Homeಕರ್ನಾಟಕಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

ಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

- Advertisement -
- Advertisement -

ಮೂರು ದಿನದ ಹಿಂದಷ್ಟೇ ಮಾಧ್ಯಮದವರು ಸಮನ್ವಯ ಸಮಿತಿ ಆಧ್ಯಕ್ಷ ಸಿದ್ದರಾಮಯ್ಯನವರಿಗೆ, ‘ಸರ್, ಅತೃಪ್ತರ ಜೊತೆ ಮಾತನಾಡಿ ಮನವೊಲಿಸುತ್ತಿದ್ದಾರಾ?’ ಎಂದು ಕೇಳಿದಾಗ, ಅವರು ಹೇಳಿದ್ದ ಈ ಮಾತೊಂದೇ ಅವರಿಗೆ ಈ ಸರ್ಕಾರದ ಬಗ್ಗೆ ಮೊದಲಿನಿಂದಲೂ ಇದ್ದ ಅಸಮಾಧಾನದ ಅಂತಿಮವಾದ ಬಹಿರಂಗ ಸ್ಫೋಟದಂತಿತ್ತು: ‘ರೀ, ಎಷ್ಟೂ ಅಂತ ಮಾತನಾಡೋದು? ಎಷ್ಟು ಅಂತ ಅವರ ಮನವೊಲಿಸೋದು? ಈ ಅತೃಪ್ತರ ಜೊತೆ ಮಾತಾಡಿ, ಮಾತಾಡಿ ಸಾಕಾಗಿ ಹೋಗಿದೆ. ಇನ್ನೇನೂ ಮಾತೂ ಇಲ್ಲ, ಕತೆಯೂ ಇಲ್ಲ…’

ಬಹುಷ: ಅಷ್ಟೊತ್ತಿಗೆ ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗರು ಎನಿಸಿಕೊಂಡಿದ್ದ ಶಾಸಕರು ಅತೃಪ್ತರೊಂದಿಗೆ ‘ಸಮನ್ವಯ’ ಸಭೆ ನಡೆಸಿ ಅವರಿಗೆ ಸಾಥ್ ನೀಡಿಯಾಗಿತ್ತು. ಶನಿವಾರವಷ್ಟೇ ಅವರು ಬಹಿರಂಗವಾಗಿ ಕಾಣಿಸಿಕೊಂಡರು. ಅದು ದೊಡ್ಡ ಸುದ್ದಿಯಾಗುತ್ತಿದ್ದ ಸಮಯದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಡಿ.ಕೆ. ಶಿವಕುಮಾರ್ ಧಾವಿಸಿದರಷ್ಟೇ. ಇಂತಹ ಸಂದರ್ಭಗಳಲ್ಲಿ ಎಂದಿನಂತೆ, ‘ಏನಾಗಿಲ್ಲ ಬಿಡ್ರಿ. ಸರ್ಕಾರ ಭದ್ರವಾಗಿದೆ’ ಎಂದು ಸುಮ್ಮನೇ ಆದರೂ ಹೇಳುತ್ತಿದ್ದ ಸಿದ್ದರಾಮಯ್ಯ ಶನಿವಾರ ಆಪರೇಷನ್ನಿನ ಟ್ರೈಲರ್ ‘ಟ್ರೆಂಡಿಂಗ್’ ಆಗುತ್ತಿದ್ದ ಪೀಕ್ ಅವರ್‍ಗಳಲ್ಲೂ ಮಾಧ್ಯಮಗಳ ಸಂಪರ್ಕಕಕ್ಕೆ ಸಿಗಲೇ ಇಲ್ಲ. ಅವರು ಟ್ರೈಲರ್ ಮುಗಿದು, ಬುಧವಾರದ ವೇಳೆಗೆ ಪಿಚ್ಚರ್ ರಿಲೀಸ್ ಆಗುವುದು ನಿಕ್ಕಿ ಆದ ಮೇಲಷ್ಟೇ ಕಾಣಿಸಿಕೊಂಡು, ‘ರೀ ಸ್ಪೀಕರ್ ರಾಜೀನಾಮೆ ಅಂಗೀಕರಿಸಿದ್ದಾರೇನ್ರಿ?’ ಎಂದು ಯಾವುದೇ ಮಹತ್ತರ ಬೆಳವಣಿಗೆ ನಡೆದೇ ಇಲ್ಲ ಎಂಬಂತೆ ಸಾಗಿಬಿಟ್ಟರು. ಟ್ರೈಲರ್‍ನಲ್ಲಿ ಅವರ ಆಪ್ತರ ಸೀನ್‍ಗಳೇ ಹೈಲಾಟಾಗಿದ್ದರೂ ಅವರಿಗೆ ಅದು ಆಶ್ಚರ್ಯದ ವಿಷಯವೇ ಆಗಿರಲಿಲ್ಲ.

