Homeಮುಖಪುಟಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

ಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಗೆ ಸರ್ಕಾರದ ಹೊಸ ಶಿಕ್ಷಣ ನೀತಿಯಲ್ಲಿ ತ್ರಿಭಾಷೆ ಕಡ್ಡಾಯಗೊಳಿಸಿರುವುದು ವಿವಿಧ ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ನೀತಿಯ ವಿರುದ್ದ ತೊಡೆ ತಟ್ಟಿ ಹೋರಾಟಕ್ಕೆ ಇಳಿದಿರುವ ತಮಿಳುನಾಡಿನ ಜೊತೆ ತೆಲಂಗಾಣ ಮತ್ತು ಪಂಜಾಬ್ ರಾಜ್ಯಗಳು ಕೈ ಜೋಡಿಸಿವೆ.

ಪಂಜಾಬ್ ಸರ್ಕಾರ ಫೆಬ್ರವರಿ 26ರ ಬುಧವಾರದಂದು, ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಪಂಜಾಬಿ ಭಾಷೆಯನ್ನು ಕಡ್ಡಾಯ ಮುಖ್ಯ ವಿಷಯವನ್ನಾಗಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಶಾಲೆಗಳ ಶೈಕ್ಷಣಿಕ ಮಂಡಳಿಯ ಸಂಯೋಜನೆಯನ್ನು ಲೆಕ್ಕಿಸದೆ, ಪಂಜಾಬಿಯನ್ನು ಮುಖ್ಯ ವಿಷಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಶಿಕ್ಷಣ ಪ್ರಮಾಣಪತ್ರಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ, ತೆಲಂಗಾಣ ಸರ್ಕಾರ ಕೂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಘೋಷಿಸಿದೆ. ಶೈಕ್ಷಣಿಕ ಮಂಡಳಿಗಳು ಯಾವುದೇ ಇರಲಿ ತೆಲುಗು ಭಾಷೆ ಮುಖ್ಯ ವಿಷಯವಾಗಬೇಕು ಎಂದಿದೆ.

ಮಕ್ಕಳ ಮೇಲೆ ಹಿಂದಿ ಹೇರಲು ಮೂರು ಭಾಷೆಗಳು ಕೇವಲ ಒಂದು ನೆಪ ಎಂದು ಆರೋಪಿಸಿ ತಮಿಳುನಾಡು ಈ ನೀತಿಯನ್ನು ವಿರೋಧಿಸಿದೆ.

ಪಂಜಾಬ್ ರಾಜ್ಯ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ , ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಸಿಬಿಎಸ್‌ಇಯ ಹೊಸ ಪರೀಕ್ಷಾ ಮಾದರಿಯನ್ನು ಟೀಕಿಸಿದ್ದಾರೆ. ಪಂಜಾಬಿ ಭಾಷೆಯನ್ನು ಅನೇಕ ರಾಜ್ಯಗಳಲ್ಲಿ ಮಾತನಾಡುತ್ತಾರೆ ಮತ್ತು ಓದುತ್ತಾರೆ. ಇದು ಪಂಜಾಬ್‌ನ ಗಡಿಗಳನ್ನು ಮೀರಿ ಅದರ ಮಹತ್ವವನ್ನು ವಿಸ್ತರಿಸಿಕೊಂಡಿದೆ ಎಂದು ಬೈನ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪಂಜಾಬಿ ಕೇವಲ ಒಂದು ಭಾಷೆಯಲ್ಲ; ಇದು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ, ಇದನ್ನು ದೇಶದಾದ್ಯಂತ ಲಕ್ಷಾಂತರ ಜನರು ಮಾತನಾಡುತ್ತಾರೆ ಮತ್ತು ಪಾಲಿಸುತ್ತಾರೆ” ಎಂದು ಬೈನ್ಸ್ ಹೇಳಿದ್ದಾರೆ. ಕೇಂದ್ರದ ನೀತಿಯು ಪಂಜಾಬಿಯನ್ನು ಶಿಕ್ಷಣ ಕ್ಷೇತ್ರದಿಂದ ಅಳಿಸಿ ಹಾಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಕರಡು ಶಿಕ್ಷಣ ನೀತಿಯಲ್ಲಿ ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಸಚಿವ ಬೈನ್ಸ್, ರಾಜ್ಯಕ್ಕೆ ಅನ್ಯಾಯ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಪಡಿಸುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಇದು ಆಯ್ಕೆಯ ವಿಷಯವಲ್ಲ, ಬದಲಾಗಿ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯ ಎಂಬುವುದನ್ನು ಸಿಬಿಎಸ್‌ಇ ಅರ್ಥಮಾಡಿಕೊಳ್ಳಬೇಕು. ಕೇಂದ್ರದ ನೀತಿಯು ರಾಜ್ಯಗಳು, ಒಕ್ಕೂಟ ವ್ಯವಸ್ಥೆ ಮತ್ತು ರಾಷ್ಟ್ರದ ಭಾಷಾ ವೈವಿಧ್ಯತೆಯ ಮೇಲಿನ ನೇರ ದಾಳಿಯಾಗಿದೆ” ಎಂದಿದ್ದಾರೆ.

