Homeಕರ್ನಾಟಕಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

ಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

- Advertisement -
- Advertisement -

ಮೂರು ದಿನದ ಹಿಂದಷ್ಟೇ ಮಾಧ್ಯಮದವರು ಸಮನ್ವಯ ಸಮಿತಿ ಆಧ್ಯಕ್ಷ ಸಿದ್ದರಾಮಯ್ಯನವರಿಗೆ, ‘ಸರ್, ಅತೃಪ್ತರ ಜೊತೆ ಮಾತನಾಡಿ ಮನವೊಲಿಸುತ್ತಿದ್ದಾರಾ?’ ಎಂದು ಕೇಳಿದಾಗ, ಅವರು ಹೇಳಿದ್ದ ಈ ಮಾತೊಂದೇ ಅವರಿಗೆ ಈ ಸರ್ಕಾರದ ಬಗ್ಗೆ ಮೊದಲಿನಿಂದಲೂ ಇದ್ದ ಅಸಮಾಧಾನದ ಅಂತಿಮವಾದ ಬಹಿರಂಗ ಸ್ಫೋಟದಂತಿತ್ತು: ‘ರೀ, ಎಷ್ಟೂ ಅಂತ ಮಾತನಾಡೋದು? ಎಷ್ಟು ಅಂತ ಅವರ ಮನವೊಲಿಸೋದು? ಈ ಅತೃಪ್ತರ ಜೊತೆ ಮಾತಾಡಿ, ಮಾತಾಡಿ ಸಾಕಾಗಿ ಹೋಗಿದೆ. ಇನ್ನೇನೂ ಮಾತೂ ಇಲ್ಲ, ಕತೆಯೂ ಇಲ್ಲ…’

ಬಹುಷ: ಅಷ್ಟೊತ್ತಿಗೆ ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗರು ಎನಿಸಿಕೊಂಡಿದ್ದ ಶಾಸಕರು ಅತೃಪ್ತರೊಂದಿಗೆ ‘ಸಮನ್ವಯ’ ಸಭೆ ನಡೆಸಿ ಅವರಿಗೆ ಸಾಥ್ ನೀಡಿಯಾಗಿತ್ತು. ಶನಿವಾರವಷ್ಟೇ ಅವರು ಬಹಿರಂಗವಾಗಿ ಕಾಣಿಸಿಕೊಂಡರು. ಅದು ದೊಡ್ಡ ಸುದ್ದಿಯಾಗುತ್ತಿದ್ದ ಸಮಯದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಡಿ.ಕೆ. ಶಿವಕುಮಾರ್ ಧಾವಿಸಿದರಷ್ಟೇ. ಇಂತಹ ಸಂದರ್ಭಗಳಲ್ಲಿ ಎಂದಿನಂತೆ, ‘ಏನಾಗಿಲ್ಲ ಬಿಡ್ರಿ. ಸರ್ಕಾರ ಭದ್ರವಾಗಿದೆ’ ಎಂದು ಸುಮ್ಮನೇ ಆದರೂ ಹೇಳುತ್ತಿದ್ದ ಸಿದ್ದರಾಮಯ್ಯ ಶನಿವಾರ ಆಪರೇಷನ್ನಿನ ಟ್ರೈಲರ್ ‘ಟ್ರೆಂಡಿಂಗ್’ ಆಗುತ್ತಿದ್ದ ಪೀಕ್ ಅವರ್‍ಗಳಲ್ಲೂ ಮಾಧ್ಯಮಗಳ ಸಂಪರ್ಕಕಕ್ಕೆ ಸಿಗಲೇ ಇಲ್ಲ. ಅವರು ಟ್ರೈಲರ್ ಮುಗಿದು, ಬುಧವಾರದ ವೇಳೆಗೆ ಪಿಚ್ಚರ್ ರಿಲೀಸ್ ಆಗುವುದು ನಿಕ್ಕಿ ಆದ ಮೇಲಷ್ಟೇ ಕಾಣಿಸಿಕೊಂಡು, ‘ರೀ ಸ್ಪೀಕರ್ ರಾಜೀನಾಮೆ ಅಂಗೀಕರಿಸಿದ್ದಾರೇನ್ರಿ?’ ಎಂದು ಯಾವುದೇ ಮಹತ್ತರ ಬೆಳವಣಿಗೆ ನಡೆದೇ ಇಲ್ಲ ಎಂಬಂತೆ ಸಾಗಿಬಿಟ್ಟರು. ಟ್ರೈಲರ್‍ನಲ್ಲಿ ಅವರ ಆಪ್ತರ ಸೀನ್‍ಗಳೇ ಹೈಲಾಟಾಗಿದ್ದರೂ ಅವರಿಗೆ ಅದು ಆಶ್ಚರ್ಯದ ವಿಷಯವೇ ಆಗಿರಲಿಲ್ಲ.

