Homeಕರ್ನಾಟಕಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

ಮೈಸೂರಿನಲ್ಲಿ ಒಕ್ಕಲಿಗರ ಶಾಸಕರನ್ನು ಟಾರ್ಗೆಟ್ ಮಾಡಿ ನಡೆಯುತ್ತಿದೆ ಆಪರೇಷನ್ ಗಪ್‍ಚುಪ್!

- Advertisement -
- Advertisement -

ಸಿಎಂ ಕುಮಾರಸ್ವಾಮಿ ಅತ್ತ ಅಮೆರಿಕಾ ಕಾಳಭೈರವನ ಸನ್ನಿದಿಯಲ್ಲಿ ಕೂತಿರುವ ಸಂದರ್ಭದಲ್ಲಿ ಇತ್ತ ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟದ್ದು ದೊಡ್ಡ ಕೋಲಾಹಲವನ್ನೇ ಉಂಟುಮಾಡಿದೆ. ಮೋದಿಯವರ ಪ್ರಮಾಣ ವಚನಕ್ಕೆಂದು ಹೋಗಿದ್ದ ಯಡ್ಯೂರಪ್ಪನವರು ವಾಪಾಸು ಬಂದು ಹೇಳಿದ ಮೊದಲ ಸುದ್ದಿಯೇ `ನಾವಿನ್ನು ಆಪರೇಷನ್ ಕಮಲ ಮಾಡೋದಿಲ್ಲ. ವಿರೋಧಪಕ್ಷವಾಗಿ ಮೈತ್ರಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆರೆದಿಡುತ್ತೇವೆ’ ಎಂದು. ಅಲ್ಲಿಗೆ ಆಪರೇಷನ್ ಕಮಲದ ಕಥೆ ಮುಗಿದಹೋಯ್ತು ಅಂತ ಸುಮಾರಷ್ಟು ಜನ ಭಾವಿಸಿದ್ದಿರಬಹುದು. ಆದರೆ ಅದರ ಅಸಲೀ ಹಕೀಕತ್ತು ಈಗ ಈ ಇಬ್ಬರ ರಾಜೀನಾಮೆಯಿಂದ ಬಯಲಾಗಿದೆ.

ಅವತ್ತು ದಿಲ್ಲಿಗೆ ಹೋದ ಯಡ್ಯೂರಪ್ಪನವರಿಗೆ ಅಮಿತ್ ಷಾ ಕೊಟ್ಟ ಸೂಚನೆ ಸ್ಪಷ್ಟವಾಗಿತ್ತು. ಯಾವ ಕಾರಣಕ್ಕೂ ಆಪರೇಷನ್ ಕಮಲ ನಿಲ್ಲಿಸಬೇಡಿ, ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿ ನೀವೇ ಸಿಎಂ ಆಗಿ, ಆದ್ರೆ ಯಾವ ಕಾರಣಕ್ಕೂ ಬಿಜೆಪಿಯೇ ಸರ್ಕಾರ ಬೀಳಿಸಿತು ಎಂಬ ಅಪಖ್ಯಾತಿ ತಟ್ಟಬಾರದು. ಅದಕ್ಕಾಗಿ ಬಹಿರಂಗವಾಗಿ ಕದನ ವಿರಾಮ ಘೋಷಿಸಿ ಒಳಗೊಳಗೇ ಮಸಲತ್ತು ಮುಂದುವರೆಸಿ ಎಂಬ ಬುದ್ದಿಮಾತು ಹೇಳಿ ಕಳಿಸಿದ್ದರು. ಹಾಗಾಗಿಯೇ ಯಡ್ಯೂರಪ್ಪನವರು ಆಪರೇಷನ್ ಕಮಲ ಮಾಡಲ್ಲ ಅನ್ನೋ ಹೇಳಿಕೆ ಕೊಟ್ಟಿದ್ದು.

