧ್ಯತೆಯ ಮೇಲಿನ ನೇರ ದಾಳಿಯಾಗಿದೆ” ಎಂದಿದ್ದಾರೆ.

“ನಮ್ಮ ರಾಷ್ಟ್ರದ ಮೇಲೆ ಏಕ ಸಿದ್ದಾಂತವನ್ನು ಹೇರುವ ಪ್ರಯತ್ನವನ್ನು ನಾವು ಸಹಿಸಲು ಸಾಧ್ಯವಿಲ್ಲ. ಸಿಬಿಎಸ್‌ಇ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು. ಪಂಜಾಬಿ ಸೇರಿದಂತೆ ಎಲ್ಲಾ ಭಾಷೆಗಳಿಗೆ ಅವುಗಳಿಗೆ ಅರ್ಹವಾದ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಪಂಜಾಬಿ ಭಾಷೆಯನ್ನು ರಾಜ್ಯದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿ ಉಳಿಸಿಕೊಳ್ಳುವ ಸರ್ಕಾರದ ದೃಢ ನಿಲುವನ್ನು ಒತ್ತಿ ಹೇಳಿದ ಬೈನ್ಸ್, 2008ರ ಪಂಜಾಬಿ ಕಲಿಕೆ ಮತ್ತು ಇತರ ಭಾಷೆಗಳ ಕಾಯ್ದೆಯನ್ನು ಪಾಲಿಸಲು ವಿಫಲವಾದ ಕಾರಣ ಮೊಹಾಲಿಯ ಖಾಸಗಿ ಶಾಲೆ ಅಮಿಟಿ ಇಂಟರ್ನ್ಯಾಷನಲ್‌ಗೆ ರಾಜ್ಯ ಸರ್ಕಾರ 50,000 ರೂ. ದಂಡ ವಿಧಿಸಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಶಿಕ್ಷಣ ಅಧಿಕಾರಿ (ಮಾಧ್ಯಮಿಕ) ಅವರ ವರದಿಯ ಪ್ರಕಾರ, ಶಾಲೆಯು ಪಂಜಾಬಿಯನ್ನು ಕಡ್ಡಾಯ ವಿಷಯವಾಗಿ ಕಲಿಸುವುದನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಜಲಂಧರ್ ಮೂಲದ ಎರಡು ಶಾಲೆಗಳಿಗೂ ದಂಡ ವಿಧಿಸಲಾಗಿದೆ. ಪಂಜಾಬ್ ತನ್ನದೇ ಆದ ಶಿಕ್ಷಣ ನೀತಿಯನ್ನು ತರಲಿದೆ. ಇದಕ್ಕಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚಿಸಲಾಗುವುದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

‘ಹೇರಿಕೆ ಸಹಬಾಳ್ವೆಯಲ್ಲ, ಸಮಸ್ಯೆ..’; ಭಾಷಾ ವಿವಾದದ ಕುರಿತು ಡಿಎಂಕೆ ಸಂಸದೆ ಕನಿಮೋಳಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...