Homeಕರ್ನಾಟಕ‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

- Advertisement -
- Advertisement -

ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಸರ್ಕಾರ ನೌಕರರಿಗೆ ಸರ್ಕಾರ ಬರೆ ಎಳೆದಿದೆ.

“ಒಪಿಎಸ್ ಜಾರಿ ಸಾಧ್ಯವಿಲ್ಲ” ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ನೌಕರರ ಗಾಯಕ್ಕೆ ಉಪ್ಪು ಸವರಿದೆ. “ವೋಟ್ ಫಾರ್‌ ಒಪಿಎಸ್‌ (ಒಪಿಎಸ್ ಜಾರಿಗೊಳಿಸಿದವರಿಗೆ ನಮ್ಮ ಮತ)” ಎಂದಿರುವ ನೌಕರರು ಮುಂದೇನು ನಿಲುವು ತಾಳುತ್ತಾರೆಂಬುದು ಸದ್ಯದ ಕುತೂಹಲ.

“ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ತರುವ ಚಿಂತನೆ ಸರ್ಕಾರಕ್ಕಿಲ್ಲ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರಶ್ನೆಗೆ ಉತ್ತರಿಸಿರುವ ಬೊಮ್ಮಾಯಿ, “ಹಳೆ ಪಿಂಚಣಿ (ಒಪಿಎಸ್) ಜಾರಿ ತರುವ ಯೋಜನೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಹೊಸ ಪಿಂಚಣಿ ಯೋಜನೆಯ(ಎನ್‌ಪಿಎಸ್) ಸರ್ಕಾರಿ ನೌಕರರಿಗೆ ಹಣಕಾಸಿನ ಸಂಕಷ್ಟದ ಜೊತೆ, ಸಾಮಾಜಿಕ ಅಭದ್ರತೆಯನ್ನು ಸೃಷ್ಟಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎನ್.ಪಿ.ಎಸ್.ನಿಂದ ಅತ್ಯಲ್ಪ, ಪಿಂಚಣಿ ಪಡೆಯುತ್ತಿರುವ ಸಾವಿರಾರು ನೌಕರರ ಸ್ಥಿತಿ ಹಳೆಯ ಪಿಂಚಣಿ ಯೋಜನೆಯ ನೌಕರರಿಗಿಂತ ತೀರಾ ಭಿನ್ನವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಈ ತಾರತಮ್ಯ ಹೋಗಲಾಡಿಸಲು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಕೈಗೊಂಡ ಕ್ರಮಗಳೇನು?” ಎಂದು ರೇಣುಕಾಚಾರ್ಯ ಕೇಳಿದ್ದರು.

ಮುಂದುವರಿದು, ಹೊಸ ಪಿಂಚಣಿ ಅಳವಡಿಸಿಕೊಂಡಿರುವ ಪಂಜಾಬ್, ರಾಜಸ್ತಾನ, ಛತ್ತೀಸ್‌ಘಡ, ಜಾರ್ಖಂಡ್ ಹಾಗೂ ಮತ್ತಿತರ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸಿದ್ದು, ಈ ರಾಜ್ಯಗಳ ಮಾದರಿ ಅನುಸರಿಸಲು ಸರ್ಕಾರಕ್ಕೆ ಇರುವ ತೊಡಕುಗಳೇನು, ಈ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆಯೇ? ಹಾಗೂ ನೌಕರರ ನಿವೃತ್ತಿ ಜೀವನ ಉತ್ತಮಪಡಿಸುವಲ್ಲಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆಯೇ; ಹಾಗಿದ್ದಲ್ಲಿ, ಸರ್ಕಾರ ಕೈಗೊಂಡ ಕ್ರಮಗಳೇನು? ಎಂದು ಶಾಸಕ ರೇಣುಕಾಚಾರ್ಯ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದರು.

ಇದಕ್ಕುತ್ತರಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿಯ ಆಧಾರ ಇಲ್ಲದಿರುವುದರಿಂದ ಹಾಗೂ ರಿಸರ್ವ್ ಬ್ಯಾಂಕ್‌ನವರು ರಚಿಸಿದ ಸಮಿತಿಯ ವರದಿಯ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01-01-2004ರಿಂದ ಯೋಜನೆ ಜಾರಿಗೊಳಿಸಿರುತ್ತದೆ ಎಂದು ತಿಳಿಸಿದ್ದಾರೆ. ಅದರಂತೆಯೇ ಇತರೆ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಸರ್ಕಾರದ ಆದೇಶ ಸಂಖ್ಯೆ: ಆಇ (ಎಸ್.ಪಿ.ಎಲ್.) 04 ಪಿಇಟಿ 2005, ದಿನಾಂಕ: 31.03.2006ರನ್ವಯ ದಿನಾಂಕ 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಹೀಗಾಗಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ.

ops answer

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಡಿ.28ಕ್ಕೆ 10ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆಯೇ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಈ ಉತ್ತರವೀಗ ಓಪಿಎಸ್ ಜಾರಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ನೌಕರರ ಹೋರಾಟಕ್ಕೆ ಹಿನ್ನಡೆಯುಂಟು ಮಾಡಿದೆ.

