Homeಕರ್ನಾಟಕಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

ಆಪರೇಷನ್ ಫೈನಲ್: ಸಿದ್ದರಾಮಯ್ಯನವರಿಗೇ ಬೇಡವಾಗಿದ್ದ ಸರ್ಕಾರ!

- Advertisement -
- Advertisement -

ಮೂರು ದಿನದ ಹಿಂದಷ್ಟೇ ಮಾಧ್ಯಮದವರು ಸಮನ್ವಯ ಸಮಿತಿ ಆಧ್ಯಕ್ಷ ಸಿದ್ದರಾಮಯ್ಯನವರಿಗೆ, ‘ಸರ್, ಅತೃಪ್ತರ ಜೊತೆ ಮಾತನಾಡಿ ಮನವೊಲಿಸುತ್ತಿದ್ದಾರಾ?’ ಎಂದು ಕೇಳಿದಾಗ, ಅವರು ಹೇಳಿದ್ದ ಈ ಮಾತೊಂದೇ ಅವರಿಗೆ ಈ ಸರ್ಕಾರದ ಬಗ್ಗೆ ಮೊದಲಿನಿಂದಲೂ ಇದ್ದ ಅಸಮಾಧಾನದ ಅಂತಿಮವಾದ ಬಹಿರಂಗ ಸ್ಫೋಟದಂತಿತ್ತು: ‘ರೀ, ಎಷ್ಟೂ ಅಂತ ಮಾತನಾಡೋದು? ಎಷ್ಟು ಅಂತ ಅವರ ಮನವೊಲಿಸೋದು? ಈ ಅತೃಪ್ತರ ಜೊತೆ ಮಾತಾಡಿ, ಮಾತಾಡಿ ಸಾಕಾಗಿ ಹೋಗಿದೆ. ಇನ್ನೇನೂ ಮಾತೂ ಇಲ್ಲ, ಕತೆಯೂ ಇಲ್ಲ…’

ಬಹುಷ: ಅಷ್ಟೊತ್ತಿಗೆ ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗರು ಎನಿಸಿಕೊಂಡಿದ್ದ ಶಾಸಕರು ಅತೃಪ್ತರೊಂದಿಗೆ ‘ಸಮನ್ವಯ’ ಸಭೆ ನಡೆಸಿ ಅವರಿಗೆ ಸಾಥ್ ನೀಡಿಯಾಗಿತ್ತು. ಶನಿವಾರವಷ್ಟೇ ಅವರು ಬಹಿರಂಗವಾಗಿ ಕಾಣಿಸಿಕೊಂಡರು. ಅದು ದೊಡ್ಡ ಸುದ್ದಿಯಾಗುತ್ತಿದ್ದ ಸಮಯದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಡಿ.ಕೆ. ಶಿವಕುಮಾರ್ ಧಾವಿಸಿದರಷ್ಟೇ. ಇಂತಹ ಸಂದರ್ಭಗಳಲ್ಲಿ ಎಂದಿನಂತೆ, ‘ಏನಾಗಿಲ್ಲ ಬಿಡ್ರಿ. ಸರ್ಕಾರ ಭದ್ರವಾಗಿದೆ’ ಎಂದು ಸುಮ್ಮನೇ ಆದರೂ ಹೇಳುತ್ತಿದ್ದ ಸಿದ್ದರಾಮಯ್ಯ ಶನಿವಾರ ಆಪರೇಷನ್ನಿನ ಟ್ರೈಲರ್ ‘ಟ್ರೆಂಡಿಂಗ್’ ಆಗುತ್ತಿದ್ದ ಪೀಕ್ ಅವರ್‍ಗಳಲ್ಲೂ ಮಾಧ್ಯಮಗಳ ಸಂಪರ್ಕಕಕ್ಕೆ ಸಿಗಲೇ ಇಲ್ಲ. ಅವರು ಟ್ರೈಲರ್ ಮುಗಿದು, ಬುಧವಾರದ ವೇಳೆಗೆ ಪಿಚ್ಚರ್ ರಿಲೀಸ್ ಆಗುವುದು ನಿಕ್ಕಿ ಆದ ಮೇಲಷ್ಟೇ ಕಾಣಿಸಿಕೊಂಡು, ‘ರೀ ಸ್ಪೀಕರ್ ರಾಜೀನಾಮೆ ಅಂಗೀಕರಿಸಿದ್ದಾರೇನ್ರಿ?’ ಎಂದು ಯಾವುದೇ ಮಹತ್ತರ ಬೆಳವಣಿಗೆ ನಡೆದೇ ಇಲ್ಲ ಎಂಬಂತೆ ಸಾಗಿಬಿಟ್ಟರು. ಟ್ರೈಲರ್‍ನಲ್ಲಿ ಅವರ ಆಪ್ತರ ಸೀನ್‍ಗಳೇ ಹೈಲಾಟಾಗಿದ್ದರೂ ಅವರಿಗೆ ಅದು ಆಶ್ಚರ್ಯದ ವಿಷಯವೇ ಆಗಿರಲಿಲ್ಲ.

