Homeಕರ್ನಾಟಕಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

ಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

- Advertisement -
- Advertisement -

ಮೂರು ದಿನದ ಹಿಂದಷ್ಟೇ ಮಾಧ್ಯಮದವರು ಸಮನ್ವಯ ಸಮಿತಿ ಆಧ್ಯಕ್ಷ ಸಿದ್ದರಾಮಯ್ಯನವರಿಗೆ, ‘ಸರ್, ಅತೃಪ್ತರ ಜೊತೆ ಮಾತನಾಡಿ ಮನವೊಲಿಸುತ್ತಿದ್ದಾರಾ?’ ಎಂದು ಕೇಳಿದಾಗ, ಅವರು ಹೇಳಿದ್ದ ಈ ಮಾತೊಂದೇ ಅವರಿಗೆ ಈ ಸರ್ಕಾರದ ಬಗ್ಗೆ ಮೊದಲಿನಿಂದಲೂ ಇದ್ದ ಅಸಮಾಧಾನದ ಅಂತಿಮವಾದ ಬಹಿರಂಗ ಸ್ಫೋಟದಂತಿತ್ತು: ‘ರೀ, ಎಷ್ಟೂ ಅಂತ ಮಾತನಾಡೋದು? ಎಷ್ಟು ಅಂತ ಅವರ ಮನವೊಲಿಸೋದು? ಈ ಅತೃಪ್ತರ ಜೊತೆ ಮಾತಾಡಿ, ಮಾತಾಡಿ ಸಾಕಾಗಿ ಹೋಗಿದೆ. ಇನ್ನೇನೂ ಮಾತೂ ಇಲ್ಲ, ಕತೆಯೂ ಇಲ್ಲ…’

ಬಹುಷ: ಅಷ್ಟೊತ್ತಿಗೆ ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗರು ಎನಿಸಿಕೊಂಡಿದ್ದ ಶಾಸಕರು ಅತೃಪ್ತರೊಂದಿಗೆ ‘ಸಮನ್ವಯ’ ಸಭೆ ನಡೆಸಿ ಅವರಿಗೆ ಸಾಥ್ ನೀಡಿಯಾಗಿತ್ತು. ಶನಿವಾರವಷ್ಟೇ ಅವರು ಬಹಿರಂಗವಾಗಿ ಕಾಣಿಸಿಕೊಂಡರು. ಅದು ದೊಡ್ಡ ಸುದ್ದಿಯಾಗುತ್ತಿದ್ದ ಸಮಯದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಡಿ.ಕೆ. ಶಿವಕುಮಾರ್ ಧಾವಿಸಿದರಷ್ಟೇ. ಇಂತಹ ಸಂದರ್ಭಗಳಲ್ಲಿ ಎಂದಿನಂತೆ, ‘ಏನಾಗಿಲ್ಲ ಬಿಡ್ರಿ. ಸರ್ಕಾರ ಭದ್ರವಾಗಿದೆ’ ಎಂದು ಸುಮ್ಮನೇ ಆದರೂ ಹೇಳುತ್ತಿದ್ದ ಸಿದ್ದರಾಮಯ್ಯ ಶನಿವಾರ ಆಪರೇಷನ್ನಿನ ಟ್ರೈಲರ್ ‘ಟ್ರೆಂಡಿಂಗ್’ ಆಗುತ್ತಿದ್ದ ಪೀಕ್ ಅವರ್‍ಗಳಲ್ಲೂ ಮಾಧ್ಯಮಗಳ ಸಂಪರ್ಕಕಕ್ಕೆ ಸಿಗಲೇ ಇಲ್ಲ. ಅವರು ಟ್ರೈಲರ್ ಮುಗಿದು, ಬುಧವಾರದ ವೇಳೆಗೆ ಪಿಚ್ಚರ್ ರಿಲೀಸ್ ಆಗುವುದು ನಿಕ್ಕಿ ಆದ ಮೇಲಷ್ಟೇ ಕಾಣಿಸಿಕೊಂಡು, ‘ರೀ ಸ್ಪೀಕರ್ ರಾಜೀನಾಮೆ ಅಂಗೀಕರಿಸಿದ್ದಾರೇನ್ರಿ?’ ಎಂದು ಯಾವುದೇ ಮಹತ್ತರ ಬೆಳವಣಿಗೆ ನಡೆದೇ ಇಲ್ಲ ಎಂಬಂತೆ ಸಾಗಿಬಿಟ್ಟರು. ಟ್ರೈಲರ್‍ನಲ್ಲಿ ಅವರ ಆಪ್ತರ ಸೀನ್‍ಗಳೇ ಹೈಲಾಟಾಗಿದ್ದರೂ ಅವರಿಗೆ ಅದು ಆಶ್ಚರ್ಯದ ವಿಷಯವೇ ಆಗಿರಲಿಲ್ಲ.