ಇತ್ತೀಚೆಗೆ ‘ನಾನುಗೌರಿ.ಕಾಂ/ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, “ಯಾವುದೇ ಸರ್ಕಾರಿ ನೌಕರರಲ್ಲಿ ಅಭದ್ರತೆಯನ್ನು ಉಂಟುಮಾಡುವುದೇ ಇವರ ನೀತಿಯಾಗಿದೆ. ಹೀಗಾಗಿಯೇ ಹೊರಗುತ್ತಿಗೆ ಎಂಬುದು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಸರ್ಕಾರಿ ನೌಕರರನ್ನೂ ಹೊರಗುತ್ತಿಗೆ ನೌಕರರಂತೆ ನೋಡಿಕೊಳ್ಳಲಾಗುತ್ತಿದೆ” ಎಂದಿದ್ದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

“ಎನ್‌ಪಿಎಸ್ ವಿಚಾರವಾಗಿ ಆರಂಭದಲ್ಲಿ ನೌಕರರನ್ನು ನಂಬಿಸಲಾಯಿತು. ನೌಕರರು ಕೋಟ್ಯಾಧಿಪತಿಗಳಾಗುತ್ತಾರೆ, ಷೇರುಪೇಟೆಯಿಂದ ಕೋಟಿಕೋಟಿ ರೂಪಾಯಿ ಲಾಭವಾಗುತ್ತದೆ ಎಂದು ತಿಳಿಸಲಾಯಿತು. ವಾಸ್ತವ ಬೇರೆಯಾಗಿದೆ. ನನ್ನ ಬಳಿಯೇ ಇರುವ ಕೆಲವು ಅಧಿಕೃತ ಮಾಹಿತಿಯ ಪ್ರಕಾರ ಎನ್‌ಪಿಎಸ್‌ನಿಂದಾಗಿ ನಿವೃತ್ತರು 1000 ರೂಪಾಯಿ, ಕೆಲವರು 900 ರೂಪಾಯಿ, ಕೆಲವರು 700 ರೂಪಾಯಿ ಮಾಸಿಕವಾಗಿ ಪಡೆಯುತ್ತಿದ್ದಾರೆ” ಎಂದು ವಿಷಾದಿಸಿದ್ದರು.

“ಸರ್ಕಾರಿ ಸೇವೆ ಸಲ್ಲಿಸಿದವರಿಗೆ ಒಪಿಎಸ್ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಅನೇಕರು ವಾದಿಸುತ್ತಾರೆ. ಆದರೆ 1935ರಿಂದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿತ್ತು. ಎಂಟು ದಶಕಗಳಿಂದ ಆಗದ ಆರ್ಥಿಕ ಹೊರೆ ಈಗ ಆಗುತ್ತದೆ ಎಂಬುದಕ್ಕೆ ಅರ್ಥವೇ ಇಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸರ್ಕಾರಿ ನೌಕರರ ದುಡಿಮೆಯ ಫಲದ ಶೇಕಡಾ 10%ನ್ನು ಜೂಜಾಟಕ್ಕೆ ಬಲಿ ಕೊಟ್ಟು …
    30ರಿಂದ 35ವರ್ಷದ ವೃತ್ತಿ ಜೀವನವನ್ನು ಸರ್ಕಾರಕ್ಕೆ ಮುಡಿಪಾಗಿಟ್ಟ ನೌಕರರ ಹಾಗೂ ಅವನ ಕುಟುಂಬವನ್ನು ಬೀದಿಪಾಲು ಮಾಡುತ್ತಿರುವ ನಿಮಗೆ ಮಾನವೀಯತೆ ಎಂಬ ಪದದ ಅರ್ಥ ಗೊತ್ತಿದೆಯೇ….,? NPS ಯೋಜನೆ ಕೇವಲ ಬಂಡವಾಳ ಶಾಹಿಗಳ ಉದ್ದಾರಕ್ಕೆ… ಹೊರತು ಸರ್ಕಾರ ಅಥವಾ ಸಾಮಾನ್ಯ ಜನರ ಅನುಕೂಲಕ್ಕಲ್ಲ ಎಂಬ ಸಾಮಾನ್ಯಜ್ಞಾನವೂ ನಿಮಗಿಲ್ಲವೇ…?

  2. MLA ಗಳಿಗೆ ತುಂಬಾ ಕಷ್ಟ ಇದೆ ಅವರಿಗೆ ಇದನ್ನು ಬುಟ್ಟರೆ ಅವರಿಗೆ ಗತಿ ಇಲ್ಲ ಇವಗ ತಿಂತೀರೋದು ಸಾಕು ಆಗಲ್ಲ ಅದಕ್ಕೆ OPS ಇವರಿ ಬೇಕು ಆದರೆ ಸರ್ಕಾರಿ ನೌಕರರಿಗೆ nps ಯಾಕೆ ಈರೀತಿ ಇಲ್ಲ ಅಂದ್ರೇ ಇದರ ಬಗ್ಗೆ ತಿದ್ದುಪಡಿ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...