Homeಕರ್ನಾಟಕಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

ಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

- Advertisement -
- Advertisement -

ಸಿಎಂ ಕುಮಾರಸ್ವಾಮಿ ಅತ್ತ ಅಮೆರಿಕಾ ಕಾಳಭೈರವನ ಸನ್ನಿದಿಯಲ್ಲಿ ಕೂತಿರುವ ಸಂದರ್ಭದಲ್ಲಿ ಇತ್ತ ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟದ್ದು ದೊಡ್ಡ ಕೋಲಾಹಲವನ್ನೇ ಉಂಟುಮಾಡಿದೆ. ಮೋದಿಯವರ ಪ್ರಮಾಣ ವಚನಕ್ಕೆಂದು ಹೋಗಿದ್ದ ಯಡ್ಯೂರಪ್ಪನವರು ವಾಪಾಸು ಬಂದು ಹೇಳಿದ ಮೊದಲ ಸುದ್ದಿಯೇ `ನಾವಿನ್ನು ಆಪರೇಷನ್ ಕಮಲ ಮಾಡೋದಿಲ್ಲ. ವಿರೋಧಪಕ್ಷವಾಗಿ ಮೈತ್ರಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುತ್ತೇವೆ’ ಎಂದು. ಅಲ್ಲಿಗೆ ಆಪರೇಷನ್ ಕಮಲದ ಕಥೆ ಮುಗಿದಹೋಯ್ತು ಅಂತ ಸುಮಾರಷ್ಟು ಜನ ಭಾವಿಸಿದ್ದಿರಬಹುದು. ಆದರೆ ಅದರ ಅಸಲೀ ಹಕೀಕತ್ತು ಈಗ ಈ ಇಬ್ಬರ ರಾಜೀನಾಮೆಯಿಂದ ಬಯಲಾಗಿದೆ.

ಅವತ್ತು ದಿಲ್ಲಿಗೆ ಹೋದ ಯಡ್ಯೂರಪ್ಪನವರಿಗೆ ಅಮಿತ್ ಷಾ ಕೊಟ್ಟ ಸೂಚನೆ ಸ್ಪಷ್ಟವಾಗಿತ್ತು. ಯಾವ ಕಾರಣಕ್ಕೂ ಆಪರೇಷನ್ ಕಮಲ ನಿಲ್ಲಿಸಬೇಡಿ, ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿ ನೀವೇ ಸಿಎಂ ಆಗಿ, ಆದ್ರೆ ಯಾವ ಕಾರಣಕ್ಕೂ ಬಿಜೆಪಿಯೇ ಸರ್ಕಾರ ಬೀಳಿಸಿತು ಎಂಬ ಅಪಖ್ಯಾತಿ ತಟ್ಟಬಾರದು. ಅದಕ್ಕಾಗಿ ಬಹಿರಂಗವಾಗಿ ಕದನ ವಿರಾಮ ಘೋಷಿಸಿ ಒಳಗೊಳಗೇ ಮಸಲತ್ತು ಮುಂದುವರೆಸಿ ಎಂಬ ಬುದ್ದಿಮಾತು ಹೇಳಿ ಕಳಿಸಿದ್ದರು. ಹಾಗಾಗಿಯೇ ಯಡ್ಯೂರಪ್ಪನವರು ಆಪರೇಷನ್ ಕಮಲ ಮಾಡಲ್ಲ ಅನ್ನೋ ಹೇಳಿಕೆ ಕೊಟ್ಟಿದ್ದು.

ಅಮಿತ್ ಶಾ ಕೂಡಾ ಅಷ್ಟು ಸ್ಪಷ್ಟವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಕ್ಕೆ ಒಂದು ಕಾರಣವಿತ್ತು. ಮೊನ್ನೆಯಷ್ಟೆ ಮುಗಿದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೇನು ಪ್ರಚಂಡ ಕಟಾವು ಮಾಡಿಕೊಂಡಿತಲ್ಲ, ಅದಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮೈತ್ರಿ ಪಾಳೆಯದ ಮೂವತ್ತು ಶಾಸಕರು ನೆರವಾಗಿದ್ದರು. ಬಿಜೆಪಿಗೆ ಹೋಗಿಬಿಡಬೇಕು ಎಂಬ ಕಾರಣಕ್ಕೇ ಅಲ್ಲದಿದ್ದರು, ತಮ್ಮೊಳಗಿನ ಆಂತರಿಕ ಕಚ್ಚಾಟದ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಅದರಲ್ಲಿ ಕೆಲವರು ಬಿಜೆಪಿಗೆ ಸಾಥ್ ಕೊಟ್ಟದ್ದು ಸುಳ್ಳಲ್ಲ. ಈ ಮೂವತ್ತರಲ್ಲಿ ಕನಿಷ್ಠ ಅರ್ಧದಷ್ಟು ಮಂದೆಯನ್ನಾದರು ತಮ್ಮ ಕಡೆ ತಿರುಗಿಸಿಕೊಳ್ಳೋದು ಕಷ್ಟವಲ್ಲ ಎಂಬುದನ್ನು ಯಡ್ಯೂರಪ್ಪನವರು ಮನವರಿಕೆ ಮಾಡಿಕೊಟ್ಟಿದ್ದರಿಂದ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಟ್ಟದ್ದು, ಜೊತೆಗೆ ಬಿಜೆಪಿಗೆ ಅಪಖ್ಯಾತಿ ಬರಬಾರದೆಂಬ ಎಚ್ಚರಿಕೆಯನ್ನೂ ಇತ್ತದ್ದು.