ಕಳೆದ ವರ್ಷ ವಿಧಾನಸಭಾ ಚುನಾವಣೆ ಫಲಿತಾಂಶ ಕಣ್ಮುಂದೆ ಬಂದಾಗಲೇ ವಿರೋಧ ಪಕ್ಷದಲ್ಲಿ ಕೂಡುವುದೇ ಅವರ ನಿರ್ಧಾರವಾಗಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಕೋಮುವಾದಿ ಸರ್ಕಾರ ರಚನೆಗೆ ಅವಕಾಶ ನೀಡಬಾರದೆಂದು ತರಾತುರಿಯಲ್ಲಿ ಜೆಡಿಎಸ್‍ಗೆ ಬೇಷರತ್ ಬೆಂಬಲ ಕೊಡಲು ನಿರ್ಧರಿಸಿದಾಗ ಸಿದ್ದರಾಮಯ್ಯರಿಗೆ ಬೇರೆ ದಾರಿಯೇ ಇರಲಿಲ್ಲ. ಆರಂಭದಿಂದಲೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಹುಪಾಲು ನಿರ್ಧಾರಗಳ ಬಗ್ಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದರು. ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್‍ನಲ್ಲಿ ಸಿದ್ದರಾಮಯ್ಯ ಸರ್ಕಾರದ ಕೆಲವು ಯೋಜನೆಗಳಲ್ಲಿ ಮಾರ್ಪಾಡು ಮಾಡಿದಾಗ ಸಿದ್ದರಾಮಯ್ಯ ಅದನ್ನು ಬಲವಾಗಿ ವಿರೋಧಿಸಿದ್ದರು.

ಅನ್ನಭಾಗ್ಯದಲ್ಲಿ ಪ್ರತಿ ತಿಂಗಳು ನೀಡುವ ಅಕ್ಕಿ ಪ್ರಮಾಣವನ್ನು 7 ರಿಂದ 5 ಕೆ.ಜಿ.ಗೆ ಇಳಿಸಿದ್ದು ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರಿಗೆ ಅಪಾರ ಸಿಟ್ಟು ತರಿಸಿತ್ತು. ಕುಮಾರಸ್ವಾಮಿ ತಮ್ಮ ಹಿಂದಿನ ಸರ್ಕಾರದ ಜನಪರ ಯೋಜನೆಗಳಿಗೆ ಧಕ್ಕೆ ಮಾಡುವ ಮೂಲಕ ಕಾಂಗ್ರೆಸ್‍ಗೆ ಹಿನ್ನಡೆ ಮಾಡಲು ಹೊರಟಿದ್ದಾರೆ ಎಂದು ವಿರೋಧ ಮಾಡಿದ್ದ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಈ ವಿಷಯ ಎತ್ತಿ ತಮ್ಮ ಸರ್ಕಾರದ ಯೋಜನೆಗಳು ಮೊದಲಿನಂತೆ ಸರಾಗವಾಗಿ ಜಾರಿಯಾಗುವಂತೆ ನೋಡಿಕೊಂಡರು. ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಇದೂ ಅಗತ್ಯವೂ ಆಗಿತ್ತು. ಆಗಿಂದಲೇ ಕುಮಾರಸ್ವಾಮಿ ಕಾಂಗ್ರೆಸ್ ಅನ್ನು ಹಿನ್ನಡೆಗೆ ಸರಿಸಿ ಜೆಡಿಎಸ್ ಪ್ರಾಬಲ್ಯ ಬೆಳೆಯುವಂತೆ ಮಾಡಲು ಹೊರಟಿದ್ದಾರೆ ಎಂಬ ಅಸಮಾಧಾನ ಹೊಂದಿದ್ದ ಸಿದ್ದರಾಮಯ್ಯನವರಿಗೆ, ಈ ಸರ್ಕಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಎಂಬುದು ಖಾತ್ರಿಯಾಗಿತ್ತು.

ಅದು ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಕಾಣಿಸಿಕೊಂಡಿತು. ಕಾಂಂಗ್ರೆಸ್ ಹೀನಾಯವಾಗಿ ಸೋತು ಕೇವಲ ಒಂದು ಸ್ಥಾನ ಗಳಿಸಿದ ಮೇಲಂತೂ ಜೆಡಿಎಸ್ ಸಹವಾಸ ತೊರೆದು ವಿರೋಧ ಪಕ್ಷದಲ್ಲಿ ಕೂಡುವುದೇ ಕಾಂಗ್ರೆಸ್ ಮತ್ತು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು ಎಂದು ಅವರು ನಿರ್ಧರಿಸಿಯಾಗಿತ್ತು. ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್‍ಗಾಂಧಿಯವರಿಗೂ ಇದನ್ನು ಮನವರಿಕೆ ಮಾಡಿದ್ದರು. ಆದರೆ ಮತ್ತೆ ಮಿತ್ರಪಕ್ಷಗಳ ಸ್ನೇಹ ಉಳಿಸಿಕೊಳ್ಳುವ ದೃಷ್ಟಿಯಿಂದ ರಾಹುಲ್ ಗಾಂಧಿ ಸರ್ಕಾರಕ್ಕೆ ತೊದರೆಯಾಗದಂತೆ ಸೂಚಿಸಿದ್ದನ್ನು ಮನಸ್ಸಿಲ್ಲದೇ ಸಿದ್ದರಾಮಯ್ಯ ಒಪ್ಪಿಕೊಂಡು ಬಂದಿದ್ದರು.

ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಆಪರೇಷನ್ ಕಮಲವನ್ನು ತೀವ್ರಗೊಳಿಸಿ ಸರ್ಕಾರವನ್ನು ಕೆಡವಲು ನಿರಂತರ ಯತ್ನ ನಡೆಸಿದ್ದು ಅವರಿಗೆ ಸಮಾಧಾನ ತಂದಿತ್ತೇನೋ? ಮೊದಲಿಂದಲೂ ಸಚಿವ ಪದವಿಗೆ ಯತ್ನಿಸಿ ನಿರಾಶರಾಗಿದ್ದ ಅವರ ಹಲವು ಪರಮಾಪ್ತ ಶಾಸಕರು ಬಿಜೆಪಿ ಸರ್ಕಾರದಲ್ಲಾದರೂ ಅಧಿಕಾರ ಪಡೆಯಲಿ ಎಂದು ಸಿದ್ದರಾಮಯ್ಯ ಯೋಚಿಸಿರಬಹುದು. ‘ಹೋಗಿ ಬಿಡಿ ಅತ್ಲಾಗೆ. ಮುಂದೆ ಎಲ್ಲ ನೋಡಿದರಾಯಿತು’ ಎಂದು ಅವರು ಆಶೀರ್ವಾದ ಮಾಡಿದ ಪರಿಣಾಮವಾಗಿಯೇ ಅವರ ನಿಷ್ಠ ಶಾಸಕರು, ಅವರ ಮಾತಿಗೆ ಗೌರವ ಕೊಡುತ್ತಿದ್ದ ಇನ್ನಷ್ಟು ಶಾಸಕರು ಈಗ ಬಿಜೆಪಿ ಪಾಳೆಯದತ್ತ ಮುಖ ಮಾಡಿದ್ದಾರೆ.

ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ, ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ, ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಂ, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ಮತ್ತು ಸಿದ್ದರಾಮಯ್ಯನವರೇ ನಮ್ಮ ನಾಯಕರು ಎನ್ನುತ್ತಿದ್ದ ಚಿಕ್ಕೋಡಿ ಶಾಸಕ ಪ್ರಕಾಶ ಹುಕ್ಕೇರಿ, ಖಾನಾಪುರ ಶಾಸಕಿ ಅಂಜಲಿ ಹೆಬ್ಬಾಳ್ಕರ್ ಈಗ ಕಾಂಗ್ರೆಸ್ ತೊರೆಯುತ್ತಿರುವುದೇನೂ ಸಿದ್ದರಾಮಯ್ಯರಿಗೆ ಬೇಸರ ತಂದಿರಲಾರದು. ಈ ಪಟ್ಟಿ ನಾಳೆ ಬೆಳೆಯಲೂಬಹುದು.

ನಾಳೆ ಅವರ ಅತಿ ಪರಮಾಪ್ತ, ಹೊಸಕೋಟೆ ಶಾಸಕ, ಸಚಿವ ಎಂ.ಟಿ.ಬಿ. ನಾಗರಾಜ್ ಕೂಡ ರಾಜಿನಾಮೆ ನೀಡಲಿದ್ದಾರಂತೆ. ಇದೆಲ್ಲಕ್ಕೂ ಸಿದ್ದರಾಮಯ್ಯರ ಸಮ್ಮತಿ ಇದ್ದೇ ಇದೆ. ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಈ ಸರ್ಕಾರದ ಕುರಿತು ಮನದಾಳದಿಂದ ಪ್ರೀತಿಯ ಮಾತನ್ನೇ ಆಡಿಲ್ಲ. ಲೋಕಸಭೆ ಸೀಟು ಮೈತ್ರಿಯ ಸಂದರ್ಭದಲ್ಲಿ ಜೆಡಿಎಸ್ ಮಾಡಿದ ಎಡವಟ್ಟಿನಿಂದ ಕಾಂಗ್ರೆಸ್‍ಗೆ ಮತ್ತು ತಮಗೆ ರಾಜಕೀಯವಾಗಿ ಆದ ಹಿನ್ನಡೆ ಇನ್ನಷ್ಟು ಮುಂದುವರಿಯಬಾರದು ಎಂದು ನಿರ್ಧರಿಸಿರುವ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಕುಳಿತು ರಚನಾತ್ಮಕವಾಗಿ ಜನಪರ ಹೋರಾಟ ಮಾಡುತ್ತ ಮತ್ತೆ ಕಾಂಗ್ರೆಸ್‍ ಗೆ ನವಶಕ್ತಿ ತುಂಬುವ ಯೋಚನೆಯಲ್ಲಂತೂ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...