Homeಕರ್ನಾಟಕ‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

‘ಒಪಿಎಸ್ ಜಾರಿ ಸಾಧ್ಯವಿಲ್ಲ’: ಗೌರ್ಮೆಂಟ್ ನೌಕರರ ಗಾಯಕ್ಕೆ ಉಪ್ಪು ಸವರಿದ ಸರ್ಕಾರ

- Advertisement -
- Advertisement -

ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಸರ್ಕಾರ ನೌಕರರಿಗೆ ಸರ್ಕಾರ ಬರೆ ಎಳೆದಿದೆ.

“ಒಪಿಎಸ್ ಜಾರಿ ಸಾಧ್ಯವಿಲ್ಲ” ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ನೌಕರರ ಗಾಯಕ್ಕೆ ಉಪ್ಪು ಸವರಿದೆ. “ವೋಟ್ ಫಾರ್‌ ಒಪಿಎಸ್‌ (ಒಪಿಎಸ್ ಜಾರಿಗೊಳಿಸಿದವರಿಗೆ ನಮ್ಮ ಮತ)” ಎಂದಿರುವ ನೌಕರರು ಮುಂದೇನು ನಿಲುವು ತಾಳುತ್ತಾರೆಂಬುದು ಸದ್ಯದ ಕುತೂಹಲ.

“ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ತರುವ ಚಿಂತನೆ ಸರ್ಕಾರಕ್ಕಿಲ್ಲ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರಶ್ನೆಗೆ ಉತ್ತರಿಸಿರುವ ಬೊಮ್ಮಾಯಿ, “ಹಳೆ ಪಿಂಚಣಿ (ಒಪಿಎಸ್) ಜಾರಿ ತರುವ ಯೋಜನೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಹೊಸ ಪಿಂಚಣಿ ಯೋಜನೆಯ(ಎನ್‌ಪಿಎಸ್) ಸರ್ಕಾರಿ ನೌಕರರಿಗೆ ಹಣಕಾಸಿನ ಸಂಕಷ್ಟದ ಜೊತೆ, ಸಾಮಾಜಿಕ ಅಭದ್ರತೆಯನ್ನು ಸೃಷ್ಟಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎನ್.ಪಿ.ಎಸ್.ನಿಂದ ಅತ್ಯಲ್ಪ, ಪಿಂಚಣಿ ಪಡೆಯುತ್ತಿರುವ ಸಾವಿರಾರು ನೌಕರರ ಸ್ಥಿತಿ ಹಳೆಯ ಪಿಂಚಣಿ ಯೋಜನೆಯ ನೌಕರರಿಗಿಂತ ತೀರಾ ಭಿನ್ನವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಈ ತಾರತಮ್ಯ ಹೋಗಲಾಡಿಸಲು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಕೈಗೊಂಡ ಕ್ರಮಗಳೇನು?” ಎಂದು ರೇಣುಕಾಚಾರ್ಯ ಕೇಳಿದ್ದರು.

ಮುಂದುವರಿದು, ಹೊಸ ಪಿಂಚಣಿ ಅಳವಡಿಸಿಕೊಂಡಿರುವ ಪಂಜಾಬ್, ರಾಜಸ್ತಾನ, ಛತ್ತೀಸ್‌ಘಡ, ಜಾರ್ಖಂಡ್ ಹಾಗೂ ಮತ್ತಿತರ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸಿದ್ದು, ಈ ರಾಜ್ಯಗಳ ಮಾದರಿ ಅನುಸರಿಸಲು ಸರ್ಕಾರಕ್ಕೆ ಇರುವ ತೊಡಕುಗಳೇನು, ಈ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆಯೇ? ಹಾಗೂ ನೌಕರರ ನಿವೃತ್ತಿ ಜೀವನ ಉತ್ತಮಪಡಿಸುವಲ್ಲಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆಯೇ; ಹಾಗಿದ್ದಲ್ಲಿ, ಸರ್ಕಾರ ಕೈಗೊಂಡ ಕ್ರಮಗಳೇನು? ಎಂದು ಶಾಸಕ ರೇಣುಕಾಚಾರ್ಯ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದರು.

ಇದಕ್ಕುತ್ತರಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿಯ ಆಧಾರ ಇಲ್ಲದಿರುವುದರಿಂದ ಹಾಗೂ ರಿಸರ್ವ್ ಬ್ಯಾಂಕ್‌ನವರು ರಚಿಸಿದ ಸಮಿತಿಯ ವರದಿಯ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01-01-2004ರಿಂದ ಯೋಜನೆ ಜಾರಿಗೊಳಿಸಿರುತ್ತದೆ ಎಂದು ತಿಳಿಸಿದ್ದಾರೆ. ಅದರಂತೆಯೇ ಇತರೆ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ಕೂಡ ಸರ್ಕಾರದ ಆದೇಶ ಸಂಖ್ಯೆ: ಆಇ (ಎಸ್.ಪಿ.ಎಲ್.) 04 ಪಿಇಟಿ 2005, ದಿನಾಂಕ: 31.03.2006ರನ್ವಯ ದಿನಾಂಕ 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಹೀಗಾಗಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದ್ದಾರೆ.

ops answer

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಡಿ.28ಕ್ಕೆ 10ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆಯೇ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಈ ಉತ್ತರವೀಗ ಓಪಿಎಸ್ ಜಾರಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ನೌಕರರ ಹೋರಾಟಕ್ಕೆ ಹಿನ್ನಡೆಯುಂಟು ಮಾಡಿದೆ.

