Homeಮುಖಪುಟಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

ಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಗೆ ಸರ್ಕಾರದ ಹೊಸ ಶಿಕ್ಷಣ ನೀತಿಯಲ್ಲಿ ತ್ರಿಭಾಷೆ ಕಡ್ಡಾಯಗೊಳಿಸಿರುವುದು ವಿವಿಧ ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ನೀತಿಯ ವಿರುದ್ದ ತೊಡೆ ತಟ್ಟಿ ಹೋರಾಟಕ್ಕೆ ಇಳಿದಿರುವ ತಮಿಳುನಾಡಿನ ಜೊತೆ ತೆಲಂಗಾಣ ಮತ್ತು ಪಂಜಾಬ್ ರಾಜ್ಯಗಳು ಕೈ ಜೋಡಿಸಿವೆ.

ಪಂಜಾಬ್ ಸರ್ಕಾರ ಫೆಬ್ರವರಿ 26ರ ಬುಧವಾರದಂದು, ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಪಂಜಾಬಿ ಭಾಷೆಯನ್ನು ಕಡ್ಡಾಯ ಮುಖ್ಯ ವಿಷಯವನ್ನಾಗಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಶಾಲೆಗಳ ಶೈಕ್ಷಣಿಕ ಮಂಡಳಿಯ ಸಂಯೋಜನೆಯನ್ನು ಲೆಕ್ಕಿಸದೆ, ಪಂಜಾಬಿಯನ್ನು ಮುಖ್ಯ ವಿಷಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಶಿಕ್ಷಣ ಪ್ರಮಾಣಪತ್ರಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ, ತೆಲಂಗಾಣ ಸರ್ಕಾರ ಕೂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಘೋಷಿಸಿದೆ. ಶೈಕ್ಷಣಿಕ ಮಂಡಳಿಗಳು ಯಾವುದೇ ಇರಲಿ ತೆಲುಗು ಭಾಷೆ ಮುಖ್ಯ ವಿಷಯವಾಗಬೇಕು ಎಂದಿದೆ.

ಮಕ್ಕಳ ಮೇಲೆ ಹಿಂದಿ ಹೇರಲು ಮೂರು ಭಾಷೆಗಳು ಕೇವಲ ಒಂದು ನೆಪ ಎಂದು ಆರೋಪಿಸಿ ತಮಿಳುನಾಡು ಈ ನೀತಿಯನ್ನು ವಿರೋಧಿಸಿದೆ.

ಪಂಜಾಬ್ ರಾಜ್ಯ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ , ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಸಿಬಿಎಸ್‌ಇಯ ಹೊಸ ಪರೀಕ್ಷಾ ಮಾದರಿಯನ್ನು ಟೀಕಿಸಿದ್ದಾರೆ. ಪಂಜಾಬಿ ಭಾಷೆಯನ್ನು ಅನೇಕ ರಾಜ್ಯಗಳಲ್ಲಿ ಮಾತನಾಡುತ್ತಾರೆ ಮತ್ತು ಓದುತ್ತಾರೆ. ಇದು ಪಂಜಾಬ್‌ನ ಗಡಿಗಳನ್ನು ಮೀರಿ ಅದರ ಮಹತ್ವವನ್ನು ವಿಸ್ತರಿಸಿಕೊಂಡಿದೆ ಎಂದು ಬೈನ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪಂಜಾಬಿ ಕೇವಲ ಒಂದು ಭಾಷೆಯಲ್ಲ; ಇದು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ, ಇದನ್ನು ದೇಶದಾದ್ಯಂತ ಲಕ್ಷಾಂತರ ಜನರು ಮಾತನಾಡುತ್ತಾರೆ ಮತ್ತು ಪಾಲಿಸುತ್ತಾರೆ” ಎಂದು ಬೈನ್ಸ್ ಹೇಳಿದ್ದಾರೆ. ಕೇಂದ್ರದ ನೀತಿಯು ಪಂಜಾಬಿಯನ್ನು ಶಿಕ್ಷಣ ಕ್ಷೇತ್ರದಿಂದ ಅಳಿಸಿ ಹಾಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಕರಡು ಶಿಕ್ಷಣ ನೀತಿಯಲ್ಲಿ ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಸಚಿವ ಬೈನ್ಸ್, ರಾಜ್ಯಕ್ಕೆ ಅನ್ಯಾಯ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಪಡಿಸುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಇದು ಆಯ್ಕೆಯ ವಿಷಯವಲ್ಲ, ಬದಲಾಗಿ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯ ಎಂಬುವುದನ್ನು ಸಿಬಿಎಸ್‌ಇ ಅರ್ಥಮಾಡಿಕೊಳ್ಳಬೇಕು. ಕೇಂದ್ರದ ನೀತಿಯು ರಾಜ್ಯಗಳು, ಒಕ್ಕೂಟ ವ್ಯವಸ್ಥೆ ಮತ್ತು ರಾಷ್ಟ್ರದ ಭಾಷಾ ವೈವಿಧ್ಯತೆಯ ಮೇಲಿನ ನೇರ ದಾಳಿಯಾಗಿದೆ” ಎಂದಿದ್ದಾರೆ.

