Homeಕರ್ನಾಟಕಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

ಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

- Advertisement -
- Advertisement -

ಸಿಎಂ ಕುಮಾರಸ್ವಾಮಿ ಅತ್ತ ಅಮೆರಿಕಾ ಕಾಳಭೈರವನ ಸನ್ನಿದಿಯಲ್ಲಿ ಕೂತಿರುವ ಸಂದರ್ಭದಲ್ಲಿ ಇತ್ತ ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟದ್ದು ದೊಡ್ಡ ಕೋಲಾಹಲವನ್ನೇ ಉಂಟುಮಾಡಿದೆ. ಮೋದಿಯವರ ಪ್ರಮಾಣ ವಚನಕ್ಕೆಂದು ಹೋಗಿದ್ದ ಯಡ್ಯೂರಪ್ಪನವರು ವಾಪಾಸು ಬಂದು ಹೇಳಿದ ಮೊದಲ ಸುದ್ದಿಯೇ `ನಾವಿನ್ನು ಆಪರೇಷನ್ ಕಮಲ ಮಾಡೋದಿಲ್ಲ. ವಿರೋಧಪಕ್ಷವಾಗಿ ಮೈತ್ರಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುತ್ತೇವೆ’ ಎಂದು. ಅಲ್ಲಿಗೆ ಆಪರೇಷನ್ ಕಮಲದ ಕಥೆ ಮುಗಿದಹೋಯ್ತು ಅಂತ ಸುಮಾರಷ್ಟು ಜನ ಭಾವಿಸಿದ್ದಿರಬಹುದು. ಆದರೆ ಅದರ ಅಸಲೀ ಹಕೀಕತ್ತು ಈಗ ಈ ಇಬ್ಬರ ರಾಜೀನಾಮೆಯಿಂದ ಬಯಲಾಗಿದೆ.

ಅವತ್ತು ದಿಲ್ಲಿಗೆ ಹೋದ ಯಡ್ಯೂರಪ್ಪನವರಿಗೆ ಅಮಿತ್ ಷಾ ಕೊಟ್ಟ ಸೂಚನೆ ಸ್ಪಷ್ಟವಾಗಿತ್ತು. ಯಾವ ಕಾರಣಕ್ಕೂ ಆಪರೇಷನ್ ಕಮಲ ನಿಲ್ಲಿಸಬೇಡಿ, ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿ ನೀವೇ ಸಿಎಂ ಆಗಿ, ಆದ್ರೆ ಯಾವ ಕಾರಣಕ್ಕೂ ಬಿಜೆಪಿಯೇ ಸರ್ಕಾರ ಬೀಳಿಸಿತು ಎಂಬ ಅಪಖ್ಯಾತಿ ತಟ್ಟಬಾರದು. ಅದಕ್ಕಾಗಿ ಬಹಿರಂಗವಾಗಿ ಕದನ ವಿರಾಮ ಘೋಷಿಸಿ ಒಳಗೊಳಗೇ ಮಸಲತ್ತು ಮುಂದುವರೆಸಿ ಎಂಬ ಬುದ್ದಿಮಾತು ಹೇಳಿ ಕಳಿಸಿದ್ದರು. ಹಾಗಾಗಿಯೇ ಯಡ್ಯೂರಪ್ಪನವರು ಆಪರೇಷನ್ ಕಮಲ ಮಾಡಲ್ಲ ಅನ್ನೋ ಹೇಳಿಕೆ ಕೊಟ್ಟಿದ್ದು.

ಅಮಿತ್ ಶಾ ಕೂಡಾ ಅಷ್ಟು ಸ್ಪಷ್ಟವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಕ್ಕೆ ಒಂದು ಕಾರಣವಿತ್ತು. ಮೊನ್ನೆಯಷ್ಟೆ ಮುಗಿದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೇನು ಪ್ರಚಂಡ ಕಟಾವು ಮಾಡಿಕೊಂಡಿತಲ್ಲ, ಅದಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮೈತ್ರಿ ಪಾಳೆಯದ ಮೂವತ್ತು ಶಾಸಕರು ನೆರವಾಗಿದ್ದರು. ಬಿಜೆಪಿಗೆ ಹೋಗಿಬಿಡಬೇಕು ಎಂಬ ಕಾರಣಕ್ಕೇ ಅಲ್ಲದಿದ್ದರು, ತಮ್ಮೊಳಗಿನ ಆಂತರಿಕ ಕಚ್ಚಾಟದ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಅದರಲ್ಲಿ ಕೆಲವರು ಬಿಜೆಪಿಗೆ ಸಾಥ್ ಕೊಟ್ಟದ್ದು ಸುಳ್ಳಲ್ಲ. ಈ ಮೂವತ್ತರಲ್ಲಿ ಕನಿಷ್ಠ ಅರ್ಧದಷ್ಟು ಮಂದೆಯನ್ನಾದರು ತಮ್ಮ ಕಡೆ ತಿರುಗಿಸಿಕೊಳ್ಳೋದು ಕಷ್ಟವಲ್ಲ ಎಂಬುದನ್ನು ಯಡ್ಯೂರಪ್ಪನವರು ಮನವರಿಕೆ ಮಾಡಿಕೊಟ್ಟಿದ್ದರಿಂದ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಟ್ಟದ್ದು, ಜೊತೆಗೆ ಬಿಜೆಪಿಗೆ ಅಪಖ್ಯಾತಿ ಬರಬಾರದೆಂಬ ಎಚ್ಚರಿಕೆಯನ್ನೂ ಇತ್ತದ್ದು.

