Homeಮುಖಪುಟಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

ಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಗೆ ಸರ್ಕಾರದ ಹೊಸ ಶಿಕ್ಷಣ ನೀತಿಯಲ್ಲಿ ತ್ರಿಭಾಷೆ ಕಡ್ಡಾಯಗೊಳಿಸಿರುವುದು ವಿವಿಧ ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ನೀತಿಯ ವಿರುದ್ದ ತೊಡೆ ತಟ್ಟಿ ಹೋರಾಟಕ್ಕೆ ಇಳಿದಿರುವ ತಮಿಳುನಾಡಿನ ಜೊತೆ ತೆಲಂಗಾಣ ಮತ್ತು ಪಂಜಾಬ್ ರಾಜ್ಯಗಳು ಕೈ ಜೋಡಿಸಿವೆ.

ಪಂಜಾಬ್ ಸರ್ಕಾರ ಫೆಬ್ರವರಿ 26ರ ಬುಧವಾರದಂದು, ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಪಂಜಾಬಿ ಭಾಷೆಯನ್ನು ಕಡ್ಡಾಯ ಮುಖ್ಯ ವಿಷಯವನ್ನಾಗಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಶಾಲೆಗಳ ಶೈಕ್ಷಣಿಕ ಮಂಡಳಿಯ ಸಂಯೋಜನೆಯನ್ನು ಲೆಕ್ಕಿಸದೆ, ಪಂಜಾಬಿಯನ್ನು ಮುಖ್ಯ ವಿಷಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಶಿಕ್ಷಣ ಪ್ರಮಾಣಪತ್ರಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ, ತೆಲಂಗಾಣ ಸರ್ಕಾರ ಕೂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಘೋಷಿಸಿದೆ. ಶೈಕ್ಷಣಿಕ ಮಂಡಳಿಗಳು ಯಾವುದೇ ಇರಲಿ ತೆಲುಗು ಭಾಷೆ ಮುಖ್ಯ ವಿಷಯವಾಗಬೇಕು ಎಂದಿದೆ.

ಮಕ್ಕಳ ಮೇಲೆ ಹಿಂದಿ ಹೇರಲು ಮೂರು ಭಾಷೆಗಳು ಕೇವಲ ಒಂದು ನೆಪ ಎಂದು ಆರೋಪಿಸಿ ತಮಿಳುನಾಡು ಈ ನೀತಿಯನ್ನು ವಿರೋಧಿಸಿದೆ.

ಪಂಜಾಬ್ ರಾಜ್ಯ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ , ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಸಿಬಿಎಸ್‌ಇಯ ಹೊಸ ಪರೀಕ್ಷಾ ಮಾದರಿಯನ್ನು ಟೀಕಿಸಿದ್ದಾರೆ. ಪಂಜಾಬಿ ಭಾಷೆಯನ್ನು ಅನೇಕ ರಾಜ್ಯಗಳಲ್ಲಿ ಮಾತನಾಡುತ್ತಾರೆ ಮತ್ತು ಓದುತ್ತಾರೆ. ಇದು ಪಂಜಾಬ್‌ನ ಗಡಿಗಳನ್ನು ಮೀರಿ ಅದರ ಮಹತ್ವವನ್ನು ವಿಸ್ತರಿಸಿಕೊಂಡಿದೆ ಎಂದು ಬೈನ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪಂಜಾಬಿ ಕೇವಲ ಒಂದು ಭಾಷೆಯಲ್ಲ; ಇದು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ, ಇದನ್ನು ದೇಶದಾದ್ಯಂತ ಲಕ್ಷಾಂತರ ಜನರು ಮಾತನಾಡುತ್ತಾರೆ ಮತ್ತು ಪಾಲಿಸುತ್ತಾರೆ” ಎಂದು ಬೈನ್ಸ್ ಹೇಳಿದ್ದಾರೆ. ಕೇಂದ್ರದ ನೀತಿಯು ಪಂಜಾಬಿಯನ್ನು ಶಿಕ್ಷಣ ಕ್ಷೇತ್ರದಿಂದ ಅಳಿಸಿ ಹಾಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಕರಡು ಶಿಕ್ಷಣ ನೀತಿಯಲ್ಲಿ ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಸಚಿವ ಬೈನ್ಸ್, ರಾಜ್ಯಕ್ಕೆ ಅನ್ಯಾಯ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಪಡಿಸುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಇದು ಆಯ್ಕೆಯ ವಿಷಯವಲ್ಲ, ಬದಲಾಗಿ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯ ಎಂಬುವುದನ್ನು ಸಿಬಿಎಸ್‌ಇ ಅರ್ಥಮಾಡಿಕೊಳ್ಳಬೇಕು. ಕೇಂದ್ರದ ನೀತಿಯು ರಾಜ್ಯಗಳು, ಒಕ್ಕೂಟ ವ್ಯವಸ್ಥೆ ಮತ್ತು ರಾಷ್ಟ್ರದ ಭಾಷಾ ವೈವಿಧ್ಯತೆಯ ಮೇಲಿನ ನೇರ ದಾಳಿಯಾಗಿದೆ” ಎಂದಿದ್ದಾರೆ.

