Homeಕರ್ನಾಟಕಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

ಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

- Advertisement -
- Advertisement -

ಸಿಎಂ ಕುಮಾರಸ್ವಾಮಿ ಅತ್ತ ಅಮೆರಿಕಾ ಕಾಳಭೈರವನ ಸನ್ನಿದಿಯಲ್ಲಿ ಕೂತಿರುವ ಸಂದರ್ಭದಲ್ಲಿ ಇತ್ತ ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟದ್ದು ದೊಡ್ಡ ಕೋಲಾಹಲವನ್ನೇ ಉಂಟುಮಾಡಿದೆ. ಮೋದಿಯವರ ಪ್ರಮಾಣ ವಚನಕ್ಕೆಂದು ಹೋಗಿದ್ದ ಯಡ್ಯೂರಪ್ಪನವರು ವಾಪಾಸು ಬಂದು ಹೇಳಿದ ಮೊದಲ ಸುದ್ದಿಯೇ `ನಾವಿನ್ನು ಆಪರೇಷನ್ ಕಮಲ ಮಾಡೋದಿಲ್ಲ. ವಿರೋಧಪಕ್ಷವಾಗಿ ಮೈತ್ರಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುತ್ತೇವೆ’ ಎಂದು. ಅಲ್ಲಿಗೆ ಆಪರೇಷನ್ ಕಮಲದ ಕಥೆ ಮುಗಿದಹೋಯ್ತು ಅಂತ ಸುಮಾರಷ್ಟು ಜನ ಭಾವಿಸಿದ್ದಿರಬಹುದು. ಆದರೆ ಅದರ ಅಸಲೀ ಹಕೀಕತ್ತು ಈಗ ಈ ಇಬ್ಬರ ರಾಜೀನಾಮೆಯಿಂದ ಬಯಲಾಗಿದೆ.

ಅವತ್ತು ದಿಲ್ಲಿಗೆ ಹೋದ ಯಡ್ಯೂರಪ್ಪನವರಿಗೆ ಅಮಿತ್ ಷಾ ಕೊಟ್ಟ ಸೂಚನೆ ಸ್ಪಷ್ಟವಾಗಿತ್ತು. ಯಾವ ಕಾರಣಕ್ಕೂ ಆಪರೇಷನ್ ಕಮಲ ನಿಲ್ಲಿಸಬೇಡಿ, ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿ ನೀವೇ ಸಿಎಂ ಆಗಿ, ಆದ್ರೆ ಯಾವ ಕಾರಣಕ್ಕೂ ಬಿಜೆಪಿಯೇ ಸರ್ಕಾರ ಬೀಳಿಸಿತು ಎಂಬ ಅಪಖ್ಯಾತಿ ತಟ್ಟಬಾರದು. ಅದಕ್ಕಾಗಿ ಬಹಿರಂಗವಾಗಿ ಕದನ ವಿರಾಮ ಘೋಷಿಸಿ ಒಳಗೊಳಗೇ ಮಸಲತ್ತು ಮುಂದುವರೆಸಿ ಎಂಬ ಬುದ್ದಿಮಾತು ಹೇಳಿ ಕಳಿಸಿದ್ದರು. ಹಾಗಾಗಿಯೇ ಯಡ್ಯೂರಪ್ಪನವರು ಆಪರೇಷನ್ ಕಮಲ ಮಾಡಲ್ಲ ಅನ್ನೋ ಹೇಳಿಕೆ ಕೊಟ್ಟಿದ್ದು.

ಅಮಿತ್ ಶಾ ಕೂಡಾ ಅಷ್ಟು ಸ್ಪಷ್ಟವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಕ್ಕೆ ಒಂದು ಕಾರಣವಿತ್ತು. ಮೊನ್ನೆಯಷ್ಟೆ ಮುಗಿದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೇನು ಪ್ರಚಂಡ ಕಟಾವು ಮಾಡಿಕೊಂಡಿತಲ್ಲ, ಅದಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮೈತ್ರಿ ಪಾಳೆಯದ ಮೂವತ್ತು ಶಾಸಕರು ನೆರವಾಗಿದ್ದರು. ಬಿಜೆಪಿಗೆ ಹೋಗಿಬಿಡಬೇಕು ಎಂಬ ಕಾರಣಕ್ಕೇ ಅಲ್ಲದಿದ್ದರು, ತಮ್ಮೊಳಗಿನ ಆಂತರಿಕ ಕಚ್ಚಾಟದ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಅದರಲ್ಲಿ ಕೆಲವರು ಬಿಜೆಪಿಗೆ ಸಾಥ್ ಕೊಟ್ಟದ್ದು ಸುಳ್ಳಲ್ಲ. ಈ ಮೂವತ್ತರಲ್ಲಿ ಕನಿಷ್ಠ ಅರ್ಧದಷ್ಟು ಮಂದೆಯನ್ನಾದರು ತಮ್ಮ ಕಡೆ ತಿರುಗಿಸಿಕೊಳ್ಳೋದು ಕಷ್ಟವಲ್ಲ ಎಂಬುದನ್ನು ಯಡ್ಯೂರಪ್ಪನವರು ಮನವರಿಕೆ ಮಾಡಿಕೊಟ್ಟಿದ್ದರಿಂದ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಟ್ಟದ್ದು, ಜೊತೆಗೆ ಬಿಜೆಪಿಗೆ ಅಪಖ್ಯಾತಿ ಬರಬಾರದೆಂಬ ಎಚ್ಚರಿಕೆಯನ್ನೂ ಇತ್ತದ್ದು.

