Homeಕರ್ನಾಟಕಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

ಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

- Advertisement -
- Advertisement -

ಸಿಎಂ ಕುಮಾರಸ್ವಾಮಿ ಅತ್ತ ಅಮೆರಿಕಾ ಕಾಳಭೈರವನ ಸನ್ನಿದಿಯಲ್ಲಿ ಕೂತಿರುವ ಸಂದರ್ಭದಲ್ಲಿ ಇತ್ತ ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟದ್ದು ದೊಡ್ಡ ಕೋಲಾಹಲವನ್ನೇ ಉಂಟುಮಾಡಿದೆ. ಮೋದಿಯವರ ಪ್ರಮಾಣ ವಚನಕ್ಕೆಂದು ಹೋಗಿದ್ದ ಯಡ್ಯೂರಪ್ಪನವರು ವಾಪಾಸು ಬಂದು ಹೇಳಿದ ಮೊದಲ ಸುದ್ದಿಯೇ `ನಾವಿನ್ನು ಆಪರೇಷನ್ ಕಮಲ ಮಾಡೋದಿಲ್ಲ. ವಿರೋಧಪಕ್ಷವಾಗಿ ಮೈತ್ರಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುತ್ತೇವೆ’ ಎಂದು. ಅಲ್ಲಿಗೆ ಆಪರೇಷನ್ ಕಮಲದ ಕಥೆ ಮುಗಿದಹೋಯ್ತು ಅಂತ ಸುಮಾರಷ್ಟು ಜನ ಭಾವಿಸಿದ್ದಿರಬಹುದು. ಆದರೆ ಅದರ ಅಸಲೀ ಹಕೀಕತ್ತು ಈಗ ಈ ಇಬ್ಬರ ರಾಜೀನಾಮೆಯಿಂದ ಬಯಲಾಗಿದೆ.

ಅವತ್ತು ದಿಲ್ಲಿಗೆ ಹೋದ ಯಡ್ಯೂರಪ್ಪನವರಿಗೆ ಅಮಿತ್ ಷಾ ಕೊಟ್ಟ ಸೂಚನೆ ಸ್ಪಷ್ಟವಾಗಿತ್ತು. ಯಾವ ಕಾರಣಕ್ಕೂ ಆಪರೇಷನ್ ಕಮಲ ನಿಲ್ಲಿಸಬೇಡಿ, ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿ ನೀವೇ ಸಿಎಂ ಆಗಿ, ಆದ್ರೆ ಯಾವ ಕಾರಣಕ್ಕೂ ಬಿಜೆಪಿಯೇ ಸರ್ಕಾರ ಬೀಳಿಸಿತು ಎಂಬ ಅಪಖ್ಯಾತಿ ತಟ್ಟಬಾರದು. ಅದಕ್ಕಾಗಿ ಬಹಿರಂಗವಾಗಿ ಕದನ ವಿರಾಮ ಘೋಷಿಸಿ ಒಳಗೊಳಗೇ ಮಸಲತ್ತು ಮುಂದುವರೆಸಿ ಎಂಬ ಬುದ್ದಿಮಾತು ಹೇಳಿ ಕಳಿಸಿದ್ದರು. ಹಾಗಾಗಿಯೇ ಯಡ್ಯೂರಪ್ಪನವರು ಆಪರೇಷನ್ ಕಮಲ ಮಾಡಲ್ಲ ಅನ್ನೋ ಹೇಳಿಕೆ ಕೊಟ್ಟಿದ್ದು.

ಅಮಿತ್ ಶಾ ಕೂಡಾ ಅಷ್ಟು ಸ್ಪಷ್ಟವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಕ್ಕೆ ಒಂದು ಕಾರಣವಿತ್ತು. ಮೊನ್ನೆಯಷ್ಟೆ ಮುಗಿದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೇನು ಪ್ರಚಂಡ ಕಟಾವು ಮಾಡಿಕೊಂಡಿತಲ್ಲ, ಅದಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮೈತ್ರಿ ಪಾಳೆಯದ ಮೂವತ್ತು ಶಾಸಕರು ನೆರವಾಗಿದ್ದರು. ಬಿಜೆಪಿಗೆ ಹೋಗಿಬಿಡಬೇಕು ಎಂಬ ಕಾರಣಕ್ಕೇ ಅಲ್ಲದಿದ್ದರು, ತಮ್ಮೊಳಗಿನ ಆಂತರಿಕ ಕಚ್ಚಾಟದ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಅದರಲ್ಲಿ ಕೆಲವರು ಬಿಜೆಪಿಗೆ ಸಾಥ್ ಕೊಟ್ಟದ್ದು ಸುಳ್ಳಲ್ಲ. ಈ ಮೂವತ್ತರಲ್ಲಿ ಕನಿಷ್ಠ ಅರ್ಧದಷ್ಟು ಮಂದೆಯನ್ನಾದರು ತಮ್ಮ ಕಡೆ ತಿರುಗಿಸಿಕೊಳ್ಳೋದು ಕಷ್ಟವಲ್ಲ ಎಂಬುದನ್ನು ಯಡ್ಯೂರಪ್ಪನವರು ಮನವರಿಕೆ ಮಾಡಿಕೊಟ್ಟಿದ್ದರಿಂದ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಟ್ಟದ್ದು, ಜೊತೆಗೆ ಬಿಜೆಪಿಗೆ ಅಪಖ್ಯಾತಿ ಬರಬಾರದೆಂಬ ಎಚ್ಚರಿಕೆಯನ್ನೂ ಇತ್ತದ್ದು.

