Homeಕರ್ನಾಟಕಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

ಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

- Advertisement -
- Advertisement -

ಮೂರು ದಿನದ ಹಿಂದಷ್ಟೇ ಮಾಧ್ಯಮದವರು ಸಮನ್ವಯ ಸಮಿತಿ ಆಧ್ಯಕ್ಷ ಸಿದ್ದರಾಮಯ್ಯನವರಿಗೆ, ‘ಸರ್, ಅತೃಪ್ತರ ಜೊತೆ ಮಾತನಾಡಿ ಮನವೊಲಿಸುತ್ತಿದ್ದಾರಾ?’ ಎಂದು ಕೇಳಿದಾಗ, ಅವರು ಹೇಳಿದ್ದ ಈ ಮಾತೊಂದೇ ಅವರಿಗೆ ಈ ಸರ್ಕಾರದ ಬಗ್ಗೆ ಮೊದಲಿನಿಂದಲೂ ಇದ್ದ ಅಸಮಾಧಾನದ ಅಂತಿಮವಾದ ಬಹಿರಂಗ ಸ್ಫೋಟದಂತಿತ್ತು: ‘ರೀ, ಎಷ್ಟೂ ಅಂತ ಮಾತನಾಡೋದು? ಎಷ್ಟು ಅಂತ ಅವರ ಮನವೊಲಿಸೋದು? ಈ ಅತೃಪ್ತರ ಜೊತೆ ಮಾತಾಡಿ, ಮಾತಾಡಿ ಸಾಕಾಗಿ ಹೋಗಿದೆ. ಇನ್ನೇನೂ ಮಾತೂ ಇಲ್ಲ, ಕತೆಯೂ ಇಲ್ಲ…’

ಬಹುಷ: ಅಷ್ಟೊತ್ತಿಗೆ ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗರು ಎನಿಸಿಕೊಂಡಿದ್ದ ಶಾಸಕರು ಅತೃಪ್ತರೊಂದಿಗೆ ‘ಸಮನ್ವಯ’ ಸಭೆ ನಡೆಸಿ ಅವರಿಗೆ ಸಾಥ್ ನೀಡಿಯಾಗಿತ್ತು. ಶನಿವಾರವಷ್ಟೇ ಅವರು ಬಹಿರಂಗವಾಗಿ ಕಾಣಿಸಿಕೊಂಡರು. ಅದು ದೊಡ್ಡ ಸುದ್ದಿಯಾಗುತ್ತಿದ್ದ ಸಮಯದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಡಿ.ಕೆ. ಶಿವಕುಮಾರ್ ಧಾವಿಸಿದರಷ್ಟೇ. ಇಂತಹ ಸಂದರ್ಭಗಳಲ್ಲಿ ಎಂದಿನಂತೆ, ‘ಏನಾಗಿಲ್ಲ ಬಿಡ್ರಿ. ಸರ್ಕಾರ ಭದ್ರವಾಗಿದೆ’ ಎಂದು ಸುಮ್ಮನೇ ಆದರೂ ಹೇಳುತ್ತಿದ್ದ ಸಿದ್ದರಾಮಯ್ಯ ಶನಿವಾರ ಆಪರೇಷನ್ನಿನ ಟ್ರೈಲರ್ ‘ಟ್ರೆಂಡಿಂಗ್’ ಆಗುತ್ತಿದ್ದ ಪೀಕ್ ಅವರ್‍ಗಳಲ್ಲೂ ಮಾಧ್ಯಮಗಳ ಸಂಪರ್ಕಕಕ್ಕೆ ಸಿಗಲೇ ಇಲ್ಲ. ಅವರು ಟ್ರೈಲರ್ ಮುಗಿದು, ಬುಧವಾರದ ವೇಳೆಗೆ ಪಿಚ್ಚರ್ ರಿಲೀಸ್ ಆಗುವುದು ನಿಕ್ಕಿ ಆದ ಮೇಲಷ್ಟೇ ಕಾಣಿಸಿಕೊಂಡು, ‘ರೀ ಸ್ಪೀಕರ್ ರಾಜೀನಾಮೆ ಅಂಗೀಕರಿಸಿದ್ದಾರೇನ್ರಿ?’ ಎಂದು ಯಾವುದೇ ಮಹತ್ತರ ಬೆಳವಣಿಗೆ ನಡೆದೇ ಇಲ್ಲ ಎಂಬಂತೆ ಸಾಗಿಬಿಟ್ಟರು. ಟ್ರೈಲರ್‍ನಲ್ಲಿ ಅವರ ಆಪ್ತರ ಸೀನ್‍ಗಳೇ ಹೈಲಾಟಾಗಿದ್ದರೂ ಅವರಿಗೆ ಅದು ಆಶ್ಚರ್ಯದ ವಿಷಯವೇ ಆಗಿರಲಿಲ್ಲ.

