Homeಮುಖಪುಟಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

ಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಗೆ ಸರ್ಕಾರದ ಹೊಸ ಶಿಕ್ಷಣ ನೀತಿಯಲ್ಲಿ ತ್ರಿಭಾಷೆ ಕಡ್ಡಾಯಗೊಳಿಸಿರುವುದು ವಿವಿಧ ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ನೀತಿಯ ವಿರುದ್ದ ತೊಡೆ ತಟ್ಟಿ ಹೋರಾಟಕ್ಕೆ ಇಳಿದಿರುವ ತಮಿಳುನಾಡಿನ ಜೊತೆ ತೆಲಂಗಾಣ ಮತ್ತು ಪಂಜಾಬ್ ರಾಜ್ಯಗಳು ಕೈ ಜೋಡಿಸಿವೆ.

ಪಂಜಾಬ್ ಸರ್ಕಾರ ಫೆಬ್ರವರಿ 26ರ ಬುಧವಾರದಂದು, ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಪಂಜಾಬಿ ಭಾಷೆಯನ್ನು ಕಡ್ಡಾಯ ಮುಖ್ಯ ವಿಷಯವನ್ನಾಗಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಶಾಲೆಗಳ ಶೈಕ್ಷಣಿಕ ಮಂಡಳಿಯ ಸಂಯೋಜನೆಯನ್ನು ಲೆಕ್ಕಿಸದೆ, ಪಂಜಾಬಿಯನ್ನು ಮುಖ್ಯ ವಿಷಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಶಿಕ್ಷಣ ಪ್ರಮಾಣಪತ್ರಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ, ತೆಲಂಗಾಣ ಸರ್ಕಾರ ಕೂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಘೋಷಿಸಿದೆ. ಶೈಕ್ಷಣಿಕ ಮಂಡಳಿಗಳು ಯಾವುದೇ ಇರಲಿ ತೆಲುಗು ಭಾಷೆ ಮುಖ್ಯ ವಿಷಯವಾಗಬೇಕು ಎಂದಿದೆ.

ಮಕ್ಕಳ ಮೇಲೆ ಹಿಂದಿ ಹೇರಲು ಮೂರು ಭಾಷೆಗಳು ಕೇವಲ ಒಂದು ನೆಪ ಎಂದು ಆರೋಪಿಸಿ ತಮಿಳುನಾಡು ಈ ನೀತಿಯನ್ನು ವಿರೋಧಿಸಿದೆ.

ಪಂಜಾಬ್ ರಾಜ್ಯ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ , ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಸಿಬಿಎಸ್‌ಇಯ ಹೊಸ ಪರೀಕ್ಷಾ ಮಾದರಿಯನ್ನು ಟೀಕಿಸಿದ್ದಾರೆ. ಪಂಜಾಬಿ ಭಾಷೆಯನ್ನು ಅನೇಕ ರಾಜ್ಯಗಳಲ್ಲಿ ಮಾತನಾಡುತ್ತಾರೆ ಮತ್ತು ಓದುತ್ತಾರೆ. ಇದು ಪಂಜಾಬ್‌ನ ಗಡಿಗಳನ್ನು ಮೀರಿ ಅದರ ಮಹತ್ವವನ್ನು ವಿಸ್ತರಿಸಿಕೊಂಡಿದೆ ಎಂದು ಬೈನ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪಂಜಾಬಿ ಕೇವಲ ಒಂದು ಭಾಷೆಯಲ್ಲ; ಇದು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ, ಇದನ್ನು ದೇಶದಾದ್ಯಂತ ಲಕ್ಷಾಂತರ ಜನರು ಮಾತನಾಡುತ್ತಾರೆ ಮತ್ತು ಪಾಲಿಸುತ್ತಾರೆ” ಎಂದು ಬೈನ್ಸ್ ಹೇಳಿದ್ದಾರೆ. ಕೇಂದ್ರದ ನೀತಿಯು ಪಂಜಾಬಿಯನ್ನು ಶಿಕ್ಷಣ ಕ್ಷೇತ್ರದಿಂದ ಅಳಿಸಿ ಹಾಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಕರಡು ಶಿಕ್ಷಣ ನೀತಿಯಲ್ಲಿ ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಸಚಿವ ಬೈನ್ಸ್, ರಾಜ್ಯಕ್ಕೆ ಅನ್ಯಾಯ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಪಡಿಸುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಇದು ಆಯ್ಕೆಯ ವಿಷಯವಲ್ಲ, ಬದಲಾಗಿ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯ ಎಂಬುವುದನ್ನು ಸಿಬಿಎಸ್‌ಇ ಅರ್ಥಮಾಡಿಕೊಳ್ಳಬೇಕು. ಕೇಂದ್ರದ ನೀತಿಯು ರಾಜ್ಯಗಳು, ಒಕ್ಕೂಟ ವ್ಯವಸ್ಥೆ ಮತ್ತು ರಾಷ್ಟ್ರದ ಭಾಷಾ ವೈವಿಧ್ಯತೆಯ ಮೇಲಿನ ನೇರ ದಾಳಿಯಾಗಿದೆ” ಎಂದಿದ್ದಾರೆ.