ಈ ತೆರೆಮರೆ ಆಪರೇಷನ್‍ನ ಫಲವಾಗಿಯೇ ಈ ಇಬ್ಬರು ರಾಜೀನಾಮೆಗೆ ಮುಂದಾಗಿರುವ ಬಗ್ಗೆ ಸಂಶಯಗಳು ಕ್ಷಣದಿಂದ ಕ್ಷಣಕ್ಕೆ ದಟ್ಟವಾಗುತ್ತಿವೆ. ಆ ರಾಜೀನಾಮೆಗಳು ಅಂಗೀಕರವಾಗುವುದೇ ಡೌಟು ಎಂಬ ಅನುಮಾನಗಳೂ ಮೂಡುತ್ತಿವೆ. ಅದೇನೆ ಇರಲಿ, ಈ ಸಲ ಬಿಜೆಪಿ ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡುವುದಷ್ಟೇ ಅಲ್ಲ, ಹಳೇ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಬಲವನ್ನು ಏಕಾಏಕಿ ಕುಗ್ಗಿಸಿ ಇಡೀ ಕರ್ನಾಟಕದ ಉದ್ದಗಲಕ್ಕು ಕಮಲದ ಬಾವುಟ ಹಾರಾಡಿಸಬೇಕೆಂಬ ಅಜೆಂಡಾ ಇಟ್ಟುಕೊಂಡೇ ಅಖಾಡಕ್ಕಿಳಿದಿದೆ. ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಅನ್ನೋದಕ್ಕೆ ಕಾಲವೇ ಉತ್ತರ ಕೊಡಬೇಕು.