ಅಮಿತ್ ಶಾ ಕೂಡಾ ಅಷ್ಟು ಸ್ಪಷ್ಟವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಕ್ಕೆ ಒಂದು ಕಾರಣವಿತ್ತು. ಮೊನ್ನೆಯಷ್ಟೆ ಮುಗಿದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೇನು ಪ್ರಚಂಡ ಕಟಾವು ಮಾಡಿಕೊಂಡಿತಲ್ಲ, ಅದಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮೈತ್ರಿ ಪಾಳೆಯದ ಮೂವತ್ತು ಶಾಸಕರು ನೆರವಾಗಿದ್ದರು. ಬಿಜೆಪಿಗೆ ಹೋಗಿಬಿಡಬೇಕು ಎಂಬ ಕಾರಣಕ್ಕೇ ಅಲ್ಲದಿದ್ದರು, ತಮ್ಮೊಳಗಿನ ಆಂತರಿಕ ಕಚ್ಚಾಟದ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಅದರಲ್ಲಿ ಕೆಲವರು ಬಿಜೆಪಿಗೆ ಸಾಥ್ ಕೊಟ್ಟದ್ದು ಸುಳ್ಳಲ್ಲ. ಈ ಮೂವತ್ತರಲ್ಲಿ ಕನಿಷ್ಠ ಅರ್ಧದಷ್ಟು ಮಂದೆಯನ್ನಾದರು ತಮ್ಮ ಕಡೆ ತಿರುಗಿಸಿಕೊಳ್ಳೋದು ಕಷ್ಟವಲ್ಲ ಎಂಬುದನ್ನು ಯಡ್ಯೂರಪ್ಪನವರು ಮನವರಿಕೆ ಮಾಡಿಕೊಟ್ಟಿದ್ದರಿಂದ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಟ್ಟದ್ದು, ಜೊತೆಗೆ ಬಿಜೆಪಿಗೆ ಅಪಖ್ಯಾತಿ ಬರಬಾರದೆಂಬ ಎಚ್ಚರಿಕೆಯನ್ನೂ ಇತ್ತದ್ದು.

ಈ ತೆರೆಮರೆ ಆಪರೇಷನ್‍ನ ಫಲವಾಗಿಯೇ ಈ ಇಬ್ಬರು ರಾಜೀನಾಮೆಗೆ ಮುಂದಾಗಿರುವ ಬಗ್ಗೆ ಸಂಶಯಗಳು ಕ್ಷಣದಿಂದ ಕ್ಷಣಕ್ಕೆ ದಟ್ಟವಾಗುತ್ತಿವೆ. ಆ ರಾಜೀನಾಮೆಗಳು ಅಂಗೀಕರವಾಗುವುದೇ ಡೌಟು ಎಂಬ ಅನುಮಾನಗಳೂ ಮೂಡುತ್ತಿವೆ. ಅದೇನೆ ಇರಲಿ, ಈ ಸಲ ಬಿಜೆಪಿ ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡುವುದಷ್ಟೇ ಅಲ್ಲ, ಹಳೇ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಬಲವನ್ನು ಏಕಾಏಕಿ ಕುಗ್ಗಿಸಿ ಇಡೀ ಕರ್ನಾಟಕದ ಉದ್ದಗಲಕ್ಕು ಕಮಲದ ಬಾವುಟ ಹಾರಾಡಿಸಬೇಕೆಂಬ ಅಜೆಂಡಾ ಇಟ್ಟುಕೊಂಡೇ ಅಖಾಡಕ್ಕಿಳಿದಿದೆ. ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಅನ್ನೋದಕ್ಕೆ ಕಾಲವೇ ಉತ್ತರ ಕೊಡಬೇಕು.