ಕಳೆದ ವರ್ಷ ವಿಧಾನಸಭಾ ಚುನಾವಣೆ ಫಲಿತಾಂಶ ಕಣ್ಮುಂದೆ ಬಂದಾಗಲೇ ವಿರೋಧ ಪಕ್ಷದಲ್ಲಿ ಕೂಡುವುದೇ ಅವರ ನಿರ್ಧಾರವಾಗಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಕೋಮುವಾದಿ ಸರ್ಕಾರ ರಚನೆಗೆ ಅವಕಾಶ ನೀಡಬಾರದೆಂದು ತರಾತುರಿಯಲ್ಲಿ ಜೆಡಿಎಸ್‍ಗೆ ಬೇಷರತ್ ಬೆಂಬಲ ಕೊಡಲು ನಿರ್ಧರಿಸಿದಾಗ ಸಿದ್ದರಾಮಯ್ಯರಿಗೆ ಬೇರೆ ದಾರಿಯೇ ಇರಲಿಲ್ಲ. ಆರಂಭದಿಂದಲೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಹುಪಾಲು ನಿರ್ಧಾರಗಳ ಬಗ್ಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದರು. ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್‍ನಲ್ಲಿ ಸಿದ್ದರಾಮಯ್ಯ ಸರ್ಕಾರದ ಕೆಲವು ಯೋಜನೆಗಳಲ್ಲಿ ಮಾರ್ಪಾಡು ಮಾಡಿದಾಗ ಸಿದ್ದರಾಮಯ್ಯ ಅದನ್ನು ಬಲವಾಗಿ ವಿರೋಧಿಸಿದ್ದರು.

ಅನ್ನಭಾಗ್ಯದಲ್ಲಿ ಪ್ರತಿ ತಿಂಗಳು ನೀಡುವ ಅಕ್ಕಿ ಪ್ರಮಾಣವನ್ನು 7 ರಿಂದ 5 ಕೆ.ಜಿ.ಗೆ ಇಳಿಸಿದ್ದು ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರಿಗೆ ಅಪಾರ ಸಿಟ್ಟು ತರಿಸಿತ್ತು. ಕುಮಾರಸ್ವಾಮಿ ತಮ್ಮ ಹಿಂದಿನ ಸರ್ಕಾರದ ಜನಪರ ಯೋಜನೆಗಳಿಗೆ ಧಕ್ಕೆ ಮಾಡುವ ಮೂಲಕ ಕಾಂಗ್ರೆಸ್‍ಗೆ ಹಿನ್ನಡೆ ಮಾಡಲು ಹೊರಟಿದ್ದಾರೆ ಎಂದು ವಿರೋಧ ಮಾಡಿದ್ದ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಈ ವಿಷಯ ಎತ್ತಿ ತಮ್ಮ ಸರ್ಕಾರದ ಯೋಜನೆಗಳು ಮೊದಲಿನಂತೆ ಸರಾಗವಾಗಿ ಜಾರಿಯಾಗುವಂತೆ ನೋಡಿಕೊಂಡರು. ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಇದೂ ಅಗತ್ಯವೂ ಆಗಿತ್ತು. ಆಗಿಂದಲೇ ಕುಮಾರಸ್ವಾಮಿ ಕಾಂಗ್ರೆಸ್ ಅನ್ನು ಹಿನ್ನಡೆಗೆ ಸರಿಸಿ ಜೆಡಿಎಸ್ ಪ್ರಾಬಲ್ಯ ಬೆಳೆಯುವಂತೆ ಮಾಡಲು ಹೊರಟಿದ್ದಾರೆ ಎಂಬ ಅಸಮಾಧಾನ ಹೊಂದಿದ್ದ ಸಿದ್ದರಾಮಯ್ಯನವರಿಗೆ, ಈ ಸರ್ಕಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಎಂಬುದು ಖಾತ್ರಿಯಾಗಿತ್ತು.

ಅದು ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಾಣಿಸಿಕೊಂಡಿತು. ಕಾಂಂಗ್ರೆಸ್ ಹೀನಾಯವಾಗಿ ಸೋತು ಕೇವಲ ಒಂದು ಸ್ಥಾನ ಗಳಿಸಿದ ಮೇಲಂತೂ ಜೆಡಿಎಸ್ ಸಹವಾಸ ತೊರೆದು ವಿರೋಧ ಪಕ್ಷದಲ್ಲಿ ಕೂಡುವುದೇ ಕಾಂಗ್ರೆಸ್ ಮತ್ತು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು ಎಂದು ಅವರು ನಿರ್ಧರಿಸಿಯಾಗಿತ್ತು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್‍ಗಾಂಧಿಯವರಿಗೂ ಇದನ್ನು ಮನವರಿಕೆ ಮಾಡಿದ್ದರು. ಆದರೆ ಮತ್ತೆ ಮಿತ್ರಪಕ್ಷಗಳ ಸ್ನೇಹ ಉಳಿಸಿಕೊಳ್ಳುವ ದೃಷ್ಟಿಯಿಂದ ರಾಹುಲ್ ಗಾಂಧಿ ಸರ್ಕಾರಕ್ಕೆ ತೊದರೆಯಾಗದಂತೆ ಸೂಚಿಸಿದ್ದನ್ನು ಮನಸ್ಸಿಲ್ಲದೇ ಸಿದ್ದರಾಮಯ್ಯ ಒಪ್ಪಿಕೊಂಡು ಬಂದಿದ್ದರು.

ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಆಪರೇಷನ್ ಕಮಲವನ್ನು ತೀವ್ರಗೊಳಿಸಿ ಸರ್ಕಾರವನ್ನು ಕೆಡವಲು ನಿರಂತರ ಯತ್ನ ನಡೆಸಿದ್ದು ಅವರಿಗೆ ಸಮಾಧಾನ ತಂದಿತ್ತೇನೋ? ಮೊದಲಿಂದಲೂ ಸಚಿವ ಪದವಿಗೆ ಯತ್ನಿಸಿ ನಿರಾಶರಾಗಿದ್ದ ಅವರ ಹಲವು ಪರಮಾಪ್ತ ಶಾಸಕರು ಬಿಜೆಪಿ ಸರ್ಕಾರದಲ್ಲಾದರೂ ಅಧಿಕಾರ ಪಡೆಯಲಿ ಎಂದು ಸಿದ್ದರಾಮಯ್ಯ ಯೋಚಿಸಿರಬಹುದು. ‘ಹೋಗಿ ಬಿಡಿ ಅತ್ಲಾಗೆ. ಮುಂದೆ ಎಲ್ಲ ನೋಡಿದರಾಯಿತು’ ಎಂದು ಅವರು ಆಶೀರ್ವಾದ ಮಾಡಿದ ಪರಿಣಾಮವಾಗಿಯೇ ಅವರ ನಿಷ್ಠ ಶಾಸಕರು, ಅವರ ಮಾತಿಗೆ ಗೌರವ ಕೊಡುತ್ತಿದ್ದ ಇನ್ನಷ್ಟು ಶಾಸಕರು ಈಗ ಬಿಜೆಪಿ ಪಾಳೆಯದತ್ತ ಮುಖ ಮಾಡಿದ್ದಾರೆ.

ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ, ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಂ, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಮತ್ತು ಸಿದ್ದರಾಮಯ್ಯನವರೇ ನಮ್ಮ ನಾಯಕರು ಎನ್ನುತ್ತಿದ್ದ ಚಿಕ್ಕೋಡಿ ಶಾಸಕ ಪ್ರಕಾಶ ಹುಕ್ಕೇರಿ, ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳ್ಕರ್ ಈಗ ಕಾಂಗ್ರೆಸ್ ತೊರೆಯುತ್ತಿರುವುದೇನೂ ಸಿದ್ದರಾಮಯ್ಯರಿಗೆ ಬೇಸರ ತಂದಿರಲಾರದು. ಈ ಪಟ್ಟಿ ನಾಳೆ ಬೆಳೆಯಲೂಬಹುದು.

ನಾಳೆ ಅವರ ಅತಿ ಪರಮಾಪ್ತ, ಹೊಸಕೋಟೆ ಶಾಸಕ, ಸಚಿವ ಎಂ.ಟಿ.ಬಿ. ನಾಗರಾಜ್ ಕೂಡ ರಾಜಿನಾಮೆ ನೀಡಲಿದ್ದಾರಂತೆ. ಇದೆಲ್ಲಕ್ಕೂ ಸಿದ್ದರಾಮಯ್ಯರ ಸಮ್ಮತಿ ಇದ್ದೇ ಇದೆ. ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಈ ಸರ್ಕಾರದ ಕುರಿತು ಮನದಾಳದಿಂದ ಪ್ರೀತಿಯ ಮಾತನ್ನೇ ಆಡಿಲ್ಲ. ಲೋಕಸಭೆ ಸೀಟು ಮೈತ್ರಿಯ ಸಂದರ್ಭದಲ್ಲಿ ಜೆಡಿಎಸ್ ಮಾಡಿದ ಎಡವಟ್ಟಿನಿಂದ ಕಾಂಗ್ರೆಸ್‍ಗೆ ಮತ್ತು ತಮಗೆ ರಾಜಕೀಯವಾಗಿ ಆದ ಹಿನ್ನಡೆ ಇನ್ನಷ್ಟು ಮುಂದುವರಿಯಬಾರದು ಎಂದು ನಿರ್ಧರಿಸಿರುವ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಕುಳಿತು ರಚನಾತ್ಮಕವಾಗಿ ಜನಪರ ಹೋರಾಟ ಮಾಡುತ್ತ ಮತ್ತೆ ಕಾಂಗ್ರೆಸ್‍ ಗೆ ನವಶಕ್ತಿ ತುಂಬುವ ಯೋಚನೆಯಲ್ಲಂತೂ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...