ಈ ಸಲ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿರುವ ಬಿಜೆಪಿ ಸಿಲಿಕಾನ್ ಸಿಟಿಯ ಬದಲಿಗೆ ಮೈಸೂರು ನಗರಿಯಿಂದ ಆಪರೇಟ್ ಮಾಡುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಇದಕ್ಕೂ ಕಾರಣವಿದೆ. ಒಕ್ಕಲಿಗ ಮುಖ್ಯಮಂತ್ರಿಯ ಸರ್ಕಾರ ಕೆಡವಿದ ಅಪಖ್ಯಾತಿ ಬರಬಾರದು ಎಂಬ ಕಾರಣಕ್ಕೆ ಎಸ್.ಎಂ.ಕೃಷ್ಣರ ಮನೆಯಿಂದ ದಾಳ ಉರುಳಿಸಿದ್ದ ಬಿಜೆಪಿ ಆ ವಿಚಾರದಲ್ಲಿ ಈಗ ಮತ್ತಷ್ಟೂ ಸೆನ್ಸಿಬಲ್ ಆಗಿದೆ. ಅತ್ತ ಅಧಿಕಾರವೂ ಸಿಗಬೇಕು, ಇತ್ತ ಒಕ್ಕಲಿಗ ಮತಗಳ ಮೇಲೆ ಹಿಡಿತವೂ ಸಾಧ್ಯವಾಗಬೇಕು ಎಂಬ ಯೋಜನೆ ಹಾಕಿಕೊಂಡು, ಈ ಸಲ ಆಪರೇಷನ್ ಕಮಲಕ್ಕೆ ಹೆಚ್ಚೆಚ್ಚು ಒಕ್ಕಲಿಗ ಶಾಸಕರನ್ನೇ, ಅದರಲ್ಲೂ ಜೆಡಿಎಸ್ ಶಾಸಕರನ್ನೇ ಸೆಳೆಯುವ ಸಾಹಸಕ್ಕೆ ಅದು ಕೈಹಾಕಿದೆ. ಒಕ್ಕಲಿಗ ಶಾಸಕರೇ ಕೈಕೊಟ್ಟು ಕುಮಾರಸ್ವಾಮಿಯ ಸರ್ಕಾರ ಬೀಳಿಸಿದರೆ ಒಕ್ಕಲಿಗರು ಜಾತಿಯ ಕಾರಣಕ್ಕೆ ದೇವೇಗೌಡರತ್ತ ದೃವೀಕರಣವಾಗಲಾರರು ಎಂಬುದು ಇದರ ಹಿಂದಿರುವ ಲೆಕ್ಕಾಚಾರ. ಅಲ್ಲದೇ ಹಾಗೆ ಬರುವ ಅಷ್ಟೂ ಒಕ್ಕಲಿಗ ಶಾಸಕರ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಬಾವುಟ ಹಾರಾಡಿಸಿ, ತಳ ಗಟ್ಟಿಮಾಡಿಕೊಳ್ಳುವ ಯೋಜನೆಯೂ ಇದರಲ್ಲಿದೆ. ಈ ಕಾರಣಕ್ಕೇ ಸಿಎಂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿರುವ ಸಂದರ್ಭವನ್ನೇ ಸರಿಯಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಇದರ ಸಂಪೂರ್ಣ ಹೊಣೆಯನ್ನು ಬಿಜೆಪಿಯ ಒಕ್ಕಲಿಗ ಲೀಡರುಗಳಾದ ಸಿ.ಟಿ.ರವಿ ಮತ್ತು ಆರ್.ಅಶೋಕ್ ಹೆಗಲಿಗೆ ವಹಿಸಲಾಗಿದೆ. ಈ ಇಬ್ಬರೂ ಮೈಸೂರಿನಲ್ಲಿ ಮುಕ್ಕಾಂ ಹೂಡಿ ಗಾಳ ಹಾಕಿ ಕೂತಿದ್ದಾರೆ. ಪತ್ರಿಕೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿರುವ ಮಾಹಿತಿ ಪ್ರಕಾರ ಆಪರೇಷನ್‍ಗೆ ಒಳಗಾಗುವ ಒಕ್ಕಲಿಗ ಶಾಸಕರಿಗೆ ತಲಾ ಮೂವತ್ತು ಕೋಟಿ ಹಣ, ಉಪಚುನಾವಣೆಯಲ್ಲಿ ಟಿಕೆಟ್, ಗೆಲ್ಲಿಸಿಕೊಂಡು ಬರುವ ಭರವಸೆ ಮತ್ತು ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಪದವಿಯ ಬಲ್ಕ್ ಪ್ಯಾಕೇಜ್ ನೀಡಲಾಗುತ್ತಿದೆಯಂತೆ. ಅದರಲ್ಲು ಮಂತ್ರಿ ಪದವಿ ಬೇಡವೆಂದವರಿಗೆ ಮೊತ್ತದಲ್ಲಿ ಅಡ್ಜಸ್ಟ್‍ಮೆಂಟ್ ಮಾಡುವ ಖಾತ್ರಿಯನ್ನೂ ನೀಡಲಾಗುತ್ತಿದೆ.

ಇದರ ಬೆನ್ನಿಗೇನೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ಮತ್ತ ಉನ್ನತ ಶಿಕ್ಷಣ ಸಚಿವರೂ ಆದ ಜಿ.ಟಿ ದೇವೆಗೌಡರು ಈಗ ಮತ್ತೆ ಮೋದಿ ಮತ್ತು ಅಮಿತ್ ಶಾರನ್ನು ಹೊಗಳಲು ಶುರು ಮಾಡಿದ್ದಾರೆ. ಇದರ ಮರ್ಮವೇನೆಂದು ತಿಳಿಯಲು ಇನ್ನ ಒಂದೆರಡು ದಿನಗಳು ಸಾಕು.

ಬೇರೆಬೇರೆ ಕಾರಣಗಳಿಂದ ದೇವೇಗೌಡರ ಕುಟುಂಬ ಹಾಗೂ ಈ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿರುವ ಹತ್ತು ಮಂದಿ ಒಕ್ಕಲಿಗ ಶಾಸಕರನ್ನು ವಿಚಲಿತಗೊಳಿಸುವುದಕ್ಕೆಂದೆ `ಸ್ಟಾರ್ಟ್ ಅಪ್ ಡೋಸ್’ ಆಗಿ ಆನಂದ್‍ಸಿಂಗ್ ಹಾಗೂ ರಮೇಶ್ ಜಾರಕಿಹೊಳಿಯವರಿಂದ ರಾಜೀನಾಮೆ ಕೊಡಿಸಿದ್ದಾರೆ ಎಂಬುದು ಸುದ್ದಿ. ಆದರೆ ಇದಕ್ಕೆ ಜೆಡಿಎಸ್‍ನ ಇತರ ಶಾಸಕರು ಸೊಪ್ಪು ಹಾಕಿದಂತೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....