“ನಮ್ಮ ರಾಷ್ಟ್ರದ ಮೇಲೆ ಏಕ ಸಿದ್ದಾಂತವನ್ನು ಹೇರುವ ಪ್ರಯತ್ನವನ್ನು ನಾವು ಸಹಿಸಲು ಸಾಧ್ಯವಿಲ್ಲ. ಸಿಬಿಎಸ್‌ಇ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು. ಪಂಜಾಬಿ ಸೇರಿದಂತೆ ಎಲ್ಲಾ ಭಾಷೆಗಳಿಗೆ ಅವುಗಳಿಗೆ ಅರ್ಹವಾದ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಪಂಜಾಬಿ ಭಾಷೆಯನ್ನು ರಾಜ್ಯದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿ ಉಳಿಸಿಕೊಳ್ಳುವ ಸರ್ಕಾರದ ದೃಢ ನಿಲುವನ್ನು ಒತ್ತಿ ಹೇಳಿದ ಬೈನ್ಸ್, 2008ರ ಪಂಜಾಬಿ ಕಲಿಕೆ ಮತ್ತು ಇತರ ಭಾಷೆಗಳ ಕಾಯ್ದೆಯನ್ನು ಪಾಲಿಸಲು ವಿಫಲವಾದ ಕಾರಣ ಮೊಹಾಲಿಯ ಖಾಸಗಿ ಶಾಲೆ ಅಮಿಟಿ ಇಂಟರ್ನ್ಯಾಷನಲ್‌ಗೆ ರಾಜ್ಯ ಸರ್ಕಾರ 50,000 ರೂ. ದಂಡ ವಿಧಿಸಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಶಿಕ್ಷಣ ಅಧಿಕಾರಿ (ಮಾಧ್ಯಮಿಕ) ಅವರ ವರದಿಯ ಪ್ರಕಾರ, ಶಾಲೆಯು ಪಂಜಾಬಿಯನ್ನು ಕಡ್ಡಾಯ ವಿಷಯವಾಗಿ ಕಲಿಸುವುದನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಜಲಂಧರ್ ಮೂಲದ ಎರಡು ಶಾಲೆಗಳಿಗೂ ದಂಡ ವಿಧಿಸಲಾಗಿದೆ. ಪಂಜಾಬ್ ತನ್ನದೇ ಆದ ಶಿಕ್ಷಣ ನೀತಿಯನ್ನು ತರಲಿದೆ. ಇದಕ್ಕಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚಿಸಲಾಗುವುದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

‘ಹೇರಿಕೆ ಸಹಬಾಳ್ವೆಯಲ್ಲ, ಸಮಸ್ಯೆ..’; ಭಾಷಾ ವಿವಾದದ ಕುರಿತು ಡಿಎಂಕೆ ಸಂಸದೆ ಕನಿಮೋಳಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...