ಈ ತೆರೆಮರೆ ಆಪರೇಷನ್‍ನ ಫಲವಾಗಿಯೇ ಈ ಇಬ್ಬರು ರಾಜೀನಾಮೆಗೆ ಮುಂದಾಗಿರುವ ಬಗ್ಗೆ ಸಂಶಯಗಳು ಕ್ಷಣದಿಂದ ಕ್ಷಣಕ್ಕೆ ದಟ್ಟವಾಗುತ್ತಿವೆ. ಆ ರಾಜೀನಾಮೆಗಳು ಅಂಗೀಕರವಾಗುವುದೇ ಡೌಟು ಎಂಬ ಅನುಮಾನಗಳೂ ಮೂಡುತ್ತಿವೆ. ಅದೇನೆ ಇರಲಿ, ಈ ಸಲ ಬಿಜೆಪಿ ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡುವುದಷ್ಟೇ ಅಲ್ಲ, ಹಳೇ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಬಲವನ್ನು ಏಕಾಏಕಿ ಕುಗ್ಗಿಸಿ ಇಡೀ ಕರ್ನಾಟಕದ ಉದ್ದಗಲಕ್ಕು ಕಮಲದ ಬಾವುಟ ಹಾರಾಡಿಸಬೇಕೆಂಬ ಅಜೆಂಡಾ ಇಟ್ಟುಕೊಂಡೇ ಅಖಾಡಕ್ಕಿಳಿದಿದೆ. ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಅನ್ನೋದಕ್ಕೆ ಕಾಲವೇ ಉತ್ತರ ಕೊಡಬೇಕು.