ಈ ತೆರೆಮರೆ ಆಪರೇಷನ್‍ನ ಫಲವಾಗಿಯೇ ಈ ಇಬ್ಬರು ರಾಜೀನಾಮೆಗೆ ಮುಂದಾಗಿರುವ ಬಗ್ಗೆ ಸಂಶಯಗಳು ಕ್ಷಣದಿಂದ ಕ್ಷಣಕ್ಕೆ ದಟ್ಟವಾಗುತ್ತಿವೆ. ಆ ರಾಜೀನಾಮೆಗಳು ಅಂಗೀಕರವಾಗುವುದೇ ಡೌಟು ಎಂಬ ಅನುಮಾನಗಳೂ ಮೂಡುತ್ತಿವೆ. ಅದೇನೆ ಇರಲಿ, ಈ ಸಲ ಬಿಜೆಪಿ ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡುವುದಷ್ಟೇ ಅಲ್ಲ, ಹಳೇ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಬಲವನ್ನು ಏಕಾಏಕಿ ಕುಗ್ಗಿಸಿ ಇಡೀ ಕರ್ನಾಟಕದ ಉದ್ದಗಲಕ್ಕು ಕಮಲದ ಬಾವುಟ ಹಾರಾಡಿಸಬೇಕೆಂಬ ಅಜೆಂಡಾ ಇಟ್ಟುಕೊಂಡೇ ಅಖಾಡಕ್ಕಿಳಿದಿದೆ. ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಅನ್ನೋದಕ್ಕೆ ಕಾಲವೇ ಉತ್ತರ ಕೊಡಬೇಕು.

