Homeಅಂತರಾಷ್ಟ್ರೀಯಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

- Advertisement -
- Advertisement -

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ.

ಕಂಪನಿಯು ತನ್ನ ಒಟ್ಟು ಉದ್ಯೋಗಿಳ ಪೈಕಿ ಶೇಕಡ 18ರಷ್ಟು ಮಂದಿಯನ್ನು ಅಥವಾ 30 ಸಾವಿರ ಜನರನ್ನು ವಜಾಗೊಳಿಸಲು ನಿರ್ಧರಿಸಿದೆ. ಮಂಗಳವಾರ (ಮಾ.31) ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಸಾವಿರಾರು ಉದ್ಯೋಗಿಗಳಿಗೆ ಕಂಪನಿಯು ಕೆಲಸದಿಂದ ತೆಗೆದು ಹಾಕಿರುವ ಕುರಿತು ಇ-ಮೇಲ್ ಕಳುಹಿಸಿದೆ ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಕಂಪನಿಯು ತನ್ನ ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದುಹಾಕಿದೆ ಎಂದು ನಂಬಲಾಗಿದೆ. ಅವರ ಪೋಸ್ಟ್ ಅಥವಾ ಅನುಭವವನ್ನು ಪರಿಗಣಿಸದೆ ಎಲ್ಲರನ್ನೂ ವಜಾಗೊಳಿಸಿರುವುದು, ನೀಡಲಾಗುತ್ತಿರುವ ಪರಿಹಾರದ ಪ್ಯಾಕೇಜ್ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈವರೆಗೆ ಎಷ್ಟು ಜನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಅಥವಾ ಅವರಿಗೆ ನೀಡುತ್ತಿರುವ ನಿಖರವಾದ ಪರಿಹಾರದ ಮೊತ್ತ ಎಷ್ಟು ಎಂಬ ಬಗ್ಗೆ ಕಂಪನಿ ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ, ಕೆಲಸ ಕಳೆದುಕೊಂಡ ಉದ್ಯೋಗಿಗಳು ಸಾಮಾಜಿಕ ಜಾಲತಾಣಗಳು ಮತ್ತು ಇತರ ವೇದಿಕೆಗಳಲ್ಲಿ ತಮ್ಮ ವೈಯಕ್ತಿಕ ಅನುಭವ ಹಾಗೂ ಈ ಬೆಳವಣಿಗೆಯ ವಿವರಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ಉದ್ಯೋಗಿಗಳಿಗೆ ಒರಾಕಲ್ ಪರಿಹಾರ ಪ್ಯಾಕೇಜ್ ಎಷ್ಟು?

ಒರಾಕಲ್ ಸಂಸ್ಥೆಯು ಪರಿಹಾರದ ಪ್ಯಾಕೇಜ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಆದರೆ, ಕೆಲ ಉದ್ಯೋಗಿಗಳು ‘r/employeesofOracle’ ಎಂಬ ಸಬ್‌ರೆಡಿಟ್‌ನಲ್ಲಿ (subreddit) ತಮಗೆ ದೊರೆತಿರಬಹುದಾದ ಪ್ಯಾಕೇಜ್‌ನ ವಿವರಗಳನ್ನು ಹಂಚಿಕೊಂಡಿದ್ದಾರೆ.

u/Lavishness897 ಎಂಬ ಯೂಸರ್ ನೇಮ್ ಹೊಂದಿರುವ ಒಬ್ಬ ರೆಡಿಟ್ ಬಳಕೆದಾರರು, ಒರಾಕಲ್‌ನ ಬೆಂಗಳೂರಿನಲ್ಲಿರುವ ಇಂಡಿಯಾ ಡೆವಲಪ್‌ಮೆಂಟ್ ಸೆಂಟರ್ (ಐಡಿಸಿ) ವಿಭಾಗದಲ್ಲಿ ತಮಗೆ ದೊರೆತ ಪರಿಹಾರದ ಪ್ಯಾಕೇಜ್ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ.

