Homeರಾಷ್ಟ್ರೀಯಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌...

ಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌ ಪಡೆದ ಜಿಲ್ಲಾಡಳಿತ

ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯ ಕೆಟ್ಟ ಚಿತ್ರವನ್ನು ಬಿಂಬಿಸುತ್ತದೆ ಎಂದು ಜಿಲ್ಲಾಧಿಕಾರಿ ಸಮರ್ಥಿಸಿದ್ದರು

- Advertisement -
- Advertisement -

ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿರುವ ಎಲ್ಲಾ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ‘ದನದ ಮಾಂಸ (ಗೋಮಾಂಸ)’ ಎಂದು ಬರೆದಿರುವ ಬೋರ್ಡ್‌ಗಳನ್ನು ತೆಗೆದುಹಾಕಬೇಕು ಎಂದು ಜಿಲ್ಲಾಡಳಿತ ಆದೇಶ ಮಾಡಿತ್ತು. ಇದೀಗ ಈ ಆದೇಶವನ್ನು ಮುಂದಿನ ಸೂಚನೆವರೆಗೆ ತಡೆಹಿಡಿಯಲಾಗಿದೆ ಎಂದ ವರದಿಯಾಗಿದೆ.

ಜುಲೈ 13ರ ಬುಧವಾರದಂದು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಸೋಮವಾರದೊಳಗೆ “ದನದ ಮಾಂಸ (ಬೀಫ್‌)” ಎಂಬ ಪದವುಳ್ಳ ಬೋಡ್‌ಗಳನ್ನು ತೆಗೆದುಹಾಕುವಂತೆ ಸರ್ಕಾರ ಆದೇಶ ಮಾಡಿತ್ತು. ಆದೇಶವನ್ನು ಉಲ್ಲಂಘಿಸಿದವರಿಗೆ 2,000 ರೂಪಾಯಿ ದಂಡ ಹಾಗೂ ಹೋಟೆಲ್‌ಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸುವುದಾಗಿ ಬೆದರಿಕೆಯನ್ನೂ ಹಾಕಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ಈ ಆದೇಶವನ್ನು ಅರುಣಾಚಲ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ACCI) ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ವಿರೋಧಿಸಿದ್ದು, ಪ್ರತಿಭಟನೆಗಳು ನಡೆಸಿದ್ದವು. ಪ್ರತಿಭಟನಾಕಾರರು ಇದನ್ನು ‘ಅನಾವಶ್ಯಕ’ ಎಂದು ಕರೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ಜುಲೈ 13 ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ರಾಜಧಾನಿ ಇಟಾನಗರದ ಜಿಲ್ಲಾಡಳಿತವು, “ಭಾರತೀಯ ಸಂವಿಧಾನದ ಜಾತ್ಯತೀತ ಮನೋಭಾವವನ್ನು ನಂಬುತ್ತೇವೆ. ಆದರೆ ‘ದನದ ಮಾಂಸ’ ಎಂಬ ಪದದ ಬಹಿರಂಗ ಪ್ರದರ್ಶನವು ಸಮುದಾಯದ ಕೆಲವು ವರ್ಗಗಳ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯಿದೆ. ಜೊತಗೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡಬಹುದು” ಎಂದು ಹೇಳಿತ್ತು.

ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಅರುಣಾಚಲ ಪ್ರದೇಶ ಘಟಕ, “ಈ ಆದೇಶವು ಅಶಾಂತಿಯನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ” ಎಂದು ಹೇಳಿತ್ತು.

ಈ ಆದೇಶವನ್ನು ವಾಪಾಸು ಪಡೆಯುವಂತೆ ಯುವ ಕಾಂಗ್ರೆಸ್‌ ಅಗ್ರಹಿಸಿತ್ತು. “ಅರುಣಾಚಲ ಪ್ರದೇಶದ ನಾಗರಿಕರು ಅನಾದಿ ಕಾಲದಿಂದಲೂ ಗೋಮಾಂಸ ಸೇವಿಸುತ್ತಿದ್ದಾರೆ. ಇದು ಯಾವುದೇ ಸಮುದಾಯದ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದಿಲ್ಲ” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ತಾರ್ ಜಾನ್ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು. ಜಿಲ್ಲಾಡಳಿತದ ಹಠಾತ್ ಮತ್ತು ಆಶ್ಚರ್ಯಕರ ಆದೇಶವು ರಾಜ್ಯದ ವಿವಿಧ ಗುಂಪುಗಳ ಜನರ ಮನಸ್ಸಿನಲ್ಲಿ, ವಿಶೇಷವಾಗಿ ರಾಜಧಾನಿಯಲ್ಲಿ ಕಳವಳವನ್ನು ಸೃಷ್ಟಿಸಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ರಾಜಧಾನಿ ಇಟಾನಗರದ ನಹರ್ಲಗುನ್‌ನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ಅವರು ಈ ಆದೇಶವನ್ನು ಹೊರಡಿಸಿದ್ದರು. “ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯನ್ನು ಕೆಟ್ಟದಾಗಿ ಬಿಂಬಿಸುತ್ತದೆ” ಎಂದು ಅವರು ಹೇಳಿದ್ದರು. ಆದೇಶಕ್ಕೆ ಕೋಮು ಬಣ್ಣ ಬಳಿಯದಂತೆ ಮನವಿ ಮಾಡಿದ್ದ ಜಿಲ್ಲಾಧಿಕಾರಿ, ಮುಂಜಾಗ್ರತಾ ಕ್ರಮವಾಗಿ ಸದುದ್ದೇಶದಿಂದ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...