ಈ ಸಲ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿರುವ ಬಿಜೆಪಿ ಸಿಲಿಕಾನ್ ಸಿಟಿಯ ಬದಲಿಗೆ ಮೈಸೂರು ನಗರಿಯಿಂದ ಆಪರೇಟ್ ಮಾಡುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಇದಕ್ಕೂ ಕಾರಣವಿದೆ. ಒಕ್ಕಲಿಗ ಮುಖ್ಯಮಂತ್ರಿಯ ಸರ್ಕಾರ ಕೆಡವಿದ ಅಪಖ್ಯಾತಿ ಬರಬಾರದು ಎಂಬ ಕಾರಣಕ್ಕೆ ಎಸ್.ಎಂ.ಕೃಷ್ಣರ ಮನೆಯಿಂದ ದಾಳ ಉರುಳಿಸಿದ್ದ ಬಿಜೆಪಿ ಆ ವಿಚಾರದಲ್ಲಿ ಈಗ ಮತ್ತಷ್ಟೂ ಸೆನ್ಸಿಬಲ್ ಆಗಿದೆ. ಅತ್ತ ಅಧಿಕಾರವೂ ಸಿಗಬೇಕು, ಇತ್ತ ಒಕ್ಕಲಿಗ ಮತಗಳ ಮೇಲೆ ಹಿಡಿತವೂ ಸಾಧ್ಯವಾಗಬೇಕು ಎಂಬ ಯೋಜನೆ ಹಾಕಿಕೊಂಡು, ಈ ಸಲ ಆಪರೇಷನ್ ಕಮಲಕ್ಕೆ ಹೆಚ್ಚೆಚ್ಚು ಒಕ್ಕಲಿಗ ಶಾಸಕರನ್ನೇ, ಅದರಲ್ಲೂ ಜೆಡಿಎಸ್ ಶಾಸಕರನ್ನೇ ಸೆಳೆಯುವ ಸಾಹಸಕ್ಕೆ ಅದು ಕೈಹಾಕಿದೆ. ಒಕ್ಕಲಿಗ ಶಾಸಕರೇ ಕೈಕೊಟ್ಟು ಕುಮಾರಸ್ವಾಮಿಯ ಸರ್ಕಾರ ಬೀಳಿಸಿದರೆ ಒಕ್ಕಲಿಗರು ಜಾತಿಯ ಕಾರಣಕ್ಕೆ ದೇವೇಗೌಡರತ್ತ ದೃವೀಕರಣವಾಗಲಾರರು ಎಂಬುದು ಇದರ ಹಿಂದಿರುವ ಲೆಕ್ಕಾಚಾರ. ಅಲ್ಲದೇ ಹಾಗೆ ಬರುವ ಅಷ್ಟೂ ಒಕ್ಕಲಿಗ ಶಾಸಕರ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಬಾವುಟ ಹಾರಾಡಿಸಿ, ತಳ ಗಟ್ಟಿಮಾಡಿಕೊಳ್ಳುವ ಯೋಜನೆಯೂ ಇದರಲ್ಲಿದೆ. ಈ ಕಾರಣಕ್ಕೇ ಸಿಎಂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿರುವ ಸಂದರ್ಭವನ್ನೇ ಸರಿಯಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಇದರ ಸಂಪೂರ್ಣ ಹೊಣೆಯನ್ನು ಬಿಜೆಪಿಯ ಒಕ್ಕಲಿಗ ಲೀಡರುಗಳಾದ ಸಿ.ಟಿ.ರವಿ ಮತ್ತು ಆರ್.ಅಶೋಕ್ ಹೆಗಲಿಗೆ ವಹಿಸಲಾಗಿದೆ. ಈ ಇಬ್ಬರೂ ಮೈಸೂರಿನಲ್ಲಿ ಮುಕ್ಕಾಂ ಹೂಡಿ ಗಾಳ ಹಾಕಿ ಕೂತಿದ್ದಾರೆ. ಪತ್ರಿಕೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿರುವ ಮಾಹಿತಿ ಪ್ರಕಾರ ಆಪರೇಷನ್‍ಗೆ ಒಳಗಾಗುವ ಒಕ್ಕಲಿಗ ಶಾಸಕರಿಗೆ ತಲಾ ಮೂವತ್ತು ಕೋಟಿ ಹಣ, ಉಪಚುನಾವಣೆಯಲ್ಲಿ ಟಿಕೆಟ್, ಗೆಲ್ಲಿಸಿಕೊಂಡು ಬರುವ ಭರವಸೆ ಮತ್ತು ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಪದವಿಯ ಬಲ್ಕ್ ಪ್ಯಾಕೇಜ್ ನೀಡಲಾಗುತ್ತಿದೆಯಂತೆ. ಅದರಲ್ಲು ಮಂತ್ರಿ ಪದವಿ ಬೇಡವೆಂದವರಿಗೆ ಮೊತ್ತದಲ್ಲಿ ಅಡ್ಜಸ್ಟ್‍ಮೆಂಟ್ ಮಾಡುವ ಖಾತ್ರಿಯನ್ನೂ ನೀಡಲಾಗುತ್ತಿದೆ.

ಇದರ ಬೆನ್ನಿಗೇನೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ಮತ್ತ ಉನ್ನತ ಶಿಕ್ಷಣ ಸಚಿವರೂ ಆದ ಜಿ.ಟಿ ದೇವೆಗೌಡರು ಈಗ ಮತ್ತೆ ಮೋದಿ ಮತ್ತು ಅಮಿತ್ ಶಾರನ್ನು ಹೊಗಳಲು ಶುರು ಮಾಡಿದ್ದಾರೆ. ಇದರ ಮರ್ಮವೇನೆಂದು ತಿಳಿಯಲು ಇನ್ನ ಒಂದೆರಡು ದಿನಗಳು ಸಾಕು.

ಬೇರೆಬೇರೆ ಕಾರಣಗಳಿಂದ ದೇವೇಗೌಡರ ಕುಟುಂಬ ಹಾಗೂ ಈ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿರುವ ಹತ್ತು ಮಂದಿ ಒಕ್ಕಲಿಗ ಶಾಸಕರನ್ನು ವಿಚಲಿತಗೊಳಿಸುವುದಕ್ಕೆಂದೆ `ಸ್ಟಾರ್ಟ್ ಅಪ್ ಡೋಸ್’ ಆಗಿ ಆನಂದ್‍ಸಿಂಗ್ ಹಾಗೂ ರಮೇಶ್ ಜಾರಕಿಹೊಳಿಯವರಿಂದ ರಾಜೀನಾಮೆ ಕೊಡಿಸಿದ್ದಾರೆ ಎಂಬುದು ಸುದ್ದಿ. ಆದರೆ ಇದಕ್ಕೆ ಜೆಡಿಎಸ್‍ನ ಇತರ ಶಾಸಕರು ಸೊಪ್ಪು ಹಾಕಿದಂತೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....