Homeಕರ್ನಾಟಕ‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

- Advertisement -
- Advertisement -

ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಸರ್ಕಾರ ನೌಕರರಿಗೆ ಸರ್ಕಾರ ಬರೆ ಎಳೆದಿದೆ.

“ಒಪಿಎಸ್ ಜಾರಿ ಸಾಧ್ಯವಿಲ್ಲ” ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ನೌಕರರ ಗಾಯಕ್ಕೆ ಉಪ್ಪು ಸವರಿದೆ. “ವೋಟ್ ಫಾರ್‌ ಒಪಿಎಸ್‌ (ಒಪಿಎಸ್ ಜಾರಿಗೊಳಿಸಿದವರಿಗೆ ನಮ್ಮ ಮತ)” ಎಂದಿರುವ ನೌಕರರು ಮುಂದೇನು ನಿಲುವು ತಾಳುತ್ತಾರೆಂಬುದು ಸದ್ಯದ ಕುತೂಹಲ.

“ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ತರುವ ಚಿಂತನೆ ಸರ್ಕಾರಕ್ಕಿಲ್ಲ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರಶ್ನೆಗೆ ಉತ್ತರಿಸಿರುವ ಬೊಮ್ಮಾಯಿ, “ಹಳೆ ಪಿಂಚಣಿ (ಒಪಿಎಸ್) ಜಾರಿ ತರುವ ಯೋಜನೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಹೊಸ ಪಿಂಚಣಿ ಯೋಜನೆಯ(ಎನ್‌ಪಿಎಸ್) ಸರ್ಕಾರಿ ನೌಕರರಿಗೆ ಹಣಕಾಸಿನ ಸಂಕಷ್ಟದ ಜೊತೆ, ಸಾಮಾಜಿಕ ಅಭದ್ರತೆಯನ್ನು ಸೃಷ್ಟಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎನ್.ಪಿ.ಎಸ್.ನಿಂದ ಅತ್ಯಲ್ಪ, ಪಿಂಚಣಿ ಪಡೆಯುತ್ತಿರುವ ಸಾವಿರಾರು ನೌಕರರ ಸ್ಥಿತಿ ಹಳೆಯ ಪಿಂಚಣಿ ಯೋಜನೆಯ ನೌಕರರಿಗಿಂತ ತೀರಾ ಭಿನ್ನವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಈ ತಾರತಮ್ಯ ಹೋಗಲಾಡಿಸಲು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಕೈಗೊಂಡ ಕ್ರಮಗಳೇನು?” ಎಂದು ರೇಣುಕಾಚಾರ್ಯ ಕೇಳಿದ್ದರು.

ಮುಂದುವರಿದು, ಹೊಸ ಪಿಂಚಣಿ ಅಳವಡಿಸಿಕೊಂಡಿರುವ ಪಂಜಾಬ್, ರಾಜಸ್ತಾನ, ಛತ್ತೀಸ್‌ಘಡ, ಜಾರ್ಖಂಡ್ ಹಾಗೂ ಮತ್ತಿತರ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸಿದ್ದು, ಈ ರಾಜ್ಯಗಳ ಮಾದರಿ ಅನುಸರಿಸಲು ಸರ್ಕಾರಕ್ಕೆ ಇರುವ ತೊಡಕುಗಳೇನು, ಈ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆಯೇ? ಹಾಗೂ ನೌಕರರ ನಿವೃತ್ತಿ ಜೀವನ ಉತ್ತಮಪಡಿಸುವಲ್ಲಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆಯೇ; ಹಾಗಿದ್ದಲ್ಲಿ, ಸರ್ಕಾರ ಕೈಗೊಂಡ ಕ್ರಮಗಳೇನು? ಎಂದು ಶಾಸಕ ರೇಣುಕಾಚಾರ್ಯ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದರು.

ಇದಕ್ಕುತ್ತರಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿಯ ಆಧಾರ ಇಲ್ಲದಿರುವುದರಿಂದ ಹಾಗೂ ರಿಸರ್ವ್ ಬ್ಯಾಂಕ್‌ನವರು ರಚಿಸಿದ ಸಮಿತಿಯ ವರದಿಯ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01-01-2004ರಿಂದ ಯೋಜನೆ ಜಾರಿಗೊಳಿಸಿರುತ್ತದೆ ಎಂದು ತಿಳಿಸಿದ್ದಾರೆ. ಅದರಂತೆಯೇ ಇತರೆ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಸರ್ಕಾರದ ಆದೇಶ ಸಂಖ್ಯೆ: ಆಇ (ಎಸ್.ಪಿ.ಎಲ್.) 04 ಪಿಇಟಿ 2005, ದಿನಾಂಕ: 31.03.2006ರನ್ವಯ ದಿನಾಂಕ 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಹೀಗಾಗಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ.

ops answer

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಡಿ.28ಕ್ಕೆ 10ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆಯೇ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಈ ಉತ್ತರವೀಗ ಓಪಿಎಸ್ ಜಾರಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ನೌಕರರ ಹೋರಾಟಕ್ಕೆ ಹಿನ್ನಡೆಯುಂಟು ಮಾಡಿದೆ.

