Homeಅಂತರಾಷ್ಟ್ರೀಯಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

- Advertisement -
- Advertisement -

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ.

ಕಂಪನಿಯು ತನ್ನ ಒಟ್ಟು ಉದ್ಯೋಗಿಳ ಪೈಕಿ ಶೇಕಡ 18ರಷ್ಟು ಮಂದಿಯನ್ನು ಅಥವಾ 30 ಸಾವಿರ ಜನರನ್ನು ವಜಾಗೊಳಿಸಲು ನಿರ್ಧರಿಸಿದೆ. ಮಂಗಳವಾರ (ಮಾ.31) ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಸಾವಿರಾರು ಉದ್ಯೋಗಿಗಳಿಗೆ ಕಂಪನಿಯು ಕೆಲಸದಿಂದ ತೆಗೆದು ಹಾಕಿರುವ ಕುರಿತು ಇ-ಮೇಲ್ ಕಳುಹಿಸಿದೆ ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

ಕಂಪನಿಯು ತನ್ನ ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದುಹಾಕಿದೆ ಎಂದು ನಂಬಲಾಗಿದೆ. ಅವರ ಪೋಸ್ಟ್ ಅಥವಾ ಅನುಭವವನ್ನು ಪರಿಗಣಿಸದೆ ಎಲ್ಲರನ್ನೂ ವಜಾಗೊಳಿಸಿರುವುದು, ನೀಡಲಾಗುತ್ತಿರುವ ಪರಿಹಾರದ ಪ್ಯಾಕೇಜ್ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈವರೆಗೆ ಎಷ್ಟು ಜನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಅಥವಾ ಅವರಿಗೆ ನೀಡುತ್ತಿರುವ ನಿಖರವಾದ ಪರಿಹಾರದ ಮೊತ್ತ ಎಷ್ಟು ಎಂಬ ಬಗ್ಗೆ ಕಂಪನಿ ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ, ಕೆಲಸ ಕಳೆದುಕೊಂಡ ಉದ್ಯೋಗಿಗಳು ಸಾಮಾಜಿಕ ಜಾಲತಾಣಗಳು ಮತ್ತು ಇತರ ವೇದಿಕೆಗಳಲ್ಲಿ ತಮ್ಮ ವೈಯಕ್ತಿಕ ಅನುಭವ ಹಾಗೂ ಈ ಬೆಳವಣಿಗೆಯ ವಿವರಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ಉದ್ಯೋಗಿಗಳಿಗೆ ಒರಾಕಲ್ ಪರಿಹಾರ ಪ್ಯಾಕೇಜ್ ಎಷ್ಟು?

ಒರಾಕಲ್ ಸಂಸ್ಥೆಯು ಪರಿಹಾರದ ಪ್ಯಾಕೇಜ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಆದರೆ, ಕೆಲ ಉದ್ಯೋಗಿಗಳು ‘r/employeesofOracle’ ಎಂಬ ಸಬ್‌ರೆಡಿಟ್‌ನಲ್ಲಿ (subreddit) ತಮಗೆ ದೊರೆತಿರಬಹುದಾದ ಪ್ಯಾಕೇಜ್‌ನ ವಿವರಗಳನ್ನು ಹಂಚಿಕೊಂಡಿದ್ದಾರೆ.

u/Lavishness897 ಎಂಬ ಯೂಸರ್ ನೇಮ್ ಹೊಂದಿರುವ ಒಬ್ಬ ರೆಡಿಟ್ ಬಳಕೆದಾರರು, ಒರಾಕಲ್‌ನ ಬೆಂಗಳೂರಿನಲ್ಲಿರುವ ಇಂಡಿಯಾ ಡೆವಲಪ್‌ಮೆಂಟ್ ಸೆಂಟರ್ (ಐಡಿಸಿ) ವಿಭಾಗದಲ್ಲಿ ತಮಗೆ ದೊರೆತ ಪರಿಹಾರದ ಪ್ಯಾಕೇಜ್ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ.