“ನಮ್ಮ ರಾಷ್ಟ್ರದ ಮೇಲೆ ಏಕ ಸಿದ್ದಾಂತವನ್ನು ಹೇರುವ ಪ್ರಯತ್ನವನ್ನು ನಾವು ಸಹಿಸಲು ಸಾಧ್ಯವಿಲ್ಲ. ಸಿಬಿಎಸ್‌ಇ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು. ಪಂಜಾಬಿ ಸೇರಿದಂತೆ ಎಲ್ಲಾ ಭಾಷೆಗಳಿಗೆ ಅವುಗಳಿಗೆ ಅರ್ಹವಾದ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಪಂಜಾಬಿ ಭಾಷೆಯನ್ನು ರಾಜ್ಯದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿ ಉಳಿಸಿಕೊಳ್ಳುವ ಸರ್ಕಾರದ ದೃಢ ನಿಲುವನ್ನು ಒತ್ತಿ ಹೇಳಿದ ಬೈನ್ಸ್, 2008ರ ಪಂಜಾಬಿ ಕಲಿಕೆ ಮತ್ತು ಇತರ ಭಾಷೆಗಳ ಕಾಯ್ದೆಯನ್ನು ಪಾಲಿಸಲು ವಿಫಲವಾದ ಕಾರಣ ಮೊಹಾಲಿಯ ಖಾಸಗಿ ಶಾಲೆ ಅಮಿಟಿ ಇಂಟರ್ನ್ಯಾಷನಲ್‌ಗೆ ರಾಜ್ಯ ಸರ್ಕಾರ 50,000 ರೂ. ದಂಡ ವಿಧಿಸಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಶಿಕ್ಷಣ ಅಧಿಕಾರಿ (ಮಾಧ್ಯಮಿಕ) ಅವರ ವರದಿಯ ಪ್ರಕಾರ, ಶಾಲೆಯು ಪಂಜಾಬಿಯನ್ನು ಕಡ್ಡಾಯ ವಿಷಯವಾಗಿ ಕಲಿಸುವುದನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಜಲಂಧರ್ ಮೂಲದ ಎರಡು ಶಾಲೆಗಳಿಗೂ ದಂಡ ವಿಧಿಸಲಾಗಿದೆ. ಪಂಜಾಬ್ ತನ್ನದೇ ಆದ ಶಿಕ್ಷಣ ನೀತಿಯನ್ನು ತರಲಿದೆ. ಇದಕ್ಕಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚಿಸಲಾಗುವುದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

‘ಹೇರಿಕೆ ಸಹಬಾಳ್ವೆಯಲ್ಲ, ಸಮಸ್ಯೆ..’; ಭಾಷಾ ವಿವಾದದ ಕುರಿತು ಡಿಎಂಕೆ ಸಂಸದೆ ಕನಿಮೋಳಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...