Homeಅಂತರಾಷ್ಟ್ರೀಯಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

- Advertisement -
- Advertisement -

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ.

ಕಂಪನಿಯು ತನ್ನ ಒಟ್ಟು ಉದ್ಯೋಗಿಳ ಪೈಕಿ ಶೇಕಡ 18ರಷ್ಟು ಮಂದಿಯನ್ನು ಅಥವಾ 30 ಸಾವಿರ ಜನರನ್ನು ವಜಾಗೊಳಿಸಲು ನಿರ್ಧರಿಸಿದೆ. ಮಂಗಳವಾರ (ಮಾ.31) ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಸಾವಿರಾರು ಉದ್ಯೋಗಿಗಳಿಗೆ ಕಂಪನಿಯು ಕೆಲಸದಿಂದ ತೆಗೆದು ಹಾಕಿರುವ ಕುರಿತು ಇ-ಮೇಲ್ ಕಳುಹಿಸಿದೆ ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಕಂಪನಿಯು ತನ್ನ ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದುಹಾಕಿದೆ ಎಂದು ನಂಬಲಾಗಿದೆ. ಅವರ ಪೋಸ್ಟ್ ಅಥವಾ ಅನುಭವವನ್ನು ಪರಿಗಣಿಸದೆ ಎಲ್ಲರನ್ನೂ ವಜಾಗೊಳಿಸಿರುವುದು, ನೀಡಲಾಗುತ್ತಿರುವ ಪರಿಹಾರದ ಪ್ಯಾಕೇಜ್ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈವರೆಗೆ ಎಷ್ಟು ಜನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಅಥವಾ ಅವರಿಗೆ ನೀಡುತ್ತಿರುವ ನಿಖರವಾದ ಪರಿಹಾರದ ಮೊತ್ತ ಎಷ್ಟು ಎಂಬ ಬಗ್ಗೆ ಕಂಪನಿ ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ, ಕೆಲಸ ಕಳೆದುಕೊಂಡ ಉದ್ಯೋಗಿಗಳು ಸಾಮಾಜಿಕ ಜಾಲತಾಣಗಳು ಮತ್ತು ಇತರ ವೇದಿಕೆಗಳಲ್ಲಿ ತಮ್ಮ ವೈಯಕ್ತಿಕ ಅನುಭವ ಹಾಗೂ ಈ ಬೆಳವಣಿಗೆಯ ವಿವರಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ಉದ್ಯೋಗಿಗಳಿಗೆ ಒರಾಕಲ್ ಪರಿಹಾರ ಪ್ಯಾಕೇಜ್ ಎಷ್ಟು?

ಒರಾಕಲ್ ಸಂಸ್ಥೆಯು ಪರಿಹಾರದ ಪ್ಯಾಕೇಜ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಆದರೆ, ಕೆಲ ಉದ್ಯೋಗಿಗಳು ‘r/employeesofOracle’ ಎಂಬ ಸಬ್‌ರೆಡಿಟ್‌ನಲ್ಲಿ (subreddit) ತಮಗೆ ದೊರೆತಿರಬಹುದಾದ ಪ್ಯಾಕೇಜ್‌ನ ವಿವರಗಳನ್ನು ಹಂಚಿಕೊಂಡಿದ್ದಾರೆ.

u/Lavishness897 ಎಂಬ ಯೂಸರ್ ನೇಮ್ ಹೊಂದಿರುವ ಒಬ್ಬ ರೆಡಿಟ್ ಬಳಕೆದಾರರು, ಒರಾಕಲ್‌ನ ಬೆಂಗಳೂರಿನಲ್ಲಿರುವ ಇಂಡಿಯಾ ಡೆವಲಪ್‌ಮೆಂಟ್ ಸೆಂಟರ್ (ಐಡಿಸಿ) ವಿಭಾಗದಲ್ಲಿ ತಮಗೆ ದೊರೆತ ಪರಿಹಾರದ ಪ್ಯಾಕೇಜ್ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ.

