Homeಕರ್ನಾಟಕ‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

- Advertisement -
- Advertisement -

ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಸರ್ಕಾರ ನೌಕರರಿಗೆ ಸರ್ಕಾರ ಬರೆ ಎಳೆದಿದೆ.

“ಒಪಿಎಸ್ ಜಾರಿ ಸಾಧ್ಯವಿಲ್ಲ” ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ನೌಕರರ ಗಾಯಕ್ಕೆ ಉಪ್ಪು ಸವರಿದೆ. “ವೋಟ್ ಫಾರ್‌ ಒಪಿಎಸ್‌ (ಒಪಿಎಸ್ ಜಾರಿಗೊಳಿಸಿದವರಿಗೆ ನಮ್ಮ ಮತ)” ಎಂದಿರುವ ನೌಕರರು ಮುಂದೇನು ನಿಲುವು ತಾಳುತ್ತಾರೆಂಬುದು ಸದ್ಯದ ಕುತೂಹಲ.

“ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ತರುವ ಚಿಂತನೆ ಸರ್ಕಾರಕ್ಕಿಲ್ಲ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರಶ್ನೆಗೆ ಉತ್ತರಿಸಿರುವ ಬೊಮ್ಮಾಯಿ, “ಹಳೆ ಪಿಂಚಣಿ (ಒಪಿಎಸ್) ಜಾರಿ ತರುವ ಯೋಜನೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಹೊಸ ಪಿಂಚಣಿ ಯೋಜನೆಯ(ಎನ್‌ಪಿಎಸ್) ಸರ್ಕಾರಿ ನೌಕರರಿಗೆ ಹಣಕಾಸಿನ ಸಂಕಷ್ಟದ ಜೊತೆ, ಸಾಮಾಜಿಕ ಅಭದ್ರತೆಯನ್ನು ಸೃಷ್ಟಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎನ್.ಪಿ.ಎಸ್.ನಿಂದ ಅತ್ಯಲ್ಪ, ಪಿಂಚಣಿ ಪಡೆಯುತ್ತಿರುವ ಸಾವಿರಾರು ನೌಕರರ ಸ್ಥಿತಿ ಹಳೆಯ ಪಿಂಚಣಿ ಯೋಜನೆಯ ನೌಕರರಿಗಿಂತ ತೀರಾ ಭಿನ್ನವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಈ ತಾರತಮ್ಯ ಹೋಗಲಾಡಿಸಲು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಕೈಗೊಂಡ ಕ್ರಮಗಳೇನು?” ಎಂದು ರೇಣುಕಾಚಾರ್ಯ ಕೇಳಿದ್ದರು.

ಮುಂದುವರಿದು, ಹೊಸ ಪಿಂಚಣಿ ಅಳವಡಿಸಿಕೊಂಡಿರುವ ಪಂಜಾಬ್, ರಾಜಸ್ತಾನ, ಛತ್ತೀಸ್‌ಘಡ, ಜಾರ್ಖಂಡ್ ಹಾಗೂ ಮತ್ತಿತರ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸಿದ್ದು, ಈ ರಾಜ್ಯಗಳ ಮಾದರಿ ಅನುಸರಿಸಲು ಸರ್ಕಾರಕ್ಕೆ ಇರುವ ತೊಡಕುಗಳೇನು, ಈ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆಯೇ? ಹಾಗೂ ನೌಕರರ ನಿವೃತ್ತಿ ಜೀವನ ಉತ್ತಮಪಡಿಸುವಲ್ಲಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆಯೇ; ಹಾಗಿದ್ದಲ್ಲಿ, ಸರ್ಕಾರ ಕೈಗೊಂಡ ಕ್ರಮಗಳೇನು? ಎಂದು ಶಾಸಕ ರೇಣುಕಾಚಾರ್ಯ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದರು.

ಇದಕ್ಕುತ್ತರಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿಯ ಆಧಾರ ಇಲ್ಲದಿರುವುದರಿಂದ ಹಾಗೂ ರಿಸರ್ವ್ ಬ್ಯಾಂಕ್‌ನವರು ರಚಿಸಿದ ಸಮಿತಿಯ ವರದಿಯ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01-01-2004ರಿಂದ ಯೋಜನೆ ಜಾರಿಗೊಳಿಸಿರುತ್ತದೆ ಎಂದು ತಿಳಿಸಿದ್ದಾರೆ. ಅದರಂತೆಯೇ ಇತರೆ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಸರ್ಕಾರದ ಆದೇಶ ಸಂಖ್ಯೆ: ಆಇ (ಎಸ್.ಪಿ.ಎಲ್.) 04 ಪಿಇಟಿ 2005, ದಿನಾಂಕ: 31.03.2006ರನ್ವಯ ದಿನಾಂಕ 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಹೀಗಾಗಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ.

ops answer

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಡಿ.28ಕ್ಕೆ 10ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆಯೇ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಈ ಉತ್ತರವೀಗ ಓಪಿಎಸ್ ಜಾರಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ನೌಕರರ ಹೋರಾಟಕ್ಕೆ ಹಿನ್ನಡೆಯುಂಟು ಮಾಡಿದೆ.

