Homeಕರ್ನಾಟಕ‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

- Advertisement -
- Advertisement -

ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಸರ್ಕಾರ ನೌಕರರಿಗೆ ಸರ್ಕಾರ ಬರೆ ಎಳೆದಿದೆ.

“ಒಪಿಎಸ್ ಜಾರಿ ಸಾಧ್ಯವಿಲ್ಲ” ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ನೌಕರರ ಗಾಯಕ್ಕೆ ಉಪ್ಪು ಸವರಿದೆ. “ವೋಟ್ ಫಾರ್‌ ಒಪಿಎಸ್‌ (ಒಪಿಎಸ್ ಜಾರಿಗೊಳಿಸಿದವರಿಗೆ ನಮ್ಮ ಮತ)” ಎಂದಿರುವ ನೌಕರರು ಮುಂದೇನು ನಿಲುವು ತಾಳುತ್ತಾರೆಂಬುದು ಸದ್ಯದ ಕುತೂಹಲ.

“ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ತರುವ ಚಿಂತನೆ ಸರ್ಕಾರಕ್ಕಿಲ್ಲ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರಶ್ನೆಗೆ ಉತ್ತರಿಸಿರುವ ಬೊಮ್ಮಾಯಿ, “ಹಳೆ ಪಿಂಚಣಿ (ಒಪಿಎಸ್) ಜಾರಿ ತರುವ ಯೋಜನೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಹೊಸ ಪಿಂಚಣಿ ಯೋಜನೆಯ(ಎನ್‌ಪಿಎಸ್) ಸರ್ಕಾರಿ ನೌಕರರಿಗೆ ಹಣಕಾಸಿನ ಸಂಕಷ್ಟದ ಜೊತೆ, ಸಾಮಾಜಿಕ ಅಭದ್ರತೆಯನ್ನು ಸೃಷ್ಟಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎನ್.ಪಿ.ಎಸ್.ನಿಂದ ಅತ್ಯಲ್ಪ, ಪಿಂಚಣಿ ಪಡೆಯುತ್ತಿರುವ ಸಾವಿರಾರು ನೌಕರರ ಸ್ಥಿತಿ ಹಳೆಯ ಪಿಂಚಣಿ ಯೋಜನೆಯ ನೌಕರರಿಗಿಂತ ತೀರಾ ಭಿನ್ನವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಈ ತಾರತಮ್ಯ ಹೋಗಲಾಡಿಸಲು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಕೈಗೊಂಡ ಕ್ರಮಗಳೇನು?” ಎಂದು ರೇಣುಕಾಚಾರ್ಯ ಕೇಳಿದ್ದರು.

ಮುಂದುವರಿದು, ಹೊಸ ಪಿಂಚಣಿ ಅಳವಡಿಸಿಕೊಂಡಿರುವ ಪಂಜಾಬ್, ರಾಜಸ್ತಾನ, ಛತ್ತೀಸ್‌ಘಡ, ಜಾರ್ಖಂಡ್ ಹಾಗೂ ಮತ್ತಿತರ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸಿದ್ದು, ಈ ರಾಜ್ಯಗಳ ಮಾದರಿ ಅನುಸರಿಸಲು ಸರ್ಕಾರಕ್ಕೆ ಇರುವ ತೊಡಕುಗಳೇನು, ಈ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆಯೇ? ಹಾಗೂ ನೌಕರರ ನಿವೃತ್ತಿ ಜೀವನ ಉತ್ತಮಪಡಿಸುವಲ್ಲಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆಯೇ; ಹಾಗಿದ್ದಲ್ಲಿ, ಸರ್ಕಾರ ಕೈಗೊಂಡ ಕ್ರಮಗಳೇನು? ಎಂದು ಶಾಸಕ ರೇಣುಕಾಚಾರ್ಯ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದರು.

ಇದಕ್ಕುತ್ತರಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿಯ ಆಧಾರ ಇಲ್ಲದಿರುವುದರಿಂದ ಹಾಗೂ ರಿಸರ್ವ್ ಬ್ಯಾಂಕ್‌ನವರು ರಚಿಸಿದ ಸಮಿತಿಯ ವರದಿಯ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01-01-2004ರಿಂದ ಯೋಜನೆ ಜಾರಿಗೊಳಿಸಿರುತ್ತದೆ ಎಂದು ತಿಳಿಸಿದ್ದಾರೆ. ಅದರಂತೆಯೇ ಇತರೆ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಸರ್ಕಾರದ ಆದೇಶ ಸಂಖ್ಯೆ: ಆಇ (ಎಸ್.ಪಿ.ಎಲ್.) 04 ಪಿಇಟಿ 2005, ದಿನಾಂಕ: 31.03.2006ರನ್ವಯ ದಿನಾಂಕ 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಹೀಗಾಗಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ.

ops answer

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಡಿ.28ಕ್ಕೆ 10ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆಯೇ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಈ ಉತ್ತರವೀಗ ಓಪಿಎಸ್ ಜಾರಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ನೌಕರರ ಹೋರಾಟಕ್ಕೆ ಹಿನ್ನಡೆಯುಂಟು ಮಾಡಿದೆ.