ಈ ತೆರೆಮರೆ ಆಪರೇಷನ್‍ನ ಫಲವಾಗಿಯೇ ಈ ಇಬ್ಬರು ರಾಜೀನಾಮೆಗೆ ಮುಂದಾಗಿರುವ ಬಗ್ಗೆ ಸಂಶಯಗಳು ಕ್ಷಣದಿಂದ ಕ್ಷಣಕ್ಕೆ ದಟ್ಟವಾಗುತ್ತಿವೆ. ಆ ರಾಜೀನಾಮೆಗಳು ಅಂಗೀಕರವಾಗುವುದೇ ಡೌಟು ಎಂಬ ಅನುಮಾನಗಳೂ ಮೂಡುತ್ತಿವೆ. ಅದೇನೆ ಇರಲಿ, ಈ ಸಲ ಬಿಜೆಪಿ ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡುವುದಷ್ಟೇ ಅಲ್ಲ, ಹಳೇ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಬಲವನ್ನು ಏಕಾಏಕಿ ಕುಗ್ಗಿಸಿ ಇಡೀ ಕರ್ನಾಟಕದ ಉದ್ದಗಲಕ್ಕು ಕಮಲದ ಬಾವುಟ ಹಾರಾಡಿಸಬೇಕೆಂಬ ಅಜೆಂಡಾ ಇಟ್ಟುಕೊಂಡೇ ಅಖಾಡಕ್ಕಿಳಿದಿದೆ. ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಅನ್ನೋದಕ್ಕೆ ಕಾಲವೇ ಉತ್ತರ ಕೊಡಬೇಕು.