ಇತ್ತೀಚೆಗೆ ‘ನಾನುಗೌರಿ.ಕಾಂ/ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, “ಯಾವುದೇ ಸರ್ಕಾರಿ ನೌಕರರಲ್ಲಿ ಅಭದ್ರತೆಯನ್ನು ಉಂಟುಮಾಡುವುದೇ ಇವರ ನೀತಿಯಾಗಿದೆ. ಹೀಗಾಗಿಯೇ ಹೊರಗುತ್ತಿಗೆ ಎಂಬುದು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಸರ್ಕಾರಿ ನೌಕರರನ್ನೂ ಹೊರಗುತ್ತಿಗೆ ನೌಕರರಂತೆ ನೋಡಿಕೊಳ್ಳಲಾಗುತ್ತಿದೆ” ಎಂದಿದ್ದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

“ಎನ್‌ಪಿಎಸ್ ವಿಚಾರವಾಗಿ ಆರಂಭದಲ್ಲಿ ನೌಕರರನ್ನು ನಂಬಿಸಲಾಯಿತು. ನೌಕರರು ಕೋಟ್ಯಾಧಿಪತಿಗಳಾಗುತ್ತಾರೆ, ಷೇರುಪೇಟೆಯಿಂದ ಕೋಟಿಕೋಟಿ ರೂಪಾಯಿ ಲಾಭವಾಗುತ್ತದೆ ಎಂದು ತಿಳಿಸಲಾಯಿತು. ವಾಸ್ತವ ಬೇರೆಯಾಗಿದೆ. ನನ್ನ ಬಳಿಯೇ ಇರುವ ಕೆಲವು ಅಧಿಕೃತ ಮಾಹಿತಿಯ ಪ್ರಕಾರ ಎನ್‌ಪಿಎಸ್‌ನಿಂದಾಗಿ ನಿವೃತ್ತರು 1000 ರೂಪಾಯಿ, ಕೆಲವರು 900 ರೂಪಾಯಿ, ಕೆಲವರು 700 ರೂಪಾಯಿ ಮಾಸಿಕವಾಗಿ ಪಡೆಯುತ್ತಿದ್ದಾರೆ” ಎಂದು ವಿಷಾದಿಸಿದ್ದರು.

“ಸರ್ಕಾರಿ ಸೇವೆ ಸಲ್ಲಿಸಿದವರಿಗೆ ಒಪಿಎಸ್ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಅನೇಕರು ವಾದಿಸುತ್ತಾರೆ. ಆದರೆ 1935ರಿಂದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿತ್ತು. ಎಂಟು ದಶಕಗಳಿಂದ ಆಗದ ಆರ್ಥಿಕ ಹೊರೆ ಈಗ ಆಗುತ್ತದೆ ಎಂಬುದಕ್ಕೆ ಅರ್ಥವೇ ಇಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸರ್ಕಾರಿ ನೌಕರರ ದುಡಿಮೆಯ ಫಲದ ಶೇಕಡಾ 10%ನ್ನು ಜೂಜಾಟಕ್ಕೆ ಬಲಿ ಕೊಟ್ಟು …
    30ರಿಂದ 35ವರ್ಷದ ವೃತ್ತಿ ಜೀವನವನ್ನು ಸರ್ಕಾರಕ್ಕೆ ಮುಡಿಪಾಗಿಟ್ಟ ನೌಕರರ ಹಾಗೂ ಅವನ ಕುಟುಂಬವನ್ನು ಬೀದಿಪಾಲು ಮಾಡುತ್ತಿರುವ ನಿಮಗೆ ಮಾನವೀಯತೆ ಎಂಬ ಪದದ ಅರ್ಥ ಗೊತ್ತಿದೆಯೇ….,? NPS ಯೋಜನೆ ಕೇವಲ ಬಂಡವಾಳ ಶಾಹಿಗಳ ಉದ್ದಾರಕ್ಕೆ… ಹೊರತು ಸರ್ಕಾರ ಅಥವಾ ಸಾಮಾನ್ಯ ಜನರ ಅನುಕೂಲಕ್ಕಲ್ಲ ಎಂಬ ಸಾಮಾನ್ಯಜ್ಞಾನವೂ ನಿಮಗಿಲ್ಲವೇ…?

  2. MLA ಗಳಿಗೆ ತುಂಬಾ ಕಷ್ಟ ಇದೆ ಅವರಿಗೆ ಇದನ್ನು ಬುಟ್ಟರೆ ಅವರಿಗೆ ಗತಿ ಇಲ್ಲ ಇವಗ ತಿಂತೀರೋದು ಸಾಕು ಆಗಲ್ಲ ಅದಕ್ಕೆ OPS ಇವರಿ ಬೇಕು ಆದರೆ ಸರ್ಕಾರಿ ನೌಕರರಿಗೆ nps ಯಾಕೆ ಈರೀತಿ ಇಲ್ಲ ಅಂದ್ರೇ ಇದರ ಬಗ್ಗೆ ತಿದ್ದುಪಡಿ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...