“ನಮ್ಮ ರಾಷ್ಟ್ರದ ಮೇಲೆ ಏಕ ಸಿದ್ದಾಂತವನ್ನು ಹೇರುವ ಪ್ರಯತ್ನವನ್ನು ನಾವು ಸಹಿಸಲು ಸಾಧ್ಯವಿಲ್ಲ. ಸಿಬಿಎಸ್‌ಇ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು. ಪಂಜಾಬಿ ಸೇರಿದಂತೆ ಎಲ್ಲಾ ಭಾಷೆಗಳಿಗೆ ಅವುಗಳಿಗೆ ಅರ್ಹವಾದ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಪಂಜಾಬಿ ಭಾಷೆಯನ್ನು ರಾಜ್ಯದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿ ಉಳಿಸಿಕೊಳ್ಳುವ ಸರ್ಕಾರದ ದೃಢ ನಿಲುವನ್ನು ಒತ್ತಿ ಹೇಳಿದ ಬೈನ್ಸ್, 2008ರ ಪಂಜಾಬಿ ಕಲಿಕೆ ಮತ್ತು ಇತರ ಭಾಷೆಗಳ ಕಾಯ್ದೆಯನ್ನು ಪಾಲಿಸಲು ವಿಫಲವಾದ ಕಾರಣ ಮೊಹಾಲಿಯ ಖಾಸಗಿ ಶಾಲೆ ಅಮಿಟಿ ಇಂಟರ್ನ್ಯಾಷನಲ್‌ಗೆ ರಾಜ್ಯ ಸರ್ಕಾರ 50,000 ರೂ. ದಂಡ ವಿಧಿಸಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಶಿಕ್ಷಣ ಅಧಿಕಾರಿ (ಮಾಧ್ಯಮಿಕ) ಅವರ ವರದಿಯ ಪ್ರಕಾರ, ಶಾಲೆಯು ಪಂಜಾಬಿಯನ್ನು ಕಡ್ಡಾಯ ವಿಷಯವಾಗಿ ಕಲಿಸುವುದನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಜಲಂಧರ್ ಮೂಲದ ಎರಡು ಶಾಲೆಗಳಿಗೂ ದಂಡ ವಿಧಿಸಲಾಗಿದೆ. ಪಂಜಾಬ್ ತನ್ನದೇ ಆದ ಶಿಕ್ಷಣ ನೀತಿಯನ್ನು ತರಲಿದೆ. ಇದಕ್ಕಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚಿಸಲಾಗುವುದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

‘ಹೇರಿಕೆ ಸಹಬಾಳ್ವೆಯಲ್ಲ, ಸಮಸ್ಯೆ..’; ಭಾಷಾ ವಿವಾದದ ಕುರಿತು ಡಿಎಂಕೆ ಸಂಸದೆ ಕನಿಮೋಳಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...