ಕಳೆದ ವರ್ಷ ವಿಧಾನಸಭಾ ಚುನಾವಣೆ ಫಲಿತಾಂಶ ಕಣ್ಮುಂದೆ ಬಂದಾಗಲೇ ವಿರೋಧ ಪಕ್ಷದಲ್ಲಿ ಕೂಡುವುದೇ ಅವರ ನಿರ್ಧಾರವಾಗಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಕೋಮುವಾದಿ ಸರ್ಕಾರ ರಚನೆಗೆ ಅವಕಾಶ ನೀಡಬಾರದೆಂದು ತರಾತುರಿಯಲ್ಲಿ ಜೆಡಿಎಸ್‍ಗೆ ಬೇಷರತ್ ಬೆಂಬಲ ಕೊಡಲು ನಿರ್ಧರಿಸಿದಾಗ ಸಿದ್ದರಾಮಯ್ಯರಿಗೆ ಬೇರೆ ದಾರಿಯೇ ಇರಲಿಲ್ಲ. ಆರಂಭದಿಂದಲೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಹುಪಾಲು ನಿರ್ಧಾರಗಳ ಬಗ್ಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದರು. ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್‍ನಲ್ಲಿ ಸಿದ್ದರಾಮಯ್ಯ ಸರ್ಕಾರದ ಕೆಲವು ಯೋಜನೆಗಳಲ್ಲಿ ಮಾರ್ಪಾಡು ಮಾಡಿದಾಗ ಸಿದ್ದರಾಮಯ್ಯ ಅದನ್ನು ಬಲವಾಗಿ ವಿರೋಧಿಸಿದ್ದರು.

ಅನ್ನಭಾಗ್ಯದಲ್ಲಿ ಪ್ರತಿ ತಿಂಗಳು ನೀಡುವ ಅಕ್ಕಿ ಪ್ರಮಾಣವನ್ನು 7 ರಿಂದ 5 ಕೆ.ಜಿ.ಗೆ ಇಳಿಸಿದ್ದು ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರಿಗೆ ಅಪಾರ ಸಿಟ್ಟು ತರಿಸಿತ್ತು. ಕುಮಾರಸ್ವಾಮಿ ತಮ್ಮ ಹಿಂದಿನ ಸರ್ಕಾರದ ಜನಪರ ಯೋಜನೆಗಳಿಗೆ ಧಕ್ಕೆ ಮಾಡುವ ಮೂಲಕ ಕಾಂಗ್ರೆಸ್‍ಗೆ ಹಿನ್ನಡೆ ಮಾಡಲು ಹೊರಟಿದ್ದಾರೆ ಎಂದು ವಿರೋಧ ಮಾಡಿದ್ದ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಈ ವಿಷಯ ಎತ್ತಿ ತಮ್ಮ ಸರ್ಕಾರದ ಯೋಜನೆಗಳು ಮೊದಲಿನಂತೆ ಸರಾಗವಾಗಿ ಜಾರಿಯಾಗುವಂತೆ ನೋಡಿಕೊಂಡರು. ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಇದೂ ಅಗತ್ಯವೂ ಆಗಿತ್ತು. ಆಗಿಂದಲೇ ಕುಮಾರಸ್ವಾಮಿ ಕಾಂಗ್ರೆಸ್ ಅನ್ನು ಹಿನ್ನಡೆಗೆ ಸರಿಸಿ ಜೆಡಿಎಸ್ ಪ್ರಾಬಲ್ಯ ಬೆಳೆಯುವಂತೆ ಮಾಡಲು ಹೊರಟಿದ್ದಾರೆ ಎಂಬ ಅಸಮಾಧಾನ ಹೊಂದಿದ್ದ ಸಿದ್ದರಾಮಯ್ಯನವರಿಗೆ, ಈ ಸರ್ಕಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಎಂಬುದು ಖಾತ್ರಿಯಾಗಿತ್ತು.

ಅದು ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಾಣಿಸಿಕೊಂಡಿತು. ಕಾಂಂಗ್ರೆಸ್ ಹೀನಾಯವಾಗಿ ಸೋತು ಕೇವಲ ಒಂದು ಸ್ಥಾನ ಗಳಿಸಿದ ಮೇಲಂತೂ ಜೆಡಿಎಸ್ ಸಹವಾಸ ತೊರೆದು ವಿರೋಧ ಪಕ್ಷದಲ್ಲಿ ಕೂಡುವುದೇ ಕಾಂಗ್ರೆಸ್ ಮತ್ತು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು ಎಂದು ಅವರು ನಿರ್ಧರಿಸಿಯಾಗಿತ್ತು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್‍ಗಾಂಧಿಯವರಿಗೂ ಇದನ್ನು ಮನವರಿಕೆ ಮಾಡಿದ್ದರು. ಆದರೆ ಮತ್ತೆ ಮಿತ್ರಪಕ್ಷಗಳ ಸ್ನೇಹ ಉಳಿಸಿಕೊಳ್ಳುವ ದೃಷ್ಟಿಯಿಂದ ರಾಹುಲ್ ಗಾಂಧಿ ಸರ್ಕಾರಕ್ಕೆ ತೊದರೆಯಾಗದಂತೆ ಸೂಚಿಸಿದ್ದನ್ನು ಮನಸ್ಸಿಲ್ಲದೇ ಸಿದ್ದರಾಮಯ್ಯ ಒಪ್ಪಿಕೊಂಡು ಬಂದಿದ್ದರು.

ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಆಪರೇಷನ್ ಕಮಲವನ್ನು ತೀವ್ರಗೊಳಿಸಿ ಸರ್ಕಾರವನ್ನು ಕೆಡವಲು ನಿರಂತರ ಯತ್ನ ನಡೆಸಿದ್ದು ಅವರಿಗೆ ಸಮಾಧಾನ ತಂದಿತ್ತೇನೋ? ಮೊದಲಿಂದಲೂ ಸಚಿವ ಪದವಿಗೆ ಯತ್ನಿಸಿ ನಿರಾಶರಾಗಿದ್ದ ಅವರ ಹಲವು ಪರಮಾಪ್ತ ಶಾಸಕರು ಬಿಜೆಪಿ ಸರ್ಕಾರದಲ್ಲಾದರೂ ಅಧಿಕಾರ ಪಡೆಯಲಿ ಎಂದು ಸಿದ್ದರಾಮಯ್ಯ ಯೋಚಿಸಿರಬಹುದು. ‘ಹೋಗಿ ಬಿಡಿ ಅತ್ಲಾಗೆ. ಮುಂದೆ ಎಲ್ಲ ನೋಡಿದರಾಯಿತು’ ಎಂದು ಅವರು ಆಶೀರ್ವಾದ ಮಾಡಿದ ಪರಿಣಾಮವಾಗಿಯೇ ಅವರ ನಿಷ್ಠ ಶಾಸಕರು, ಅವರ ಮಾತಿಗೆ ಗೌರವ ಕೊಡುತ್ತಿದ್ದ ಇನ್ನಷ್ಟು ಶಾಸಕರು ಈಗ ಬಿಜೆಪಿ ಪಾಳೆಯದತ್ತ ಮುಖ ಮಾಡಿದ್ದಾರೆ.

ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ, ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಂ, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಮತ್ತು ಸಿದ್ದರಾಮಯ್ಯನವರೇ ನಮ್ಮ ನಾಯಕರು ಎನ್ನುತ್ತಿದ್ದ ಚಿಕ್ಕೋಡಿ ಶಾಸಕ ಪ್ರಕಾಶ ಹುಕ್ಕೇರಿ, ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳ್ಕರ್ ಈಗ ಕಾಂಗ್ರೆಸ್ ತೊರೆಯುತ್ತಿರುವುದೇನೂ ಸಿದ್ದರಾಮಯ್ಯರಿಗೆ ಬೇಸರ ತಂದಿರಲಾರದು. ಈ ಪಟ್ಟಿ ನಾಳೆ ಬೆಳೆಯಲೂಬಹುದು.

ನಾಳೆ ಅವರ ಅತಿ ಪರಮಾಪ್ತ, ಹೊಸಕೋಟೆ ಶಾಸಕ, ಸಚಿವ ಎಂ.ಟಿ.ಬಿ. ನಾಗರಾಜ್ ಕೂಡ ರಾಜಿನಾಮೆ ನೀಡಲಿದ್ದಾರಂತೆ. ಇದೆಲ್ಲಕ್ಕೂ ಸಿದ್ದರಾಮಯ್ಯರ ಸಮ್ಮತಿ ಇದ್ದೇ ಇದೆ. ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಈ ಸರ್ಕಾರದ ಕುರಿತು ಮನದಾಳದಿಂದ ಪ್ರೀತಿಯ ಮಾತನ್ನೇ ಆಡಿಲ್ಲ. ಲೋಕಸಭೆ ಸೀಟು ಮೈತ್ರಿಯ ಸಂದರ್ಭದಲ್ಲಿ ಜೆಡಿಎಸ್ ಮಾಡಿದ ಎಡವಟ್ಟಿನಿಂದ ಕಾಂಗ್ರೆಸ್‍ಗೆ ಮತ್ತು ತಮಗೆ ರಾಜಕೀಯವಾಗಿ ಆದ ಹಿನ್ನಡೆ ಇನ್ನಷ್ಟು ಮುಂದುವರಿಯಬಾರದು ಎಂದು ನಿರ್ಧರಿಸಿರುವ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಕುಳಿತು ರಚನಾತ್ಮಕವಾಗಿ ಜನಪರ ಹೋರಾಟ ಮಾಡುತ್ತ ಮತ್ತೆ ಕಾಂಗ್ರೆಸ್‍ ಗೆ ನವಶಕ್ತಿ ತುಂಬುವ ಯೋಚನೆಯಲ್ಲಂತೂ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...