Homeಮುಖಪುಟಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ಧಾರಾಕಾರ ಮಳೆಗೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

- Advertisement -
- Advertisement -

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾದ ಪರಿಣಾಮ ರಾಜ್ಯದಲ್ಲಿ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಂತೂ ಬೆಳಿಗ್ಗೆಯಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಹಾಗಾಗಿ ಹವಾಮಾನ ಇಲಾಖೆಯು ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಇಂದಿನಿಂದ ನಾಳೆ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಅಲ್ಲದೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏನಿವು ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಕಿತ್ತಳೆ, ಕೆಂಪು ಮತ್ತು ಹಳದಿ ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ

ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್‌ಗಳನ್ನು ಬಳಸುತ್ತದೆ. ಹಸಿರು, ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣದ ಎಚ್ಚರಿಕೆಗಳನ್ನು ನೀಡುತ್ತದೆ.

1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)

ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರೀಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.

2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)

ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)

ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.

ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಮತ್ತು 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.

4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)

ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.

ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ.
30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಅಪಾಯವು ಹಲವಾರು ಪಟ್ಟು ಹೆಚ್ಚಾಗುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಗುತ್ತದೆ.

ಈ ಎಚ್ಚರಿಕೆಗಳನ್ನು ಟಿವಿ, ರೆಡಿಯೋ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಹವಾಮಾನ ಇಲಾಖೆ ಹೊರಡಿಸುತ್ತದೆ. ಇವುಗಳನ್ನು ಜನರು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು. ಅಲ್ಲದೆ ಇದರಿಂದ ತೀವ್ರ ಮಳೆ ಸಂದರ್ಭದಲ್ಲಿ ಹೆಚ್ಚಿನ ಜೀವ ಹಾನಿಯಾಗದಂತೆ ತಡೆಯಲು ಸ್ಥಳೀಯ ಆಡಳಿತಗಳಿಗೆ ಸಹಕಾರಿಯಾಗುತ್ತದೆ.


ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...