ಈ ಸಲ ಪಕ್ಕಾ ಪ್ಲ್ಯಾನ್ ಮಾಡಿಕೊಂಡಿರುವ ಬಿಜೆಪಿ ಸಿಲಿಕಾನ್ ಸಿಟಿಯ ಬದಲಿಗೆ ಮೈಸೂರು ನಗರಿಯಿಂದ ಆಪರೇಟ್ ಮಾಡುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಇದಕ್ಕೂ ಕಾರಣವಿದೆ. ಒಕ್ಕಲಿಗ ಮುಖ್ಯಮಂತ್ರಿಯ ಸರ್ಕಾರ ಕೆಡವಿದ ಅಪಖ್ಯಾತಿ ಬರಬಾರದು ಎಂಬ ಕಾರಣಕ್ಕೆ ಎಸ್.ಎಂ.ಕೃಷ್ಣರ ಮನೆಯಿಂದ ದಾಳ ಉರುಳಿಸಿದ್ದ ಬಿಜೆಪಿ ಆ ವಿಚಾರದಲ್ಲಿ ಈಗ ಮತ್ತಷ್ಟೂ ಸೆನ್ಸಿಬಲ್ ಆಗಿದೆ. ಅತ್ತ ಅಧಿಕಾರವೂ ಸಿಗಬೇಕು, ಇತ್ತ ಒಕ್ಕಲಿಗ ಮತಗಳ ಮೇಲೆ ಹಿಡಿತವೂ ಸಾಧ್ಯವಾಗಬೇಕು ಎಂಬ ಯೋಜನೆ ಹಾಕಿಕೊಂಡು, ಈ ಸಲ ಆಪರೇಷನ್ ಕಮಲಕ್ಕೆ ಹೆಚ್ಚೆಚ್ಚು ಒಕ್ಕಲಿಗ ಶಾಸಕರನ್ನೇ, ಅದರಲ್ಲೂ ಜೆಡಿಎಸ್ ಶಾಸಕರನ್ನೇ ಸೆಳೆಯುವ ಸಾಹಸಕ್ಕೆ ಅದು ಕೈಹಾಕಿದೆ. ಒಕ್ಕಲಿಗ ಶಾಸಕರೇ ಕೈಕೊಟ್ಟು ಕುಮಾರಸ್ವಾಮಿಯ ಸರ್ಕಾರ ಬೀಳಿಸಿದರೆ ಒಕ್ಕಲಿಗರು ಜಾತಿಯ ಕಾರಣಕ್ಕೆ ದೇವೇಗೌಡರತ್ತ ದೃವೀಕರಣವಾಗಲಾರರು ಎಂಬುದು ಇದರ ಹಿಂದಿರುವ ಲೆಕ್ಕಾಚಾರ. ಅಲ್ಲದೇ ಹಾಗೆ ಬರುವ ಅಷ್ಟೂ ಒಕ್ಕಲಿಗ ಶಾಸಕರ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಬಾವುಟ ಹಾರಾಡಿಸಿ, ತಳ ಗಟ್ಟಿಮಾಡಿಕೊಳ್ಳುವ ಯೋಜನೆಯೂ ಇದರಲ್ಲಿದೆ. ಈ ಕಾರಣಕ್ಕೇ ಸಿಎಂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿರುವ ಸಂದರ್ಭವನ್ನೇ ಸರಿಯಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಇದರ ಸಂಪೂರ್ಣ ಹೊಣೆಯನ್ನು ಬಿಜೆಪಿಯ ಒಕ್ಕಲಿಗ ಲೀಡರುಗಳಾದ ಸಿ.ಟಿ.ರವಿ ಮತ್ತು ಆರ್.ಅಶೋಕ್ ಹೆಗಲಿಗೆ ವಹಿಸಲಾಗಿದೆ. ಈ ಇಬ್ಬರೂ ಮೈಸೂರಿನಲ್ಲಿ ಮುಕ್ಕಾಂ ಹೂಡಿ ಗಾಳ ಹಾಕಿ ಕೂತಿದ್ದಾರೆ. ಪತ್ರಿಕೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿರುವ ಮಾಹಿತಿ ಪ್ರಕಾರ ಆಪರೇಷನ್‍ಗೆ ಒಳಗಾಗುವ ಒಕ್ಕಲಿಗ ಶಾಸಕರಿಗೆ ತಲಾ ಮೂವತ್ತು ಕೋಟಿ ಹಣ, ಉಪಚುನಾವಣೆಯಲ್ಲಿ ಟಿಕೆಟ್, ಗೆಲ್ಲಿಸಿಕೊಂಡು ಬರುವ ಭರವಸೆ ಮತ್ತು ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಪದವಿಯ ಬಲ್ಕ್ ಪ್ಯಾಕೇಜ್ ನೀಡಲಾಗುತ್ತಿದೆಯಂತೆ. ಅದರಲ್ಲು ಮಂತ್ರಿ ಪದವಿ ಬೇಡವೆಂದವರಿಗೆ ಮೊತ್ತದಲ್ಲಿ ಅಡ್ಜಸ್ಟ್‍ಮೆಂಟ್ ಮಾಡುವ ಖಾತ್ರಿಯನ್ನೂ ನೀಡಲಾಗುತ್ತಿದೆ.

ಇದರ ಬೆನ್ನಿಗೇನೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ಮತ್ತ ಉನ್ನತ ಶಿಕ್ಷಣ ಸಚಿವರೂ ಆದ ಜಿ.ಟಿ ದೇವೆಗೌಡರು ಈಗ ಮತ್ತೆ ಮೋದಿ ಮತ್ತು ಅಮಿತ್ ಶಾರನ್ನು ಹೊಗಳಲು ಶುರು ಮಾಡಿದ್ದಾರೆ. ಇದರ ಮರ್ಮವೇನೆಂದು ತಿಳಿಯಲು ಇನ್ನ ಒಂದೆರಡು ದಿನಗಳು ಸಾಕು.

ಬೇರೆಬೇರೆ ಕಾರಣಗಳಿಂದ ದೇವೇಗೌಡರ ಕುಟುಂಬ ಹಾಗೂ ಈ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿರುವ ಹತ್ತು ಮಂದಿ ಒಕ್ಕಲಿಗ ಶಾಸಕರನ್ನು ವಿಚಲಿತಗೊಳಿಸುವುದಕ್ಕೆಂದೆ `ಸ್ಟಾರ್ಟ್ ಅಪ್ ಡೋಸ್’ ಆಗಿ ಆನಂದ್‍ಸಿಂಗ್ ಹಾಗೂ ರಮೇಶ್ ಜಾರಕಿಹೊಳಿಯವರಿಂದ ರಾಜೀನಾಮೆ ಕೊಡಿಸಿದ್ದಾರೆ ಎಂಬುದು ಸುದ್ದಿ. ಆದರೆ ಇದಕ್ಕೆ ಜೆಡಿಎಸ್‍ನ ಇತರ ಶಾಸಕರು ಸೊಪ್ಪು ಹಾಕಿದಂತೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...