ಇತ್ತೀಚೆಗೆ ‘ನಾನುಗೌರಿ.ಕಾಂ/ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು, “ಯಾವುದೇ ಸರ್ಕಾರಿ ನೌಕರರಲ್ಲಿ ಅಭದ್ರತೆಯನ್ನು ಉಂಟುಮಾಡುವುದೇ ಇವರ ನೀತಿಯಾಗಿದೆ. ಹೀಗಾಗಿಯೇ ಹೊರಗುತ್ತಿಗೆ ಎಂಬುದು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಸರ್ಕಾರಿ ನೌಕರರನ್ನೂ ಹೊರಗುತ್ತಿಗೆ ನೌಕರರಂತೆ ನೋಡಿಕೊಳ್ಳಲಾಗುತ್ತಿದೆ” ಎಂದಿದ್ದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

“ಎನ್‌ಪಿಎಸ್ ವಿಚಾರವಾಗಿ ಆರಂಭದಲ್ಲಿ ನೌಕರರನ್ನು ನಂಬಿಸಲಾಯಿತು. ನೌಕರರು ಕೋಟ್ಯಾಧಿಪತಿಗಳಾಗುತ್ತಾರೆ, ಷೇರುಪೇಟೆಯಿಂದ ಕೋಟಿಕೋಟಿ ರೂಪಾಯಿ ಲಾಭವಾಗುತ್ತದೆ ಎಂದು ತಿಳಿಸಲಾಯಿತು. ವಾಸ್ತವ ಬೇರೆಯಾಗಿದೆ. ನನ್ನ ಬಳಿಯೇ ಇರುವ ಕೆಲವು ಅಧಿಕೃತ ಮಾಹಿತಿಯ ಪ್ರಕಾರ ಎನ್‌ಪಿಎಸ್‌ನಿಂದಾಗಿ ನಿವೃತ್ತರು 1000 ರೂಪಾಯಿ, ಕೆಲವರು 900 ರೂಪಾಯಿ, ಕೆಲವರು 700 ರೂಪಾಯಿ ಮಾಸಿಕವಾಗಿ ಪಡೆಯುತ್ತಿದ್ದಾರೆ” ಎಂದು ವಿಷಾದಿಸಿದ್ದರು.

“ಸರ್ಕಾರಿ ಸೇವೆ ಸಲ್ಲಿಸಿದವರಿಗೆ ಒಪಿಎಸ್ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ ಎಂದು ಅನೇಕರು ವಾದಿಸುತ್ತಾರೆ. ಆದರೆ 1935ರಿಂದ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಲ್ಲಿತ್ತು. ಎಂಟು ದಶಕಗಳಿಂದ ಆಗದ ಆರ್ಥಿಕ ಹೊರೆ ಈಗ ಆಗುತ್ತದೆ ಎಂಬುದಕ್ಕೆ ಅರ್ಥವೇ ಇಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸರ್ಕಾರಿ ನೌಕರರ ದುಡಿಮೆಯ ಫಲದ ಶೇಕಡಾ 10%ನ್ನು ಜೂಜಾಟಕ್ಕೆ ಬಲಿ ಕೊಟ್ಟು …
    30ರಿಂದ 35ವರ್ಷದ ವೃತ್ತಿ ಜೀವನವನ್ನು ಸರ್ಕಾರಕ್ಕೆ ಮುಡಿಪಾಗಿಟ್ಟ ನೌಕರರ ಹಾಗೂ ಅವನ ಕುಟುಂಬವನ್ನು ಬೀದಿಪಾಲು ಮಾಡುತ್ತಿರುವ ನಿಮಗೆ ಮಾನವೀಯತೆ ಎಂಬ ಪದದ ಅರ್ಥ ಗೊತ್ತಿದೆಯೇ….,? NPS ಯೋಜನೆ ಕೇವಲ ಬಂಡವಾಳ ಶಾಹಿಗಳ ಉದ್ದಾರಕ್ಕೆ… ಹೊರತು ಸರ್ಕಾರ ಅಥವಾ ಸಾಮಾನ್ಯ ಜನರ ಅನುಕೂಲಕ್ಕಲ್ಲ ಎಂಬ ಸಾಮಾನ್ಯಜ್ಞಾನವೂ ನಿಮಗಿಲ್ಲವೇ…?

  2. MLA ಗಳಿಗೆ ತುಂಬಾ ಕಷ್ಟ ಇದೆ ಅವರಿಗೆ ಇದನ್ನು ಬುಟ್ಟರೆ ಅವರಿಗೆ ಗತಿ ಇಲ್ಲ ಇವಗ ತಿಂತೀರೋದು ಸಾಕು ಆಗಲ್ಲ ಅದಕ್ಕೆ OPS ಇವರಿ ಬೇಕು ಆದರೆ ಸರ್ಕಾರಿ ನೌಕರರಿಗೆ nps ಯಾಕೆ ಈರೀತಿ ಇಲ್ಲ ಅಂದ್ರೇ ಇದರ ಬಗ್ಗೆ ತಿದ್ದುಪಡಿ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...