Homeಮುಖಪುಟಏಕರೂಪ ನಾಗರಿಕ ಸಂಹಿತೆಗೆ ಬಿಜೆಪಿ ಮಿತ್ರಪಕ್ಷ AIADMK ಯಿಂದ ವಿರೋಧ

ಏಕರೂಪ ನಾಗರಿಕ ಸಂಹಿತೆಗೆ ಬಿಜೆಪಿ ಮಿತ್ರಪಕ್ಷ AIADMK ಯಿಂದ ವಿರೋಧ

- Advertisement -
- Advertisement -

ಬಿಜೆಪಿ ತರಲು ಯತ್ನಿಸುತ್ತಿರುವ ಏಕರೂಪ ನಾಗರಿಕ ಸಂಹಿತೆಗೆ ಬಿಜೆಪಿಯ ಮತ್ತೊಂದು ಮಿತ್ರಪಕ್ಷ AIADMK  ವಿರೋಧ ವ್ಯಕ್ತಪಡಿಸಿದೆ. ಈ ಹಿಂದೆ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಕೂಡ ತಮ್ಮ ವಿರೋಧ ದಾಖಲಿಸಿದ್ದರು.

ಏಕರೂಪ ನಾಗರಿಕ ಸಂಹಿತೆಗಾಗಿ ಬಿಜೆಪಿಯ ಒತ್ತಾಯ ಮತ್ತು ನಿಮ್ಮ ಪಕ್ಷದ ನಿಲುವೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “2019 ರ ಲೋಕಸಭೆ ಚುನಾವಣೆಗೆ ಬಿಡುಗಡೆ ಮಾಡಲಾದ ಪಕ್ಷದ ಪ್ರಣಾಳಿಕೆಯಲ್ಲಿ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಅಲ್ಪಸಂಖ್ಯಾತರ ಧಾರ್ಮಿಕ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಏಕರೂಪ ನಾಗರಿಕ ಸಂಹಿತೆಗಾಗಿ ಸಂವಿಧಾನಕ್ಕೆ ಯಾವುದೇ ತಿದ್ದುಪಡಿಗಳನ್ನು ತರದಂತೆ ಭಾರತ ಸರ್ಕಾರವನ್ನು ಎಐಎಡಿಎಂಕೆ ಒತ್ತಾಯಿಸುತ್ತದೆ” ಎಂದು ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯ ಕುರಿತ ಪ್ರಶ್ನೆಗೆ, “ಈಗ ಯಾವುದೇ ಚುನಾವಣೆ ಇಲ್ಲ. ಲೋಕಸಭಾ ಚುನಾವಣೆಗೆ ಒಂದು ವರ್ಷವಿದೆ, ಯಾವುದೇ ತುರ್ತು ಇಲ್ಲ. ಚುನಾವಣೆಯ ಸಮಯದಲ್ಲಿ ನಾವು ಯಾವ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇವೆ ಎಂಬುದನ್ನು ನಾವು ನಿಮಗೆ ಖಚಿತವಾಗಿ ಹೇಳುತ್ತೇವೆ. ಈಗಾಗಲೇ ನಾವು ಬಿಜೆಪಿಯ ಮೈತ್ರಿ ಮಾಡಿಕೊಂಡಿದ್ದೇವೆ” ಎಂದಿದ್ದಾರೆ.

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬಳಿಕ ವಿರೋಧ ಪಕ್ಷಗಳಲ್ಲಿ ಮಾತ್ರವಲ್ಲದೆ ಬಿಜೆಪಿಯ ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರು, “ಏಕರೂಪ ನಾಗರಿಕ ಸಂಹಿತೆಯು ಭಾರತದ ಕಲ್ಪನೆಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

”ವೈವಿಧ್ಯತೆಯು ಭಾರತದ ಶಕ್ತಿಯಾಗಿದೆ ಮತ್ತು UCC ತನ್ನ ಪ್ರಸ್ತುತ ರೂಪದಲ್ಲಿ ಈ ಕಲ್ಪನೆಗೆ ವಿರುದ್ಧವಾಗಿ ಹೋಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಪಡೆಯುವುದು ಮುಂತಾದ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ. ಈಶಾನ್ಯ ರಾಜ್ಯಗಳು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿವೆ ಮತ್ತು ಅಸನ್ನು ಉಳಿಸಿಕೊಳ್ಳಲು ಬಯಸುತ್ತದೆ ಎಂದು ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಸಂಗ್ಮಾ ಹೇಳಿದ್ದಾರೆ.

ಇದನ್ನೂ ಓದಿ; ಬಿಜೆಪಿಗೆ ಬೇಕಿರುವ ಏಕರೂಪ ನಾಗರಿಕ ಸಂಹಿತೆ ನ್ಯಾಯಸಮ್ಮತವಾದದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...