“ನಮ್ಮ ರಾಷ್ಟ್ರದ ಮೇಲೆ ಏಕ ಸಿದ್ದಾಂತವನ್ನು ಹೇರುವ ಪ್ರಯತ್ನವನ್ನು ನಾವು ಸಹಿಸಲು ಸಾಧ್ಯವಿಲ್ಲ. ಸಿಬಿಎಸ್‌ಇ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು. ಪಂಜಾಬಿ ಸೇರಿದಂತೆ ಎಲ್ಲಾ ಭಾಷೆಗಳಿಗೆ ಅವುಗಳಿಗೆ ಅರ್ಹವಾದ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಪಂಜಾಬಿ ಭಾಷೆಯನ್ನು ರಾಜ್ಯದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿ ಉಳಿಸಿಕೊಳ್ಳುವ ಸರ್ಕಾರದ ದೃಢ ನಿಲುವನ್ನು ಒತ್ತಿ ಹೇಳಿದ ಬೈನ್ಸ್, 2008ರ ಪಂಜಾಬಿ ಕಲಿಕೆ ಮತ್ತು ಇತರ ಭಾಷೆಗಳ ಕಾಯ್ದೆಯನ್ನು ಪಾಲಿಸಲು ವಿಫಲವಾದ ಕಾರಣ ಮೊಹಾಲಿಯ ಖಾಸಗಿ ಶಾಲೆ ಅಮಿಟಿ ಇಂಟರ್ನ್ಯಾಷನಲ್‌ಗೆ ರಾಜ್ಯ ಸರ್ಕಾರ 50,000 ರೂ. ದಂಡ ವಿಧಿಸಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಶಿಕ್ಷಣ ಅಧಿಕಾರಿ (ಮಾಧ್ಯಮಿಕ) ಅವರ ವರದಿಯ ಪ್ರಕಾರ, ಶಾಲೆಯು ಪಂಜಾಬಿಯನ್ನು ಕಡ್ಡಾಯ ವಿಷಯವಾಗಿ ಕಲಿಸುವುದನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಜಲಂಧರ್ ಮೂಲದ ಎರಡು ಶಾಲೆಗಳಿಗೂ ದಂಡ ವಿಧಿಸಲಾಗಿದೆ. ಪಂಜಾಬ್ ತನ್ನದೇ ಆದ ಶಿಕ್ಷಣ ನೀತಿಯನ್ನು ತರಲಿದೆ. ಇದಕ್ಕಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚಿಸಲಾಗುವುದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

‘ಹೇರಿಕೆ ಸಹಬಾಳ್ವೆಯಲ್ಲ, ಸಮಸ್ಯೆ..’; ಭಾಷಾ ವಿವಾದದ ಕುರಿತು ಡಿಎಂಕೆ ಸಂಸದೆ ಕನಿಮೋಳಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...