ಆ ಬಳಕೆದಾರರ ಪ್ರಕಾರ, ಕಂಪನಿಯು ಬಳಕೆಯಾಗದ ರಜೆಗಳ (unused leaves) ಜೊತೆಗೆ 15 ದಿನಗಳ ಮೂಲ ವೇತನವನ್ನು ನೀಡುತ್ತಿದೆ. ಇದರ ಜೊತೆಗೆ, ಕಂಪನಿಯು 2 ತಿಂಗಳ ಎಕ್ಸ್-ಗ್ರೇಷಿಯಾ ಪಾವತಿಯನ್ನು ಹಾಗೂ ಕಂಪನಿಯಲ್ಲಿ ಸೇವೆ ಸಲ್ಲಿಸಿದ ಪ್ರತಿ ವರ್ಷಕ್ಕೆ ಹೆಚ್ಚುವರಿಯಾಗಿ 15 ದಿನಗಳ ಸಂಬಳವನ್ನು ನೀಡುತ್ತಿದೆ. ಅಂತಿಮವಾಗಿ, ಈ ನಿರ್ಧಾರದಿಂದ ಸಂಕಷ್ಟಕ್ಕೊಳಗಾದ ಭಾರತೀಯ ಉದ್ಯೋಗಿಗಳಿಗೆ 1 ತಿಂಗಳ ಗಾರ್ಡನಿಂಗ್ ಲೀವ್ ಸಂಬಳ ಮತ್ತು ವಿಮೆಗಾಗಿ ರೂ. 20,000 ಮೊತ್ತವನ್ನು ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

ಆ ಬಳಕೆದಾರರು ಹೀಗೆ ಬರೆದಿದ್ದಾರೆ : “ಪ್ರತಿ ವರ್ಷಕ್ಕೆ 15 ದಿನಗಳು + ವಾರ್ಷಿಕ ರಜೆ + (ಎಕ್ಸ್-ಗ್ರೇಷಿಯಾ ಅಂದರೆ ಪ್ರತಿ ವರ್ಷಕ್ಕೆ ಹೆಚ್ಚುವರಿ 15 ದಿನಗಳು + 2 ತಿಂಗಳು) + 1 ತಿಂಗಳ ಗಾರ್ಡನ್ ಲೀವ್ ಅಥವಾ ಅದರ ಬದಲಿಗೆ ಸಂಬಳ + ವಿಮೆಗಾಗಿ 20 ಸಾವಿರ. ಗಮನಿಸಿ: ಇದು ಬೆಂಗಳೂರಿನ ಐಡಿಸಿ ಡಿಬಿ ವಿಭಾಗಕ್ಕೆ ಸಂಬಂಧಿಸಿದ್ದಾಗಿದೆ.”

ಈ ಪೋಸ್ಟ್ ಸರಿಯಾಗಿದ್ದರೆ, ಒರಾಕಲ್ ತನ್ನ ಭಾರತೀಯ ಉದ್ಯೋಗಿಗಳಿಗೆ ಒಟ್ಟು 3 ತಿಂಗಳು ಮತ್ತು 15 ದಿನಗಳ ಸಂಬಳದ ಜೊತೆಗೆ, ಬಳಕೆಯಾಗದ ರಜೆಗಳ ಹಣ ಮತ್ತು ಅವರ ಅನುಭವದ ಆಧಾರದ ಮೇಲೆ ತಲಾ 15 ದಿನಗಳ ಮೊತ್ತವನ್ನು ನೀಡುತ್ತಿದೆ. ಉದ್ಯೋಗದ ಪೋಸ್ಟ್ ಮತ್ತು ಹುದ್ದೆಯ ಹಂತಕ್ಕೆ ಅನುಗುಣವಾಗಿ ಈ ಪ್ಯಾಕೇಜ್‌ಗಳು ಬದಲಾಗಬಹುದು, ಆದರೆ ಒರಾಕಲ್ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ವಿವರಗಳನ್ನು ನೀಡಿಲ್ಲ.

ಜನವರಿ 2026ರಲ್ಲಿ, ಅಮೆಜಾನ್ ತನ್ನ ಭಾರತದ ಉದ್ಯೋಗಿಗಳು ಸೇರಿದಂತೆ ಜಾಗತಿಕವಾಗಿ ಒಟ್ಟು 16,000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿತ್ತು. ಸಂಕಷ್ಟಕ್ಕೊಳಗಾದ ಉದ್ಯೋಗಿಗಳ ಪ್ರಕಾರ, ಕಂಪನಿಯು 90 ದಿನಗಳ (3 ತಿಂಗಳು) ಪೂರ್ಣ ಸಂಬಳ ಮತ್ತು ಸೌಲಭ್ಯಗಳನ್ನು ಒಳಗೊಂಡ ಪರಿಹಾರದ ಪ್ಯಾಕೇಜ್ ನೀಡಿದೆ.

ಒರಾಕಲ್ 30,000 ಸಿಬ್ಬಂದಿಯನ್ನು ವಜಾಗೊಳಿಸುತ್ತಿರುವುದು ಏಕೆ?