ಆ ಬಳಕೆದಾರರ ಪ್ರಕಾರ, ಕಂಪನಿಯು ಬಳಕೆಯಾಗದ ರಜೆಗಳ (unused leaves) ಜೊತೆಗೆ 15 ದಿನಗಳ ಮೂಲ ವೇತನವನ್ನು ನೀಡುತ್ತಿದೆ. ಇದರ ಜೊತೆಗೆ, ಕಂಪನಿಯು 2 ತಿಂಗಳ ಎಕ್ಸ್-ಗ್ರೇಷಿಯಾ ಪಾವತಿಯನ್ನು ಹಾಗೂ ಕಂಪನಿಯಲ್ಲಿ ಸೇವೆ ಸಲ್ಲಿಸಿದ ಪ್ರತಿ ವರ್ಷಕ್ಕೆ ಹೆಚ್ಚುವರಿಯಾಗಿ 15 ದಿನಗಳ ಸಂಬಳವನ್ನು ನೀಡುತ್ತಿದೆ. ಅಂತಿಮವಾಗಿ, ಈ ನಿರ್ಧಾರದಿಂದ ಸಂಕಷ್ಟಕ್ಕೊಳಗಾದ ಭಾರತೀಯ ಉದ್ಯೋಗಿಗಳಿಗೆ 1 ತಿಂಗಳ ಗಾರ್ಡನಿಂಗ್ ಲೀವ್ ಸಂಬಳ ಮತ್ತು ವಿಮೆಗಾಗಿ ರೂ. 20,000 ಮೊತ್ತವನ್ನು ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

ಆ ಬಳಕೆದಾರರು ಹೀಗೆ ಬರೆದಿದ್ದಾರೆ : “ಪ್ರತಿ ವರ್ಷಕ್ಕೆ 15 ದಿನಗಳು + ವಾರ್ಷಿಕ ರಜೆ + (ಎಕ್ಸ್-ಗ್ರೇಷಿಯಾ ಅಂದರೆ ಪ್ರತಿ ವರ್ಷಕ್ಕೆ ಹೆಚ್ಚುವರಿ 15 ದಿನಗಳು + 2 ತಿಂಗಳು) + 1 ತಿಂಗಳ ಗಾರ್ಡನ್ ಲೀವ್ ಅಥವಾ ಅದರ ಬದಲಿಗೆ ಸಂಬಳ + ವಿಮೆಗಾಗಿ 20 ಸಾವಿರ. ಗಮನಿಸಿ: ಇದು ಬೆಂಗಳೂರಿನ ಐಡಿಸಿ ಡಿಬಿ ವಿಭಾಗಕ್ಕೆ ಸಂಬಂಧಿಸಿದ್ದಾಗಿದೆ.”

ಈ ಪೋಸ್ಟ್ ಸರಿಯಾಗಿದ್ದರೆ, ಒರಾಕಲ್ ತನ್ನ ಭಾರತೀಯ ಉದ್ಯೋಗಿಗಳಿಗೆ ಒಟ್ಟು 3 ತಿಂಗಳು ಮತ್ತು 15 ದಿನಗಳ ಸಂಬಳದ ಜೊತೆಗೆ, ಬಳಕೆಯಾಗದ ರಜೆಗಳ ಹಣ ಮತ್ತು ಅವರ ಅನುಭವದ ಆಧಾರದ ಮೇಲೆ ತಲಾ 15 ದಿನಗಳ ಮೊತ್ತವನ್ನು ನೀಡುತ್ತಿದೆ. ಉದ್ಯೋಗದ ಪೋಸ್ಟ್ ಮತ್ತು ಹುದ್ದೆಯ ಹಂತಕ್ಕೆ ಅನುಗುಣವಾಗಿ ಈ ಪ್ಯಾಕೇಜ್‌ಗಳು ಬದಲಾಗಬಹುದು, ಆದರೆ ಒರಾಕಲ್ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ವಿವರಗಳನ್ನು ನೀಡಿಲ್ಲ.

ಜನವರಿ 2026ರಲ್ಲಿ, ಅಮೆಜಾನ್ ತನ್ನ ಭಾರತದ ಉದ್ಯೋಗಿಗಳು ಸೇರಿದಂತೆ ಜಾಗತಿಕವಾಗಿ ಒಟ್ಟು 16,000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿತ್ತು. ಸಂಕಷ್ಟಕ್ಕೊಳಗಾದ ಉದ್ಯೋಗಿಗಳ ಪ್ರಕಾರ, ಕಂಪನಿಯು 90 ದಿನಗಳ (3 ತಿಂಗಳು) ಪೂರ್ಣ ಸಂಬಳ ಮತ್ತು ಸೌಲಭ್ಯಗಳನ್ನು ಒಳಗೊಂಡ ಪರಿಹಾರದ ಪ್ಯಾಕೇಜ್ ನೀಡಿದೆ.

ಒರಾಕಲ್ 30,000 ಸಿಬ್ಬಂದಿಯನ್ನು ವಜಾಗೊಳಿಸುತ್ತಿರುವುದು ಏಕೆ?

