Homeಕರ್ನಾಟಕ‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

- Advertisement -
- Advertisement -

ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಸರ್ಕಾರ ನೌಕರರಿಗೆ ಸರ್ಕಾರ ಬರೆ ಎಳೆದಿದೆ.

“ಒಪಿಎಸ್ ಜಾರಿ ಸಾಧ್ಯವಿಲ್ಲ” ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ನೌಕರರ ಗಾಯಕ್ಕೆ ಉಪ್ಪು ಸವರಿದೆ. “ವೋಟ್ ಫಾರ್‌ ಒಪಿಎಸ್‌ (ಒಪಿಎಸ್ ಜಾರಿಗೊಳಿಸಿದವರಿಗೆ ನಮ್ಮ ಮತ)” ಎಂದಿರುವ ನೌಕರರು ಮುಂದೇನು ನಿಲುವು ತಾಳುತ್ತಾರೆಂಬುದು ಸದ್ಯದ ಕುತೂಹಲ.

“ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ತರುವ ಚಿಂತನೆ ಸರ್ಕಾರಕ್ಕಿಲ್ಲ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರಶ್ನೆಗೆ ಉತ್ತರಿಸಿರುವ ಬೊಮ್ಮಾಯಿ, “ಹಳೆ ಪಿಂಚಣಿ (ಒಪಿಎಸ್) ಜಾರಿ ತರುವ ಯೋಜನೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಹೊಸ ಪಿಂಚಣಿ ಯೋಜನೆಯ(ಎನ್‌ಪಿಎಸ್) ಸರ್ಕಾರಿ ನೌಕರರಿಗೆ ಹಣಕಾಸಿನ ಸಂಕಷ್ಟದ ಜೊತೆ, ಸಾಮಾಜಿಕ ಅಭದ್ರತೆಯನ್ನು ಸೃಷ್ಟಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎನ್.ಪಿ.ಎಸ್.ನಿಂದ ಅತ್ಯಲ್ಪ, ಪಿಂಚಣಿ ಪಡೆಯುತ್ತಿರುವ ಸಾವಿರಾರು ನೌಕರರ ಸ್ಥಿತಿ ಹಳೆಯ ಪಿಂಚಣಿ ಯೋಜನೆಯ ನೌಕರರಿಗಿಂತ ತೀರಾ ಭಿನ್ನವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಈ ತಾರತಮ್ಯ ಹೋಗಲಾಡಿಸಲು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಕೈಗೊಂಡ ಕ್ರಮಗಳೇನು?” ಎಂದು ರೇಣುಕಾಚಾರ್ಯ ಕೇಳಿದ್ದರು.

ಮುಂದುವರಿದು, ಹೊಸ ಪಿಂಚಣಿ ಅಳವಡಿಸಿಕೊಂಡಿರುವ ಪಂಜಾಬ್, ರಾಜಸ್ತಾನ, ಛತ್ತೀಸ್‌ಘಡ, ಜಾರ್ಖಂಡ್ ಹಾಗೂ ಮತ್ತಿತರ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸಿದ್ದು, ಈ ರಾಜ್ಯಗಳ ಮಾದರಿ ಅನುಸರಿಸಲು ಸರ್ಕಾರಕ್ಕೆ ಇರುವ ತೊಡಕುಗಳೇನು, ಈ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆಯೇ? ಹಾಗೂ ನೌಕರರ ನಿವೃತ್ತಿ ಜೀವನ ಉತ್ತಮಪಡಿಸುವಲ್ಲಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆಯೇ; ಹಾಗಿದ್ದಲ್ಲಿ, ಸರ್ಕಾರ ಕೈಗೊಂಡ ಕ್ರಮಗಳೇನು? ಎಂದು ಶಾಸಕ ರೇಣುಕಾಚಾರ್ಯ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದರು.

ಇದಕ್ಕುತ್ತರಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿಯ ಆಧಾರ ಇಲ್ಲದಿರುವುದರಿಂದ ಹಾಗೂ ರಿಸರ್ವ್ ಬ್ಯಾಂಕ್‌ನವರು ರಚಿಸಿದ ಸಮಿತಿಯ ವರದಿಯ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01-01-2004ರಿಂದ ಯೋಜನೆ ಜಾರಿಗೊಳಿಸಿರುತ್ತದೆ ಎಂದು ತಿಳಿಸಿದ್ದಾರೆ. ಅದರಂತೆಯೇ ಇತರೆ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಸರ್ಕಾರದ ಆದೇಶ ಸಂಖ್ಯೆ: ಆಇ (ಎಸ್.ಪಿ.ಎಲ್.) 04 ಪಿಇಟಿ 2005, ದಿನಾಂಕ: 31.03.2006ರನ್ವಯ ದಿನಾಂಕ 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಹೀಗಾಗಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ.

ops answer

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಡಿ.28ಕ್ಕೆ 10ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆಯೇ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಈ ಉತ್ತರವೀಗ ಓಪಿಎಸ್ ಜಾರಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ನೌಕರರ ಹೋರಾಟಕ್ಕೆ ಹಿನ್ನಡೆಯುಂಟು ಮಾಡಿದೆ.