ಇತ್ತೀಚೆಗೆ ‘ನಾನುಗೌರಿ.ಕಾಂ/ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, “ಯಾವುದೇ ಸರ್ಕಾರಿ ನೌಕರರಲ್ಲಿ ಅಭದ್ರತೆಯನ್ನು ಉಂಟುಮಾಡುವುದೇ ಇವರ ನೀತಿಯಾಗಿದೆ. ಹೀಗಾಗಿಯೇ ಹೊರಗುತ್ತಿಗೆ ಎಂಬುದು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಸರ್ಕಾರಿ ನೌಕರರನ್ನೂ ಹೊರಗುತ್ತಿಗೆ ನೌಕರರಂತೆ ನೋಡಿಕೊಳ್ಳಲಾಗುತ್ತಿದೆ” ಎಂದಿದ್ದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

“ಎನ್‌ಪಿಎಸ್ ವಿಚಾರವಾಗಿ ಆರಂಭದಲ್ಲಿ ನೌಕರರನ್ನು ನಂಬಿಸಲಾಯಿತು. ನೌಕರರು ಕೋಟ್ಯಾಧಿಪತಿಗಳಾಗುತ್ತಾರೆ, ಷೇರುಪೇಟೆಯಿಂದ ಕೋಟಿಕೋಟಿ ರೂಪಾಯಿ ಲಾಭವಾಗುತ್ತದೆ ಎಂದು ತಿಳಿಸಲಾಯಿತು. ವಾಸ್ತವ ಬೇರೆಯಾಗಿದೆ. ನನ್ನ ಬಳಿಯೇ ಇರುವ ಕೆಲವು ಅಧಿಕೃತ ಮಾಹಿತಿಯ ಪ್ರಕಾರ ಎನ್‌ಪಿಎಸ್‌ನಿಂದಾಗಿ ನಿವೃತ್ತರು 1000 ರೂಪಾಯಿ, ಕೆಲವರು 900 ರೂಪಾಯಿ, ಕೆಲವರು 700 ರೂಪಾಯಿ ಮಾಸಿಕವಾಗಿ ಪಡೆಯುತ್ತಿದ್ದಾರೆ” ಎಂದು ವಿಷಾದಿಸಿದ್ದರು.

“ಸರ್ಕಾರಿ ಸೇವೆ ಸಲ್ಲಿಸಿದವರಿಗೆ ಒಪಿಎಸ್ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಅನೇಕರು ವಾದಿಸುತ್ತಾರೆ. ಆದರೆ 1935ರಿಂದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿತ್ತು. ಎಂಟು ದಶಕಗಳಿಂದ ಆಗದ ಆರ್ಥಿಕ ಹೊರೆ ಈಗ ಆಗುತ್ತದೆ ಎಂಬುದಕ್ಕೆ ಅರ್ಥವೇ ಇಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸರ್ಕಾರಿ ನೌಕರರ ದುಡಿಮೆಯ ಫಲದ ಶೇಕಡಾ 10%ನ್ನು ಜೂಜಾಟಕ್ಕೆ ಬಲಿ ಕೊಟ್ಟು …
    30ರಿಂದ 35ವರ್ಷದ ವೃತ್ತಿ ಜೀವನವನ್ನು ಸರ್ಕಾರಕ್ಕೆ ಮುಡಿಪಾಗಿಟ್ಟ ನೌಕರರ ಹಾಗೂ ಅವನ ಕುಟುಂಬವನ್ನು ಬೀದಿಪಾಲು ಮಾಡುತ್ತಿರುವ ನಿಮಗೆ ಮಾನವೀಯತೆ ಎಂಬ ಪದದ ಅರ್ಥ ಗೊತ್ತಿದೆಯೇ….,? NPS ಯೋಜನೆ ಕೇವಲ ಬಂಡವಾಳ ಶಾಹಿಗಳ ಉದ್ದಾರಕ್ಕೆ… ಹೊರತು ಸರ್ಕಾರ ಅಥವಾ ಸಾಮಾನ್ಯ ಜನರ ಅನುಕೂಲಕ್ಕಲ್ಲ ಎಂಬ ಸಾಮಾನ್ಯಜ್ಞಾನವೂ ನಿಮಗಿಲ್ಲವೇ…?

  2. MLA ಗಳಿಗೆ ತುಂಬಾ ಕಷ್ಟ ಇದೆ ಅವರಿಗೆ ಇದನ್ನು ಬುಟ್ಟರೆ ಅವರಿಗೆ ಗತಿ ಇಲ್ಲ ಇವಗ ತಿಂತೀರೋದು ಸಾಕು ಆಗಲ್ಲ ಅದಕ್ಕೆ OPS ಇವರಿ ಬೇಕು ಆದರೆ ಸರ್ಕಾರಿ ನೌಕರರಿಗೆ nps ಯಾಕೆ ಈರೀತಿ ಇಲ್ಲ ಅಂದ್ರೇ ಇದರ ಬಗ್ಗೆ ತಿದ್ದುಪಡಿ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...