ಒರಾಕಲ್ ಸಂಸ್ಥೆಯು ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಹೆಜ್ಜೆ ಇಡಲು ಸಿದ್ಧತೆ ನಡೆಸುತ್ತಿದೆ. ಮುಖ್ಯವಾಗಿ ಓಪನ್‌ ಎಐ ಸಂಸ್ಥೆಗಾಗಿ ಎಐ ಡೇಟಾ ಸೆಂಟರ್‌ಗಳನ್ನು ನಿರ್ಮಿಸಲು ಒರಾಕಲ್ ಐದು ವರ್ಷಗಳ ಅವಧಿಗೆ 156 ಬಿಲಿಯನ್ ಡಾಲರ್ ಮೊತ್ತದ ಬೃಹತ್ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಡೇಟಾ ಸೆಂಟರ್‌ಗಳನ್ನು ಸ್ಥಾಪಿಸಲು, ಕಂಪ್ಯೂಟಿಂಗ್‌ಗಾಗಿ ಬೇಕಾಗುವ ವಿಶೇಷ ಚಿಪ್‌ಗಳನ್ನು ಖರೀದಿಸಲು ಕಂಪನಿಯು ಭಾರಿ ಹಣ ವ್ಯಯಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಇಂತಹ ಮೂಲಸೌಕರ್ಯಗಳಿಗಾಗಿ ಒರಾಕಲ್ ಮಾಡುತ್ತಿರುವ ವೆಚ್ಚವು ಎರಡು ವರ್ಷಗಳ ಹಿಂದೆ 6.9 ಬಿಲಿಯನ್ ಡಾಲ್ ಇತ್ತು, ಇದು ಕಳೆದ ವರ್ಷ 50 ಬಿಲಿಯನ್‌ ಡಾಲರ್ ತಲುಪುವ ನಿರೀಕ್ಷೆ ಹೊಂದಲಾಗಿತ್ತು.

ಈ ವಜಾಗಳಿಂದ ದೊರೆಯುವ ಹಣವನ್ನು ಇಂತಹ ಹೂಡಿಕೆಗಳಿಗೆ ಬಳಸಿಕೊಳ್ಳಬಹುದು. ಇನ್ವೆಸ್ಟ್‌ಮೆಂಟ್ ಬ್ಯಾಂಕ್ ‘TD Cowen’ ಪ್ರಕಾರ, ಈ ವಜಾಗಳು ಒರಾಕಲ್ ಸಂಸ್ಥೆಗೆ ಸುಮಾರು 8 ಬಿಲಿಯನ್‌ನಿಂದ ಡಾಲರ್‌ನಿಂದ 10 ಬಿಲಿಯನ್ ಡಾಲರ್‌ವರೆಗೆ ನಗದು ಹರಿವನ್ನು ಉಳಿಸಲು ಸಹಾಯ ಮಾಡಲಿವೆ.

ಮೇ 2025ರ ಮಾಹಿತಿಯಂತೆ ಒರಾಕಲ್ ಜಾಗತಿಕವಾಗಿ ಸುಮಾರು 1,62,000 ಪೂರ್ಣ ಸಮಯದ ಸಿಬ್ಬಂದಿಯನ್ನು ಹೊಂದಿತ್ತು. ವರದಿಗಳ ಪ್ರಕಾರ, ಈ ವಜಾಗಳು ಒರಾಕಲ್ ಹೆಲ್ತ್, ಸೇಲ್ಸ್, ಕ್ಲೌಡ್, ಕಸ್ಟಮರ್ ಸಕ್ಸಸ್ ಮತ್ತು ನೆಟ್‌ಸೂಟ್ ಸೇರಿದಂತೆ ಹಲವು ವಿಭಾಗಗಳ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಒರಾಕಲ್ ಶೀಘ್ರದಲ್ಲೇ ಮತ್ತೊಂದು ಸುತ್ತಿನ ವಜಾಗಳನ್ನು ಘೋಷಿಸಬಹುದು ಎಂಬ ವದಂತಿಗಳೂ ಇವೆ. ಕಂಪನಿಯು ಸದ್ಯ ಡಾಲರ್ 108 ಬಿಲಿಯನ್‌ಗಿಂತಲೂ ಹೆಚ್ಚು ಸಾಲವನ್ನು ಹೊಂದಿದ್ದು, ಈ ಕ್ರಮವು ತನ್ನ ಹಣಕಾಸಿನ ಸ್ಥಿತಿಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...