ಇತ್ತೀಚೆಗೆ ‘ನಾನುಗೌರಿ.ಕಾಂ/ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, “ಯಾವುದೇ ಸರ್ಕಾರಿ ನೌಕರರಲ್ಲಿ ಅಭದ್ರತೆಯನ್ನು ಉಂಟುಮಾಡುವುದೇ ಇವರ ನೀತಿಯಾಗಿದೆ. ಹೀಗಾಗಿಯೇ ಹೊರಗುತ್ತಿಗೆ ಎಂಬುದು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಸರ್ಕಾರಿ ನೌಕರರನ್ನೂ ಹೊರಗುತ್ತಿಗೆ ನೌಕರರಂತೆ ನೋಡಿಕೊಳ್ಳಲಾಗುತ್ತಿದೆ” ಎಂದಿದ್ದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

“ಎನ್‌ಪಿಎಸ್ ವಿಚಾರವಾಗಿ ಆರಂಭದಲ್ಲಿ ನೌಕರರನ್ನು ನಂಬಿಸಲಾಯಿತು. ನೌಕರರು ಕೋಟ್ಯಾಧಿಪತಿಗಳಾಗುತ್ತಾರೆ, ಷೇರುಪೇಟೆಯಿಂದ ಕೋಟಿಕೋಟಿ ರೂಪಾಯಿ ಲಾಭವಾಗುತ್ತದೆ ಎಂದು ತಿಳಿಸಲಾಯಿತು. ವಾಸ್ತವ ಬೇರೆಯಾಗಿದೆ. ನನ್ನ ಬಳಿಯೇ ಇರುವ ಕೆಲವು ಅಧಿಕೃತ ಮಾಹಿತಿಯ ಪ್ರಕಾರ ಎನ್‌ಪಿಎಸ್‌ನಿಂದಾಗಿ ನಿವೃತ್ತರು 1000 ರೂಪಾಯಿ, ಕೆಲವರು 900 ರೂಪಾಯಿ, ಕೆಲವರು 700 ರೂಪಾಯಿ ಮಾಸಿಕವಾಗಿ ಪಡೆಯುತ್ತಿದ್ದಾರೆ” ಎಂದು ವಿಷಾದಿಸಿದ್ದರು.

“ಸರ್ಕಾರಿ ಸೇವೆ ಸಲ್ಲಿಸಿದವರಿಗೆ ಒಪಿಎಸ್ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಅನೇಕರು ವಾದಿಸುತ್ತಾರೆ. ಆದರೆ 1935ರಿಂದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿತ್ತು. ಎಂಟು ದಶಕಗಳಿಂದ ಆಗದ ಆರ್ಥಿಕ ಹೊರೆ ಈಗ ಆಗುತ್ತದೆ ಎಂಬುದಕ್ಕೆ ಅರ್ಥವೇ ಇಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸರ್ಕಾರಿ ನೌಕರರ ದುಡಿಮೆಯ ಫಲದ ಶೇಕಡಾ 10%ನ್ನು ಜೂಜಾಟಕ್ಕೆ ಬಲಿ ಕೊಟ್ಟು …
    30ರಿಂದ 35ವರ್ಷದ ವೃತ್ತಿ ಜೀವನವನ್ನು ಸರ್ಕಾರಕ್ಕೆ ಮುಡಿಪಾಗಿಟ್ಟ ನೌಕರರ ಹಾಗೂ ಅವನ ಕುಟುಂಬವನ್ನು ಬೀದಿಪಾಲು ಮಾಡುತ್ತಿರುವ ನಿಮಗೆ ಮಾನವೀಯತೆ ಎಂಬ ಪದದ ಅರ್ಥ ಗೊತ್ತಿದೆಯೇ….,? NPS ಯೋಜನೆ ಕೇವಲ ಬಂಡವಾಳ ಶಾಹಿಗಳ ಉದ್ದಾರಕ್ಕೆ… ಹೊರತು ಸರ್ಕಾರ ಅಥವಾ ಸಾಮಾನ್ಯ ಜನರ ಅನುಕೂಲಕ್ಕಲ್ಲ ಎಂಬ ಸಾಮಾನ್ಯಜ್ಞಾನವೂ ನಿಮಗಿಲ್ಲವೇ…?

  2. MLA ಗಳಿಗೆ ತುಂಬಾ ಕಷ್ಟ ಇದೆ ಅವರಿಗೆ ಇದನ್ನು ಬುಟ್ಟರೆ ಅವರಿಗೆ ಗತಿ ಇಲ್ಲ ಇವಗ ತಿಂತೀರೋದು ಸಾಕು ಆಗಲ್ಲ ಅದಕ್ಕೆ OPS ಇವರಿ ಬೇಕು ಆದರೆ ಸರ್ಕಾರಿ ನೌಕರರಿಗೆ nps ಯಾಕೆ ಈರೀತಿ ಇಲ್ಲ ಅಂದ್ರೇ ಇದರ ಬಗ್ಗೆ ತಿದ್ದುಪಡಿ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...