ಈ ಸಲ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿರುವ ಬಿಜೆಪಿ ಸಿಲಿಕಾನ್ ಸಿಟಿಯ ಬದಲಿಗೆ ಮೈಸೂರು ನಗರಿಯಿಂದ ಆಪರೇಟ್ ಮಾಡುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಇದಕ್ಕೂ ಕಾರಣವಿದೆ. ಒಕ್ಕಲಿಗ ಮುಖ್ಯಮಂತ್ರಿಯ ಸರ್ಕಾರ ಕೆಡವಿದ ಅಪಖ್ಯಾತಿ ಬರಬಾರದು ಎಂಬ ಕಾರಣಕ್ಕೆ ಎಸ್.ಎಂ.ಕೃಷ್ಣರ ಮನೆಯಿಂದ ದಾಳ ಉರುಳಿಸಿದ್ದ ಬಿಜೆಪಿ ಆ ವಿಚಾರದಲ್ಲಿ ಈಗ ಮತ್ತಷ್ಟೂ ಸೆನ್ಸಿಬಲ್ ಆಗಿದೆ. ಅತ್ತ ಅಧಿಕಾರವೂ ಸಿಗಬೇಕು, ಇತ್ತ ಒಕ್ಕಲಿಗ ಮತಗಳ ಮೇಲೆ ಹಿಡಿತವೂ ಸಾಧ್ಯವಾಗಬೇಕು ಎಂಬ ಯೋಜನೆ ಹಾಕಿಕೊಂಡು, ಈ ಸಲ ಆಪರೇಷನ್ ಕಮಲಕ್ಕೆ ಹೆಚ್ಚೆಚ್ಚು ಒಕ್ಕಲಿಗ ಶಾಸಕರನ್ನೇ, ಅದರಲ್ಲೂ ಜೆಡಿಎಸ್ ಶಾಸಕರನ್ನೇ ಸೆಳೆಯುವ ಸಾಹಸಕ್ಕೆ ಅದು ಕೈಹಾಕಿದೆ. ಒಕ್ಕಲಿಗ ಶಾಸಕರೇ ಕೈಕೊಟ್ಟು ಕುಮಾರಸ್ವಾಮಿಯ ಸರ್ಕಾರ ಬೀಳಿಸಿದರೆ ಒಕ್ಕಲಿಗರು ಜಾತಿಯ ಕಾರಣಕ್ಕೆ ದೇವೇಗೌಡರತ್ತ ದೃವೀಕರಣವಾಗಲಾರರು ಎಂಬುದು ಇದರ ಹಿಂದಿರುವ ಲೆಕ್ಕಾಚಾರ. ಅಲ್ಲದೇ ಹಾಗೆ ಬರುವ ಅಷ್ಟೂ ಒಕ್ಕಲಿಗ ಶಾಸಕರ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಬಾವುಟ ಹಾರಾಡಿಸಿ, ತಳ ಗಟ್ಟಿಮಾಡಿಕೊಳ್ಳುವ ಯೋಜನೆಯೂ ಇದರಲ್ಲಿದೆ. ಈ ಕಾರಣಕ್ಕೇ ಸಿಎಂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿರುವ ಸಂದರ್ಭವನ್ನೇ ಸರಿಯಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಇದರ ಸಂಪೂರ್ಣ ಹೊಣೆಯನ್ನು ಬಿಜೆಪಿಯ ಒಕ್ಕಲಿಗ ಲೀಡರುಗಳಾದ ಸಿ.ಟಿ.ರವಿ ಮತ್ತು ಆರ್.ಅಶೋಕ್ ಹೆಗಲಿಗೆ ವಹಿಸಲಾಗಿದೆ. ಈ ಇಬ್ಬರೂ ಮೈಸೂರಿನಲ್ಲಿ ಮುಕ್ಕಾಂ ಹೂಡಿ ಗಾಳ ಹಾಕಿ ಕೂತಿದ್ದಾರೆ. ಪತ್ರಿಕೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿರುವ ಮಾಹಿತಿ ಪ್ರಕಾರ ಆಪರೇಷನ್‍ಗೆ ಒಳಗಾಗುವ ಒಕ್ಕಲಿಗ ಶಾಸಕರಿಗೆ ತಲಾ ಮೂವತ್ತು ಕೋಟಿ ಹಣ, ಉಪಚುನಾವಣೆಯಲ್ಲಿ ಟಿಕೆಟ್, ಗೆಲ್ಲಿಸಿಕೊಂಡು ಬರುವ ಭರವಸೆ ಮತ್ತು ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಪದವಿಯ ಬಲ್ಕ್ ಪ್ಯಾಕೇಜ್ ನೀಡಲಾಗುತ್ತಿದೆಯಂತೆ. ಅದರಲ್ಲು ಮಂತ್ರಿ ಪದವಿ ಬೇಡವೆಂದವರಿಗೆ ಮೊತ್ತದಲ್ಲಿ ಅಡ್ಜಸ್ಟ್‍ಮೆಂಟ್ ಮಾಡುವ ಖಾತ್ರಿಯನ್ನೂ ನೀಡಲಾಗುತ್ತಿದೆ.

ಇದರ ಬೆನ್ನಿಗೇನೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ಮತ್ತ ಉನ್ನತ ಶಿಕ್ಷಣ ಸಚಿವರೂ ಆದ ಜಿ.ಟಿ ದೇವೆಗೌಡರು ಈಗ ಮತ್ತೆ ಮೋದಿ ಮತ್ತು ಅಮಿತ್ ಶಾರನ್ನು ಹೊಗಳಲು ಶುರು ಮಾಡಿದ್ದಾರೆ. ಇದರ ಮರ್ಮವೇನೆಂದು ತಿಳಿಯಲು ಇನ್ನ ಒಂದೆರಡು ದಿನಗಳು ಸಾಕು.

ಬೇರೆಬೇರೆ ಕಾರಣಗಳಿಂದ ದೇವೇಗೌಡರ ಕುಟುಂಬ ಹಾಗೂ ಈ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿರುವ ಹತ್ತು ಮಂದಿ ಒಕ್ಕಲಿಗ ಶಾಸಕರನ್ನು ವಿಚಲಿತಗೊಳಿಸುವುದಕ್ಕೆಂದೆ `ಸ್ಟಾರ್ಟ್ ಅಪ್ ಡೋಸ್’ ಆಗಿ ಆನಂದ್‍ಸಿಂಗ್ ಹಾಗೂ ರಮೇಶ್ ಜಾರಕಿಹೊಳಿಯವರಿಂದ ರಾಜೀನಾಮೆ ಕೊಡಿಸಿದ್ದಾರೆ ಎಂಬುದು ಸುದ್ದಿ. ಆದರೆ ಇದಕ್ಕೆ ಜೆಡಿಎಸ್‍ನ ಇತರ ಶಾಸಕರು ಸೊಪ್ಪು ಹಾಕಿದಂತೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...