ಕಳೆದ ವರ್ಷ ವಿಧಾನಸಭಾ ಚುನಾವಣೆ ಫಲಿತಾಂಶ ಕಣ್ಮುಂದೆ ಬಂದಾಗಲೇ ವಿರೋಧ ಪಕ್ಷದಲ್ಲಿ ಕೂಡುವುದೇ ಅವರ ನಿರ್ಧಾರವಾಗಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಕೋಮುವಾದಿ ಸರ್ಕಾರ ರಚನೆಗೆ ಅವಕಾಶ ನೀಡಬಾರದೆಂದು ತರಾತುರಿಯಲ್ಲಿ ಜೆಡಿಎಸ್‍ಗೆ ಬೇಷರತ್ ಬೆಂಬಲ ಕೊಡಲು ನಿರ್ಧರಿಸಿದಾಗ ಸಿದ್ದರಾಮಯ್ಯರಿಗೆ ಬೇರೆ ದಾರಿಯೇ ಇರಲಿಲ್ಲ. ಆರಂಭದಿಂದಲೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಹುಪಾಲು ನಿರ್ಧಾರಗಳ ಬಗ್ಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದರು. ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್‍ನಲ್ಲಿ ಸಿದ್ದರಾಮಯ್ಯ ಸರ್ಕಾರದ ಕೆಲವು ಯೋಜನೆಗಳಲ್ಲಿ ಮಾರ್ಪಾಡು ಮಾಡಿದಾಗ ಸಿದ್ದರಾಮಯ್ಯ ಅದನ್ನು ಬಲವಾಗಿ ವಿರೋಧಿಸಿದ್ದರು.

ಅನ್ನಭಾಗ್ಯದಲ್ಲಿ ಪ್ರತಿ ತಿಂಗಳು ನೀಡುವ ಅಕ್ಕಿ ಪ್ರಮಾಣವನ್ನು 7 ರಿಂದ 5 ಕೆ.ಜಿ.ಗೆ ಇಳಿಸಿದ್ದು ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರಿಗೆ ಅಪಾರ ಸಿಟ್ಟು ತರಿಸಿತ್ತು. ಕುಮಾರಸ್ವಾಮಿ ತಮ್ಮ ಹಿಂದಿನ ಸರ್ಕಾರದ ಜನಪರ ಯೋಜನೆಗಳಿಗೆ ಧಕ್ಕೆ ಮಾಡುವ ಮೂಲಕ ಕಾಂಗ್ರೆಸ್‍ಗೆ ಹಿನ್ನಡೆ ಮಾಡಲು ಹೊರಟಿದ್ದಾರೆ ಎಂದು ವಿರೋಧ ಮಾಡಿದ್ದ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಈ ವಿಷಯ ಎತ್ತಿ ತಮ್ಮ ಸರ್ಕಾರದ ಯೋಜನೆಗಳು ಮೊದಲಿನಂತೆ ಸರಾಗವಾಗಿ ಜಾರಿಯಾಗುವಂತೆ ನೋಡಿಕೊಂಡರು. ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಇದೂ ಅಗತ್ಯವೂ ಆಗಿತ್ತು. ಆಗಿಂದಲೇ ಕುಮಾರಸ್ವಾಮಿ ಕಾಂಗ್ರೆಸ್ ಅನ್ನು ಹಿನ್ನಡೆಗೆ ಸರಿಸಿ ಜೆಡಿಎಸ್ ಪ್ರಾಬಲ್ಯ ಬೆಳೆಯುವಂತೆ ಮಾಡಲು ಹೊರಟಿದ್ದಾರೆ ಎಂಬ ಅಸಮಾಧಾನ ಹೊಂದಿದ್ದ ಸಿದ್ದರಾಮಯ್ಯನವರಿಗೆ, ಈ ಸರ್ಕಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಎಂಬುದು ಖಾತ್ರಿಯಾಗಿತ್ತು.

ಅದು ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಾಣಿಸಿಕೊಂಡಿತು. ಕಾಂಂಗ್ರೆಸ್ ಹೀನಾಯವಾಗಿ ಸೋತು ಕೇವಲ ಒಂದು ಸ್ಥಾನ ಗಳಿಸಿದ ಮೇಲಂತೂ ಜೆಡಿಎಸ್ ಸಹವಾಸ ತೊರೆದು ವಿರೋಧ ಪಕ್ಷದಲ್ಲಿ ಕೂಡುವುದೇ ಕಾಂಗ್ರೆಸ್ ಮತ್ತು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು ಎಂದು ಅವರು ನಿರ್ಧರಿಸಿಯಾಗಿತ್ತು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್‍ಗಾಂಧಿಯವರಿಗೂ ಇದನ್ನು ಮನವರಿಕೆ ಮಾಡಿದ್ದರು. ಆದರೆ ಮತ್ತೆ ಮಿತ್ರಪಕ್ಷಗಳ ಸ್ನೇಹ ಉಳಿಸಿಕೊಳ್ಳುವ ದೃಷ್ಟಿಯಿಂದ ರಾಹುಲ್ ಗಾಂಧಿ ಸರ್ಕಾರಕ್ಕೆ ತೊದರೆಯಾಗದಂತೆ ಸೂಚಿಸಿದ್ದನ್ನು ಮನಸ್ಸಿಲ್ಲದೇ ಸಿದ್ದರಾಮಯ್ಯ ಒಪ್ಪಿಕೊಂಡು ಬಂದಿದ್ದರು.

ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಆಪರೇಷನ್ ಕಮಲವನ್ನು ತೀವ್ರಗೊಳಿಸಿ ಸರ್ಕಾರವನ್ನು ಕೆಡವಲು ನಿರಂತರ ಯತ್ನ ನಡೆಸಿದ್ದು ಅವರಿಗೆ ಸಮಾಧಾನ ತಂದಿತ್ತೇನೋ? ಮೊದಲಿಂದಲೂ ಸಚಿವ ಪದವಿಗೆ ಯತ್ನಿಸಿ ನಿರಾಶರಾಗಿದ್ದ ಅವರ ಹಲವು ಪರಮಾಪ್ತ ಶಾಸಕರು ಬಿಜೆಪಿ ಸರ್ಕಾರದಲ್ಲಾದರೂ ಅಧಿಕಾರ ಪಡೆಯಲಿ ಎಂದು ಸಿದ್ದರಾಮಯ್ಯ ಯೋಚಿಸಿರಬಹುದು. ‘ಹೋಗಿ ಬಿಡಿ ಅತ್ಲಾಗೆ. ಮುಂದೆ ಎಲ್ಲ ನೋಡಿದರಾಯಿತು’ ಎಂದು ಅವರು ಆಶೀರ್ವಾದ ಮಾಡಿದ ಪರಿಣಾಮವಾಗಿಯೇ ಅವರ ನಿಷ್ಠ ಶಾಸಕರು, ಅವರ ಮಾತಿಗೆ ಗೌರವ ಕೊಡುತ್ತಿದ್ದ ಇನ್ನಷ್ಟು ಶಾಸಕರು ಈಗ ಬಿಜೆಪಿ ಪಾಳೆಯದತ್ತ ಮುಖ ಮಾಡಿದ್ದಾರೆ.

ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ, ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಂ, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಮತ್ತು ಸಿದ್ದರಾಮಯ್ಯನವರೇ ನಮ್ಮ ನಾಯಕರು ಎನ್ನುತ್ತಿದ್ದ ಚಿಕ್ಕೋಡಿ ಶಾಸಕ ಪ್ರಕಾಶ ಹುಕ್ಕೇರಿ, ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳ್ಕರ್ ಈಗ ಕಾಂಗ್ರೆಸ್ ತೊರೆಯುತ್ತಿರುವುದೇನೂ ಸಿದ್ದರಾಮಯ್ಯರಿಗೆ ಬೇಸರ ತಂದಿರಲಾರದು. ಈ ಪಟ್ಟಿ ನಾಳೆ ಬೆಳೆಯಲೂಬಹುದು.

ನಾಳೆ ಅವರ ಅತಿ ಪರಮಾಪ್ತ, ಹೊಸಕೋಟೆ ಶಾಸಕ, ಸಚಿವ ಎಂ.ಟಿ.ಬಿ. ನಾಗರಾಜ್ ಕೂಡ ರಾಜಿನಾಮೆ ನೀಡಲಿದ್ದಾರಂತೆ. ಇದೆಲ್ಲಕ್ಕೂ ಸಿದ್ದರಾಮಯ್ಯರ ಸಮ್ಮತಿ ಇದ್ದೇ ಇದೆ. ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಈ ಸರ್ಕಾರದ ಕುರಿತು ಮನದಾಳದಿಂದ ಪ್ರೀತಿಯ ಮಾತನ್ನೇ ಆಡಿಲ್ಲ. ಲೋಕಸಭೆ ಸೀಟು ಮೈತ್ರಿಯ ಸಂದರ್ಭದಲ್ಲಿ ಜೆಡಿಎಸ್ ಮಾಡಿದ ಎಡವಟ್ಟಿನಿಂದ ಕಾಂಗ್ರೆಸ್‍ಗೆ ಮತ್ತು ತಮಗೆ ರಾಜಕೀಯವಾಗಿ ಆದ ಹಿನ್ನಡೆ ಇನ್ನಷ್ಟು ಮುಂದುವರಿಯಬಾರದು ಎಂದು ನಿರ್ಧರಿಸಿರುವ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಕುಳಿತು ರಚನಾತ್ಮಕವಾಗಿ ಜನಪರ ಹೋರಾಟ ಮಾಡುತ್ತ ಮತ್ತೆ ಕಾಂಗ್ರೆಸ್‍ ಗೆ ನವಶಕ್ತಿ ತುಂಬುವ ಯೋಚನೆಯಲ್ಲಂತೂ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...