ಆ ಬಳಕೆದಾರರ ಪ್ರಕಾರ, ಕಂಪನಿಯು ಬಳಕೆಯಾಗದ ರಜೆಗಳ (unused leaves) ಜೊತೆಗೆ 15 ದಿನಗಳ ಮೂಲ ವೇತನವನ್ನು ನೀಡುತ್ತಿದೆ. ಇದರ ಜೊತೆಗೆ, ಕಂಪನಿಯು 2 ತಿಂಗಳ ಎಕ್ಸ್-ಗ್ರೇಷಿಯಾ ಪಾವತಿಯನ್ನು ಹಾಗೂ ಕಂಪನಿಯಲ್ಲಿ ಸೇವೆ ಸಲ್ಲಿಸಿದ ಪ್ರತಿ ವರ್ಷಕ್ಕೆ ಹೆಚ್ಚುವರಿಯಾಗಿ 15 ದಿನಗಳ ಸಂಬಳವನ್ನು ನೀಡುತ್ತಿದೆ. ಅಂತಿಮವಾಗಿ, ಈ ನಿರ್ಧಾರದಿಂದ ಸಂಕಷ್ಟಕ್ಕೊಳಗಾದ ಭಾರತೀಯ ಉದ್ಯೋಗಿಗಳಿಗೆ 1 ತಿಂಗಳ ಗಾರ್ಡನಿಂಗ್ ಲೀವ್ ಸಂಬಳ ಮತ್ತು ವಿಮೆಗಾಗಿ ರೂ. 20,000 ಮೊತ್ತವನ್ನು ನೀಡಲಾಗುತ್ತಿದೆ ಎಂದು ಹೇಳಲಾಗಿದೆ.

ಆ ಬಳಕೆದಾರರು ಹೀಗೆ ಬರೆದಿದ್ದಾರೆ : “ಪ್ರತಿ ವರ್ಷಕ್ಕೆ 15 ದಿನಗಳು + ವಾರ್ಷಿಕ ರಜೆ + (ಎಕ್ಸ್-ಗ್ರೇಷಿಯಾ ಅಂದರೆ ಪ್ರತಿ ವರ್ಷಕ್ಕೆ ಹೆಚ್ಚುವರಿ 15 ದಿನಗಳು + 2 ತಿಂಗಳು) + 1 ತಿಂಗಳ ಗಾರ್ಡನ್ ಲೀವ್ ಅಥವಾ ಅದರ ಬದಲಿಗೆ ಸಂಬಳ + ವಿಮೆಗಾಗಿ 20 ಸಾವಿರ. ಗಮನಿಸಿ: ಇದು ಬೆಂಗಳೂರಿನ ಐಡಿಸಿ ಡಿಬಿ ವಿಭಾಗಕ್ಕೆ ಸಂಬಂಧಿಸಿದ್ದಾಗಿದೆ.”

ಈ ಪೋಸ್ಟ್ ಸರಿಯಾಗಿದ್ದರೆ, ಒರಾಕಲ್ ತನ್ನ ಭಾರತೀಯ ಉದ್ಯೋಗಿಗಳಿಗೆ ಒಟ್ಟು 3 ತಿಂಗಳು ಮತ್ತು 15 ದಿನಗಳ ಸಂಬಳದ ಜೊತೆಗೆ, ಬಳಕೆಯಾಗದ ರಜೆಗಳ ಹಣ ಮತ್ತು ಅವರ ಅನುಭವದ ಆಧಾರದ ಮೇಲೆ ತಲಾ 15 ದಿನಗಳ ಮೊತ್ತವನ್ನು ನೀಡುತ್ತಿದೆ. ಉದ್ಯೋಗದ ಪೋಸ್ಟ್ ಮತ್ತು ಹುದ್ದೆಯ ಹಂತಕ್ಕೆ ಅನುಗುಣವಾಗಿ ಈ ಪ್ಯಾಕೇಜ್‌ಗಳು ಬದಲಾಗಬಹುದು, ಆದರೆ ಒರಾಕಲ್ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ವಿವರಗಳನ್ನು ನೀಡಿಲ್ಲ.

ಜನವರಿ 2026ರಲ್ಲಿ, ಅಮೆಜಾನ್ ತನ್ನ ಭಾರತದ ಉದ್ಯೋಗಿಗಳು ಸೇರಿದಂತೆ ಜಾಗತಿಕವಾಗಿ ಒಟ್ಟು 16,000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿತ್ತು. ಸಂಕಷ್ಟಕ್ಕೊಳಗಾದ ಉದ್ಯೋಗಿಗಳ ಪ್ರಕಾರ, ಕಂಪನಿಯು 90 ದಿನಗಳ (3 ತಿಂಗಳು) ಪೂರ್ಣ ಸಂಬಳ ಮತ್ತು ಸೌಲಭ್ಯಗಳನ್ನು ಒಳಗೊಂಡ ಪರಿಹಾರದ ಪ್ಯಾಕೇಜ್ ನೀಡಿದೆ.

ಒರಾಕಲ್ 30,000 ಸಿಬ್ಬಂದಿಯನ್ನು ವಜಾಗೊಳಿಸುತ್ತಿರುವುದು ಏಕೆ?