ಒರಾಕಲ್ ಸಂಸ್ಥೆಯು ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಹೆಜ್ಜೆ ಇಡಲು ಸಿದ್ಧತೆ ನಡೆಸುತ್ತಿದೆ. ಮುಖ್ಯವಾಗಿ ಓಪನ್‌ ಎಐ ಸಂಸ್ಥೆಗಾಗಿ ಎಐ ಡೇಟಾ ಸೆಂಟರ್‌ಗಳನ್ನು ನಿರ್ಮಿಸಲು ಒರಾಕಲ್ ಐದು ವರ್ಷಗಳ ಅವಧಿಗೆ 156 ಬಿಲಿಯನ್ ಡಾಲರ್ ಮೊತ್ತದ ಬೃಹತ್ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಡೇಟಾ ಸೆಂಟರ್‌ಗಳನ್ನು ಸ್ಥಾಪಿಸಲು, ಕಂಪ್ಯೂಟಿಂಗ್‌ಗಾಗಿ ಬೇಕಾಗುವ ವಿಶೇಷ ಚಿಪ್‌ಗಳನ್ನು ಖರೀದಿಸಲು ಕಂಪನಿಯು ಭಾರಿ ಹಣ ವ್ಯಯಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಇಂತಹ ಮೂಲಸೌಕರ್ಯಗಳಿಗಾಗಿ ಒರಾಕಲ್ ಮಾಡುತ್ತಿರುವ ವೆಚ್ಚವು ಎರಡು ವರ್ಷಗಳ ಹಿಂದೆ 6.9 ಬಿಲಿಯನ್ ಡಾಲ್ ಇತ್ತು, ಇದು ಕಳೆದ ವರ್ಷ 50 ಬಿಲಿಯನ್‌ ಡಾಲರ್ ತಲುಪುವ ನಿರೀಕ್ಷೆ ಹೊಂದಲಾಗಿತ್ತು.

ಈ ವಜಾಗಳಿಂದ ದೊರೆಯುವ ಹಣವನ್ನು ಇಂತಹ ಹೂಡಿಕೆಗಳಿಗೆ ಬಳಸಿಕೊಳ್ಳಬಹುದು. ಇನ್ವೆಸ್ಟ್‌ಮೆಂಟ್ ಬ್ಯಾಂಕ್ ‘TD Cowen’ ಪ್ರಕಾರ, ಈ ವಜಾಗಳು ಒರಾಕಲ್ ಸಂಸ್ಥೆಗೆ ಸುಮಾರು 8 ಬಿಲಿಯನ್‌ನಿಂದ ಡಾಲರ್‌ನಿಂದ 10 ಬಿಲಿಯನ್ ಡಾಲರ್‌ವರೆಗೆ ನಗದು ಹರಿವನ್ನು ಉಳಿಸಲು ಸಹಾಯ ಮಾಡಲಿವೆ.

ಮೇ 2025ರ ಮಾಹಿತಿಯಂತೆ ಒರಾಕಲ್ ಜಾಗತಿಕವಾಗಿ ಸುಮಾರು 1,62,000 ಪೂರ್ಣ ಸಮಯದ ಸಿಬ್ಬಂದಿಯನ್ನು ಹೊಂದಿತ್ತು. ವರದಿಗಳ ಪ್ರಕಾರ, ಈ ವಜಾಗಳು ಒರಾಕಲ್ ಹೆಲ್ತ್, ಸೇಲ್ಸ್, ಕ್ಲೌಡ್, ಕಸ್ಟಮರ್ ಸಕ್ಸಸ್ ಮತ್ತು ನೆಟ್‌ಸೂಟ್ ಸೇರಿದಂತೆ ಹಲವು ವಿಭಾಗಗಳ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಒರಾಕಲ್ ಶೀಘ್ರದಲ್ಲೇ ಮತ್ತೊಂದು ಸುತ್ತಿನ ವಜಾಗಳನ್ನು ಘೋಷಿಸಬಹುದು ಎಂಬ ವದಂತಿಗಳೂ ಇವೆ. ಕಂಪನಿಯು ಸದ್ಯ ಡಾಲರ್ 108 ಬಿಲಿಯನ್‌ಗಿಂತಲೂ ಹೆಚ್ಚು ಸಾಲವನ್ನು ಹೊಂದಿದ್ದು, ಈ ಕ್ರಮವು ತನ್ನ ಹಣಕಾಸಿನ ಸ್ಥಿತಿಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...