ಈ ಸಲ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿರುವ ಬಿಜೆಪಿ ಸಿಲಿಕಾನ್ ಸಿಟಿಯ ಬದಲಿಗೆ ಮೈಸೂರು ನಗರಿಯಿಂದ ಆಪರೇಟ್ ಮಾಡುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಇದಕ್ಕೂ ಕಾರಣವಿದೆ. ಒಕ್ಕಲಿಗ ಮುಖ್ಯಮಂತ್ರಿಯ ಸರ್ಕಾರ ಕೆಡವಿದ ಅಪಖ್ಯಾತಿ ಬರಬಾರದು ಎಂಬ ಕಾರಣಕ್ಕೆ ಎಸ್.ಎಂ.ಕೃಷ್ಣರ ಮನೆಯಿಂದ ದಾಳ ಉರುಳಿಸಿದ್ದ ಬಿಜೆಪಿ ಆ ವಿಚಾರದಲ್ಲಿ ಈಗ ಮತ್ತಷ್ಟೂ ಸೆನ್ಸಿಬಲ್ ಆಗಿದೆ. ಅತ್ತ ಅಧಿಕಾರವೂ ಸಿಗಬೇಕು, ಇತ್ತ ಒಕ್ಕಲಿಗ ಮತಗಳ ಮೇಲೆ ಹಿಡಿತವೂ ಸಾಧ್ಯವಾಗಬೇಕು ಎಂಬ ಯೋಜನೆ ಹಾಕಿಕೊಂಡು, ಈ ಸಲ ಆಪರೇಷನ್ ಕಮಲಕ್ಕೆ ಹೆಚ್ಚೆಚ್ಚು ಒಕ್ಕಲಿಗ ಶಾಸಕರನ್ನೇ, ಅದರಲ್ಲೂ ಜೆಡಿಎಸ್ ಶಾಸಕರನ್ನೇ ಸೆಳೆಯುವ ಸಾಹಸಕ್ಕೆ ಅದು ಕೈಹಾಕಿದೆ. ಒಕ್ಕಲಿಗ ಶಾಸಕರೇ ಕೈಕೊಟ್ಟು ಕುಮಾರಸ್ವಾಮಿಯ ಸರ್ಕಾರ ಬೀಳಿಸಿದರೆ ಒಕ್ಕಲಿಗರು ಜಾತಿಯ ಕಾರಣಕ್ಕೆ ದೇವೇಗೌಡರತ್ತ ದೃವೀಕರಣವಾಗಲಾರರು ಎಂಬುದು ಇದರ ಹಿಂದಿರುವ ಲೆಕ್ಕಾಚಾರ. ಅಲ್ಲದೇ ಹಾಗೆ ಬರುವ ಅಷ್ಟೂ ಒಕ್ಕಲಿಗ ಶಾಸಕರ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಬಾವುಟ ಹಾರಾಡಿಸಿ, ತಳ ಗಟ್ಟಿಮಾಡಿಕೊಳ್ಳುವ ಯೋಜನೆಯೂ ಇದರಲ್ಲಿದೆ. ಈ ಕಾರಣಕ್ಕೇ ಸಿಎಂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿರುವ ಸಂದರ್ಭವನ್ನೇ ಸರಿಯಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಇದರ ಸಂಪೂರ್ಣ ಹೊಣೆಯನ್ನು ಬಿಜೆಪಿಯ ಒಕ್ಕಲಿಗ ಲೀಡರುಗಳಾದ ಸಿ.ಟಿ.ರವಿ ಮತ್ತು ಆರ್.ಅಶೋಕ್ ಹೆಗಲಿಗೆ ವಹಿಸಲಾಗಿದೆ. ಈ ಇಬ್ಬರೂ ಮೈಸೂರಿನಲ್ಲಿ ಮುಕ್ಕಾಂ ಹೂಡಿ ಗಾಳ ಹಾಕಿ ಕೂತಿದ್ದಾರೆ. ಪತ್ರಿಕೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿರುವ ಮಾಹಿತಿ ಪ್ರಕಾರ ಆಪರೇಷನ್‍ಗೆ ಒಳಗಾಗುವ ಒಕ್ಕಲಿಗ ಶಾಸಕರಿಗೆ ತಲಾ ಮೂವತ್ತು ಕೋಟಿ ಹಣ, ಉಪಚುನಾವಣೆಯಲ್ಲಿ ಟಿಕೆಟ್, ಗೆಲ್ಲಿಸಿಕೊಂಡು ಬರುವ ಭರವಸೆ ಮತ್ತು ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಪದವಿಯ ಬಲ್ಕ್ ಪ್ಯಾಕೇಜ್ ನೀಡಲಾಗುತ್ತಿದೆಯಂತೆ. ಅದರಲ್ಲು ಮಂತ್ರಿ ಪದವಿ ಬೇಡವೆಂದವರಿಗೆ ಮೊತ್ತದಲ್ಲಿ ಅಡ್ಜಸ್ಟ್‍ಮೆಂಟ್ ಮಾಡುವ ಖಾತ್ರಿಯನ್ನೂ ನೀಡಲಾಗುತ್ತಿದೆ.

ಇದರ ಬೆನ್ನಿಗೇನೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ಮತ್ತ ಉನ್ನತ ಶಿಕ್ಷಣ ಸಚಿವರೂ ಆದ ಜಿ.ಟಿ ದೇವೆಗೌಡರು ಈಗ ಮತ್ತೆ ಮೋದಿ ಮತ್ತು ಅಮಿತ್ ಶಾರನ್ನು ಹೊಗಳಲು ಶುರು ಮಾಡಿದ್ದಾರೆ. ಇದರ ಮರ್ಮವೇನೆಂದು ತಿಳಿಯಲು ಇನ್ನ ಒಂದೆರಡು ದಿನಗಳು ಸಾಕು.

ಬೇರೆಬೇರೆ ಕಾರಣಗಳಿಂದ ದೇವೇಗೌಡರ ಕುಟುಂಬ ಹಾಗೂ ಈ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿರುವ ಹತ್ತು ಮಂದಿ ಒಕ್ಕಲಿಗ ಶಾಸಕರನ್ನು ವಿಚಲಿತಗೊಳಿಸುವುದಕ್ಕೆಂದೆ `ಸ್ಟಾರ್ಟ್ ಅಪ್ ಡೋಸ್’ ಆಗಿ ಆನಂದ್‍ಸಿಂಗ್ ಹಾಗೂ ರಮೇಶ್ ಜಾರಕಿಹೊಳಿಯವರಿಂದ ರಾಜೀನಾಮೆ ಕೊಡಿಸಿದ್ದಾರೆ ಎಂಬುದು ಸುದ್ದಿ. ಆದರೆ ಇದಕ್ಕೆ ಜೆಡಿಎಸ್‍ನ ಇತರ ಶಾಸಕರು ಸೊಪ್ಪು ಹಾಕಿದಂತೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...