ಇತ್ತೀಚೆಗೆ ‘ನಾನುಗೌರಿ.ಕಾಂ/ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, “ಯಾವುದೇ ಸರ್ಕಾರಿ ನೌಕರರಲ್ಲಿ ಅಭದ್ರತೆಯನ್ನು ಉಂಟುಮಾಡುವುದೇ ಇವರ ನೀತಿಯಾಗಿದೆ. ಹೀಗಾಗಿಯೇ ಹೊರಗುತ್ತಿಗೆ ಎಂಬುದು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಸರ್ಕಾರಿ ನೌಕರರನ್ನೂ ಹೊರಗುತ್ತಿಗೆ ನೌಕರರಂತೆ ನೋಡಿಕೊಳ್ಳಲಾಗುತ್ತಿದೆ” ಎಂದಿದ್ದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

“ಎನ್‌ಪಿಎಸ್ ವಿಚಾರವಾಗಿ ಆರಂಭದಲ್ಲಿ ನೌಕರರನ್ನು ನಂಬಿಸಲಾಯಿತು. ನೌಕರರು ಕೋಟ್ಯಾಧಿಪತಿಗಳಾಗುತ್ತಾರೆ, ಷೇರುಪೇಟೆಯಿಂದ ಕೋಟಿಕೋಟಿ ರೂಪಾಯಿ ಲಾಭವಾಗುತ್ತದೆ ಎಂದು ತಿಳಿಸಲಾಯಿತು. ವಾಸ್ತವ ಬೇರೆಯಾಗಿದೆ. ನನ್ನ ಬಳಿಯೇ ಇರುವ ಕೆಲವು ಅಧಿಕೃತ ಮಾಹಿತಿಯ ಪ್ರಕಾರ ಎನ್‌ಪಿಎಸ್‌ನಿಂದಾಗಿ ನಿವೃತ್ತರು 1000 ರೂಪಾಯಿ, ಕೆಲವರು 900 ರೂಪಾಯಿ, ಕೆಲವರು 700 ರೂಪಾಯಿ ಮಾಸಿಕವಾಗಿ ಪಡೆಯುತ್ತಿದ್ದಾರೆ” ಎಂದು ವಿಷಾದಿಸಿದ್ದರು.

“ಸರ್ಕಾರಿ ಸೇವೆ ಸಲ್ಲಿಸಿದವರಿಗೆ ಒಪಿಎಸ್ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಅನೇಕರು ವಾದಿಸುತ್ತಾರೆ. ಆದರೆ 1935ರಿಂದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿತ್ತು. ಎಂಟು ದಶಕಗಳಿಂದ ಆಗದ ಆರ್ಥಿಕ ಹೊರೆ ಈಗ ಆಗುತ್ತದೆ ಎಂಬುದಕ್ಕೆ ಅರ್ಥವೇ ಇಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸರ್ಕಾರಿ ನೌಕರರ ದುಡಿಮೆಯ ಫಲದ ಶೇಕಡಾ 10%ನ್ನು ಜೂಜಾಟಕ್ಕೆ ಬಲಿ ಕೊಟ್ಟು …
    30ರಿಂದ 35ವರ್ಷದ ವೃತ್ತಿ ಜೀವನವನ್ನು ಸರ್ಕಾರಕ್ಕೆ ಮುಡಿಪಾಗಿಟ್ಟ ನೌಕರರ ಹಾಗೂ ಅವನ ಕುಟುಂಬವನ್ನು ಬೀದಿಪಾಲು ಮಾಡುತ್ತಿರುವ ನಿಮಗೆ ಮಾನವೀಯತೆ ಎಂಬ ಪದದ ಅರ್ಥ ಗೊತ್ತಿದೆಯೇ….,? NPS ಯೋಜನೆ ಕೇವಲ ಬಂಡವಾಳ ಶಾಹಿಗಳ ಉದ್ದಾರಕ್ಕೆ… ಹೊರತು ಸರ್ಕಾರ ಅಥವಾ ಸಾಮಾನ್ಯ ಜನರ ಅನುಕೂಲಕ್ಕಲ್ಲ ಎಂಬ ಸಾಮಾನ್ಯಜ್ಞಾನವೂ ನಿಮಗಿಲ್ಲವೇ…?

  2. MLA ಗಳಿಗೆ ತುಂಬಾ ಕಷ್ಟ ಇದೆ ಅವರಿಗೆ ಇದನ್ನು ಬುಟ್ಟರೆ ಅವರಿಗೆ ಗತಿ ಇಲ್ಲ ಇವಗ ತಿಂತೀರೋದು ಸಾಕು ಆಗಲ್ಲ ಅದಕ್ಕೆ OPS ಇವರಿ ಬೇಕು ಆದರೆ ಸರ್ಕಾರಿ ನೌಕರರಿಗೆ nps ಯಾಕೆ ಈರೀತಿ ಇಲ್ಲ ಅಂದ್ರೇ ಇದರ ಬಗ್ಗೆ ತಿದ್ದುಪಡಿ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...