ಕಳೆದ ವರ್ಷ ವಿಧಾನಸಭಾ ಚುನಾವಣೆ ಫಲಿತಾಂಶ ಕಣ್ಮುಂದೆ ಬಂದಾಗಲೇ ವಿರೋಧ ಪಕ್ಷದಲ್ಲಿ ಕೂಡುವುದೇ ಅವರ ನಿರ್ಧಾರವಾಗಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಕೋಮುವಾದಿ ಸರ್ಕಾರ ರಚನೆಗೆ ಅವಕಾಶ ನೀಡಬಾರದೆಂದು ತರಾತುರಿಯಲ್ಲಿ ಜೆಡಿಎಸ್‍ಗೆ ಬೇಷರತ್ ಬೆಂಬಲ ಕೊಡಲು ನಿರ್ಧರಿಸಿದಾಗ ಸಿದ್ದರಾಮಯ್ಯರಿಗೆ ಬೇರೆ ದಾರಿಯೇ ಇರಲಿಲ್ಲ. ಆರಂಭದಿಂದಲೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಹುಪಾಲು ನಿರ್ಧಾರಗಳ ಬಗ್ಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದರು. ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್‍ನಲ್ಲಿ ಸಿದ್ದರಾಮಯ್ಯ ಸರ್ಕಾರದ ಕೆಲವು ಯೋಜನೆಗಳಲ್ಲಿ ಮಾರ್ಪಾಡು ಮಾಡಿದಾಗ ಸಿದ್ದರಾಮಯ್ಯ ಅದನ್ನು ಬಲವಾಗಿ ವಿರೋಧಿಸಿದ್ದರು.

ಅನ್ನಭಾಗ್ಯದಲ್ಲಿ ಪ್ರತಿ ತಿಂಗಳು ನೀಡುವ ಅಕ್ಕಿ ಪ್ರಮಾಣವನ್ನು 7 ರಿಂದ 5 ಕೆ.ಜಿ.ಗೆ ಇಳಿಸಿದ್ದು ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರಿಗೆ ಅಪಾರ ಸಿಟ್ಟು ತರಿಸಿತ್ತು. ಕುಮಾರಸ್ವಾಮಿ ತಮ್ಮ ಹಿಂದಿನ ಸರ್ಕಾರದ ಜನಪರ ಯೋಜನೆಗಳಿಗೆ ಧಕ್ಕೆ ಮಾಡುವ ಮೂಲಕ ಕಾಂಗ್ರೆಸ್‍ಗೆ ಹಿನ್ನಡೆ ಮಾಡಲು ಹೊರಟಿದ್ದಾರೆ ಎಂದು ವಿರೋಧ ಮಾಡಿದ್ದ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಈ ವಿಷಯ ಎತ್ತಿ ತಮ್ಮ ಸರ್ಕಾರದ ಯೋಜನೆಗಳು ಮೊದಲಿನಂತೆ ಸರಾಗವಾಗಿ ಜಾರಿಯಾಗುವಂತೆ ನೋಡಿಕೊಂಡರು. ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಇದೂ ಅಗತ್ಯವೂ ಆಗಿತ್ತು. ಆಗಿಂದಲೇ ಕುಮಾರಸ್ವಾಮಿ ಕಾಂಗ್ರೆಸ್ ಅನ್ನು ಹಿನ್ನಡೆಗೆ ಸರಿಸಿ ಜೆಡಿಎಸ್ ಪ್ರಾಬಲ್ಯ ಬೆಳೆಯುವಂತೆ ಮಾಡಲು ಹೊರಟಿದ್ದಾರೆ ಎಂಬ ಅಸಮಾಧಾನ ಹೊಂದಿದ್ದ ಸಿದ್ದರಾಮಯ್ಯನವರಿಗೆ, ಈ ಸರ್ಕಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಎಂಬುದು ಖಾತ್ರಿಯಾಗಿತ್ತು.

ಅದು ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಾಣಿಸಿಕೊಂಡಿತು. ಕಾಂಂಗ್ರೆಸ್ ಹೀನಾಯವಾಗಿ ಸೋತು ಕೇವಲ ಒಂದು ಸ್ಥಾನ ಗಳಿಸಿದ ಮೇಲಂತೂ ಜೆಡಿಎಸ್ ಸಹವಾಸ ತೊರೆದು ವಿರೋಧ ಪಕ್ಷದಲ್ಲಿ ಕೂಡುವುದೇ ಕಾಂಗ್ರೆಸ್ ಮತ್ತು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು ಎಂದು ಅವರು ನಿರ್ಧರಿಸಿಯಾಗಿತ್ತು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್‍ಗಾಂಧಿಯವರಿಗೂ ಇದನ್ನು ಮನವರಿಕೆ ಮಾಡಿದ್ದರು. ಆದರೆ ಮತ್ತೆ ಮಿತ್ರಪಕ್ಷಗಳ ಸ್ನೇಹ ಉಳಿಸಿಕೊಳ್ಳುವ ದೃಷ್ಟಿಯಿಂದ ರಾಹುಲ್ ಗಾಂಧಿ ಸರ್ಕಾರಕ್ಕೆ ತೊದರೆಯಾಗದಂತೆ ಸೂಚಿಸಿದ್ದನ್ನು ಮನಸ್ಸಿಲ್ಲದೇ ಸಿದ್ದರಾಮಯ್ಯ ಒಪ್ಪಿಕೊಂಡು ಬಂದಿದ್ದರು.

ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಆಪರೇಷನ್ ಕಮಲವನ್ನು ತೀವ್ರಗೊಳಿಸಿ ಸರ್ಕಾರವನ್ನು ಕೆಡವಲು ನಿರಂತರ ಯತ್ನ ನಡೆಸಿದ್ದು ಅವರಿಗೆ ಸಮಾಧಾನ ತಂದಿತ್ತೇನೋ? ಮೊದಲಿಂದಲೂ ಸಚಿವ ಪದವಿಗೆ ಯತ್ನಿಸಿ ನಿರಾಶರಾಗಿದ್ದ ಅವರ ಹಲವು ಪರಮಾಪ್ತ ಶಾಸಕರು ಬಿಜೆಪಿ ಸರ್ಕಾರದಲ್ಲಾದರೂ ಅಧಿಕಾರ ಪಡೆಯಲಿ ಎಂದು ಸಿದ್ದರಾಮಯ್ಯ ಯೋಚಿಸಿರಬಹುದು. ‘ಹೋಗಿ ಬಿಡಿ ಅತ್ಲಾಗೆ. ಮುಂದೆ ಎಲ್ಲ ನೋಡಿದರಾಯಿತು’ ಎಂದು ಅವರು ಆಶೀರ್ವಾದ ಮಾಡಿದ ಪರಿಣಾಮವಾಗಿಯೇ ಅವರ ನಿಷ್ಠ ಶಾಸಕರು, ಅವರ ಮಾತಿಗೆ ಗೌರವ ಕೊಡುತ್ತಿದ್ದ ಇನ್ನಷ್ಟು ಶಾಸಕರು ಈಗ ಬಿಜೆಪಿ ಪಾಳೆಯದತ್ತ ಮುಖ ಮಾಡಿದ್ದಾರೆ.

ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ, ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಂ, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಮತ್ತು ಸಿದ್ದರಾಮಯ್ಯನವರೇ ನಮ್ಮ ನಾಯಕರು ಎನ್ನುತ್ತಿದ್ದ ಚಿಕ್ಕೋಡಿ ಶಾಸಕ ಪ್ರಕಾಶ ಹುಕ್ಕೇರಿ, ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳ್ಕರ್ ಈಗ ಕಾಂಗ್ರೆಸ್ ತೊರೆಯುತ್ತಿರುವುದೇನೂ ಸಿದ್ದರಾಮಯ್ಯರಿಗೆ ಬೇಸರ ತಂದಿರಲಾರದು. ಈ ಪಟ್ಟಿ ನಾಳೆ ಬೆಳೆಯಲೂಬಹುದು.

ನಾಳೆ ಅವರ ಅತಿ ಪರಮಾಪ್ತ, ಹೊಸಕೋಟೆ ಶಾಸಕ, ಸಚಿವ ಎಂ.ಟಿ.ಬಿ. ನಾಗರಾಜ್ ಕೂಡ ರಾಜಿನಾಮೆ ನೀಡಲಿದ್ದಾರಂತೆ. ಇದೆಲ್ಲಕ್ಕೂ ಸಿದ್ದರಾಮಯ್ಯರ ಸಮ್ಮತಿ ಇದ್ದೇ ಇದೆ. ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಈ ಸರ್ಕಾರದ ಕುರಿತು ಮನದಾಳದಿಂದ ಪ್ರೀತಿಯ ಮಾತನ್ನೇ ಆಡಿಲ್ಲ. ಲೋಕಸಭೆ ಸೀಟು ಮೈತ್ರಿಯ ಸಂದರ್ಭದಲ್ಲಿ ಜೆಡಿಎಸ್ ಮಾಡಿದ ಎಡವಟ್ಟಿನಿಂದ ಕಾಂಗ್ರೆಸ್‍ಗೆ ಮತ್ತು ತಮಗೆ ರಾಜಕೀಯವಾಗಿ ಆದ ಹಿನ್ನಡೆ ಇನ್ನಷ್ಟು ಮುಂದುವರಿಯಬಾರದು ಎಂದು ನಿರ್ಧರಿಸಿರುವ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಕುಳಿತು ರಚನಾತ್ಮಕವಾಗಿ ಜನಪರ ಹೋರಾಟ ಮಾಡುತ್ತ ಮತ್ತೆ ಕಾಂಗ್ರೆಸ್‍ ಗೆ ನವಶಕ್ತಿ ತುಂಬುವ ಯೋಚನೆಯಲ್ಲಂತೂ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...