ಒರಾಕಲ್ ಸಂಸ್ಥೆಯು ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಹೆಜ್ಜೆ ಇಡಲು ಸಿದ್ಧತೆ ನಡೆಸುತ್ತಿದೆ. ಮುಖ್ಯವಾಗಿ ಓಪನ್‌ ಎಐ ಸಂಸ್ಥೆಗಾಗಿ ಎಐ ಡೇಟಾ ಸೆಂಟರ್‌ಗಳನ್ನು ನಿರ್ಮಿಸಲು ಒರಾಕಲ್ ಐದು ವರ್ಷಗಳ ಅವಧಿಗೆ 156 ಬಿಲಿಯನ್ ಡಾಲರ್ ಮೊತ್ತದ ಬೃಹತ್ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಡೇಟಾ ಸೆಂಟರ್‌ಗಳನ್ನು ಸ್ಥಾಪಿಸಲು, ಕಂಪ್ಯೂಟಿಂಗ್‌ಗಾಗಿ ಬೇಕಾಗುವ ವಿಶೇಷ ಚಿಪ್‌ಗಳನ್ನು ಖರೀದಿಸಲು ಕಂಪನಿಯು ಭಾರಿ ಹಣ ವ್ಯಯಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಇಂತಹ ಮೂಲಸೌಕರ್ಯಗಳಿಗಾಗಿ ಒರಾಕಲ್ ಮಾಡುತ್ತಿರುವ ವೆಚ್ಚವು ಎರಡು ವರ್ಷಗಳ ಹಿಂದೆ 6.9 ಬಿಲಿಯನ್ ಡಾಲ್ ಇತ್ತು, ಇದು ಕಳೆದ ವರ್ಷ 50 ಬಿಲಿಯನ್‌ ಡಾಲರ್ ತಲುಪುವ ನಿರೀಕ್ಷೆ ಹೊಂದಲಾಗಿತ್ತು.

ಈ ವಜಾಗಳಿಂದ ದೊರೆಯುವ ಹಣವನ್ನು ಇಂತಹ ಹೂಡಿಕೆಗಳಿಗೆ ಬಳಸಿಕೊಳ್ಳಬಹುದು. ಇನ್ವೆಸ್ಟ್‌ಮೆಂಟ್ ಬ್ಯಾಂಕ್ ‘TD Cowen’ ಪ್ರಕಾರ, ಈ ವಜಾಗಳು ಒರಾಕಲ್ ಸಂಸ್ಥೆಗೆ ಸುಮಾರು 8 ಬಿಲಿಯನ್‌ನಿಂದ ಡಾಲರ್‌ನಿಂದ 10 ಬಿಲಿಯನ್ ಡಾಲರ್‌ವರೆಗೆ ನಗದು ಹರಿವನ್ನು ಉಳಿಸಲು ಸಹಾಯ ಮಾಡಲಿವೆ.

ಮೇ 2025ರ ಮಾಹಿತಿಯಂತೆ ಒರಾಕಲ್ ಜಾಗತಿಕವಾಗಿ ಸುಮಾರು 1,62,000 ಪೂರ್ಣ ಸಮಯದ ಸಿಬ್ಬಂದಿಯನ್ನು ಹೊಂದಿತ್ತು. ವರದಿಗಳ ಪ್ರಕಾರ, ಈ ವಜಾಗಳು ಒರಾಕಲ್ ಹೆಲ್ತ್, ಸೇಲ್ಸ್, ಕ್ಲೌಡ್, ಕಸ್ಟಮರ್ ಸಕ್ಸಸ್ ಮತ್ತು ನೆಟ್‌ಸೂಟ್ ಸೇರಿದಂತೆ ಹಲವು ವಿಭಾಗಗಳ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಒರಾಕಲ್ ಶೀಘ್ರದಲ್ಲೇ ಮತ್ತೊಂದು ಸುತ್ತಿನ ವಜಾಗಳನ್ನು ಘೋಷಿಸಬಹುದು ಎಂಬ ವದಂತಿಗಳೂ ಇವೆ. ಕಂಪನಿಯು ಸದ್ಯ ಡಾಲರ್ 108 ಬಿಲಿಯನ್‌ಗಿಂತಲೂ ಹೆಚ್ಚು ಸಾಲವನ್ನು ಹೊಂದಿದ್ದು, ಈ ಕ್ರಮವು ತನ್ನ ಹಣಕಾಸಿನ ಸ್ಥಿತಿಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...